Homeಚಳವಳಿದಲಿತ ಕಾರ್ಮಿಕ ಮುಖಂಡ ಶಿವಕುಮಾರ್‌ಗೆ ಪೊಲೀಸ್ ಕಸ್ಟಡಿಯಲ್ಲಿ ಚಿತ್ರಹಿಂಸೆ: ವೈದ್ಯರ ವರದಿ

ದಲಿತ ಕಾರ್ಮಿಕ ಮುಖಂಡ ಶಿವಕುಮಾರ್‌ಗೆ ಪೊಲೀಸ್ ಕಸ್ಟಡಿಯಲ್ಲಿ ಚಿತ್ರಹಿಂಸೆ: ವೈದ್ಯರ ವರದಿ

- Advertisement -
- Advertisement -

ಜನವರಿ 16 ರಂದು ದೆಹಲಿಯ ಸಿಂಘು ಗಡಿ ಪ್ರತಿಭಟನಾ ಸ್ಥಳದಿಂದ ಬಂಧಿಸಲ್ಪಟ್ಟ 24 ವರ್ಷದ ದಲಿತ ಕಾರ್ಮಿಕ ಸಂಘಟಕರಾದ ಶಿವಕುಮಾರ್ ಅವರಿಗೆ ಹರಿಯಾಣ ಪೊಲೀಸ್ ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಲಾಗಿದೆ ಎಂದು ಸರ್ಕಾರಿ ವೈದ್ಯರ ತಂಡ ಹೇಳಿರುವುದಾಗಿ ಆರ್ಟಿಕಲ್ 14 ವರದಿ ಮಾಡಿದೆ.

ಈ ಕುರಿತು ಸಾಕ್ಷ್ಯ ನೀಡಿರುವ ವೈದ್ಯರು, “ಶಿವಕುಮಾರ್ ದೇಹದಲ್ಲಿ ಅನೇಕ ಗಾಯಗಳಾಗಿವೆ. ಅವರ ಕಾಲ್ಬೆರಳುಗಳು ಕಿತ್ತುಹೋಗಿವೆ. ಪೊಲೀಸ್ ಕಸ್ಟಡಿಯಲ್ಲಿ ಮಾನಸಿಕವಾಗಿ ಮತ್ತು ದೈಹಿಕವಾಗಿ ಕಿರುಕುಳಕ್ಕೊಳಗಾಗಿದ್ದಾರೆ” ಎಂದು ಚಂಡೀಗಡದ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯಕೀಯ ಮಂಡಳಿಯ ನಾಲ್ಕು ಪುಟಗಳ ವರದಿಯಲ್ಲಿ ತಿಳಿಸಲಾಗಿದೆ.

ಈ ವರದಿಯನ್ನು ಫೆಬ್ರವರಿ 23 ರಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ಗೆ ಸೋನಿಪತ್ ಜಿಲ್ಲಾ ಜೈಲಿನ ಅಧೀಕ್ಷಕರು ಸಲ್ಲಿಸಿದ್ದಾರೆ. ಅಲ್ಲಿ ಶಿವಕುಮಾರ್‌ರನ್ನು 23 ದಿನಗಳಿಂದ ಜೈಲಿನಲ್ಲಿರಿಸಲಾಗಿದೆ.

ಶಿವಕುಮಾರ್‌ರವರ ಅಧಿಕೃತ ಬಂಧನಕ್ಕೂ ಮುನ್ನ ಒಂದು ವಾರದ ಮೊದಲೇ ಆತನನ್ನು ಪೊಲೀಸರು ಕರೆದೊಯ್ದಿದ್ದಾರೆ ಎಂದು ಅವರ ಕುಟುಂಬ ಮತ್ತು ವಕೀಲರು ಆರೋಪಿಸಿದ್ದಾರೆ. ಇದು ನಿಜವಾಗಿದ್ದರೆ, ಅವರು ಏಳು ದಿನಗಳ ಕಾಲ ಅಕ್ರಮ ಬಂಧನದಲ್ಲಿದ್ದರು ಆರ್ಟಿಕಲ್ 14 ಆತಂಕ ವ್ಯಕ್ತಪಡಿಸಿದೆ. ಶಿವಕುಮಾರ್ ಅವರ ದೇಹದ ಮೇಲಿನ ಎಲ್ಲಾ ಗಾಯಗಳು “ಎರಡು ವಾರಗಳಿಗಿಂತಲೂ ಹಳೆಯವು ಮತ್ತು ಮೊಂಡಾದ ವಸ್ತು / ಆಯುಧದಿಂದ ಉಂಟಾಗಿವೆ” ಎಂದು ವೈದ್ಯಕೀಯ ವರದಿ ಹೇಳಿದೆ.

