Homeಕರ್ನಾಟಕದಲಿತರೆಂದರೆ ತಕ್ಕಡಿಯ ಕಲ್ಲುಗಳಲ್ಲ. ಸಮರ್ಥ ನಾಯಕರು ಎಂಬುದನ್ನು ಮರೆಯಬೇಡಿ

ದಲಿತರೆಂದರೆ ತಕ್ಕಡಿಯ ಕಲ್ಲುಗಳಲ್ಲ. ಸಮರ್ಥ ನಾಯಕರು ಎಂಬುದನ್ನು ಮರೆಯಬೇಡಿ

"ದಲಿತ ಎಂಬ ಕಾರಣಕ್ಕೆ ನನ್ನನ್ನು ಮುಖ್ಯಮಂತ್ರಿ ಎಂದರೆ ನಾನು ಒಪ್ಪುವುದಿಲ್ಲ. ನನ್ನ ಸಾಮರ್ಥ್ಯದ ಕಾರಣಕ್ಕೆ ಮುಖ್ಯಮಂತ್ರಿ ಮಾಡಿದರೆ ಮಾತ್ರ ಒಪ್ಪುತ್ತೇನೆ" ಅಂದಿದ್ದರು ಖರ್ಗೆಯವರು.

- Advertisement -
- Advertisement -

| ಅಭಿಷೇಕ್ ಮೌರ್ಯ |

ರಾಜಕೀಯದಲ್ಲಿ ಜಾತಿ ಎಂಬುದು ಮುಖ್ಯ ದಾಳವಾಗಿ ಉರುಳಲ್ಪಡುತ್ತಿದೆ. ಇತ್ತೀಚೆಗಂತೂ ಗ್ರಾಮ ಪಂಚಾಯ್ತಿ ಚುನಾವಣೆಯ ಟಿಕೆಟ್‌, ಅಧ್ಯಕ್ಷ ಉಪಾಧ್ಯಕ್ಷನ ಸ್ಥಾನದಿಂದ ಹಿಡಿದು ಲೋಕಸಭೆಯ ಕೇಂದ್ರ ಸಚಿವರ ಸ್ಥಾನದವರೆಗೂ ಜಾತಿಯೇ ಮುಖ್ಯವಾಗಿದೆ.  ತಾನು ಮೇಲ್ವರ್ಗದವನಾಗಿದ್ದು, ಸಮಾಜದ ಮುಖ್ಯವಾಹಿನಿಯಲ್ಲಿ  ಹತ್ಯೆ, ಹಲ್ಲೆಗಳಂತಹ ಹೇಯ ಕೃತ್ಯಗಳನ್ನು ಮಾಡಿದರು ಸರಿ, ರಾಜಕೀಯದಿಂದ ಎಲ್ಲವನ್ನೂ ಮುಚ್ಚಿಹಾಕುವುದರೊಂದಿಗೆ ಉನ್ನತ ಹುದ್ದೆಗೆ ಏರಬಹುದು. ಕೊಲೆ ಹತ್ಯೆಗಳಂತಹ ಹಿಂಸಾತ್ಮಕ ಪ್ರಕರಣಗಳಲ್ಲಿ ಆರೋಪಿ ಅಪರಾಧಿಗಳಾಗಿದ್ದರು, ಗೃಹ ಸಚಿವ, ರಕ್ಷಣಾ ಸ‍ಚಿವರಂತಹ ಮುಖ್ಯ ಹುದ್ದೆಗಳನ್ನೇ ಪಡೆಯಬಹುದು. ಒಂದು ಕಡೆ ಇದು ಸವರ್ಣೀಯ ಅಥವಾ ಮೇಲ್ವರ್ಗದ ಕತೆಯಾದರೆ ಇಂದಿನ ರಾಜಕೀಯದಲ್ಲಿ ದಲಿತ ನಾಯಕರುಗಳು ಪರಿಸ್ಥಿತಿ ಮಾತ್ರ ಸುಧಾರಿಸುತ್ತಿಲ್ಲ.

ಅಂದಹಾಗೆ ರಾಜ್ಯರಾಜಕಾರಣದಲ್ಲಿ ಚದುರಂಗದಾಟ ಭರ್ಜರಿಯಾಗಿಯೇ ಸಾಗುತ್ತಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೆಡವಿ ನೂತನ ಸರ್ಕಾರ ರಚಿಸಲು ಬಿಜೆಪಿ ಪ್ರಯತ್ನಿಸುತ್ತಿದ್ದರೆ, ಅತ್ತ ಕೈ-ತೆನೆ ನಾಯಕರು ತಮ್ಮ ಖುರ್ಚಿಗಳನ್ನು ಭದ್ರ ಪಡಿಸಿಕೊಳ್ಳುವಲ್ಲಿ ಸರ್ಕಸ್ ಮಾಡುತ್ತಿದ್ದಾರೆ. ಇವರ ನಡುವಿನ ವಾಕ್ ಸಮರಕ್ಕೆ ದಲಿತ ನಾಯಕರು ತುತ್ತಾಗುತ್ತಿದ್ದಾರೆ.

