Homeಕರ್ನಾಟಕಉತ್ತರ ಪ್ರದೇಶ ಕಾಂಗ್ರೆಸ್‌ ಘಟಕದ ಅಧ್ಯಕ್ಷರಾಗಿ ದಲಿತ ನಾಯಕ ನೇಮಕ

ಉತ್ತರ ಪ್ರದೇಶ ಕಾಂಗ್ರೆಸ್‌ ಘಟಕದ ಅಧ್ಯಕ್ಷರಾಗಿ ದಲಿತ ನಾಯಕ ನೇಮಕ

- Advertisement -
- Advertisement -

ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ನಂತರ ಕೆಲವು ರಾಜಕೀಯ ನೆಲೆಯನ್ನು ಉಳಿಸಲು ಕಾಂಗ್ರೆಸ್ ಮುಂದಾಗಿದೆ. ಉತ್ತರ ಪ್ರದೇಶದ ಆರು ವಲಯ ಮುಖ್ಯಸ್ಥರ ನೇಮಕದ ಜೊತೆಗೆ ದಲಿತ ನಾಯಕ ಬ್ರಿಜ್‌ಲಾಲ್ ಖಬ್ರಿ ಅವರನ್ನು ಉತ್ತರ ಪ್ರದೇಶ ಕಾಂಗ್ರೆಸ್ ಘಟಕದ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ.

ದಲಿತ ಸಮುದಾಯದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ರಾಷ್ಟ್ರಮಟ್ಟದಲ್ಲಿ ಪಕ್ಷದ ನೇತೃತ್ವ ವಹಿಸುವ ಸಾಧ್ಯತೆ ಹೆಚ್ಚಿದೆ. ಆ ಮೂಲಕ ಮೇಲ್ಜಾತಿ ಪಕ್ಷ ಎಂಬ ತನ್ನ ಇಮೇಜ್ ಅನ್ನು ಕಳಚಿಕೊಳ್ಳಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂಬ ಅಭಿಪ್ರಾಯಗಳು ರಾಜಕೀಯ ವಲಯದಲ್ಲಿ ವ್ಯಕ್ತವಾಗುತ್ತಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಉತ್ತರ ಪ್ರದೇಶದಲ್ಲಿ ಮಾಯಾವತಿಯವರ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ದಿನೇ ದಿನೇ ತನ್ನ ಪ್ರಭಾವವನ್ನು ಕಳೆದುಕೊಳ್ಳುತ್ತಿರುವುದನ್ನು ಗಮನಿಸಿರುವ ಕಾಂಗ್ರೆಸ್ ದಲಿತ ಮತಗಳ ಮೇಲೆ ತನ್ನ ದೃಷ್ಟಿ ಇರಿಸಿದೆ.

ಚುನಾವಣೆಗೂ ಮುನ್ನ ದಲಿತ ನಾಯಕ ಚರಣ್‌ಜಿತ್‌ ಸಿಂಗ್‌ ಚನ್ನಿ ಅವರನ್ನು ಪಂಜಾಬ್‌ ಮುಖ್ಯಮಂತ್ರಿಯನ್ನಾಗಿ ಮಾಡಲಾಗಿತ್ತು. ಚುನಾವಣೆ ಹೊಸ್ತಿಲಲ್ಲಿನ ಈ ಪ್ರಯೋಗ ವಿಫಲವಾಗಿತ್ತು. ಅಮರಿಂದರ್ ಸಿಂಗ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಕೆಟ್ಟ ಆಡಳಿತವನ್ನು ನೀಡಿತ್ತು. ಇದು ದೊಡ್ಡ ಆಡಳಿತ ವಿರೋಧಿ ಅಲೆಯನ್ನು ಸೃಷ್ಟಿಸಿತು. ಚುನಾವಣೆಗೆ ಕೇವಲ ಮೂರು ತಿಂಗಳ ಮೊದಲು ಚನ್ನಿ ಅವರನ್ನು ಮುಖ್ಯಮಂತ್ರಿಯನ್ನಾಗಿಸಿದ್ದು ದಲಿತರನ್ನು ಮೂರ್ಖರನ್ನಾಗಿಸುವ ಯೋಜನೆಯಂತೆ ಕಂಡಿತು. ಆದರೆ ಇದೆಲ್ಲದರಿಂದ ಎಚ್ಚೆತ್ತುಕೊಂಡಂತೆ ಕಾಣುತ್ತಿರುವ ಕಾಂಗ್ರೆಸ್, ದಲಿತ ವೋಟ್‌ಬ್ಯಾಂಕ್‌ ಮೇಲೆ ದೃಷ್ಟಿ ಹಾಯಿಸಿರುವುದು ಸ್ಪಷ್ಟವಾಗುತ್ತಿದೆ.

