Homeಕರ್ನಾಟಕಉತ್ತರ ಪ್ರದೇಶ ಕಾಂಗ್ರೆಸ್‌ ಘಟಕದ ಅಧ್ಯಕ್ಷರಾಗಿ ದಲಿತ ನಾಯಕ ನೇಮಕ

ಉತ್ತರ ಪ್ರದೇಶ ಕಾಂಗ್ರೆಸ್‌ ಘಟಕದ ಅಧ್ಯಕ್ಷರಾಗಿ ದಲಿತ ನಾಯಕ ನೇಮಕ

- Advertisement -
- Advertisement -

ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ನಂತರ ಕೆಲವು ರಾಜಕೀಯ ನೆಲೆಯನ್ನು ಉಳಿಸಲು ಕಾಂಗ್ರೆಸ್ ಮುಂದಾಗಿದೆ. ಉತ್ತರ ಪ್ರದೇಶದ ಆರು ವಲಯ ಮುಖ್ಯಸ್ಥರ ನೇಮಕದ ಜೊತೆಗೆ ದಲಿತ ನಾಯಕ ಬ್ರಿಜ್‌ಲಾಲ್ ಖಬ್ರಿ ಅವರನ್ನು ಉತ್ತರ ಪ್ರದೇಶ ಕಾಂಗ್ರೆಸ್ ಘಟಕದ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ.

ದಲಿತ ಸಮುದಾಯದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ರಾಷ್ಟ್ರಮಟ್ಟದಲ್ಲಿ ಪಕ್ಷದ ನೇತೃತ್ವ ವಹಿಸುವ ಸಾಧ್ಯತೆ ಹೆಚ್ಚಿದೆ. ಆ ಮೂಲಕ ಮೇಲ್ಜಾತಿ ಪಕ್ಷ ಎಂಬ ತನ್ನ ಇಮೇಜ್ ಅನ್ನು ಕಳಚಿಕೊಳ್ಳಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂಬ ಅಭಿಪ್ರಾಯಗಳು ರಾಜಕೀಯ ವಲಯದಲ್ಲಿ ವ್ಯಕ್ತವಾಗುತ್ತಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಉತ್ತರ ಪ್ರದೇಶದಲ್ಲಿ ಮಾಯಾವತಿಯವರ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ದಿನೇ ದಿನೇ ತನ್ನ ಪ್ರಭಾವವನ್ನು ಕಳೆದುಕೊಳ್ಳುತ್ತಿರುವುದನ್ನು ಗಮನಿಸಿರುವ ಕಾಂಗ್ರೆಸ್ ದಲಿತ ಮತಗಳ ಮೇಲೆ ತನ್ನ ದೃಷ್ಟಿ ಇರಿಸಿದೆ.

ಚುನಾವಣೆಗೂ ಮುನ್ನ ದಲಿತ ನಾಯಕ ಚರಣ್‌ಜಿತ್‌ ಸಿಂಗ್‌ ಚನ್ನಿ ಅವರನ್ನು ಪಂಜಾಬ್‌ ಮುಖ್ಯಮಂತ್ರಿಯನ್ನಾಗಿ ಮಾಡಲಾಗಿತ್ತು. ಚುನಾವಣೆ ಹೊಸ್ತಿಲಲ್ಲಿನ ಈ ಪ್ರಯೋಗ ವಿಫಲವಾಗಿತ್ತು. ಅಮರಿಂದರ್ ಸಿಂಗ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಕೆಟ್ಟ ಆಡಳಿತವನ್ನು ನೀಡಿತ್ತು. ಇದು ದೊಡ್ಡ ಆಡಳಿತ ವಿರೋಧಿ ಅಲೆಯನ್ನು ಸೃಷ್ಟಿಸಿತು. ಚುನಾವಣೆಗೆ ಕೇವಲ ಮೂರು ತಿಂಗಳ ಮೊದಲು ಚನ್ನಿ ಅವರನ್ನು ಮುಖ್ಯಮಂತ್ರಿಯನ್ನಾಗಿಸಿದ್ದು ದಲಿತರನ್ನು ಮೂರ್ಖರನ್ನಾಗಿಸುವ ಯೋಜನೆಯಂತೆ ಕಂಡಿತು. ಆದರೆ ಇದೆಲ್ಲದರಿಂದ ಎಚ್ಚೆತ್ತುಕೊಂಡಂತೆ ಕಾಣುತ್ತಿರುವ ಕಾಂಗ್ರೆಸ್, ದಲಿತ ವೋಟ್‌ಬ್ಯಾಂಕ್‌ ಮೇಲೆ ದೃಷ್ಟಿ ಹಾಯಿಸಿರುವುದು ಸ್ಪಷ್ಟವಾಗುತ್ತಿದೆ.