ಬಿಜೆಪಿ ಪಕ್ಷ ದಲಿತರಿಗೆ ಏನೇನು ಮಾಡದಿದ್ದರೂ, ಸಂವಿಧಾನ ಕಿತ್ತು ಹಾಕುತ್ತೇವೆಂದು ಹೇಳುತ್ತದೆ. ಆ ಪಕ್ಷದ ರಾಜ್ಯಾಧ್ಯಕ್ಷ “ತಾಕತ್ತಿದ್ದರೆ ದಲಿತರನ್ನು ಮುಖ್ಯಮಂತ್ರಿ ಮಾಡಿ” ಅಂತಾ ಊರ ತುಂಬಾ ಡಂಗೂರ ಸಾರಿಕೊಂಡು ಕೈ-ತೆನೆ ನಾಯಕರಿಗೆ ಸವಾಲಾಕಿಕೊಂಡು ಬರುತ್ತಿದ್ದಾರೆ. ನಾನೇನು ಕಡಿಮೆ ಇಲ್ಲ ಎನ್ನುವಂತೆ ಮೈತ್ರಿ ಪಕ್ಷದ ಸಮನ್ವಯ ಸಮಿತಿಯ ಅಧ್ಯಕ್ಷರಾದ ಸಿದ್ದರಾಮಯ್ಯನವರು “ತಾಕತ್ತಿದ್ದರೆ ದಲಿತರನ್ನು ಕೇಂದ್ರ ಸಚಿವರನ್ನಾಗಿ ಮಾಡಿ” ಎಂದು ಪ್ರತಿ ಸವಾಲ್ ಹಾಕಿತ್ತಿದ್ದಾರೆ. ಈ ಬೆಳವಣಿಗೆಗಳನ್ನು ನೋಡಿದ್ರೆ ದಲಿತನಾಯಕರೇನು ಇವರ ರಾಜಕೀಯ ಚದುರಂಗಕ್ಕೆ ಅನಿವಾರ್ಯವಾಗಿರುವ ಕಾಲಾಳುಗಳ ಅಥವಾ ದಾಳವ ಅನ್ನೋ ಪ್ರಶ್ನೆ ಕಾಡತೊಡಗಿದೆ.

ಅಂದರೆ ದಲಿತರು ಮೌಲ್ಯಮಾಪನಕ್ಕೆ ಒಳಪಡುವ ತಕ್ಕಡಿಯ ತೂಕದ ಕಲ್ಲುಗಳ ಅಂತ. ಯಾವ ಕಡೆ ಬಾಗುತ್ತೆ ಅದರ ವಿರುದ್ದ ಕಲ್ಲೆಸೆಯಲು ಇತರರು ಸಿದ್ದರಿರುವುದು ದೊಡ್ಡ ದುರಂತವಾಗಿದೆ. ಮಲ್ಲಿಕಾರ್ಜುನ ಖರ್ಗೆಯವರನ್ನು ದಲಿತ ಮುಖ್ಯಮಂತ್ರಿ ಮಾಡಬೇಕೆಂಬ ಕೂಗ ಜೋರಾಗಿದ್ದಾಗ ಖರ್ಗೆಯವರು ಹೇಳಿದ್ದು ಮಾತು ಬಹಳ ಮಹತ್ವದ್ದು. “ದಲಿತ ಎಂಬ ಕಾರಣಕ್ಕೆ ನನ್ನನ್ನು ಮುಖ್ಯಮಂತ್ರಿ ಎಂದರೆ ನಾನು ಒಪ್ಪುವುದಿಲ್ಲ. ನನ್ನ ಸಾಮರ್ಥ್ಯದ ಕಾರಣಕ್ಕೆ ಮುಖ್ಯಮಂತ್ರಿ ಮಾಡಿದರೆ ಮಾತ್ರ ಒಪ್ಪುತ್ತೇನೆ” ಅಂದಿದ್ದರು. ಈ ಮಾತು ಕೇಳಿದ ಮೇಲೂ ಎಲ್ಲಾ ಪಕ್ಷಗಳ ಮುಖಂಡರು ತಮ್ಮ ಬಾಯಿಯನ್ನು ಮುಚ್ಚಿಕೊಂಡಿಲ್ಲ.