ಮನೋವೈದ್ಯರನ್ನು ಒಳಗೊಂಡ ವೈದ್ಯರ ತಂಡವು ಶಿವಕುಮಾರ್ ಅನುಭವಿಸಿದ “ಕ್ರೂರತೆಯ ಫ್ಲ್ಯಾಷ್‌ಬ್ಯಾಕ್” ನಿಂದ ನಂತರದ ಆಘಾತಕಾರಿ ಒತ್ತಡದ ಕಾಯಿಲೆಯ ಲಕ್ಷಣಗಳನ್ನು ದಾಖಲಿಸಿದೆ. ಅವರು “ದುಃಖ ಮತ್ತು ತೊಂದರೆಗೀಡಾಗಿದ್ದಾರೆ” ಎಂದು ವೈದ್ಯರು ಗಮನಿಸಿದರು ಮತ್ತು ಪರೀಕ್ಷಿಸುವಾಗ ಅಳುತ್ತಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ‘ಪೊಲೀಸ್‌ ಠಾಣೆಯಲ್ಲಿ ತನಗೆ ಥಳಿಸಲಾಗಿದೆ’- ಹೈಕೋರ್ಟ್‌ನಲ್ಲಿ ಹೋರಾಟಗಾರ್ತಿ ನೊದೀಪ್

ಅನೇಕ ತರಚಿದ ಗಾಯಗಳು, ತೀವ್ರವಾದ ಗಾಯಗಳು ಮತ್ತು ಆಳವಾದ ಮಾನಸಿಕ ಯಾತನೆಗಳ ಉದಾಹರಣೆಗಳನ್ನು ಉಲ್ಲೇಖಿಸಿ, ಅವರ ವಕೀಲರು ಫೆಬ್ರವರಿ 24 ರಂದು ಶಿವಕುಮಾರ್ ಅವರನ್ನು ಸ್ಥಳಾಂತರಿಸಲು ಹರಿಯಾಣ ಸರ್ಕಾರಕ್ಕೆ ಆದೇಶ ನೀಡುವಂತೆ ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ. ಅವರನ್ನು ಅವರ ತಂದೆ ಅಥವಾ ವಕೀಲರು ಸಹ ಭೇಟಿಯಾಗಲು ಹರಿಯಾಣ ಪೊಲೀಸರು ಅನುಮತಿಸಿಲ್ಲ, ಅವರಿಗೆ ತಕ್ಷಣ ಚಿಕಿತ್ಸೆಯ ಅಗತ್ಯವಿದೆ ಎಂದು ಕುಟುಂಬ ಹೇಳಿದೆ.

ಶಿವಕುಮಾರ್‌ರವರ ಸಹ ಕಾರ್ಯಕರ್ತೆ ದಲಿತ ನೊದೀಪ್ ಕೌರ್ (25) ಅವರನ್ನು ಬಂಧಿಸಿದಾಗ ಎಫ್‌ಐಆರ್‌ನಲ್ಲಿ ಶಿವಕುಮಾರ್‌ರವರನ್ನು ಹೆಸರಿಸಿಲ್ಲ. ಆದರೆ ನೊದೀಪ್ ಕೌರ್ ಬಂಧನದ ನಂತರ ಅವರ ಮೇಲೆ ಜನವರಿ 12 ರಂದು ಎಫ್ಐಆರ್ ಸಲ್ಲಿಸಿದ್ದು, ಕೊಲೆ ಯತ್ನ ಮತ್ತು ಸುಲಿಗೆ ಸೇರಿದಂತೆ 11 ಅಪರಾಧಗಳನ್ನು ಪಟ್ಟಿ ಮಾಡಿದೆ. ಕೌರ್ ಅವರ ಕುಟುಂಬವೂ ಸಹ ಹರಿಯಾಣ ಪೊಲೀಸರು ಆಕೆಗೆ ಚಿತ್ರಹಿಂಸೆ ಮತ್ತು ಲೈಂಗಿಕ ದೌರ್ಜನ್ಯ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಿದೆ. ಆರೋಪಗಳನ್ನು ಪೊಲೀಸರು ನಿರಾಕರಿಸಿದ್ದಾರೆ.

