Homeಕರ್ನಾಟಕಉತ್ತರ ಪ್ರದೇಶ ಕಾಂಗ್ರೆಸ್‌ ಘಟಕದ ಅಧ್ಯಕ್ಷರಾಗಿ ದಲಿತ ನಾಯಕ ನೇಮಕ

ಉತ್ತರ ಪ್ರದೇಶ ಕಾಂಗ್ರೆಸ್‌ ಘಟಕದ ಅಧ್ಯಕ್ಷರಾಗಿ ದಲಿತ ನಾಯಕ ನೇಮಕ

- Advertisement -
- Advertisement -

ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ನಂತರ ಕೆಲವು ರಾಜಕೀಯ ನೆಲೆಯನ್ನು ಉಳಿಸಲು ಕಾಂಗ್ರೆಸ್ ಮುಂದಾಗಿದೆ. ಉತ್ತರ ಪ್ರದೇಶದ ಆರು ವಲಯ ಮುಖ್ಯಸ್ಥರ ನೇಮಕದ ಜೊತೆಗೆ ದಲಿತ ನಾಯಕ ಬ್ರಿಜ್‌ಲಾಲ್ ಖಬ್ರಿ ಅವರನ್ನು ಉತ್ತರ ಪ್ರದೇಶ ಕಾಂಗ್ರೆಸ್ ಘಟಕದ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ.

ದಲಿತ ಸಮುದಾಯದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ರಾಷ್ಟ್ರಮಟ್ಟದಲ್ಲಿ ಪಕ್ಷದ ನೇತೃತ್ವ ವಹಿಸುವ ಸಾಧ್ಯತೆ ಹೆಚ್ಚಿದೆ. ಆ ಮೂಲಕ ಮೇಲ್ಜಾತಿ ಪಕ್ಷ ಎಂಬ ತನ್ನ ಇಮೇಜ್ ಅನ್ನು ಕಳಚಿಕೊಳ್ಳಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂಬ ಅಭಿಪ್ರಾಯಗಳು ರಾಜಕೀಯ ವಲಯದಲ್ಲಿ ವ್ಯಕ್ತವಾಗುತ್ತಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಉತ್ತರ ಪ್ರದೇಶದಲ್ಲಿ ಮಾಯಾವತಿಯವರ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ದಿನೇ ದಿನೇ ತನ್ನ ಪ್ರಭಾವವನ್ನು ಕಳೆದುಕೊಳ್ಳುತ್ತಿರುವುದನ್ನು ಗಮನಿಸಿರುವ ಕಾಂಗ್ರೆಸ್ ದಲಿತ ಮತಗಳ ಮೇಲೆ ತನ್ನ ದೃಷ್ಟಿ ಇರಿಸಿದೆ.

ಚುನಾವಣೆಗೂ ಮುನ್ನ ದಲಿತ ನಾಯಕ ಚರಣ್‌ಜಿತ್‌ ಸಿಂಗ್‌ ಚನ್ನಿ ಅವರನ್ನು ಪಂಜಾಬ್‌ ಮುಖ್ಯಮಂತ್ರಿಯನ್ನಾಗಿ ಮಾಡಲಾಗಿತ್ತು. ಚುನಾವಣೆ ಹೊಸ್ತಿಲಲ್ಲಿನ ಈ ಪ್ರಯೋಗ ವಿಫಲವಾಗಿತ್ತು. ಅಮರಿಂದರ್ ಸಿಂಗ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಕೆಟ್ಟ ಆಡಳಿತವನ್ನು ನೀಡಿತ್ತು. ಇದು ದೊಡ್ಡ ಆಡಳಿತ ವಿರೋಧಿ ಅಲೆಯನ್ನು ಸೃಷ್ಟಿಸಿತು. ಚುನಾವಣೆಗೆ ಕೇವಲ ಮೂರು ತಿಂಗಳ ಮೊದಲು ಚನ್ನಿ ಅವರನ್ನು ಮುಖ್ಯಮಂತ್ರಿಯನ್ನಾಗಿಸಿದ್ದು ದಲಿತರನ್ನು ಮೂರ್ಖರನ್ನಾಗಿಸುವ ಯೋಜನೆಯಂತೆ ಕಂಡಿತು. ಆದರೆ ಇದೆಲ್ಲದರಿಂದ ಎಚ್ಚೆತ್ತುಕೊಂಡಂತೆ ಕಾಣುತ್ತಿರುವ ಕಾಂಗ್ರೆಸ್, ದಲಿತ ವೋಟ್‌ಬ್ಯಾಂಕ್‌ ಮೇಲೆ ದೃಷ್ಟಿ ಹಾಯಿಸಿರುವುದು ಸ್ಪಷ್ಟವಾಗುತ್ತಿದೆ.

