Homeಕರ್ನಾಟಕದಲಿತ ನಾಯಕ, ಮಾಜಿ ಶಾಸಕರಾದ ಡಾ.ಬಿ.ಎಂ ತಿಪ್ಪೇಸ್ವಾಮಿ ಸಮಾಧಿ ಧ್ವಂಸ: ಪುತ್ರಿ, ಲೇಖಕಿ ಜಾಹ್ನವಿ ಆರೋಪ

ದಲಿತ ನಾಯಕ, ಮಾಜಿ ಶಾಸಕರಾದ ಡಾ.ಬಿ.ಎಂ ತಿಪ್ಪೇಸ್ವಾಮಿ ಸಮಾಧಿ ಧ್ವಂಸ: ಪುತ್ರಿ, ಲೇಖಕಿ ಜಾಹ್ನವಿ ಆರೋಪ

- Advertisement -
- Advertisement -

ದಾವಣಗೆರೆಯ ದಲಿತ ಮುಖಂಡರು, ಮಾಜಿ ಶಾಸಕರು ಆದ ದಿವಂಗತ ಡಾ. ಬಿ.ಎಂ. ತಿಪ್ಪೇಸ್ವಾಮಿ ಹಾಗೂ ಅವರ ಕುಟುಂಬದ ಮೂರು ಸದಸ್ಯರ ಸಮಾಧಿಗಳನ್ನು ಸಮಾಧಿಯನ್ನು ಅತಿಕ್ರಮಣಕಾರರು ಧ್ವಂಸಗೊಳಿಸಿ, ದೌರ್ಜನ್ಯವೆಸಗುತ್ತಿದ್ದಾರೆ ಎಂದು ತಿಪ್ಪೇಸ್ವಾಮಿಯವರ ಪುತ್ರಿಯಾದ ಲೇಖಕಿ ಬಿ.ಟಿ ಜಾಹ್ನವಿಯವರು ಆರೋಪಿಸಿದ್ದಾರೆ.

ನವೆಂಬರ್ 20ರ ಭಾನುವಾರ ಮಧ್ಯಾನ್ನ 11 ಗಂಟೆ ಸುಮಾರಿಗೆ ಯಾವುದೇ ಮುನ್ಸೂಚನೆ ಇಲ್ಲದೆ ಗಣೇಶ ಹುಲ್ಲುಮನೆ ಮತ್ತು ಇತರರು ಜೆಸಿಬಿ ಯಿಂದ ಧ್ವಂಸ ಮಾಡಿರುವುದು ಕುಟುಂಬದ ಸದಸ್ಯರಲ್ಲಿ ಹಾಗೂ ಮಾದಿಗ ಸಮಾಜದಲ್ಲಿ ಆಘಾತ ಉಂಟು ಮಾಡಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಡಾ. ಬಿ.ಎಂ. ತಿಪ್ಪೇಸ್ವಾಮಿ ಇವರು ಮಾದಿಗ ಸಮಾಜದಲ್ಲಿ ಜನಿಸಿ ಸ್ವಂತ ಶ್ರಮದಿಂದ ದೇಶ-ವಿದೇಶಗಳಲ್ಲಿ ಉನ್ನತ ಶಿಕ್ಷಣ ಪಡೆದು ಸ್ಥಳೀಯ ವೈದ್ಯಕೀಯ ಕಾಲೇಜಿನ ಮುಖ್ಯಸ್ಥರಾಗಿ ಸಾಕಷ್ಟು ಜನರಿಗೆ ನೆರವಾಗಿದ್ದಾರೆ. ಕೆಪಿಎಸ್‌ಸಿ ಸದಸ್ಯರಾಗಿ ಹಲವಾರು ನಿರುದ್ಯೋಗಿ ಯುವಜನರಿಗೆ ಮಾರ್ಗದರ್ಶನ ನೀಡಿ ಉದ್ಯೋಗ ದೊರಕಿಸಿಕೊಟ್ಟಿದ್ದಾರೆ. 1985 ರಲ್ಲಿ ಭರಮಸಾಗರದ ಮೀಸಲು ಕ್ಷೇತ್ರದಿಂದ ಆಯ್ಕೆಯಾಗಿ, ಎಸ್ಸಿ-ಎಸ್ಟಿ ಕಮಿಷನ್ ಅಧ್ಯಕ್ಷರಾಗಿ ಈ ಜನಾಂಗದ ಏಳಿಗೆಗಾಗಿ ಶ್ರಮಪಟ್ಟಿದ್ದಾರೆ. ದಲಿತ ಮಕ್ಕಳ ವಿದ್ಯಾಭ್ಯಾಸಕ್ಕೆ ಶ್ರಮಿಸಿದ್ದಾರೆ. ಅಂತಹ ವ್ಯಕ್ತಿಯ ಸಮಾಧಿ ಧ್ವಂಸಗೊಳಿಸಿರುವುದು ವಿಷಾಧನೀಯ ಎಂದು ಬಿ.ಟಿ ಜಾಹ್ನವಿ ತಿಳಿಸಿದ್ದಾರೆ.