ಭೂಹೀನ ದಲಿತ ಕೃಷಿ ಕೆಲಸಗಾರ ಮತ್ತು ಅರೆಕಾಲಿಕ ಭದ್ರತಾ ಸಿಬ್ಬಂದಿಯ ಮಗ ಶಿವಕುಮಾರ್ ಅವರು 2016 ರಲ್ಲಿ ಸೋನಿಪತ್‌ನಲ್ಲಿ ಕೈಗಾರಿಕಾ ತರಬೇತಿ ಸಂಸ್ಥೆಯಿಂದ-ಉಪಕರಣಗಳನ್ನು ನಿರ್ವಹಿಸುವ ತರಬೇತಿಯಲ್ಲಿ ಪದವಿ ಪಡೆದರು. ಕುಂಡ್ಲಿಯಲ್ಲಿ ಎಲ್‌ಇಡಿ ದೀಪಗಳು ಮತ್ತು ವಾಹನ ಭಾಗಗಳನ್ನು ತಯಾರಿಸುವ ಕಾರ್ಖಾನೆಗಳಲ್ಲಿ ಎರಡು ವರ್ಷ ಕೆಲಸ ಮಾಡಿದರು. 2018 ರಲ್ಲಿ ಮಜ್ದೂರ್ ಅಧಿಕಾರ ಸಂಘಟನ್ (ಎಂಎಎಸ್) ಸಂಘಟನೆ ಸೇರಿದರು.

ರೈತ ಪ್ರತಿಭಟನೆಯನ್ನು ಬೆಂಬಲಿಸಿ ಕುಂಡ್ಲಿ ಕೈಗಾರಿಕಾ ಪ್ರದೇಶದ ಕಾರ್ಖಾನೆಯ ಕಾರ್ಮಿಕರ ಗುಂಪಿನೊಂದಿಗೆ ನೊದೀಪ್ ಕೌರ್ ಸಿಂಘು ಗಡಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದರು. ಅವರು, ಕಾರ್ಮಿಕರು ಸಹ ರೈತರಂತೆ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ, ಕಾರ್ಮಿಕರು ಕಾರ್ಖಾನೆಯ ಮಾಲಿಕರಿಂದ ಶೋಷಣೆಗೆ ಒಳಗಾಗಿದ್ದಾರೆ, ಅವರ ವೇತನವನ್ನು ತಡೆಹಿಡಿಯಲಾಗಿದೆ ಮತ್ತು ಅವರನ್ನು ಉದ್ಯೋಗಗಳಿಂದ ಕಿತ್ತು ಎಸೆಯಲಾಗಿದೆ ಎಂದು ಆರೋಪಿಸಿದ್ದರು. ಆ ನಂತರ ಅವರನ್ನು ಬಂಧಿಸಲಾಗಿತ್ತು.

ಎಫ್‌ಐಆರ್‌ಗಳಲ್ಲಿ ಶಿವ ಕುಮಾರ್‌ ಹೆಸರಿಲ್ಲದಿದ್ದರೂ ಸಹ ನೊದೀಪ್ ಕೌರ್‌ ಬಂಧಿಸಿದ ನಾಲ್ಕು ದಿನಗಳ ನಂತರ ಪೊಲೀಸರು ಕುಂಡ್ಲಿಯ ಪಕ್ಕದ ಸಿಂಘು ಗಡಿಯಿಂದ ಶಿವಕುಮಾರ್‌ರವರನ್ನು ಸಹ ಬಂಧಿಸಿದ್ದಾರೆ.


ಇದನ್ನೂ ಓದಿ; ಸಿಂಘು ಗಡಿ: ದಲಿತ ಕಾರ್ಮಿಕ ಹೋರಾಟಗಾರ್ತಿ ನೊದೀಪ್ ಕೌರ್‌ ಬಂಧನ ಯಾಕಾಗಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...