ಖರ್ಗೆ ಅವರನ್ನು ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮತ್ತು ಖಬ್ರಿ ಅವರನ್ನು ದೇಶದ ಅತಿದೊಡ್ಡ ರಾಜ್ಯದ ಕಾಂಗ್ರೆಸ್‌ ಮುಖ್ಯಸ್ಥರನ್ನಾಗಿ ಆಯ್ಕೆ ಮಾಡುವ ಮೂಲಕ ಸಮಾಜದ ದುರ್ಬಲ ವರ್ಗಗಳನ್ನು ಧ್ರುವೀಕರಣ ಮಾಡುವ ತನ್ನ ಯೋಜನೆಯನ್ನು ರೂಪಿಸಿದೆ.

ಖಬ್ರಿ ಮತ್ತು ಅವರ ಪತ್ನಿ ಊರ್ಮಿಳಾ ಸೋಂಕರ್ ಇಬ್ಬರೂ ಅಸೆಂಬ್ಲಿ ಚುನಾವಣೆಯಲ್ಲಿ ಸೋತಿದ್ದಾರೆ. ಆದರೆ ಬಿಜೆಪಿ ಮತ್ತು ಸಮಾಜವಾದಿ ಪಕ್ಷದ ನಡುವಿನ ತೀವ್ರ ಧ್ರುವೀಕರಣದ ಸ್ಪರ್ಧೆಯಲ್ಲಿ ಕಾಂಗ್ರೆಸ್ ಈ ಸೋಲುಗಳನ್ನು ಲೆಕ್ಕ ಹಾಕಿಲ್ಲ ಎಂದು ರಾಜಕೀಯ ವಿಶ್ಲೇಷಣೆಗಳು ಹೇಳುತ್ತಿವೆ.

ನರೇಂದ್ರ ಮೋದಿ ಸರ್ಕಾರದ ಒತ್ತಡಕ್ಕೆ ಮಣಿದು ಮಾಯಾವತಿ ಕೆಲಸ ಮಾಡುತ್ತಿದ್ದಾರೆ ಎಂಬ ಆರೋಪಗಳು ಇರುವುದರಿಂದ ದಲಿತ ಮತಗಳನ್ನು ಕ್ರೂಢೀಕರಿಸಿದರೆ ಕಾಂಗ್ರೆಸ್‌ ಬಲವಾಗಬಹುದು ಎಂಬ ಲೆಕ್ಕಾಚಾರಗಳಿವೆ. ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಬಿಎಸ್‌ಪಿಯ ಹೆಚ್ಚಿನ ಮತಗಳು ಒಲ್ಲದ ಮನಸ್ಸಿನಿಂದ ಬಿಜೆಪಿಗೆ ಹೋಗಿವೆ ಎಂದು ಕಾಂಗ್ರೆಸ್‌ ನಂಬಿದೆ.

ಬಿಜೆಪಿಯ ಮೇಲಿನ ಅಸಮಾಧಾನದಿಂದ ದಲಿತರು ಕಾಂಗ್ರೆಸ್‌ನತ್ತ ನೋಡುತ್ತಿದ್ದಾರೆ ಎಂದು ರಾಷ್ಟ್ರ ಮಟ್ಟದ ಕಾಂಗ್ರೆಸ್ ನಾಯಕರು ಆಲೋಚಿಸಿದ್ದಾರೆ.

