Homeಚಳವಳಿದಲಿತ ಕಾರ್ಮಿಕ ಮುಖಂಡ ಶಿವಕುಮಾರ್‌ಗೆ ಪೊಲೀಸ್ ಕಸ್ಟಡಿಯಲ್ಲಿ ಚಿತ್ರಹಿಂಸೆ: ವೈದ್ಯರ ವರದಿ

ದಲಿತ ಕಾರ್ಮಿಕ ಮುಖಂಡ ಶಿವಕುಮಾರ್‌ಗೆ ಪೊಲೀಸ್ ಕಸ್ಟಡಿಯಲ್ಲಿ ಚಿತ್ರಹಿಂಸೆ: ವೈದ್ಯರ ವರದಿ

- Advertisement -
- Advertisement -

ಜನವರಿ 16 ರಂದು ದೆಹಲಿಯ ಸಿಂಘು ಗಡಿ ಪ್ರತಿಭಟನಾ ಸ್ಥಳದಿಂದ ಬಂಧಿಸಲ್ಪಟ್ಟ 24 ವರ್ಷದ ದಲಿತ ಕಾರ್ಮಿಕ ಸಂಘಟಕರಾದ ಶಿವಕುಮಾರ್ ಅವರಿಗೆ ಹರಿಯಾಣ ಪೊಲೀಸ್ ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಲಾಗಿದೆ ಎಂದು ಸರ್ಕಾರಿ ವೈದ್ಯರ ತಂಡ ಹೇಳಿರುವುದಾಗಿ ಆರ್ಟಿಕಲ್ 14 ವರದಿ ಮಾಡಿದೆ.

ಈ ಕುರಿತು ಸಾಕ್ಷ್ಯ ನೀಡಿರುವ ವೈದ್ಯರು, “ಶಿವಕುಮಾರ್ ದೇಹದಲ್ಲಿ ಅನೇಕ ಗಾಯಗಳಾಗಿವೆ. ಅವರ ಕಾಲ್ಬೆರಳುಗಳು ಕಿತ್ತುಹೋಗಿವೆ. ಪೊಲೀಸ್ ಕಸ್ಟಡಿಯಲ್ಲಿ ಮಾನಸಿಕವಾಗಿ ಮತ್ತು ದೈಹಿಕವಾಗಿ ಕಿರುಕುಳಕ್ಕೊಳಗಾಗಿದ್ದಾರೆ” ಎಂದು ಚಂಡೀಗಡದ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯಕೀಯ ಮಂಡಳಿಯ ನಾಲ್ಕು ಪುಟಗಳ ವರದಿಯಲ್ಲಿ ತಿಳಿಸಲಾಗಿದೆ.

ಈ ವರದಿಯನ್ನು ಫೆಬ್ರವರಿ 23 ರಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ಗೆ ಸೋನಿಪತ್ ಜಿಲ್ಲಾ ಜೈಲಿನ ಅಧೀಕ್ಷಕರು ಸಲ್ಲಿಸಿದ್ದಾರೆ. ಅಲ್ಲಿ ಶಿವಕುಮಾರ್‌ರನ್ನು 23 ದಿನಗಳಿಂದ ಜೈಲಿನಲ್ಲಿರಿಸಲಾಗಿದೆ.

ಶಿವಕುಮಾರ್‌ರವರ ಅಧಿಕೃತ ಬಂಧನಕ್ಕೂ ಮುನ್ನ ಒಂದು ವಾರದ ಮೊದಲೇ ಆತನನ್ನು ಪೊಲೀಸರು ಕರೆದೊಯ್ದಿದ್ದಾರೆ ಎಂದು ಅವರ ಕುಟುಂಬ ಮತ್ತು ವಕೀಲರು ಆರೋಪಿಸಿದ್ದಾರೆ. ಇದು ನಿಜವಾಗಿದ್ದರೆ, ಅವರು ಏಳು ದಿನಗಳ ಕಾಲ ಅಕ್ರಮ ಬಂಧನದಲ್ಲಿದ್ದರು ಆರ್ಟಿಕಲ್ 14 ಆತಂಕ ವ್ಯಕ್ತಪಡಿಸಿದೆ. ಶಿವಕುಮಾರ್ ಅವರ ದೇಹದ ಮೇಲಿನ ಎಲ್ಲಾ ಗಾಯಗಳು “ಎರಡು ವಾರಗಳಿಗಿಂತಲೂ ಹಳೆಯವು ಮತ್ತು ಮೊಂಡಾದ ವಸ್ತು / ಆಯುಧದಿಂದ ಉಂಟಾಗಿವೆ” ಎಂದು ವೈದ್ಯಕೀಯ ವರದಿ ಹೇಳಿದೆ.

