Homeಕರ್ನಾಟಕದಲಿತರೆಂದರೆ ತಕ್ಕಡಿಯ ಕಲ್ಲುಗಳಲ್ಲ. ಸಮರ್ಥ ನಾಯಕರು ಎಂಬುದನ್ನು ಮರೆಯಬೇಡಿ

ದಲಿತರೆಂದರೆ ತಕ್ಕಡಿಯ ಕಲ್ಲುಗಳಲ್ಲ. ಸಮರ್ಥ ನಾಯಕರು ಎಂಬುದನ್ನು ಮರೆಯಬೇಡಿ

"ದಲಿತ ಎಂಬ ಕಾರಣಕ್ಕೆ ನನ್ನನ್ನು ಮುಖ್ಯಮಂತ್ರಿ ಎಂದರೆ ನಾನು ಒಪ್ಪುವುದಿಲ್ಲ. ನನ್ನ ಸಾಮರ್ಥ್ಯದ ಕಾರಣಕ್ಕೆ ಮುಖ್ಯಮಂತ್ರಿ ಮಾಡಿದರೆ ಮಾತ್ರ ಒಪ್ಪುತ್ತೇನೆ" ಅಂದಿದ್ದರು ಖರ್ಗೆಯವರು.

- Advertisement -
- Advertisement -

| ಅಭಿಷೇಕ್ ಮೌರ್ಯ |

ರಾಜಕೀಯದಲ್ಲಿ ಜಾತಿ ಎಂಬುದು ಮುಖ್ಯ ದಾಳವಾಗಿ ಉರುಳಲ್ಪಡುತ್ತಿದೆ. ಇತ್ತೀಚೆಗಂತೂ ಗ್ರಾಮ ಪಂಚಾಯ್ತಿ ಚುನಾವಣೆಯ ಟಿಕೆಟ್‌, ಅಧ್ಯಕ್ಷ ಉಪಾಧ್ಯಕ್ಷನ ಸ್ಥಾನದಿಂದ ಹಿಡಿದು ಲೋಕಸಭೆಯ ಕೇಂದ್ರ ಸಚಿವರ ಸ್ಥಾನದವರೆಗೂ ಜಾತಿಯೇ ಮುಖ್ಯವಾಗಿದೆ.  ತಾನು ಮೇಲ್ವರ್ಗದವನಾಗಿದ್ದು, ಸಮಾಜದ ಮುಖ್ಯವಾಹಿನಿಯಲ್ಲಿ  ಹತ್ಯೆ, ಹಲ್ಲೆಗಳಂತಹ ಹೇಯ ಕೃತ್ಯಗಳನ್ನು ಮಾಡಿದರು ಸರಿ, ರಾಜಕೀಯದಿಂದ ಎಲ್ಲವನ್ನೂ ಮುಚ್ಚಿಹಾಕುವುದರೊಂದಿಗೆ ಉನ್ನತ ಹುದ್ದೆಗೆ ಏರಬಹುದು. ಕೊಲೆ ಹತ್ಯೆಗಳಂತಹ ಹಿಂಸಾತ್ಮಕ ಪ್ರಕರಣಗಳಲ್ಲಿ ಆರೋಪಿ ಅಪರಾಧಿಗಳಾಗಿದ್ದರು, ಗೃಹ ಸಚಿವ, ರಕ್ಷಣಾ ಸ‍ಚಿವರಂತಹ ಮುಖ್ಯ ಹುದ್ದೆಗಳನ್ನೇ ಪಡೆಯಬಹುದು. ಒಂದು ಕಡೆ ಇದು ಸವರ್ಣೀಯ ಅಥವಾ ಮೇಲ್ವರ್ಗದ ಕತೆಯಾದರೆ ಇಂದಿನ ರಾಜಕೀಯದಲ್ಲಿ ದಲಿತ ನಾಯಕರುಗಳು ಪರಿಸ್ಥಿತಿ ಮಾತ್ರ ಸುಧಾರಿಸುತ್ತಿಲ್ಲ.

ಅಂದಹಾಗೆ ರಾಜ್ಯರಾಜಕಾರಣದಲ್ಲಿ ಚದುರಂಗದಾಟ ಭರ್ಜರಿಯಾಗಿಯೇ ಸಾಗುತ್ತಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೆಡವಿ ನೂತನ ಸರ್ಕಾರ ರಚಿಸಲು ಬಿಜೆಪಿ ಪ್ರಯತ್ನಿಸುತ್ತಿದ್ದರೆ, ಅತ್ತ ಕೈ-ತೆನೆ ನಾಯಕರು ತಮ್ಮ ಖುರ್ಚಿಗಳನ್ನು ಭದ್ರ ಪಡಿಸಿಕೊಳ್ಳುವಲ್ಲಿ ಸರ್ಕಸ್ ಮಾಡುತ್ತಿದ್ದಾರೆ. ಇವರ ನಡುವಿನ ವಾಕ್ ಸಮರಕ್ಕೆ ದಲಿತ ನಾಯಕರು ತುತ್ತಾಗುತ್ತಿದ್ದಾರೆ.