ಖರ್ಗೆ ಅವರನ್ನು ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮತ್ತು ಖಬ್ರಿ ಅವರನ್ನು ದೇಶದ ಅತಿದೊಡ್ಡ ರಾಜ್ಯದ ಕಾಂಗ್ರೆಸ್‌ ಮುಖ್ಯಸ್ಥರನ್ನಾಗಿ ಆಯ್ಕೆ ಮಾಡುವ ಮೂಲಕ ಸಮಾಜದ ದುರ್ಬಲ ವರ್ಗಗಳನ್ನು ಧ್ರುವೀಕರಣ ಮಾಡುವ ತನ್ನ ಯೋಜನೆಯನ್ನು ರೂಪಿಸಿದೆ.

ಖಬ್ರಿ ಮತ್ತು ಅವರ ಪತ್ನಿ ಊರ್ಮಿಳಾ ಸೋಂಕರ್ ಇಬ್ಬರೂ ಅಸೆಂಬ್ಲಿ ಚುನಾವಣೆಯಲ್ಲಿ ಸೋತಿದ್ದಾರೆ. ಆದರೆ ಬಿಜೆಪಿ ಮತ್ತು ಸಮಾಜವಾದಿ ಪಕ್ಷದ ನಡುವಿನ ತೀವ್ರ ಧ್ರುವೀಕರಣದ ಸ್ಪರ್ಧೆಯಲ್ಲಿ ಕಾಂಗ್ರೆಸ್ ಈ ಸೋಲುಗಳನ್ನು ಲೆಕ್ಕ ಹಾಕಿಲ್ಲ ಎಂದು ರಾಜಕೀಯ ವಿಶ್ಲೇಷಣೆಗಳು ಹೇಳುತ್ತಿವೆ.

ನರೇಂದ್ರ ಮೋದಿ ಸರ್ಕಾರದ ಒತ್ತಡಕ್ಕೆ ಮಣಿದು ಮಾಯಾವತಿ ಕೆಲಸ ಮಾಡುತ್ತಿದ್ದಾರೆ ಎಂಬ ಆರೋಪಗಳು ಇರುವುದರಿಂದ ದಲಿತ ಮತಗಳನ್ನು ಕ್ರೂಢೀಕರಿಸಿದರೆ ಕಾಂಗ್ರೆಸ್‌ ಬಲವಾಗಬಹುದು ಎಂಬ ಲೆಕ್ಕಾಚಾರಗಳಿವೆ. ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಬಿಎಸ್‌ಪಿಯ ಹೆಚ್ಚಿನ ಮತಗಳು ಒಲ್ಲದ ಮನಸ್ಸಿನಿಂದ ಬಿಜೆಪಿಗೆ ಹೋಗಿವೆ ಎಂದು ಕಾಂಗ್ರೆಸ್‌ ನಂಬಿದೆ.

ಬಿಜೆಪಿಯ ಮೇಲಿನ ಅಸಮಾಧಾನದಿಂದ ದಲಿತರು ಕಾಂಗ್ರೆಸ್‌ನತ್ತ ನೋಡುತ್ತಿದ್ದಾರೆ ಎಂದು ರಾಷ್ಟ್ರ ಮಟ್ಟದ ಕಾಂಗ್ರೆಸ್ ನಾಯಕರು ಆಲೋಚಿಸಿದ್ದಾರೆ.

