Homeಕರ್ನಾಟಕದಲಿತ ನಾಯಕ, ಮಾಜಿ ಶಾಸಕರಾದ ಡಾ.ಬಿ.ಎಂ ತಿಪ್ಪೇಸ್ವಾಮಿ ಸಮಾಧಿ ಧ್ವಂಸ: ಪುತ್ರಿ, ಲೇಖಕಿ ಜಾಹ್ನವಿ ಆರೋಪ

ದಲಿತ ನಾಯಕ, ಮಾಜಿ ಶಾಸಕರಾದ ಡಾ.ಬಿ.ಎಂ ತಿಪ್ಪೇಸ್ವಾಮಿ ಸಮಾಧಿ ಧ್ವಂಸ: ಪುತ್ರಿ, ಲೇಖಕಿ ಜಾಹ್ನವಿ ಆರೋಪ

- Advertisement -
- Advertisement -

ದಾವಣಗೆರೆಯ ದಲಿತ ಮುಖಂಡರು, ಮಾಜಿ ಶಾಸಕರು ಆದ ದಿವಂಗತ ಡಾ. ಬಿ.ಎಂ. ತಿಪ್ಪೇಸ್ವಾಮಿ ಹಾಗೂ ಅವರ ಕುಟುಂಬದ ಮೂರು ಸದಸ್ಯರ ಸಮಾಧಿಗಳನ್ನು ಸಮಾಧಿಯನ್ನು ಅತಿಕ್ರಮಣಕಾರರು ಧ್ವಂಸಗೊಳಿಸಿ, ದೌರ್ಜನ್ಯವೆಸಗುತ್ತಿದ್ದಾರೆ ಎಂದು ತಿಪ್ಪೇಸ್ವಾಮಿಯವರ ಪುತ್ರಿಯಾದ ಲೇಖಕಿ ಬಿ.ಟಿ ಜಾಹ್ನವಿಯವರು ಆರೋಪಿಸಿದ್ದಾರೆ.

ನವೆಂಬರ್ 20ರ ಭಾನುವಾರ ಮಧ್ಯಾನ್ನ 11 ಗಂಟೆ ಸುಮಾರಿಗೆ ಯಾವುದೇ ಮುನ್ಸೂಚನೆ ಇಲ್ಲದೆ ಗಣೇಶ ಹುಲ್ಲುಮನೆ ಮತ್ತು ಇತರರು ಜೆಸಿಬಿ ಯಿಂದ ಧ್ವಂಸ ಮಾಡಿರುವುದು ಕುಟುಂಬದ ಸದಸ್ಯರಲ್ಲಿ ಹಾಗೂ ಮಾದಿಗ ಸಮಾಜದಲ್ಲಿ ಆಘಾತ ಉಂಟು ಮಾಡಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಡಾ. ಬಿ.ಎಂ. ತಿಪ್ಪೇಸ್ವಾಮಿ ಇವರು ಮಾದಿಗ ಸಮಾಜದಲ್ಲಿ ಜನಿಸಿ ಸ್ವಂತ ಶ್ರಮದಿಂದ ದೇಶ-ವಿದೇಶಗಳಲ್ಲಿ ಉನ್ನತ ಶಿಕ್ಷಣ ಪಡೆದು ಸ್ಥಳೀಯ ವೈದ್ಯಕೀಯ ಕಾಲೇಜಿನ ಮುಖ್ಯಸ್ಥರಾಗಿ ಸಾಕಷ್ಟು ಜನರಿಗೆ ನೆರವಾಗಿದ್ದಾರೆ. ಕೆಪಿಎಸ್‌ಸಿ ಸದಸ್ಯರಾಗಿ ಹಲವಾರು ನಿರುದ್ಯೋಗಿ ಯುವಜನರಿಗೆ ಮಾರ್ಗದರ್ಶನ ನೀಡಿ ಉದ್ಯೋಗ ದೊರಕಿಸಿಕೊಟ್ಟಿದ್ದಾರೆ. 1985 ರಲ್ಲಿ ಭರಮಸಾಗರದ ಮೀಸಲು ಕ್ಷೇತ್ರದಿಂದ ಆಯ್ಕೆಯಾಗಿ, ಎಸ್ಸಿ-ಎಸ್ಟಿ ಕಮಿಷನ್ ಅಧ್ಯಕ್ಷರಾಗಿ ಈ ಜನಾಂಗದ ಏಳಿಗೆಗಾಗಿ ಶ್ರಮಪಟ್ಟಿದ್ದಾರೆ. ದಲಿತ ಮಕ್ಕಳ ವಿದ್ಯಾಭ್ಯಾಸಕ್ಕೆ ಶ್ರಮಿಸಿದ್ದಾರೆ. ಅಂತಹ ವ್ಯಕ್ತಿಯ ಸಮಾಧಿ ಧ್ವಂಸಗೊಳಿಸಿರುವುದು ವಿಷಾಧನೀಯ ಎಂದು ಬಿ.ಟಿ ಜಾಹ್ನವಿ ತಿಳಿಸಿದ್ದಾರೆ.

