Homeಮುಖಪುಟಯೋಗಿ ಆದಿತ್ಯನಾಥ್ ಸೂಚನೆ ಮೇರೆಗೆ ಕೈಗಾರಿಕೋದ್ಯಮಿಗಳ ವಶಕ್ಕೆ ದಲಿತರ ಭೂಮಿ: ಸಮಾಜವಾದಿ ಪಕ್ಷ ಗಂಭೀರ ಆರೋಪ

ಯೋಗಿ ಆದಿತ್ಯನಾಥ್ ಸೂಚನೆ ಮೇರೆಗೆ ಕೈಗಾರಿಕೋದ್ಯಮಿಗಳ ವಶಕ್ಕೆ ದಲಿತರ ಭೂಮಿ: ಸಮಾಜವಾದಿ ಪಕ್ಷ ಗಂಭೀರ ಆರೋಪ

- Advertisement -
- Advertisement -

“ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೂಚನೆ ಮೇರೆಗೆ ಕೈಗಾರಿಕೋದ್ಯಮಗಳು ಅಯೋಧ್ಯೆಯಲ್ಲಿ ಅತ್ಯಂತ ಹಿಂದುಳಿದ ಮಾಂಝಿ ಜಾತಿಯ ಭೂಮಿಯನ್ನು ವಶಪಡಿಸಿಕೊಳ್ಳುತ್ತಿದೆ” ಎಂದು ಸಮಾಜವಾದಿ ಪಕ್ಷವು ಗಂಭೀರ ಆರೋಪ ಮಾಡಿದೆ. “ಅವರ ಗೂಂಡಾಗಳು ರೈತರೊಂದಿಗೆ ಗೂಂಡಾಗಿರಿಯಲ್ಲಿ ತೊಡಗಿದ್ದಾರೆ” ಎಂದು ಆರೋಪಿಸಿದೆ.

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಪಕ್ಷವು ಎರಡು ಗುಂಪುಗಳ ನಡುವಿನ ಘರ್ಷಣೆಯ ವೀಡಿಯೊಗಳನ್ನು ಪೋಸ್ಟ್ ಮಾಡಿದ ನಂತರ, ಈ ಗಟನೆಯು ಭೂಕಬಳಿಕೆಗೆ ಸಂಬಂಧಿಸಿದೆ ಎಂದು ಆರೋಪಿಸಿದ್ದಾರೆ. ಈ ವಿಷಯದಲ್ಲಿ ಕಾನೂನು ಕ್ರಮ ತೆಗೆದುಕೊಳ್ಳುತ್ತಿರುವುದಾಗಿ ಸ್ಥಳೀಯ ಪೊಲೀಸರು ತಿಳಿಸಿದ್ದು, ಆರೋಪಗಳು ನಿಜವಲ್ಲ ಎಂದು ಹೇಳಿದ್ದಾರೆ.

ಸಮಾಜವಾದಿ ಪಕ್ಷದ ಎಕ್ಸ್ ಹ್ಯಾಂಡಲ್ ಎರಡು ಕ್ಲಿಪ್‌ಗಳನ್ನು ಪೋಸ್ಟ್ ಮಾಡಿದೆ. ಕ್ಲಿಪ್‌ಗಳ ಜೊತೆಗಿನ ಪೋಸ್ಟ್‌ನಲ್ಲಿ, “ಅಯೋಧ್ಯೆಯಲ್ಲಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸೂಚನೆಗಳು, ಪಾಲುದಾರಿಕೆ, ರಕ್ಷಣೆ ಹಾಗೂ ನಿರ್ದೇಶನದ ಅಡಿಯಲ್ಲಿ, ದೊಡ್ಡ ಕೈಗಾರಿಕೋದ್ಯಮಿಗಳು ದಲಿತ-ಹಿಂದುಳಿದ ವರ್ಗದ ರೈತರ ಭೂಮಿಯನ್ನು ಬಲವಂತವಾಗಿ ವಶಪಡಿಸಿಕೊಳ್ಳುತ್ತಿದ್ದಾರೆ” ಎಂದು ಆರೋಪಿಸಿದೆ.

“ರಾಮ ಮಂದಿರ ತೀರ್ಪಿನ ನಂತರ, ಅಯೋಧ್ಯೆ ಆಸ್ತಿಯ ತಾಣವಾಗಿದೆ ಮತ್ತು ಎಲ್ಲ ಬಿಜೆಪಿ, ಮುಖ್ಯಮಂತ್ರಿ ಆದಿತ್ಯನಾಥ್, ದೊಡ್ಡ ಕೈಗಾರಿಕೋದ್ಯಮಿಗಳು ಕೈ ತೊಳೆಯಲು, ಸ್ನಾನ ಮಾಡಲು, ಸರಯುನಲ್ಲಿ ಭೂಮಿಯನ್ನು ಆಕ್ರಮಿಸಿಕೊಳ್ಳಲು ಬಯಸುತ್ತಾರೆ” ಎಂದು ಆರೋಪಿಸಿದ್ದಾರೆ.

“ಅಯೋಧ್ಯೆಯಲ್ಲಿ ರೈತರ ಬಂಧನ ಮತ್ತು ಕೋಟ್ಯಾಧಿಪತಿಗಳಿಗೆ ಪರಿಹಾರ.. ಯುಪಿಯಲ್ಲಿ ಸರ್ಕಾರ ಇನ್ನೂ ಅಧಿಕಾರದಲ್ಲಿದೆಯೇ ಅಥವಾ ನಿವೃತ್ತಿಯಾಗಿದೆಯೇ” ಎಂದು ಅಖೀಲೇಶ್ ಯಾದವ್ ಪ್ರಶ್ನಿಸಿದ್ದಾರೆ.

