Homeಕರ್ನಾಟಕದಲಿತರೆಂದರೆ ತಕ್ಕಡಿಯ ಕಲ್ಲುಗಳಲ್ಲ. ಸಮರ್ಥ ನಾಯಕರು ಎಂಬುದನ್ನು ಮರೆಯಬೇಡಿ

ದಲಿತರೆಂದರೆ ತಕ್ಕಡಿಯ ಕಲ್ಲುಗಳಲ್ಲ. ಸಮರ್ಥ ನಾಯಕರು ಎಂಬುದನ್ನು ಮರೆಯಬೇಡಿ

"ದಲಿತ ಎಂಬ ಕಾರಣಕ್ಕೆ ನನ್ನನ್ನು ಮುಖ್ಯಮಂತ್ರಿ ಎಂದರೆ ನಾನು ಒಪ್ಪುವುದಿಲ್ಲ. ನನ್ನ ಸಾಮರ್ಥ್ಯದ ಕಾರಣಕ್ಕೆ ಮುಖ್ಯಮಂತ್ರಿ ಮಾಡಿದರೆ ಮಾತ್ರ ಒಪ್ಪುತ್ತೇನೆ" ಅಂದಿದ್ದರು ಖರ್ಗೆಯವರು.

- Advertisement -
- Advertisement -

| ಅಭಿಷೇಕ್ ಮೌರ್ಯ |

ರಾಜಕೀಯದಲ್ಲಿ ಜಾತಿ ಎಂಬುದು ಮುಖ್ಯ ದಾಳವಾಗಿ ಉರುಳಲ್ಪಡುತ್ತಿದೆ. ಇತ್ತೀಚೆಗಂತೂ ಗ್ರಾಮ ಪಂಚಾಯ್ತಿ ಚುನಾವಣೆಯ ಟಿಕೆಟ್‌, ಅಧ್ಯಕ್ಷ ಉಪಾಧ್ಯಕ್ಷನ ಸ್ಥಾನದಿಂದ ಹಿಡಿದು ಲೋಕಸಭೆಯ ಕೇಂದ್ರ ಸಚಿವರ ಸ್ಥಾನದವರೆಗೂ ಜಾತಿಯೇ ಮುಖ್ಯವಾಗಿದೆ.  ತಾನು ಮೇಲ್ವರ್ಗದವನಾಗಿದ್ದು, ಸಮಾಜದ ಮುಖ್ಯವಾಹಿನಿಯಲ್ಲಿ  ಹತ್ಯೆ, ಹಲ್ಲೆಗಳಂತಹ ಹೇಯ ಕೃತ್ಯಗಳನ್ನು ಮಾಡಿದರು ಸರಿ, ರಾಜಕೀಯದಿಂದ ಎಲ್ಲವನ್ನೂ ಮುಚ್ಚಿಹಾಕುವುದರೊಂದಿಗೆ ಉನ್ನತ ಹುದ್ದೆಗೆ ಏರಬಹುದು. ಕೊಲೆ ಹತ್ಯೆಗಳಂತಹ ಹಿಂಸಾತ್ಮಕ ಪ್ರಕರಣಗಳಲ್ಲಿ ಆರೋಪಿ ಅಪರಾಧಿಗಳಾಗಿದ್ದರು, ಗೃಹ ಸಚಿವ, ರಕ್ಷಣಾ ಸ‍ಚಿವರಂತಹ ಮುಖ್ಯ ಹುದ್ದೆಗಳನ್ನೇ ಪಡೆಯಬಹುದು. ಒಂದು ಕಡೆ ಇದು ಸವರ್ಣೀಯ ಅಥವಾ ಮೇಲ್ವರ್ಗದ ಕತೆಯಾದರೆ ಇಂದಿನ ರಾಜಕೀಯದಲ್ಲಿ ದಲಿತ ನಾಯಕರುಗಳು ಪರಿಸ್ಥಿತಿ ಮಾತ್ರ ಸುಧಾರಿಸುತ್ತಿಲ್ಲ.

ಅಂದಹಾಗೆ ರಾಜ್ಯರಾಜಕಾರಣದಲ್ಲಿ ಚದುರಂಗದಾಟ ಭರ್ಜರಿಯಾಗಿಯೇ ಸಾಗುತ್ತಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೆಡವಿ ನೂತನ ಸರ್ಕಾರ ರಚಿಸಲು ಬಿಜೆಪಿ ಪ್ರಯತ್ನಿಸುತ್ತಿದ್ದರೆ, ಅತ್ತ ಕೈ-ತೆನೆ ನಾಯಕರು ತಮ್ಮ ಖುರ್ಚಿಗಳನ್ನು ಭದ್ರ ಪಡಿಸಿಕೊಳ್ಳುವಲ್ಲಿ ಸರ್ಕಸ್ ಮಾಡುತ್ತಿದ್ದಾರೆ. ಇವರ ನಡುವಿನ ವಾಕ್ ಸಮರಕ್ಕೆ ದಲಿತ ನಾಯಕರು ತುತ್ತಾಗುತ್ತಿದ್ದಾರೆ.