1978 ರಲ್ಲಿ ನಿರುದ್ಯೋಗಿ ವಿದ್ಯಾವಂತರಾಗಿದ್ದ ಡಾ.ಬಿ.ಎಂ.ತಿಪ್ಪೇಸ್ವಾಮಿ ಅವರ ಹಿರಿಯ ಮಗ ಬಿ.ಟಿ.ಮಲ್ಲಿಕಾರ್ಜುನ ಇವರಿಗೆ ಸರ್ಕಾರದಿಂದ ಸ್ವ-ಉದ್ಯೊಗಕ್ಕಾಗಿ ದಾವಣಗೆರೆ ನಿಟ್ಟುವಳ್ಳಿಯಲ್ಲಿ 2 ಎಕರೆ 11 ಗುಂಟೆ ಭೂ ಮಂಜೂರಾಗಿತ್ತು. ಈ ಸ್ಥಳವನ್ನು ಡೈರಿ ಹಾಗೂ ಇತರೆ ಸ್ವಯಂ ಉದ್ಯೋಗಕ್ಕೆ ಉಪಯೋಗಿಸಲಾಗುತ್ತಿತ್ತು. ಡಾ.ಬಿ.ಎಂ.ತಿಪ್ಪೇಸ್ವಾಮಿ ಇವರು 1990 ರಲ್ಲಿ ಮೃತಪಟ್ಟಿದ್ದು ಮಂಜೂರಾದ ಈ ಜಮೀನಿನ ಒಂದು ಭಾಗದಲ್ಲಿ ಅಂತ್ಯಕ್ರಿಯೆ ಮಾಡಿ ಸಮಾಧಿಯನ್ನು ನಿರ್ಮಾಣ ಮಾಡಲಾಗಿತ್ತು, ನಂತರ 1999 ರಲ್ಲಿ ನಮ್ಮ ತಿಪ್ಪೇಸ್ವಾಮಿಯವರ 2ನೇ ಮಗನಾದ ಬಿ.ಟಿ.ಮೋಹನ್ ಅವರನ್ನು, ನಂತರ 2003 ರಲ್ಲಿ ಅವರ ಧರ್ಮಪತ್ನಿಯಾದ ಶ್ರೀಮತಿ ಯಲ್ಲಮ್ಮನವರನ್ನು ಸದರಿ ಸ್ಥಳದಲ್ಲಿ ಅಂತ್ಯಕ್ರಿಯೆ ಮಾಡಲಾಗಿತ್ತು, ಆನಂತರ 2016 ರಲ್ಲಿ ನಿಧನರಾದ ಅವರ ಹಿರಿಯ ಮಗ ಮಲ್ಲಿಕಾರ್ಜುನರವರನ್ನೂ ಸಹ ಅಲ್ಲಿಯೇ ಅಂತ್ಯಕ್ರಿಯೆ ಮಾಡಿ ನಾಲ್ಕು ಸಮಾಧಿಗಳನ್ನು ನಿರ್ಮಾಣ ಮಾಡಲಾಗಿತ್ತು ಹಾಗೂ ಆ ಭೂಮಿಯಲ್ಲಿ ನಮ್ಮ ಕುಟುಂಬದ ನಾಲ್ವರ ಸಮಾಧಿ ಇದ್ದ ಕಾರಣ ಆಗಿನಂದಲೂ ಅದನ್ನು ಪೂಜ್ಯಸ್ಥಾನವಾಗಿ ಭಾವಿಸಿ ಪೂಜೆ ಮಾಡಿಕೊಂಡು ಬರಲಾಗುತ್ತಿತ್ತು. ಹಾಗೂ ಆ ಜಾಗವನ್ನು ಬೇರೆ ಯಾವುದೇ ವೈಯಕ್ತಿಕ ಉದ್ದೇಶಕ್ಕೆ ಬಳಸದೇ ನಮಗೆ ಅನುಕೂಲವಾದ ಕಾಲಕ್ಕೆ ಡಾ.ತಿಪ್ಪೇಸ್ವಾಮಿಯವರ ಸ್ಮಾರಕವನ್ನು ಸ್ಥಾಪಿಸಿ ಅಲ್ಲಿ ನಮ್ಮ ಸಮಾಜದ ಏಳಿಗೆ ಮತ್ತು ಕಲ್ಯಾಣಕ್ಕಾಗಿ ಅನೇಕ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಉದ್ದೇಶವಿತ್ತು ಎಂದು ಬಿ.ಟಿ ಜಾಹ್ನವಿಯವರು ತಿಳಿಸಿದ್ದಾರೆ.