ಬಿಜೆಪಿ ಪಕ್ಷ ದಲಿತರಿಗೆ ಏನೇನು ಮಾಡದಿದ್ದರೂ, ಸಂವಿಧಾನ ಕಿತ್ತು ಹಾಕುತ್ತೇವೆಂದು ಹೇಳುತ್ತದೆ. ಆ ಪಕ್ಷದ ರಾಜ್ಯಾಧ್ಯಕ್ಷ “ತಾಕತ್ತಿದ್ದರೆ ದಲಿತರನ್ನು ಮುಖ್ಯಮಂತ್ರಿ ಮಾಡಿ” ಅಂತಾ ಊರ ತುಂಬಾ ಡಂಗೂರ ಸಾರಿಕೊಂಡು ಕೈ-ತೆನೆ ನಾಯಕರಿಗೆ ಸವಾಲಾಕಿಕೊಂಡು ಬರುತ್ತಿದ್ದಾರೆ. ನಾನೇನು ಕಡಿಮೆ ಇಲ್ಲ ಎನ್ನುವಂತೆ ಮೈತ್ರಿ ಪಕ್ಷದ ಸಮನ್ವಯ ಸಮಿತಿಯ ಅಧ್ಯಕ್ಷರಾದ ಸಿದ್ದರಾಮಯ್ಯನವರು “ತಾಕತ್ತಿದ್ದರೆ ದಲಿತರನ್ನು ಕೇಂದ್ರ ಸಚಿವರನ್ನಾಗಿ ಮಾಡಿ” ಎಂದು ಪ್ರತಿ ಸವಾಲ್ ಹಾಕಿತ್ತಿದ್ದಾರೆ. ಈ ಬೆಳವಣಿಗೆಗಳನ್ನು ನೋಡಿದ್ರೆ ದಲಿತನಾಯಕರೇನು ಇವರ ರಾಜಕೀಯ ಚದುರಂಗಕ್ಕೆ ಅನಿವಾರ್ಯವಾಗಿರುವ ಕಾಲಾಳುಗಳ ಅಥವಾ ದಾಳವ ಅನ್ನೋ ಪ್ರಶ್ನೆ ಕಾಡತೊಡಗಿದೆ.

ಅಂದರೆ ದಲಿತರು ಮೌಲ್ಯಮಾಪನಕ್ಕೆ ಒಳಪಡುವ ತಕ್ಕಡಿಯ ತೂಕದ ಕಲ್ಲುಗಳ ಅಂತ. ಯಾವ ಕಡೆ ಬಾಗುತ್ತೆ ಅದರ ವಿರುದ್ದ ಕಲ್ಲೆಸೆಯಲು ಇತರರು ಸಿದ್ದರಿರುವುದು ದೊಡ್ಡ ದುರಂತವಾಗಿದೆ. ಮಲ್ಲಿಕಾರ್ಜುನ ಖರ್ಗೆಯವರನ್ನು ದಲಿತ ಮುಖ್ಯಮಂತ್ರಿ ಮಾಡಬೇಕೆಂಬ ಕೂಗ ಜೋರಾಗಿದ್ದಾಗ ಖರ್ಗೆಯವರು ಹೇಳಿದ್ದು ಮಾತು ಬಹಳ ಮಹತ್ವದ್ದು. “ದಲಿತ ಎಂಬ ಕಾರಣಕ್ಕೆ ನನ್ನನ್ನು ಮುಖ್ಯಮಂತ್ರಿ ಎಂದರೆ ನಾನು ಒಪ್ಪುವುದಿಲ್ಲ. ನನ್ನ ಸಾಮರ್ಥ್ಯದ ಕಾರಣಕ್ಕೆ ಮುಖ್ಯಮಂತ್ರಿ ಮಾಡಿದರೆ ಮಾತ್ರ ಒಪ್ಪುತ್ತೇನೆ” ಅಂದಿದ್ದರು. ಈ ಮಾತು ಕೇಳಿದ ಮೇಲೂ ಎಲ್ಲಾ ಪಕ್ಷಗಳ ಮುಖಂಡರು ತಮ್ಮ ಬಾಯಿಯನ್ನು ಮುಚ್ಚಿಕೊಂಡಿಲ್ಲ.