ಖರ್ಗೆ ಅವರನ್ನು ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮತ್ತು ಖಬ್ರಿ ಅವರನ್ನು ದೇಶದ ಅತಿದೊಡ್ಡ ರಾಜ್ಯದ ಕಾಂಗ್ರೆಸ್‌ ಮುಖ್ಯಸ್ಥರನ್ನಾಗಿ ಆಯ್ಕೆ ಮಾಡುವ ಮೂಲಕ ಸಮಾಜದ ದುರ್ಬಲ ವರ್ಗಗಳನ್ನು ಧ್ರುವೀಕರಣ ಮಾಡುವ ತನ್ನ ಯೋಜನೆಯನ್ನು ರೂಪಿಸಿದೆ.

ಖಬ್ರಿ ಮತ್ತು ಅವರ ಪತ್ನಿ ಊರ್ಮಿಳಾ ಸೋಂಕರ್ ಇಬ್ಬರೂ ಅಸೆಂಬ್ಲಿ ಚುನಾವಣೆಯಲ್ಲಿ ಸೋತಿದ್ದಾರೆ. ಆದರೆ ಬಿಜೆಪಿ ಮತ್ತು ಸಮಾಜವಾದಿ ಪಕ್ಷದ ನಡುವಿನ ತೀವ್ರ ಧ್ರುವೀಕರಣದ ಸ್ಪರ್ಧೆಯಲ್ಲಿ ಕಾಂಗ್ರೆಸ್ ಈ ಸೋಲುಗಳನ್ನು ಲೆಕ್ಕ ಹಾಕಿಲ್ಲ ಎಂದು ರಾಜಕೀಯ ವಿಶ್ಲೇಷಣೆಗಳು ಹೇಳುತ್ತಿವೆ.

ನರೇಂದ್ರ ಮೋದಿ ಸರ್ಕಾರದ ಒತ್ತಡಕ್ಕೆ ಮಣಿದು ಮಾಯಾವತಿ ಕೆಲಸ ಮಾಡುತ್ತಿದ್ದಾರೆ ಎಂಬ ಆರೋಪಗಳು ಇರುವುದರಿಂದ ದಲಿತ ಮತಗಳನ್ನು ಕ್ರೂಢೀಕರಿಸಿದರೆ ಕಾಂಗ್ರೆಸ್‌ ಬಲವಾಗಬಹುದು ಎಂಬ ಲೆಕ್ಕಾಚಾರಗಳಿವೆ. ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಬಿಎಸ್‌ಪಿಯ ಹೆಚ್ಚಿನ ಮತಗಳು ಒಲ್ಲದ ಮನಸ್ಸಿನಿಂದ ಬಿಜೆಪಿಗೆ ಹೋಗಿವೆ ಎಂದು ಕಾಂಗ್ರೆಸ್‌ ನಂಬಿದೆ.

ಬಿಜೆಪಿಯ ಮೇಲಿನ ಅಸಮಾಧಾನದಿಂದ ದಲಿತರು ಕಾಂಗ್ರೆಸ್‌ನತ್ತ ನೋಡುತ್ತಿದ್ದಾರೆ ಎಂದು ರಾಷ್ಟ್ರ ಮಟ್ಟದ ಕಾಂಗ್ರೆಸ್ ನಾಯಕರು ಆಲೋಚಿಸಿದ್ದಾರೆ.

