Homeಕರ್ನಾಟಕದಲಿತ ನಾಯಕ, ಮಾಜಿ ಶಾಸಕರಾದ ಡಾ.ಬಿ.ಎಂ ತಿಪ್ಪೇಸ್ವಾಮಿ ಸಮಾಧಿ ಧ್ವಂಸ: ಪುತ್ರಿ, ಲೇಖಕಿ ಜಾಹ್ನವಿ ಆರೋಪ

ದಲಿತ ನಾಯಕ, ಮಾಜಿ ಶಾಸಕರಾದ ಡಾ.ಬಿ.ಎಂ ತಿಪ್ಪೇಸ್ವಾಮಿ ಸಮಾಧಿ ಧ್ವಂಸ: ಪುತ್ರಿ, ಲೇಖಕಿ ಜಾಹ್ನವಿ ಆರೋಪ

- Advertisement -
- Advertisement -

ದಾವಣಗೆರೆಯ ದಲಿತ ಮುಖಂಡರು, ಮಾಜಿ ಶಾಸಕರು ಆದ ದಿವಂಗತ ಡಾ. ಬಿ.ಎಂ. ತಿಪ್ಪೇಸ್ವಾಮಿ ಹಾಗೂ ಅವರ ಕುಟುಂಬದ ಮೂರು ಸದಸ್ಯರ ಸಮಾಧಿಗಳನ್ನು ಸಮಾಧಿಯನ್ನು ಅತಿಕ್ರಮಣಕಾರರು ಧ್ವಂಸಗೊಳಿಸಿ, ದೌರ್ಜನ್ಯವೆಸಗುತ್ತಿದ್ದಾರೆ ಎಂದು ತಿಪ್ಪೇಸ್ವಾಮಿಯವರ ಪುತ್ರಿಯಾದ ಲೇಖಕಿ ಬಿ.ಟಿ ಜಾಹ್ನವಿಯವರು ಆರೋಪಿಸಿದ್ದಾರೆ.

ನವೆಂಬರ್ 20ರ ಭಾನುವಾರ ಮಧ್ಯಾನ್ನ 11 ಗಂಟೆ ಸುಮಾರಿಗೆ ಯಾವುದೇ ಮುನ್ಸೂಚನೆ ಇಲ್ಲದೆ ಗಣೇಶ ಹುಲ್ಲುಮನೆ ಮತ್ತು ಇತರರು ಜೆಸಿಬಿ ಯಿಂದ ಧ್ವಂಸ ಮಾಡಿರುವುದು ಕುಟುಂಬದ ಸದಸ್ಯರಲ್ಲಿ ಹಾಗೂ ಮಾದಿಗ ಸಮಾಜದಲ್ಲಿ ಆಘಾತ ಉಂಟು ಮಾಡಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಡಾ. ಬಿ.ಎಂ. ತಿಪ್ಪೇಸ್ವಾಮಿ ಇವರು ಮಾದಿಗ ಸಮಾಜದಲ್ಲಿ ಜನಿಸಿ ಸ್ವಂತ ಶ್ರಮದಿಂದ ದೇಶ-ವಿದೇಶಗಳಲ್ಲಿ ಉನ್ನತ ಶಿಕ್ಷಣ ಪಡೆದು ಸ್ಥಳೀಯ ವೈದ್ಯಕೀಯ ಕಾಲೇಜಿನ ಮುಖ್ಯಸ್ಥರಾಗಿ ಸಾಕಷ್ಟು ಜನರಿಗೆ ನೆರವಾಗಿದ್ದಾರೆ. ಕೆಪಿಎಸ್‌ಸಿ ಸದಸ್ಯರಾಗಿ ಹಲವಾರು ನಿರುದ್ಯೋಗಿ ಯುವಜನರಿಗೆ ಮಾರ್ಗದರ್ಶನ ನೀಡಿ ಉದ್ಯೋಗ ದೊರಕಿಸಿಕೊಟ್ಟಿದ್ದಾರೆ. 1985 ರಲ್ಲಿ ಭರಮಸಾಗರದ ಮೀಸಲು ಕ್ಷೇತ್ರದಿಂದ ಆಯ್ಕೆಯಾಗಿ, ಎಸ್ಸಿ-ಎಸ್ಟಿ ಕಮಿಷನ್ ಅಧ್ಯಕ್ಷರಾಗಿ ಈ ಜನಾಂಗದ ಏಳಿಗೆಗಾಗಿ ಶ್ರಮಪಟ್ಟಿದ್ದಾರೆ. ದಲಿತ ಮಕ್ಕಳ ವಿದ್ಯಾಭ್ಯಾಸಕ್ಕೆ ಶ್ರಮಿಸಿದ್ದಾರೆ. ಅಂತಹ ವ್ಯಕ್ತಿಯ ಸಮಾಧಿ ಧ್ವಂಸಗೊಳಿಸಿರುವುದು ವಿಷಾಧನೀಯ ಎಂದು ಬಿ.ಟಿ ಜಾಹ್ನವಿ ತಿಳಿಸಿದ್ದಾರೆ.