ಮನೋವೈದ್ಯರನ್ನು ಒಳಗೊಂಡ ವೈದ್ಯರ ತಂಡವು ಶಿವಕುಮಾರ್ ಅನುಭವಿಸಿದ “ಕ್ರೂರತೆಯ ಫ್ಲ್ಯಾಷ್‌ಬ್ಯಾಕ್” ನಿಂದ ನಂತರದ ಆಘಾತಕಾರಿ ಒತ್ತಡದ ಕಾಯಿಲೆಯ ಲಕ್ಷಣಗಳನ್ನು ದಾಖಲಿಸಿದೆ. ಅವರು “ದುಃಖ ಮತ್ತು ತೊಂದರೆಗೀಡಾಗಿದ್ದಾರೆ” ಎಂದು ವೈದ್ಯರು ಗಮನಿಸಿದರು ಮತ್ತು ಪರೀಕ್ಷಿಸುವಾಗ ಅಳುತ್ತಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ‘ಪೊಲೀಸ್‌ ಠಾಣೆಯಲ್ಲಿ ತನಗೆ ಥಳಿಸಲಾಗಿದೆ’- ಹೈಕೋರ್ಟ್‌ನಲ್ಲಿ ಹೋರಾಟಗಾರ್ತಿ ನೊದೀಪ್

ಅನೇಕ ತರಚಿದ ಗಾಯಗಳು, ತೀವ್ರವಾದ ಗಾಯಗಳು ಮತ್ತು ಆಳವಾದ ಮಾನಸಿಕ ಯಾತನೆಗಳ ಉದಾಹರಣೆಗಳನ್ನು ಉಲ್ಲೇಖಿಸಿ, ಅವರ ವಕೀಲರು ಫೆಬ್ರವರಿ 24 ರಂದು ಶಿವಕುಮಾರ್ ಅವರನ್ನು ಸ್ಥಳಾಂತರಿಸಲು ಹರಿಯಾಣ ಸರ್ಕಾರಕ್ಕೆ ಆದೇಶ ನೀಡುವಂತೆ ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ. ಅವರನ್ನು ಅವರ ತಂದೆ ಅಥವಾ ವಕೀಲರು ಸಹ ಭೇಟಿಯಾಗಲು ಹರಿಯಾಣ ಪೊಲೀಸರು ಅನುಮತಿಸಿಲ್ಲ, ಅವರಿಗೆ ತಕ್ಷಣ ಚಿಕಿತ್ಸೆಯ ಅಗತ್ಯವಿದೆ ಎಂದು ಕುಟುಂಬ ಹೇಳಿದೆ.

ಶಿವಕುಮಾರ್‌ರವರ ಸಹ ಕಾರ್ಯಕರ್ತೆ ದಲಿತ ನೊದೀಪ್ ಕೌರ್ (25) ಅವರನ್ನು ಬಂಧಿಸಿದಾಗ ಎಫ್‌ಐಆರ್‌ನಲ್ಲಿ ಶಿವಕುಮಾರ್‌ರವರನ್ನು ಹೆಸರಿಸಿಲ್ಲ. ಆದರೆ ನೊದೀಪ್ ಕೌರ್ ಬಂಧನದ ನಂತರ ಅವರ ಮೇಲೆ ಜನವರಿ 12 ರಂದು ಎಫ್ಐಆರ್ ಸಲ್ಲಿಸಿದ್ದು, ಕೊಲೆ ಯತ್ನ ಮತ್ತು ಸುಲಿಗೆ ಸೇರಿದಂತೆ 11 ಅಪರಾಧಗಳನ್ನು ಪಟ್ಟಿ ಮಾಡಿದೆ. ಕೌರ್ ಅವರ ಕುಟುಂಬವೂ ಸಹ ಹರಿಯಾಣ ಪೊಲೀಸರು ಆಕೆಗೆ ಚಿತ್ರಹಿಂಸೆ ಮತ್ತು ಲೈಂಗಿಕ ದೌರ್ಜನ್ಯ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಿದೆ. ಆರೋಪಗಳನ್ನು ಪೊಲೀಸರು ನಿರಾಕರಿಸಿದ್ದಾರೆ.