ತಿಪ್ಪೇಸ್ವಾಮಿಯವರು

ಈ ಮಧ್ಯೆ ಸದರಿ ಭೂಮಿಗೆ ಸಂಬಂಧಿಸಿದಂತೆ ಕೆಲವರು ನ್ಯಾಯಾಲಯಕ್ಕೆ ಹೋಗಿದ್ದು, 2002 ರಲ್ಲಿ ಮಲ್ಲಿಕಾರ್ಜುನ ಅವರಿಗೆ ಮಂಜೂರಾದ ಭೂಮಿ ನ್ಯಾಯಸಮ್ಮತವಾಗಿದೆ ಎಂದು ಮಾನ್ಯ ಉಚ್ಚನ್ಯಾಯಾಲಯವು ಆದೇಶ ನೀಡಿರುತ್ತದೆ ಹಾಗೂ ಈಗ ಮಲ್ಲಿಕಾರ್ಜುನ ಅವರ ಮರಣದ ನಂತರ ಅವರ ಪತ್ನಿ ಪುಷ್ಪಲತಾ ಹಾಗೂ ಮಕ್ಕಳಾದ, ರಾಹುಲ್ ಹಾಗು ನಕುಲ್ ಅವರಿಗೆ ಅದು ವರ್ಗಾವಣೆಯಾಗಿರುತ್ತದೆ. ಹೀಗಿರುವಾಗ ಕಾನೂನು ಬಾಹಿರವಾಗಿ ಗಣೇಶ ಹುಲ್ಲುಮನೆ ಮತ್ತು ಇತರರು “ಈ ಜಾಗ ನಮ್ಮದು, ಇಲ್ಲಿರುವ ಸಮಾಧಿ ಯಾವುದೋ, ಯಾರದೋ ನಮಗೆ ತಿಳಿದಿಲ್ಲ ಅದು ಯಾರದ್ದೇ ಆಗಿರಲಿ ಆ ಸಮಾಧಿಯನ್ನ ನಾವು ಒಡೆದುಹಾಕಿದೆವು” ಎಂದು ಹೇಳೀ ಹಲ್ಲೆಗೆ ಮುಂದಾಗಿ ದೌರ್ಜನ್ಯ ಎಸಗಿದ್ದಾರೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

32 ವರ್ಷಗಳಿಂದ ಅಲ್ಲೇ ಇದ್ದ ಡಾ.ತಿಪ್ಪೇಸ್ವಾಮಿಯವರ ಸಮಾದಿಯನ್ನು ಅವರಿಗೆ ಅರಿವಿದ್ದೇ ದ್ವಂಸ ಮಾಡಿರುವುದು ತುಂಬಾ ಖಂಡನೀಯ ಮತ್ತು ಹೇಯ ಕೃತ್ಯ. ಇದರಿಂದ ಇದರಿಂದ ಕುಟುಂಬದ ಸದಸ್ಯರು ಹಾಗೂ ಜನಾಂಗದ ಮುಖಂಡರಿಗೆ ಆಘಾತವಾಗಿದೆ. ಈ ಕುರಿತು ಪೊಲೀಸ್ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಿದ್ದೇವೆ. ಈ ದೌರ್ಜನ್ಯವನ್ನು ಖಂಡಿಸಿ ನವೆಂಬರ್ 24ರ ಗುರುವಾರ ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸುತ್ತೇವೆ ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿ: ಬೆಂಗಳೂರು ಮತದಾರರ ಮಾಹಿತಿ ಕಳ್ಳತನದಲ್ಲಿ ಬಿಜೆಪಿಯ ನೇರ ಕೈವಾಡ; ಏಜೆಂಟರಿಗೆ ಪಕ್ಷದ ಕಚೇರಿಯಲ್ಲೆ ತರಬೇತಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...