1978 ರಲ್ಲಿ ನಿರುದ್ಯೋಗಿ ವಿದ್ಯಾವಂತರಾಗಿದ್ದ ಡಾ.ಬಿ.ಎಂ.ತಿಪ್ಪೇಸ್ವಾಮಿ ಅವರ ಹಿರಿಯ ಮಗ ಬಿ.ಟಿ.ಮಲ್ಲಿಕಾರ್ಜುನ ಇವರಿಗೆ ಸರ್ಕಾರದಿಂದ ಸ್ವ-ಉದ್ಯೊಗಕ್ಕಾಗಿ ದಾವಣಗೆರೆ ನಿಟ್ಟುವಳ್ಳಿಯಲ್ಲಿ 2 ಎಕರೆ 11 ಗುಂಟೆ ಭೂ ಮಂಜೂರಾಗಿತ್ತು. ಈ ಸ್ಥಳವನ್ನು ಡೈರಿ ಹಾಗೂ ಇತರೆ ಸ್ವಯಂ ಉದ್ಯೋಗಕ್ಕೆ ಉಪಯೋಗಿಸಲಾಗುತ್ತಿತ್ತು. ಡಾ.ಬಿ.ಎಂ.ತಿಪ್ಪೇಸ್ವಾಮಿ ಇವರು 1990 ರಲ್ಲಿ ಮೃತಪಟ್ಟಿದ್ದು ಮಂಜೂರಾದ ಈ ಜಮೀನಿನ ಒಂದು ಭಾಗದಲ್ಲಿ ಅಂತ್ಯಕ್ರಿಯೆ ಮಾಡಿ ಸಮಾಧಿಯನ್ನು ನಿರ್ಮಾಣ ಮಾಡಲಾಗಿತ್ತು, ನಂತರ 1999 ರಲ್ಲಿ ನಮ್ಮ ತಿಪ್ಪೇಸ್ವಾಮಿಯವರ 2ನೇ ಮಗನಾದ ಬಿ.ಟಿ.ಮೋಹನ್ ಅವರನ್ನು, ನಂತರ 2003 ರಲ್ಲಿ ಅವರ ಧರ್ಮಪತ್ನಿಯಾದ ಶ್ರೀಮತಿ ಯಲ್ಲಮ್ಮನವರನ್ನು ಸದರಿ ಸ್ಥಳದಲ್ಲಿ ಅಂತ್ಯಕ್ರಿಯೆ ಮಾಡಲಾಗಿತ್ತು, ಆನಂತರ 2016 ರಲ್ಲಿ ನಿಧನರಾದ ಅವರ ಹಿರಿಯ ಮಗ ಮಲ್ಲಿಕಾರ್ಜುನರವರನ್ನೂ ಸಹ ಅಲ್ಲಿಯೇ ಅಂತ್ಯಕ್ರಿಯೆ ಮಾಡಿ ನಾಲ್ಕು ಸಮಾಧಿಗಳನ್ನು ನಿರ್ಮಾಣ ಮಾಡಲಾಗಿತ್ತು ಹಾಗೂ ಆ ಭೂಮಿಯಲ್ಲಿ ನಮ್ಮ ಕುಟುಂಬದ ನಾಲ್ವರ ಸಮಾಧಿ ಇದ್ದ ಕಾರಣ ಆಗಿನಂದಲೂ ಅದನ್ನು ಪೂಜ್ಯಸ್ಥಾನವಾಗಿ ಭಾವಿಸಿ ಪೂಜೆ ಮಾಡಿಕೊಂಡು ಬರಲಾಗುತ್ತಿತ್ತು. ಹಾಗೂ ಆ ಜಾಗವನ್ನು ಬೇರೆ ಯಾವುದೇ ವೈಯಕ್ತಿಕ ಉದ್ದೇಶಕ್ಕೆ ಬಳಸದೇ ನಮಗೆ ಅನುಕೂಲವಾದ ಕಾಲಕ್ಕೆ ಡಾ.ತಿಪ್ಪೇಸ್ವಾಮಿಯವರ ಸ್ಮಾರಕವನ್ನು ಸ್ಥಾಪಿಸಿ ಅಲ್ಲಿ ನಮ್ಮ ಸಮಾಜದ ಏಳಿಗೆ ಮತ್ತು ಕಲ್ಯಾಣಕ್ಕಾಗಿ ಅನೇಕ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಉದ್ದೇಶವಿತ್ತು ಎಂದು ಬಿ.ಟಿ ಜಾಹ್ನವಿಯವರು ತಿಳಿಸಿದ್ದಾರೆ.