2016ರಲ್ಲಿ ಕಾಂಗ್ರೆಸ್ ಸೇರಿದ ಖಬ್ರಿ ಅವರು ಕಾನ್ಶಿರಾಮ್ ಮತ್ತು ಮಾಯಾವತಿ ಅವರೊಂದಿಗೆ ನಿಕಟವಾಗಿ ಕೆಲಸ ಮಾಡಿದ್ದರು. ಸಂಘಟನಾ ಕೌಶಲ್ಯಕ್ಕೆ ಹೆಸರುವಾಸಿಯಾಗಿದ್ದಾರೆ. ಖಬ್ರಿಯವರಿಗೆ ಆರು ವಲಯಗಳ ಮುಖ್ಯಸ್ಥರಾದ ನಸೀಮುದ್ದೀನ್ ಸಿದ್ದಿಕಿ, ಅಜಯ್ ರೈ, ವೀರೇಂದ್ರ ಚೌಧರಿ, ನಕುಲ್ ದುಬೆ, ಅನಿಲ್ ಯಾದವ್ ಮತ್ತು ಯೋಗೇಶ್ ದೀಕ್ಷಿತ್ ಬಲ ತುಂಬಲಿದ್ದಾರೆ. ಸಿದ್ದಿಕಿ ಮತ್ತು ದುಬೆ ಕೂಡ ಬಿಎಸ್‌ಪಿಯಿಂದ ಕಾಂಗ್ರೆಸ್‌ಗೆ ಪಕ್ಷಾಂತರಗೊಂಡ ನಾಯಕರಾಗಿದ್ದಾರೆ.

ಇದನ್ನೂ ಓದಿರಿ: 2019ರಲ್ಲಿ ಉದ್ಘಾಟಿಸಿದ್ದ ‘ಅಹಮದಾಬಾದ್ ಮೆಟ್ರೋ ರೈಲು ಮೊದಲ ಹಂತ’ವನ್ನೇ ಮತ್ತೆ ಉದ್ಘಾಟಿಸಿದ ಮೋದಿ! ವಾಸ್ತವವೇನು?

ವಲಯ ಮುಖ್ಯಸ್ಥರು ತಮ್ಮ ಪ್ರದೇಶಗಳಲ್ಲಿ ಪಕ್ಷವನ್ನು ಸಂಘಟಿಸುವ ಜವಾಬ್ದಾರಿಯನ್ನು ಹೊಂದಿರುತ್ತಾರೆ. ಈ ವಲಯದ ಮುಖ್ಯಸ್ಥರ ಆಯ್ಕೆಯಲ್ಲಿ ಜಾತಿ ಲೆಕ್ಕಾಚಾರಗಳು ಮುಖ್ಯವಾಗಿವೆ. ದಲಿತ ನಾಯಕರಾದ ಖಬ್ರಿ ಅವರು ರಾಜ್ಯ ಮುಖ್ಯಸ್ಥರಾಗಿ ಕೆಲಸ ಮಾಡಿದರೆ, ಫರೆಂಡಾ ಶಾಸಕ ವೀರೇಂದ್ರ ಚೌಧರಿ ಅವರು ಪೂರ್ವಾಂಚಲ ಜಿಲ್ಲೆಗಳಾದ ಫೈಜಾಬಾದ್, ಅಂಬೇಡ್ಕರ್ ನಗರ, ಬಸ್ತಿ, ಮಹಾರಾಜ್‌ಗಂಜ್, ಸಿದ್ಧಾರ್ಥನಗರ ಮತ್ತು ಕುಶಿನಗರದ ಉಸ್ತುವಾರಿ ವಹಿಸಲಿದ್ದಾರೆ.

ಭೂಮಿಹಾರ್ ಆಗಿರುವ ಅಜಯ್ ರೈ ಅವರು ಪ್ರಯಾಗವನ್ನು ನೋಡಿಕೊಳ್ಳುತ್ತಾರೆ. ನಕುಲ್ ದುಬೆ ಅವಧ್‌ನ ಉಸ್ತುವಾರಿ ವಹಿಸಲಿದ್ದಾರೆ. ಯೋಗೇಶ್ ದೀಕ್ಷಿತ್ ಅವರಿಗೆ ಬುಂದೇಲ್‌ಖಂಡ್ ಜವಾಬ್ದಾರಿ ನೀಡಲಾಗಿದೆ. ಪಶ್ಚಿಮ ಉತ್ತರ ಪ್ರದೇಶವನ್ನು ಸಿದ್ದಿಕಿ ನೋಡಿಕೊಳ್ಳಲಿದ್ದಾರೆ. ಅನಿಲ್ ಯಾದವ್ ಅವರು ಯಾದವ್ ಪ್ರಾಬಲ್ಯ ಹೊಂದಿರುವ ಬ್ರಜ್‌ನಲ್ಲಿ ಕೆಲಸ ಮಾಡಲಿದ್ದಾರೆ.

ಕೃಪೆ: ಟೆಲಿಗ್ರಾಫ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...