2016ರಲ್ಲಿ ಕಾಂಗ್ರೆಸ್ ಸೇರಿದ ಖಬ್ರಿ ಅವರು ಕಾನ್ಶಿರಾಮ್ ಮತ್ತು ಮಾಯಾವತಿ ಅವರೊಂದಿಗೆ ನಿಕಟವಾಗಿ ಕೆಲಸ ಮಾಡಿದ್ದರು. ಸಂಘಟನಾ ಕೌಶಲ್ಯಕ್ಕೆ ಹೆಸರುವಾಸಿಯಾಗಿದ್ದಾರೆ. ಖಬ್ರಿಯವರಿಗೆ ಆರು ವಲಯಗಳ ಮುಖ್ಯಸ್ಥರಾದ ನಸೀಮುದ್ದೀನ್ ಸಿದ್ದಿಕಿ, ಅಜಯ್ ರೈ, ವೀರೇಂದ್ರ ಚೌಧರಿ, ನಕುಲ್ ದುಬೆ, ಅನಿಲ್ ಯಾದವ್ ಮತ್ತು ಯೋಗೇಶ್ ದೀಕ್ಷಿತ್ ಬಲ ತುಂಬಲಿದ್ದಾರೆ. ಸಿದ್ದಿಕಿ ಮತ್ತು ದುಬೆ ಕೂಡ ಬಿಎಸ್‌ಪಿಯಿಂದ ಕಾಂಗ್ರೆಸ್‌ಗೆ ಪಕ್ಷಾಂತರಗೊಂಡ ನಾಯಕರಾಗಿದ್ದಾರೆ.

ಇದನ್ನೂ ಓದಿರಿ: 2019ರಲ್ಲಿ ಉದ್ಘಾಟಿಸಿದ್ದ ‘ಅಹಮದಾಬಾದ್ ಮೆಟ್ರೋ ರೈಲು ಮೊದಲ ಹಂತ’ವನ್ನೇ ಮತ್ತೆ ಉದ್ಘಾಟಿಸಿದ ಮೋದಿ! ವಾಸ್ತವವೇನು?

ವಲಯ ಮುಖ್ಯಸ್ಥರು ತಮ್ಮ ಪ್ರದೇಶಗಳಲ್ಲಿ ಪಕ್ಷವನ್ನು ಸಂಘಟಿಸುವ ಜವಾಬ್ದಾರಿಯನ್ನು ಹೊಂದಿರುತ್ತಾರೆ. ಈ ವಲಯದ ಮುಖ್ಯಸ್ಥರ ಆಯ್ಕೆಯಲ್ಲಿ ಜಾತಿ ಲೆಕ್ಕಾಚಾರಗಳು ಮುಖ್ಯವಾಗಿವೆ. ದಲಿತ ನಾಯಕರಾದ ಖಬ್ರಿ ಅವರು ರಾಜ್ಯ ಮುಖ್ಯಸ್ಥರಾಗಿ ಕೆಲಸ ಮಾಡಿದರೆ, ಫರೆಂಡಾ ಶಾಸಕ ವೀರೇಂದ್ರ ಚೌಧರಿ ಅವರು ಪೂರ್ವಾಂಚಲ ಜಿಲ್ಲೆಗಳಾದ ಫೈಜಾಬಾದ್, ಅಂಬೇಡ್ಕರ್ ನಗರ, ಬಸ್ತಿ, ಮಹಾರಾಜ್‌ಗಂಜ್, ಸಿದ್ಧಾರ್ಥನಗರ ಮತ್ತು ಕುಶಿನಗರದ ಉಸ್ತುವಾರಿ ವಹಿಸಲಿದ್ದಾರೆ.

ಭೂಮಿಹಾರ್ ಆಗಿರುವ ಅಜಯ್ ರೈ ಅವರು ಪ್ರಯಾಗವನ್ನು ನೋಡಿಕೊಳ್ಳುತ್ತಾರೆ. ನಕುಲ್ ದುಬೆ ಅವಧ್‌ನ ಉಸ್ತುವಾರಿ ವಹಿಸಲಿದ್ದಾರೆ. ಯೋಗೇಶ್ ದೀಕ್ಷಿತ್ ಅವರಿಗೆ ಬುಂದೇಲ್‌ಖಂಡ್ ಜವಾಬ್ದಾರಿ ನೀಡಲಾಗಿದೆ. ಪಶ್ಚಿಮ ಉತ್ತರ ಪ್ರದೇಶವನ್ನು ಸಿದ್ದಿಕಿ ನೋಡಿಕೊಳ್ಳಲಿದ್ದಾರೆ. ಅನಿಲ್ ಯಾದವ್ ಅವರು ಯಾದವ್ ಪ್ರಾಬಲ್ಯ ಹೊಂದಿರುವ ಬ್ರಜ್‌ನಲ್ಲಿ ಕೆಲಸ ಮಾಡಲಿದ್ದಾರೆ.

ಕೃಪೆ: ಟೆಲಿಗ್ರಾಫ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...