1978 ರಲ್ಲಿ ನಿರುದ್ಯೋಗಿ ವಿದ್ಯಾವಂತರಾಗಿದ್ದ ಡಾ.ಬಿ.ಎಂ.ತಿಪ್ಪೇಸ್ವಾಮಿ ಅವರ ಹಿರಿಯ ಮಗ ಬಿ.ಟಿ.ಮಲ್ಲಿಕಾರ್ಜುನ ಇವರಿಗೆ ಸರ್ಕಾರದಿಂದ ಸ್ವ-ಉದ್ಯೊಗಕ್ಕಾಗಿ ದಾವಣಗೆರೆ ನಿಟ್ಟುವಳ್ಳಿಯಲ್ಲಿ 2 ಎಕರೆ 11 ಗುಂಟೆ ಭೂ ಮಂಜೂರಾಗಿತ್ತು. ಈ ಸ್ಥಳವನ್ನು ಡೈರಿ ಹಾಗೂ ಇತರೆ ಸ್ವಯಂ ಉದ್ಯೋಗಕ್ಕೆ ಉಪಯೋಗಿಸಲಾಗುತ್ತಿತ್ತು. ಡಾ.ಬಿ.ಎಂ.ತಿಪ್ಪೇಸ್ವಾಮಿ ಇವರು 1990 ರಲ್ಲಿ ಮೃತಪಟ್ಟಿದ್ದು ಮಂಜೂರಾದ ಈ ಜಮೀನಿನ ಒಂದು ಭಾಗದಲ್ಲಿ ಅಂತ್ಯಕ್ರಿಯೆ ಮಾಡಿ ಸಮಾಧಿಯನ್ನು ನಿರ್ಮಾಣ ಮಾಡಲಾಗಿತ್ತು, ನಂತರ 1999 ರಲ್ಲಿ ನಮ್ಮ ತಿಪ್ಪೇಸ್ವಾಮಿಯವರ 2ನೇ ಮಗನಾದ ಬಿ.ಟಿ.ಮೋಹನ್ ಅವರನ್ನು, ನಂತರ 2003 ರಲ್ಲಿ ಅವರ ಧರ್ಮಪತ್ನಿಯಾದ ಶ್ರೀಮತಿ ಯಲ್ಲಮ್ಮನವರನ್ನು ಸದರಿ ಸ್ಥಳದಲ್ಲಿ ಅಂತ್ಯಕ್ರಿಯೆ ಮಾಡಲಾಗಿತ್ತು, ಆನಂತರ 2016 ರಲ್ಲಿ ನಿಧನರಾದ ಅವರ ಹಿರಿಯ ಮಗ ಮಲ್ಲಿಕಾರ್ಜುನರವರನ್ನೂ ಸಹ ಅಲ್ಲಿಯೇ ಅಂತ್ಯಕ್ರಿಯೆ ಮಾಡಿ ನಾಲ್ಕು ಸಮಾಧಿಗಳನ್ನು ನಿರ್ಮಾಣ ಮಾಡಲಾಗಿತ್ತು ಹಾಗೂ ಆ ಭೂಮಿಯಲ್ಲಿ ನಮ್ಮ ಕುಟುಂಬದ ನಾಲ್ವರ ಸಮಾಧಿ ಇದ್ದ ಕಾರಣ ಆಗಿನಂದಲೂ ಅದನ್ನು ಪೂಜ್ಯಸ್ಥಾನವಾಗಿ ಭಾವಿಸಿ ಪೂಜೆ ಮಾಡಿಕೊಂಡು ಬರಲಾಗುತ್ತಿತ್ತು. ಹಾಗೂ ಆ ಜಾಗವನ್ನು ಬೇರೆ ಯಾವುದೇ ವೈಯಕ್ತಿಕ ಉದ್ದೇಶಕ್ಕೆ ಬಳಸದೇ ನಮಗೆ ಅನುಕೂಲವಾದ ಕಾಲಕ್ಕೆ ಡಾ.ತಿಪ್ಪೇಸ್ವಾಮಿಯವರ ಸ್ಮಾರಕವನ್ನು ಸ್ಥಾಪಿಸಿ ಅಲ್ಲಿ ನಮ್ಮ ಸಮಾಜದ ಏಳಿಗೆ ಮತ್ತು ಕಲ್ಯಾಣಕ್ಕಾಗಿ ಅನೇಕ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಉದ್ದೇಶವಿತ್ತು ಎಂದು ಬಿ.ಟಿ ಜಾಹ್ನವಿಯವರು ತಿಳಿಸಿದ್ದಾರೆ.

