Homeಕರ್ನಾಟಕದಲಿತ ಪತ್ರಕರ್ತನ ಮೇಲೆ ಹಲ್ಲೆ-ಜಾತಿ ನಿಂದನೆ: ತುಮಕೂರು ಜಿಲ್ಲಾ ಪಬ್ಲಿಕ್ ಟಿವಿ ವರದಿಗಾರನ ಬಂಧನ

ದಲಿತ ಪತ್ರಕರ್ತನ ಮೇಲೆ ಹಲ್ಲೆ-ಜಾತಿ ನಿಂದನೆ: ತುಮಕೂರು ಜಿಲ್ಲಾ ಪಬ್ಲಿಕ್ ಟಿವಿ ವರದಿಗಾರನ ಬಂಧನ

- Advertisement -
- Advertisement -

ದಲಿತ ಸಮುದಾಯದ ಪತ್ರಕರ್ತನ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದಡಿ ತುಮಕೂರು ಜಿಲ್ಲೆ ಪಬ್ಲಿಕ್ ಟಿವಿ ವರದಿಗಾರ ಮಂಜುನಾಥ್ ತಾಳಮಕ್ಕಿ ಅವರನ್ನು ಬಂಧಿಸಲಾಗಿದ್ದು, ಆರೋಪಿತ ಪತ್ರಕರ್ತನ ಮೇಲೆ ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಆರೋಪಿತ ಪತ್ರಕರ್ತ ಮಂಜುನಾಥ್ ತಾಳಮಕ್ಕಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆತನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಪರಿಶಿಷ್ಟ ಜಾತಿಗೆ ಸೇರಿದ ಝೀ ಕನ್ನಡ ನ್ಯೂಸ್ ವರದಿಗಾರ ಜಿ.ಎನ್.ಮಂಜುನಾಥ್ (ಸಮಯ ಮಂಜು) ಎಂಬವರು ನೀಡಿರುವ ದೂರಿನ ಮೇರೆಗೆ ತಿಲಕ್ ಪಾರ್ಕ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಇದೇ ತಿಂಗಳ 21ರಂದು ಬೆಳಗ್ಗೆ ನಗರದ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಮೇಲೆ ನಡೆದ ಇ.ಡಿ. ದಾಳಿ ನಡೆದಿತ್ತು. ಅದರ ವರದಿ ಮಾಡಲು ಝೀ ಕನ್ನಡ ನ್ಯೂಸ್ ವರದಿಗಾರ ಮಂಜುನಾಥ್ ಕೂಡ ತೆರಳಿದ್ದರು. ಈ ವೇಳೆ, ಪಬ್ಲಿಕ್ ಟಿವಿ ವರದಿಗಾರ ಮಂಜುನಾಥ್ ತಾಳಮಕ್ಕಿ ಮಂಜುನಾಥ್ ಮೇಲೆ ಜಾತಿ ನಿಂದನೆ ಮಾಡಿ, ತಮ್ಮ ಮೈಕ್‌ನಿಂದ ಥಳಿಸಿದ್ದಾರೆ.

“ಏನಲೇ ನೀನು ಬಂದಿದ್ದೀಯಾ, ನಿನಗೆ ನೀನೇ ಮಹಾ ಬುದ್ಧಿವಂತ ಅಂದ್ಕೊಂಡಿದ್ದೀಯಾ, ಏನೇ ಮಾಡಿದರೂ ಕೀಳು ಜಾತಿನೇ, ಕೀಳು ಜಾತಿ ಬುದ್ಧಿ ಬಿಡಲ್ಲ, ಮಾದಿಗರ ಬುದ್ಧಿ ಲದ್ದಿ” ಎಂದು ಜಾತಿ ನಿಂದನೆ ಮಾಡಿ ಅವಾಚ್ಯವಾಗಿ ನಿಂದಿಸಿದ್ದಾನೆ. ಅಲ್ಲದೇ ತಾನು ಪ್ರತಿನಿಧಿಸುವ ಸುದ್ದಿವಾಹಿನಿಯ ಲೋಗೋವಿದ್ದ ಮೈಕ್ ನಿಂದ ದಲಿತ ಪತ್ರಕರ್ತನ ತಲೆ ಮತ್ತು ಕಿವಿಗೆ ಹಲ್ಲೆ ನಡೆಸಿದ್ದಾನೆ. ಈ ಬಗ್ಗೆ ತುಮಕೂರಿನ ತಿಲಕ್ ಪಾರ್ಕ್ ಠಾಣೆಗೆ ಸಂತ್ರಸ್ತ ಜಿ.ಎನ್.ಮಂಜುನಾಥ್ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ.

ಪಬ್ಲಿಕ್ ಟಿವಿ ವರದಿಗಾರ ನಡೆಸಿದ ಹಲ್ಲೆಯಿಂದ ಜಿ.ಎನ್.ಮಂಜುನಾಥ್ ಅವರ ಕಿವಿ, ಬಲ ಕುತ್ತಿಗೆಗೆ ಗಾಯಗಳಾಗಿದ್ದು, ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಮಂಜುನಾಥ್‌ ನೀಡಿದ ದೂರಿನ ಅನ್ವಯ ತನಿಖಾಧಿಕಾರಿಯಾಗಿರುವ ಮಧುಗಿರಿ ಡಿವೈಎಸ್‌ಪಿ ಅವರು ಆರೋಪಿ ಮಂಜುನಾಥ್ ತಾಳಮಕ್ಕಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಧೀಶರು ಆರೋಪಿಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಹೊಲದಲ್ಲಿ ದನ ಮೇಯಿಸುವುದನ್ನು ಆಕ್ಷೇಪಿಸಿದ ದಲಿತ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...