ಬಿಜೆಪಿ ಪಕ್ಷ ದಲಿತರಿಗೆ ಏನೇನು ಮಾಡದಿದ್ದರೂ, ಸಂವಿಧಾನ ಕಿತ್ತು ಹಾಕುತ್ತೇವೆಂದು ಹೇಳುತ್ತದೆ. ಆ ಪಕ್ಷದ ರಾಜ್ಯಾಧ್ಯಕ್ಷ “ತಾಕತ್ತಿದ್ದರೆ ದಲಿತರನ್ನು ಮುಖ್ಯಮಂತ್ರಿ ಮಾಡಿ” ಅಂತಾ ಊರ ತುಂಬಾ ಡಂಗೂರ ಸಾರಿಕೊಂಡು ಕೈ-ತೆನೆ ನಾಯಕರಿಗೆ ಸವಾಲಾಕಿಕೊಂಡು ಬರುತ್ತಿದ್ದಾರೆ. ನಾನೇನು ಕಡಿಮೆ ಇಲ್ಲ ಎನ್ನುವಂತೆ ಮೈತ್ರಿ ಪಕ್ಷದ ಸಮನ್ವಯ ಸಮಿತಿಯ ಅಧ್ಯಕ್ಷರಾದ ಸಿದ್ದರಾಮಯ್ಯನವರು “ತಾಕತ್ತಿದ್ದರೆ ದಲಿತರನ್ನು ಕೇಂದ್ರ ಸಚಿವರನ್ನಾಗಿ ಮಾಡಿ” ಎಂದು ಪ್ರತಿ ಸವಾಲ್ ಹಾಕಿತ್ತಿದ್ದಾರೆ. ಈ ಬೆಳವಣಿಗೆಗಳನ್ನು ನೋಡಿದ್ರೆ ದಲಿತನಾಯಕರೇನು ಇವರ ರಾಜಕೀಯ ಚದುರಂಗಕ್ಕೆ ಅನಿವಾರ್ಯವಾಗಿರುವ ಕಾಲಾಳುಗಳ ಅಥವಾ ದಾಳವ ಅನ್ನೋ ಪ್ರಶ್ನೆ ಕಾಡತೊಡಗಿದೆ.

ಅಂದರೆ ದಲಿತರು ಮೌಲ್ಯಮಾಪನಕ್ಕೆ ಒಳಪಡುವ ತಕ್ಕಡಿಯ ತೂಕದ ಕಲ್ಲುಗಳ ಅಂತ. ಯಾವ ಕಡೆ ಬಾಗುತ್ತೆ ಅದರ ವಿರುದ್ದ ಕಲ್ಲೆಸೆಯಲು ಇತರರು ಸಿದ್ದರಿರುವುದು ದೊಡ್ಡ ದುರಂತವಾಗಿದೆ. ಮಲ್ಲಿಕಾರ್ಜುನ ಖರ್ಗೆಯವರನ್ನು ದಲಿತ ಮುಖ್ಯಮಂತ್ರಿ ಮಾಡಬೇಕೆಂಬ ಕೂಗ ಜೋರಾಗಿದ್ದಾಗ ಖರ್ಗೆಯವರು ಹೇಳಿದ್ದು ಮಾತು ಬಹಳ ಮಹತ್ವದ್ದು. “ದಲಿತ ಎಂಬ ಕಾರಣಕ್ಕೆ ನನ್ನನ್ನು ಮುಖ್ಯಮಂತ್ರಿ ಎಂದರೆ ನಾನು ಒಪ್ಪುವುದಿಲ್ಲ. ನನ್ನ ಸಾಮರ್ಥ್ಯದ ಕಾರಣಕ್ಕೆ ಮುಖ್ಯಮಂತ್ರಿ ಮಾಡಿದರೆ ಮಾತ್ರ ಒಪ್ಪುತ್ತೇನೆ” ಅಂದಿದ್ದರು. ಈ ಮಾತು ಕೇಳಿದ ಮೇಲೂ ಎಲ್ಲಾ ಪಕ್ಷಗಳ ಮುಖಂಡರು ತಮ್ಮ ಬಾಯಿಯನ್ನು ಮುಚ್ಚಿಕೊಂಡಿಲ್ಲ.