ಭೂಹೀನ ದಲಿತ ಕೃಷಿ ಕೆಲಸಗಾರ ಮತ್ತು ಅರೆಕಾಲಿಕ ಭದ್ರತಾ ಸಿಬ್ಬಂದಿಯ ಮಗ ಶಿವಕುಮಾರ್ ಅವರು 2016 ರಲ್ಲಿ ಸೋನಿಪತ್‌ನಲ್ಲಿ ಕೈಗಾರಿಕಾ ತರಬೇತಿ ಸಂಸ್ಥೆಯಿಂದ-ಉಪಕರಣಗಳನ್ನು ನಿರ್ವಹಿಸುವ ತರಬೇತಿಯಲ್ಲಿ ಪದವಿ ಪಡೆದರು. ಕುಂಡ್ಲಿಯಲ್ಲಿ ಎಲ್‌ಇಡಿ ದೀಪಗಳು ಮತ್ತು ವಾಹನ ಭಾಗಗಳನ್ನು ತಯಾರಿಸುವ ಕಾರ್ಖಾನೆಗಳಲ್ಲಿ ಎರಡು ವರ್ಷ ಕೆಲಸ ಮಾಡಿದರು. 2018 ರಲ್ಲಿ ಮಜ್ದೂರ್ ಅಧಿಕಾರ ಸಂಘಟನ್ (ಎಂಎಎಸ್) ಸಂಘಟನೆ ಸೇರಿದರು.

ರೈತ ಪ್ರತಿಭಟನೆಯನ್ನು ಬೆಂಬಲಿಸಿ ಕುಂಡ್ಲಿ ಕೈಗಾರಿಕಾ ಪ್ರದೇಶದ ಕಾರ್ಖಾನೆಯ ಕಾರ್ಮಿಕರ ಗುಂಪಿನೊಂದಿಗೆ ನೊದೀಪ್ ಕೌರ್ ಸಿಂಘು ಗಡಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದರು. ಅವರು, ಕಾರ್ಮಿಕರು ಸಹ ರೈತರಂತೆ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ, ಕಾರ್ಮಿಕರು ಕಾರ್ಖಾನೆಯ ಮಾಲಿಕರಿಂದ ಶೋಷಣೆಗೆ ಒಳಗಾಗಿದ್ದಾರೆ, ಅವರ ವೇತನವನ್ನು ತಡೆಹಿಡಿಯಲಾಗಿದೆ ಮತ್ತು ಅವರನ್ನು ಉದ್ಯೋಗಗಳಿಂದ ಕಿತ್ತು ಎಸೆಯಲಾಗಿದೆ ಎಂದು ಆರೋಪಿಸಿದ್ದರು. ಆ ನಂತರ ಅವರನ್ನು ಬಂಧಿಸಲಾಗಿತ್ತು.

ಎಫ್‌ಐಆರ್‌ಗಳಲ್ಲಿ ಶಿವ ಕುಮಾರ್‌ ಹೆಸರಿಲ್ಲದಿದ್ದರೂ ಸಹ ನೊದೀಪ್ ಕೌರ್‌ ಬಂಧಿಸಿದ ನಾಲ್ಕು ದಿನಗಳ ನಂತರ ಪೊಲೀಸರು ಕುಂಡ್ಲಿಯ ಪಕ್ಕದ ಸಿಂಘು ಗಡಿಯಿಂದ ಶಿವಕುಮಾರ್‌ರವರನ್ನು ಸಹ ಬಂಧಿಸಿದ್ದಾರೆ.


ಇದನ್ನೂ ಓದಿ; ಸಿಂಘು ಗಡಿ: ದಲಿತ ಕಾರ್ಮಿಕ ಹೋರಾಟಗಾರ್ತಿ ನೊದೀಪ್ ಕೌರ್‌ ಬಂಧನ ಯಾಕಾಗಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...