2016ರಲ್ಲಿ ಕಾಂಗ್ರೆಸ್ ಸೇರಿದ ಖಬ್ರಿ ಅವರು ಕಾನ್ಶಿರಾಮ್ ಮತ್ತು ಮಾಯಾವತಿ ಅವರೊಂದಿಗೆ ನಿಕಟವಾಗಿ ಕೆಲಸ ಮಾಡಿದ್ದರು. ಸಂಘಟನಾ ಕೌಶಲ್ಯಕ್ಕೆ ಹೆಸರುವಾಸಿಯಾಗಿದ್ದಾರೆ. ಖಬ್ರಿಯವರಿಗೆ ಆರು ವಲಯಗಳ ಮುಖ್ಯಸ್ಥರಾದ ನಸೀಮುದ್ದೀನ್ ಸಿದ್ದಿಕಿ, ಅಜಯ್ ರೈ, ವೀರೇಂದ್ರ ಚೌಧರಿ, ನಕುಲ್ ದುಬೆ, ಅನಿಲ್ ಯಾದವ್ ಮತ್ತು ಯೋಗೇಶ್ ದೀಕ್ಷಿತ್ ಬಲ ತುಂಬಲಿದ್ದಾರೆ. ಸಿದ್ದಿಕಿ ಮತ್ತು ದುಬೆ ಕೂಡ ಬಿಎಸ್‌ಪಿಯಿಂದ ಕಾಂಗ್ರೆಸ್‌ಗೆ ಪಕ್ಷಾಂತರಗೊಂಡ ನಾಯಕರಾಗಿದ್ದಾರೆ.

ಇದನ್ನೂ ಓದಿರಿ: 2019ರಲ್ಲಿ ಉದ್ಘಾಟಿಸಿದ್ದ ‘ಅಹಮದಾಬಾದ್ ಮೆಟ್ರೋ ರೈಲು ಮೊದಲ ಹಂತ’ವನ್ನೇ ಮತ್ತೆ ಉದ್ಘಾಟಿಸಿದ ಮೋದಿ! ವಾಸ್ತವವೇನು?

ವಲಯ ಮುಖ್ಯಸ್ಥರು ತಮ್ಮ ಪ್ರದೇಶಗಳಲ್ಲಿ ಪಕ್ಷವನ್ನು ಸಂಘಟಿಸುವ ಜವಾಬ್ದಾರಿಯನ್ನು ಹೊಂದಿರುತ್ತಾರೆ. ಈ ವಲಯದ ಮುಖ್ಯಸ್ಥರ ಆಯ್ಕೆಯಲ್ಲಿ ಜಾತಿ ಲೆಕ್ಕಾಚಾರಗಳು ಮುಖ್ಯವಾಗಿವೆ. ದಲಿತ ನಾಯಕರಾದ ಖಬ್ರಿ ಅವರು ರಾಜ್ಯ ಮುಖ್ಯಸ್ಥರಾಗಿ ಕೆಲಸ ಮಾಡಿದರೆ, ಫರೆಂಡಾ ಶಾಸಕ ವೀರೇಂದ್ರ ಚೌಧರಿ ಅವರು ಪೂರ್ವಾಂಚಲ ಜಿಲ್ಲೆಗಳಾದ ಫೈಜಾಬಾದ್, ಅಂಬೇಡ್ಕರ್ ನಗರ, ಬಸ್ತಿ, ಮಹಾರಾಜ್‌ಗಂಜ್, ಸಿದ್ಧಾರ್ಥನಗರ ಮತ್ತು ಕುಶಿನಗರದ ಉಸ್ತುವಾರಿ ವಹಿಸಲಿದ್ದಾರೆ.

ಭೂಮಿಹಾರ್ ಆಗಿರುವ ಅಜಯ್ ರೈ ಅವರು ಪ್ರಯಾಗವನ್ನು ನೋಡಿಕೊಳ್ಳುತ್ತಾರೆ. ನಕುಲ್ ದುಬೆ ಅವಧ್‌ನ ಉಸ್ತುವಾರಿ ವಹಿಸಲಿದ್ದಾರೆ. ಯೋಗೇಶ್ ದೀಕ್ಷಿತ್ ಅವರಿಗೆ ಬುಂದೇಲ್‌ಖಂಡ್ ಜವಾಬ್ದಾರಿ ನೀಡಲಾಗಿದೆ. ಪಶ್ಚಿಮ ಉತ್ತರ ಪ್ರದೇಶವನ್ನು ಸಿದ್ದಿಕಿ ನೋಡಿಕೊಳ್ಳಲಿದ್ದಾರೆ. ಅನಿಲ್ ಯಾದವ್ ಅವರು ಯಾದವ್ ಪ್ರಾಬಲ್ಯ ಹೊಂದಿರುವ ಬ್ರಜ್‌ನಲ್ಲಿ ಕೆಲಸ ಮಾಡಲಿದ್ದಾರೆ.

ಕೃಪೆ: ಟೆಲಿಗ್ರಾಫ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...