ತಿಪ್ಪೇಸ್ವಾಮಿಯವರು

ಈ ಮಧ್ಯೆ ಸದರಿ ಭೂಮಿಗೆ ಸಂಬಂಧಿಸಿದಂತೆ ಕೆಲವರು ನ್ಯಾಯಾಲಯಕ್ಕೆ ಹೋಗಿದ್ದು, 2002 ರಲ್ಲಿ ಮಲ್ಲಿಕಾರ್ಜುನ ಅವರಿಗೆ ಮಂಜೂರಾದ ಭೂಮಿ ನ್ಯಾಯಸಮ್ಮತವಾಗಿದೆ ಎಂದು ಮಾನ್ಯ ಉಚ್ಚನ್ಯಾಯಾಲಯವು ಆದೇಶ ನೀಡಿರುತ್ತದೆ ಹಾಗೂ ಈಗ ಮಲ್ಲಿಕಾರ್ಜುನ ಅವರ ಮರಣದ ನಂತರ ಅವರ ಪತ್ನಿ ಪುಷ್ಪಲತಾ ಹಾಗೂ ಮಕ್ಕಳಾದ, ರಾಹುಲ್ ಹಾಗು ನಕುಲ್ ಅವರಿಗೆ ಅದು ವರ್ಗಾವಣೆಯಾಗಿರುತ್ತದೆ. ಹೀಗಿರುವಾಗ ಕಾನೂನು ಬಾಹಿರವಾಗಿ ಗಣೇಶ ಹುಲ್ಲುಮನೆ ಮತ್ತು ಇತರರು “ಈ ಜಾಗ ನಮ್ಮದು, ಇಲ್ಲಿರುವ ಸಮಾಧಿ ಯಾವುದೋ, ಯಾರದೋ ನಮಗೆ ತಿಳಿದಿಲ್ಲ ಅದು ಯಾರದ್ದೇ ಆಗಿರಲಿ ಆ ಸಮಾಧಿಯನ್ನ ನಾವು ಒಡೆದುಹಾಕಿದೆವು” ಎಂದು ಹೇಳೀ ಹಲ್ಲೆಗೆ ಮುಂದಾಗಿ ದೌರ್ಜನ್ಯ ಎಸಗಿದ್ದಾರೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

32 ವರ್ಷಗಳಿಂದ ಅಲ್ಲೇ ಇದ್ದ ಡಾ.ತಿಪ್ಪೇಸ್ವಾಮಿಯವರ ಸಮಾದಿಯನ್ನು ಅವರಿಗೆ ಅರಿವಿದ್ದೇ ದ್ವಂಸ ಮಾಡಿರುವುದು ತುಂಬಾ ಖಂಡನೀಯ ಮತ್ತು ಹೇಯ ಕೃತ್ಯ. ಇದರಿಂದ ಇದರಿಂದ ಕುಟುಂಬದ ಸದಸ್ಯರು ಹಾಗೂ ಜನಾಂಗದ ಮುಖಂಡರಿಗೆ ಆಘಾತವಾಗಿದೆ. ಈ ಕುರಿತು ಪೊಲೀಸ್ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಿದ್ದೇವೆ. ಈ ದೌರ್ಜನ್ಯವನ್ನು ಖಂಡಿಸಿ ನವೆಂಬರ್ 24ರ ಗುರುವಾರ ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸುತ್ತೇವೆ ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿ: ಬೆಂಗಳೂರು ಮತದಾರರ ಮಾಹಿತಿ ಕಳ್ಳತನದಲ್ಲಿ ಬಿಜೆಪಿಯ ನೇರ ಕೈವಾಡ; ಏಜೆಂಟರಿಗೆ ಪಕ್ಷದ ಕಚೇರಿಯಲ್ಲೆ ತರಬೇತಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...