ಇನ್ನೂ ಸಂವಿಧಾನದಡಿಯಲ್ಲಿ ಚುನಾಯಿತರಾಗಿರುವ ಮಾನ್ಯ ದಲಿತ ಶಾಸಕ, ಸಂಸದರೆ ಎಚ್ಚೆತ್ತುಕೊಂಡು ಒಂದಾಗಬೇಕಿದ್ದು, ರಾಜಕೀಯಕ್ಕಾಗಿ ದಲಿತರ ಹೆಸರೇಳುತ್ತಿರುವ ನಾಯಕರಿಕೆ ಪಾಠ ಕಲಿಸಬೇಕಿದೆ. ಅವರ ರಾಜಕೀಯಕ್ಕೆ ದಾಳಗಳಾಗುವ ಬದಲಿಗೆ ತಮ್ಮ ಸಮುದಾಯದ ಪರವಾಗಿ ಸದನಗಳಲ್ಲಿ ಪ್ರಶ್ನಿಸಿ ತಮ್ಮ ಹಕ್ಕುಗಳನ್ನು ಕೇಳಬೇಕಿದೆ. ನಿಮಗೆ ಮತ ನೀಡಿದ ಮತದಾರರ ಸಮಸ್ಯೆಗಳನ್ನು ಆಲಿಸಿ, ಅವರ ಕಷ್ಟಗಳಿಗೆ ಸ್ಪಂದಿಸಬೇಕಿದೆ. ನಿಮ್ಮ ಸಾಮರ್ಥ್ಯವನ್ನು ನಿಮ್ಮ ಕ್ಷೇತ್ರಗಳಲ್ಲಿ ಪ್ರಾಮಾಣಿಕವಾಗಿ ವಿನಿಯೋಗಿಸಬೇಕು. ಆ ಮೂಲಕ ದೇಶದ ಎಲ್ಲಾ ಹುದ್ದೆಗಳನ್ನು ನಿರ್ವಹಿಸಲು ನಾವು ಸಿದ್ಧ ಎನ್ನುವುದನ್ನು ತೋರಿಸಬೇಕು.

ಇನ್ನು ಮೂರು ಪಕ್ಷದವರು ಸಹ ಸಹಜವಾಗಿ ದಲಿತ ವ್ಯಕ್ತಿಗಳು ಮುಖ್ಯಮಂತ್ರಿಗಳಾಗದಂತೆ ತಡೆಯಲು ಸೋಲಿಸುವ ಗೆಲ್ಲಿಸುವ ಆಟವನ್ನು ಇದುವರೆಗೂ ಆಡಿದ್ದಾರೆ. ಇನ್ನು ಮುಂದೆ ಆ ಆಟ ನಡೆಯದಂತೆ ಎಚ್ಚರವಹಿಸಬೇಕು.

ಜೊತೆಗೆ ನೀವಿರುವ ಪಕ್ಷಗಳಲ್ಲಿ ಪ್ರಜಾತಂತ್ರ, ಸಂವಿಧಾನದ ಆಶಯಗಳು ಜಾರಿಯಾಗುತ್ತಿಲ್ಲ. ಆ ಬಗ್ಗೆ ನೀವು ಪ್ರಶ್ನಿಸಿ ಸರಿಪಡಿಸಬೇಕು. ದೇಶದ ಎಲ್ಲೆ ಜನರ ಮೇಲಿನ ದೌರ್ಜನ್ಯ ನಡೆದರೆ ನೀವು ಅದನ್ನು ಪ್ರತಿಭಟಿಸಿ ದನಿ ಎತ್ತಬೇಕು. ನಾನು ಆ ಪಕ್ಷ, ನಾನು ಈ ಪಕ್ಷ ಹಾಗಾಗಿ ಆ ಘಟನೆ ಬಗ್ಗೆ ಮಾತಾಡುವುದಿಲ್ಲ ಎಂಬುದನ್ನು ಬಿಡಬೇಕು. ತಪ್ಪು ತಮ್ಮದೇ ಪಕ್ಷ ಮಾಡಿದರೂ ಸಹ ಅದನ್ನು ಖಂಡಿಸಿ, ಮುಂದೆ ಆ ರೀತಿಯ ತಪ್ಪುಗಳಾಗದಂತೆ ಎಚ್ಚರಿಕೆ ವಹಿಸಬೇಕಿದೆ.

ಜೊತೆಗೆ ದಲಿತ ಸಮುದಾಯದಿಂದಲೂ ಇದುವರೆಗೆ ಬಹಳಷ್ಟು ಜನ ದೊಡ್ಡ ದೊಡ್ಡ ಹುದ್ದೆಗಳನ್ನು ಪಡೆದಿದ್ದಾರೆ. ಆದರೆ ಅವರು ಅವರ ಸಮುದಾಯಕ್ಕೆ ಹೆಚ್ಚೆನೂ ಮಾಡಿಲ್ಲ, ಮೂಲಭೂತ ಬದಲಾವಣೆ ಬಂದಿಲ್ಲ ಎಂಬ ಆರೋಪಗಳಿವೆ. ಅದನ್ನು ತೊಡೆದು ಹಾಕಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಆ ಮೂಲಕ ರಾಜಕಾರಣಕ್ಕೆ ಹೊಸ ಅರ್ಥ ನೀಡಬೇಕು.

(ಮೇಲಿನ ಬರಹದಲ್ಲಿನ ಅಭಿಪ್ರಾಯಗಳು ಲೇಖಕರದ್ದಾಗಿರುತ್ತವೆ. ಅತಿಥಿ ಲೇಖಕರ ಅನಿಸಿಕೆಗಳು ನಾನುಗೌರಿ.ಕಾಂ ವೆಬ್‌ಪತ್ರಿಕೆಯ ಸಂಪಾದಕೀಯ ತಂಡದ ಅಭಿಪ್ರಾಯಗಳೇ ಆಗಿರಬೇಕೆಂದೇನಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...