ಇನ್ನೂ ಸಂವಿಧಾನದಡಿಯಲ್ಲಿ ಚುನಾಯಿತರಾಗಿರುವ ಮಾನ್ಯ ದಲಿತ ಶಾಸಕ, ಸಂಸದರೆ ಎಚ್ಚೆತ್ತುಕೊಂಡು ಒಂದಾಗಬೇಕಿದ್ದು, ರಾಜಕೀಯಕ್ಕಾಗಿ ದಲಿತರ ಹೆಸರೇಳುತ್ತಿರುವ ನಾಯಕರಿಕೆ ಪಾಠ ಕಲಿಸಬೇಕಿದೆ. ಅವರ ರಾಜಕೀಯಕ್ಕೆ ದಾಳಗಳಾಗುವ ಬದಲಿಗೆ ತಮ್ಮ ಸಮುದಾಯದ ಪರವಾಗಿ ಸದನಗಳಲ್ಲಿ ಪ್ರಶ್ನಿಸಿ ತಮ್ಮ ಹಕ್ಕುಗಳನ್ನು ಕೇಳಬೇಕಿದೆ. ನಿಮಗೆ ಮತ ನೀಡಿದ ಮತದಾರರ ಸಮಸ್ಯೆಗಳನ್ನು ಆಲಿಸಿ, ಅವರ ಕಷ್ಟಗಳಿಗೆ ಸ್ಪಂದಿಸಬೇಕಿದೆ. ನಿಮ್ಮ ಸಾಮರ್ಥ್ಯವನ್ನು ನಿಮ್ಮ ಕ್ಷೇತ್ರಗಳಲ್ಲಿ ಪ್ರಾಮಾಣಿಕವಾಗಿ ವಿನಿಯೋಗಿಸಬೇಕು. ಆ ಮೂಲಕ ದೇಶದ ಎಲ್ಲಾ ಹುದ್ದೆಗಳನ್ನು ನಿರ್ವಹಿಸಲು ನಾವು ಸಿದ್ಧ ಎನ್ನುವುದನ್ನು ತೋರಿಸಬೇಕು.

ಇನ್ನು ಮೂರು ಪಕ್ಷದವರು ಸಹ ಸಹಜವಾಗಿ ದಲಿತ ವ್ಯಕ್ತಿಗಳು ಮುಖ್ಯಮಂತ್ರಿಗಳಾಗದಂತೆ ತಡೆಯಲು ಸೋಲಿಸುವ ಗೆಲ್ಲಿಸುವ ಆಟವನ್ನು ಇದುವರೆಗೂ ಆಡಿದ್ದಾರೆ. ಇನ್ನು ಮುಂದೆ ಆ ಆಟ ನಡೆಯದಂತೆ ಎಚ್ಚರವಹಿಸಬೇಕು.

ಜೊತೆಗೆ ನೀವಿರುವ ಪಕ್ಷಗಳಲ್ಲಿ ಪ್ರಜಾತಂತ್ರ, ಸಂವಿಧಾನದ ಆಶಯಗಳು ಜಾರಿಯಾಗುತ್ತಿಲ್ಲ. ಆ ಬಗ್ಗೆ ನೀವು ಪ್ರಶ್ನಿಸಿ ಸರಿಪಡಿಸಬೇಕು. ದೇಶದ ಎಲ್ಲೆ ಜನರ ಮೇಲಿನ ದೌರ್ಜನ್ಯ ನಡೆದರೆ ನೀವು ಅದನ್ನು ಪ್ರತಿಭಟಿಸಿ ದನಿ ಎತ್ತಬೇಕು. ನಾನು ಆ ಪಕ್ಷ, ನಾನು ಈ ಪಕ್ಷ ಹಾಗಾಗಿ ಆ ಘಟನೆ ಬಗ್ಗೆ ಮಾತಾಡುವುದಿಲ್ಲ ಎಂಬುದನ್ನು ಬಿಡಬೇಕು. ತಪ್ಪು ತಮ್ಮದೇ ಪಕ್ಷ ಮಾಡಿದರೂ ಸಹ ಅದನ್ನು ಖಂಡಿಸಿ, ಮುಂದೆ ಆ ರೀತಿಯ ತಪ್ಪುಗಳಾಗದಂತೆ ಎಚ್ಚರಿಕೆ ವಹಿಸಬೇಕಿದೆ.

ಜೊತೆಗೆ ದಲಿತ ಸಮುದಾಯದಿಂದಲೂ ಇದುವರೆಗೆ ಬಹಳಷ್ಟು ಜನ ದೊಡ್ಡ ದೊಡ್ಡ ಹುದ್ದೆಗಳನ್ನು ಪಡೆದಿದ್ದಾರೆ. ಆದರೆ ಅವರು ಅವರ ಸಮುದಾಯಕ್ಕೆ ಹೆಚ್ಚೆನೂ ಮಾಡಿಲ್ಲ, ಮೂಲಭೂತ ಬದಲಾವಣೆ ಬಂದಿಲ್ಲ ಎಂಬ ಆರೋಪಗಳಿವೆ. ಅದನ್ನು ತೊಡೆದು ಹಾಕಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಆ ಮೂಲಕ ರಾಜಕಾರಣಕ್ಕೆ ಹೊಸ ಅರ್ಥ ನೀಡಬೇಕು.

(ಮೇಲಿನ ಬರಹದಲ್ಲಿನ ಅಭಿಪ್ರಾಯಗಳು ಲೇಖಕರದ್ದಾಗಿರುತ್ತವೆ. ಅತಿಥಿ ಲೇಖಕರ ಅನಿಸಿಕೆಗಳು ನಾನುಗೌರಿ.ಕಾಂ ವೆಬ್‌ಪತ್ರಿಕೆಯ ಸಂಪಾದಕೀಯ ತಂಡದ ಅಭಿಪ್ರಾಯಗಳೇ ಆಗಿರಬೇಕೆಂದೇನಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....