ಸಮಾಜವಾದಿ ಪಕ್ಷದ ಮೀಡಿಯಾ ಸೆಲ್ ತನ್ನ ಪೋಸ್ಟ್‌ನಲ್ಲಿ, “ಅಭಿನಂದನ್ ಲೋಧಾ ಗ್ರೂಪ್ ಅತ್ಯಂತ ಹಿಂದುಳಿದ ವರ್ಗದ ಮಾಂಝಿ ಸಮುದಾಯದ ಜನರ ಭೂಮಿಯನ್ನು ಆಕ್ರಮಿಸಿಕೊಂಡಿದೆ. ಅದರ ಗೂಂಡಾಗಳು ಅಯೋಧ್ಯೆಯಲ್ಲಿ ರೈತರೊಂದಿಗೆ ಬಲವಂತವಾಗಿ ಹೊಡೆಯುತ್ತಿದ್ದಾರೆ, ಬಲವಂತವಾಗಿ ಮತ್ತು ಗೂಂಡಾಗಿರಿ ಮಾಡುತ್ತಿದ್ದಾರೆ. ಪೊಲೀಸರು ಮುಖ್ಯಮಂತ್ರಿ ಆದಿತ್ಯನಾಥ್ ಅವರ ನಿರ್ದೇಶನದ ಮೇರೆಗೆ ಆಡಳಿತವು ಮಾರಾಟವಾಗಿದೆ ಮತ್ತು ಲೋಧಾ ಗ್ರೂಪ್ ಅನ್ನು ಅನೈತಿಕವಾಗಿ ಬೆಂಬಲಿಸುತ್ತಿದೆ. ರೈತರನ್ನು ಜೈಲಿಗೆ ಕಳುಹಿಸಿದೆ” ಎಂದು ಆರೋಪಿಸಿದೆ.

ಲೋಧಾ ವೆಂಚರ್ಸ್‌ನ ವಕ್ತಾರರು ನಂತರ ಜಮೀನನ್ನು ರೈತರೊಬ್ಬರು ಮಾರಾಟ ಮಾಡಿದ್ದಾರೆ ಎಂದು ಹೇಳಿದರು.

“ನಾವು ಆ ಜಾಗವನ್ನು ಸ್ವಾಧೀನಪಡಿಸಿಕೊಳ್ಳಲು ಹೋದಾಗ, ಗೂಂಡಾಗಳ ಗುಂಪು, ಲಾಠಿಗಳಿಂದ ಶಸ್ತ್ರಸಜ್ಜಿತರಾಗಿ, ನಮ್ಮ ಜನರ ಮೇಲೆ ದಾಳಿ ಮಾಡಿ ಗಾಯಗೊಳಿಸಿತು” ಎಂದು ಅವರು ಹೇಳಿದರು.

“ನಮ್ಮ ಜನರಿಗೆ ತಲೆಗೆ ತೀವ್ರ ಗಾಯಗಳಾಗಿವೆ ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ ಅಲ್ಲಿ ಅವರು ಗಂಭೀರ ಸ್ಥಿತಿಯಲ್ಲಿದ್ದಾರೆ. ನಾವು ಎಫ್‌ಐಆರ್ ದಾಖಲಿಸಿದ್ದೇವೆ ಮತ್ತು ಪೊಲೀಸರು ಅವರನ್ನು ಬಂಧಿಸಿದ್ದಾರೆ” ಎಂದು ಅವರು ಹೇಳಿದರು.

ಸಮಾಜವಾದಿ ಪಕ್ಷದ ಮಾಧ್ಯಮ ಕೋಶದ ಪೋಸ್ಟ್‌ಗೆ ಅಯೋಧ್ಯೆ ಪೊಲೀಸರು ಉತ್ತರಿಸಿದ್ದು, ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಅಯೋಧ್ಯೆ) ರಾಜ್ ಕರಣ್ ನಯ್ಯರ್ ಅವರು ಘಟನೆಯ ವಿವರಗಳನ್ನು ಸ್ಪಷ್ಟಪಡಿಸುವ ವೀಡಿಯೊವನ್ನು ಸಹ ಪೋಸ್ಟ್ ಮಾಡಿದ್ದಾರೆ.

“ಉಲ್ಲೇಖಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವೀಕರಿಸಿದ ಅರ್ಜಿಯ ಆಧಾರದ ಮೇಲೆ, ಅಯೋಧ್ಯೆ ಪೊಲೀಸ್ ಠಾಣೆಯ ಪ್ರಭಾರಿ ಇನ್ಸ್‌ಪೆಕ್ಟರ್ ಅವರು ಪ್ರಕರಣವನ್ನು ದಾಖಲಿಸಿದ್ದಾರೆ ಮತ್ತು ಅಗತ್ಯ ಕಾನೂನು ಕ್ರಮ ಕೈಗೊಳ್ಳುತ್ತಿದ್ದಾರೆ. ಟ್ವೀಟ್‌ನಲ್ಲಿ ಬರೆದಿರುವ ಸಂಗತಿಗಳು ನಿಜವಲ್ಲ” ಎಂದು ಪೊಲೀಸರು ತನ್ನ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ; ಹರಿಯಾಣ ವಿಧಾನಸಭಾ ಚುನಾವಣೆ: ಕೇವಲ 51 ಮಹಿಳಾ ಅಭ್ಯರ್ಥಿಗಳಿಂದ ನಾಮಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...