ಇನ್ನೂ ಸಂವಿಧಾನದಡಿಯಲ್ಲಿ ಚುನಾಯಿತರಾಗಿರುವ ಮಾನ್ಯ ದಲಿತ ಶಾಸಕ, ಸಂಸದರೆ ಎಚ್ಚೆತ್ತುಕೊಂಡು ಒಂದಾಗಬೇಕಿದ್ದು, ರಾಜಕೀಯಕ್ಕಾಗಿ ದಲಿತರ ಹೆಸರೇಳುತ್ತಿರುವ ನಾಯಕರಿಕೆ ಪಾಠ ಕಲಿಸಬೇಕಿದೆ. ಅವರ ರಾಜಕೀಯಕ್ಕೆ ದಾಳಗಳಾಗುವ ಬದಲಿಗೆ ತಮ್ಮ ಸಮುದಾಯದ ಪರವಾಗಿ ಸದನಗಳಲ್ಲಿ ಪ್ರಶ್ನಿಸಿ ತಮ್ಮ ಹಕ್ಕುಗಳನ್ನು ಕೇಳಬೇಕಿದೆ. ನಿಮಗೆ ಮತ ನೀಡಿದ ಮತದಾರರ ಸಮಸ್ಯೆಗಳನ್ನು ಆಲಿಸಿ, ಅವರ ಕಷ್ಟಗಳಿಗೆ ಸ್ಪಂದಿಸಬೇಕಿದೆ. ನಿಮ್ಮ ಸಾಮರ್ಥ್ಯವನ್ನು ನಿಮ್ಮ ಕ್ಷೇತ್ರಗಳಲ್ಲಿ ಪ್ರಾಮಾಣಿಕವಾಗಿ ವಿನಿಯೋಗಿಸಬೇಕು. ಆ ಮೂಲಕ ದೇಶದ ಎಲ್ಲಾ ಹುದ್ದೆಗಳನ್ನು ನಿರ್ವಹಿಸಲು ನಾವು ಸಿದ್ಧ ಎನ್ನುವುದನ್ನು ತೋರಿಸಬೇಕು.

ಇನ್ನು ಮೂರು ಪಕ್ಷದವರು ಸಹ ಸಹಜವಾಗಿ ದಲಿತ ವ್ಯಕ್ತಿಗಳು ಮುಖ್ಯಮಂತ್ರಿಗಳಾಗದಂತೆ ತಡೆಯಲು ಸೋಲಿಸುವ ಗೆಲ್ಲಿಸುವ ಆಟವನ್ನು ಇದುವರೆಗೂ ಆಡಿದ್ದಾರೆ. ಇನ್ನು ಮುಂದೆ ಆ ಆಟ ನಡೆಯದಂತೆ ಎಚ್ಚರವಹಿಸಬೇಕು.

ಜೊತೆಗೆ ನೀವಿರುವ ಪಕ್ಷಗಳಲ್ಲಿ ಪ್ರಜಾತಂತ್ರ, ಸಂವಿಧಾನದ ಆಶಯಗಳು ಜಾರಿಯಾಗುತ್ತಿಲ್ಲ. ಆ ಬಗ್ಗೆ ನೀವು ಪ್ರಶ್ನಿಸಿ ಸರಿಪಡಿಸಬೇಕು. ದೇಶದ ಎಲ್ಲೆ ಜನರ ಮೇಲಿನ ದೌರ್ಜನ್ಯ ನಡೆದರೆ ನೀವು ಅದನ್ನು ಪ್ರತಿಭಟಿಸಿ ದನಿ ಎತ್ತಬೇಕು. ನಾನು ಆ ಪಕ್ಷ, ನಾನು ಈ ಪಕ್ಷ ಹಾಗಾಗಿ ಆ ಘಟನೆ ಬಗ್ಗೆ ಮಾತಾಡುವುದಿಲ್ಲ ಎಂಬುದನ್ನು ಬಿಡಬೇಕು. ತಪ್ಪು ತಮ್ಮದೇ ಪಕ್ಷ ಮಾಡಿದರೂ ಸಹ ಅದನ್ನು ಖಂಡಿಸಿ, ಮುಂದೆ ಆ ರೀತಿಯ ತಪ್ಪುಗಳಾಗದಂತೆ ಎಚ್ಚರಿಕೆ ವಹಿಸಬೇಕಿದೆ.

ಜೊತೆಗೆ ದಲಿತ ಸಮುದಾಯದಿಂದಲೂ ಇದುವರೆಗೆ ಬಹಳಷ್ಟು ಜನ ದೊಡ್ಡ ದೊಡ್ಡ ಹುದ್ದೆಗಳನ್ನು ಪಡೆದಿದ್ದಾರೆ. ಆದರೆ ಅವರು ಅವರ ಸಮುದಾಯಕ್ಕೆ ಹೆಚ್ಚೆನೂ ಮಾಡಿಲ್ಲ, ಮೂಲಭೂತ ಬದಲಾವಣೆ ಬಂದಿಲ್ಲ ಎಂಬ ಆರೋಪಗಳಿವೆ. ಅದನ್ನು ತೊಡೆದು ಹಾಕಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಆ ಮೂಲಕ ರಾಜಕಾರಣಕ್ಕೆ ಹೊಸ ಅರ್ಥ ನೀಡಬೇಕು.

(ಮೇಲಿನ ಬರಹದಲ್ಲಿನ ಅಭಿಪ್ರಾಯಗಳು ಲೇಖಕರದ್ದಾಗಿರುತ್ತವೆ. ಅತಿಥಿ ಲೇಖಕರ ಅನಿಸಿಕೆಗಳು ನಾನುಗೌರಿ.ಕಾಂ ವೆಬ್‌ಪತ್ರಿಕೆಯ ಸಂಪಾದಕೀಯ ತಂಡದ ಅಭಿಪ್ರಾಯಗಳೇ ಆಗಿರಬೇಕೆಂದೇನಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....