ತಿಪ್ಪೇಸ್ವಾಮಿಯವರು

ಈ ಮಧ್ಯೆ ಸದರಿ ಭೂಮಿಗೆ ಸಂಬಂಧಿಸಿದಂತೆ ಕೆಲವರು ನ್ಯಾಯಾಲಯಕ್ಕೆ ಹೋಗಿದ್ದು, 2002 ರಲ್ಲಿ ಮಲ್ಲಿಕಾರ್ಜುನ ಅವರಿಗೆ ಮಂಜೂರಾದ ಭೂಮಿ ನ್ಯಾಯಸಮ್ಮತವಾಗಿದೆ ಎಂದು ಮಾನ್ಯ ಉಚ್ಚನ್ಯಾಯಾಲಯವು ಆದೇಶ ನೀಡಿರುತ್ತದೆ ಹಾಗೂ ಈಗ ಮಲ್ಲಿಕಾರ್ಜುನ ಅವರ ಮರಣದ ನಂತರ ಅವರ ಪತ್ನಿ ಪುಷ್ಪಲತಾ ಹಾಗೂ ಮಕ್ಕಳಾದ, ರಾಹುಲ್ ಹಾಗು ನಕುಲ್ ಅವರಿಗೆ ಅದು ವರ್ಗಾವಣೆಯಾಗಿರುತ್ತದೆ. ಹೀಗಿರುವಾಗ ಕಾನೂನು ಬಾಹಿರವಾಗಿ ಗಣೇಶ ಹುಲ್ಲುಮನೆ ಮತ್ತು ಇತರರು “ಈ ಜಾಗ ನಮ್ಮದು, ಇಲ್ಲಿರುವ ಸಮಾಧಿ ಯಾವುದೋ, ಯಾರದೋ ನಮಗೆ ತಿಳಿದಿಲ್ಲ ಅದು ಯಾರದ್ದೇ ಆಗಿರಲಿ ಆ ಸಮಾಧಿಯನ್ನ ನಾವು ಒಡೆದುಹಾಕಿದೆವು” ಎಂದು ಹೇಳೀ ಹಲ್ಲೆಗೆ ಮುಂದಾಗಿ ದೌರ್ಜನ್ಯ ಎಸಗಿದ್ದಾರೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

32 ವರ್ಷಗಳಿಂದ ಅಲ್ಲೇ ಇದ್ದ ಡಾ.ತಿಪ್ಪೇಸ್ವಾಮಿಯವರ ಸಮಾದಿಯನ್ನು ಅವರಿಗೆ ಅರಿವಿದ್ದೇ ದ್ವಂಸ ಮಾಡಿರುವುದು ತುಂಬಾ ಖಂಡನೀಯ ಮತ್ತು ಹೇಯ ಕೃತ್ಯ. ಇದರಿಂದ ಇದರಿಂದ ಕುಟುಂಬದ ಸದಸ್ಯರು ಹಾಗೂ ಜನಾಂಗದ ಮುಖಂಡರಿಗೆ ಆಘಾತವಾಗಿದೆ. ಈ ಕುರಿತು ಪೊಲೀಸ್ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಿದ್ದೇವೆ. ಈ ದೌರ್ಜನ್ಯವನ್ನು ಖಂಡಿಸಿ ನವೆಂಬರ್ 24ರ ಗುರುವಾರ ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸುತ್ತೇವೆ ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿ: ಬೆಂಗಳೂರು ಮತದಾರರ ಮಾಹಿತಿ ಕಳ್ಳತನದಲ್ಲಿ ಬಿಜೆಪಿಯ ನೇರ ಕೈವಾಡ; ಏಜೆಂಟರಿಗೆ ಪಕ್ಷದ ಕಚೇರಿಯಲ್ಲೆ ತರಬೇತಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...