Homeಕರ್ನಾಟಕದಲಿತರೆಂದರೆ ತಕ್ಕಡಿಯ ಕಲ್ಲುಗಳಲ್ಲ. ಸಮರ್ಥ ನಾಯಕರು ಎಂಬುದನ್ನು ಮರೆಯಬೇಡಿ

ದಲಿತರೆಂದರೆ ತಕ್ಕಡಿಯ ಕಲ್ಲುಗಳಲ್ಲ. ಸಮರ್ಥ ನಾಯಕರು ಎಂಬುದನ್ನು ಮರೆಯಬೇಡಿ

"ದಲಿತ ಎಂಬ ಕಾರಣಕ್ಕೆ ನನ್ನನ್ನು ಮುಖ್ಯಮಂತ್ರಿ ಎಂದರೆ ನಾನು ಒಪ್ಪುವುದಿಲ್ಲ. ನನ್ನ ಸಾಮರ್ಥ್ಯದ ಕಾರಣಕ್ಕೆ ಮುಖ್ಯಮಂತ್ರಿ ಮಾಡಿದರೆ ಮಾತ್ರ ಒಪ್ಪುತ್ತೇನೆ" ಅಂದಿದ್ದರು ಖರ್ಗೆಯವರು.

- Advertisement -
- Advertisement -

| ಅಭಿಷೇಕ್ ಮೌರ್ಯ |

ರಾಜಕೀಯದಲ್ಲಿ ಜಾತಿ ಎಂಬುದು ಮುಖ್ಯ ದಾಳವಾಗಿ ಉರುಳಲ್ಪಡುತ್ತಿದೆ. ಇತ್ತೀಚೆಗಂತೂ ಗ್ರಾಮ ಪಂಚಾಯ್ತಿ ಚುನಾವಣೆಯ ಟಿಕೆಟ್‌, ಅಧ್ಯಕ್ಷ ಉಪಾಧ್ಯಕ್ಷನ ಸ್ಥಾನದಿಂದ ಹಿಡಿದು ಲೋಕಸಭೆಯ ಕೇಂದ್ರ ಸಚಿವರ ಸ್ಥಾನದವರೆಗೂ ಜಾತಿಯೇ ಮುಖ್ಯವಾಗಿದೆ.  ತಾನು ಮೇಲ್ವರ್ಗದವನಾಗಿದ್ದು, ಸಮಾಜದ ಮುಖ್ಯವಾಹಿನಿಯಲ್ಲಿ  ಹತ್ಯೆ, ಹಲ್ಲೆಗಳಂತಹ ಹೇಯ ಕೃತ್ಯಗಳನ್ನು ಮಾಡಿದರು ಸರಿ, ರಾಜಕೀಯದಿಂದ ಎಲ್ಲವನ್ನೂ ಮುಚ್ಚಿಹಾಕುವುದರೊಂದಿಗೆ ಉನ್ನತ ಹುದ್ದೆಗೆ ಏರಬಹುದು. ಕೊಲೆ ಹತ್ಯೆಗಳಂತಹ ಹಿಂಸಾತ್ಮಕ ಪ್ರಕರಣಗಳಲ್ಲಿ ಆರೋಪಿ ಅಪರಾಧಿಗಳಾಗಿದ್ದರು, ಗೃಹ ಸಚಿವ, ರಕ್ಷಣಾ ಸ‍ಚಿವರಂತಹ ಮುಖ್ಯ ಹುದ್ದೆಗಳನ್ನೇ ಪಡೆಯಬಹುದು. ಒಂದು ಕಡೆ ಇದು ಸವರ್ಣೀಯ ಅಥವಾ ಮೇಲ್ವರ್ಗದ ಕತೆಯಾದರೆ ಇಂದಿನ ರಾಜಕೀಯದಲ್ಲಿ ದಲಿತ ನಾಯಕರುಗಳು ಪರಿಸ್ಥಿತಿ ಮಾತ್ರ ಸುಧಾರಿಸುತ್ತಿಲ್ಲ.

ಅಂದಹಾಗೆ ರಾಜ್ಯರಾಜಕಾರಣದಲ್ಲಿ ಚದುರಂಗದಾಟ ಭರ್ಜರಿಯಾಗಿಯೇ ಸಾಗುತ್ತಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೆಡವಿ ನೂತನ ಸರ್ಕಾರ ರಚಿಸಲು ಬಿಜೆಪಿ ಪ್ರಯತ್ನಿಸುತ್ತಿದ್ದರೆ, ಅತ್ತ ಕೈ-ತೆನೆ ನಾಯಕರು ತಮ್ಮ ಖುರ್ಚಿಗಳನ್ನು ಭದ್ರ ಪಡಿಸಿಕೊಳ್ಳುವಲ್ಲಿ ಸರ್ಕಸ್ ಮಾಡುತ್ತಿದ್ದಾರೆ. ಇವರ ನಡುವಿನ ವಾಕ್ ಸಮರಕ್ಕೆ ದಲಿತ ನಾಯಕರು ತುತ್ತಾಗುತ್ತಿದ್ದಾರೆ.

ಬಿಜೆಪಿ ಪಕ್ಷ ದಲಿತರಿಗೆ ಏನೇನು ಮಾಡದಿದ್ದರೂ, ಸಂವಿಧಾನ ಕಿತ್ತು ಹಾಕುತ್ತೇವೆಂದು ಹೇಳುತ್ತದೆ. ಆ ಪಕ್ಷದ ರಾಜ್ಯಾಧ್ಯಕ್ಷ “ತಾಕತ್ತಿದ್ದರೆ ದಲಿತರನ್ನು ಮುಖ್ಯಮಂತ್ರಿ ಮಾಡಿ” ಅಂತಾ ಊರ ತುಂಬಾ ಡಂಗೂರ ಸಾರಿಕೊಂಡು ಕೈ-ತೆನೆ ನಾಯಕರಿಗೆ ಸವಾಲಾಕಿಕೊಂಡು ಬರುತ್ತಿದ್ದಾರೆ. ನಾನೇನು ಕಡಿಮೆ ಇಲ್ಲ ಎನ್ನುವಂತೆ ಮೈತ್ರಿ ಪಕ್ಷದ ಸಮನ್ವಯ ಸಮಿತಿಯ ಅಧ್ಯಕ್ಷರಾದ ಸಿದ್ದರಾಮಯ್ಯನವರು “ತಾಕತ್ತಿದ್ದರೆ ದಲಿತರನ್ನು ಕೇಂದ್ರ ಸಚಿವರನ್ನಾಗಿ ಮಾಡಿ” ಎಂದು ಪ್ರತಿ ಸವಾಲ್ ಹಾಕಿತ್ತಿದ್ದಾರೆ. ಈ ಬೆಳವಣಿಗೆಗಳನ್ನು ನೋಡಿದ್ರೆ ದಲಿತನಾಯಕರೇನು ಇವರ ರಾಜಕೀಯ ಚದುರಂಗಕ್ಕೆ ಅನಿವಾರ್ಯವಾಗಿರುವ ಕಾಲಾಳುಗಳ ಅಥವಾ ದಾಳವ ಅನ್ನೋ ಪ್ರಶ್ನೆ ಕಾಡತೊಡಗಿದೆ.

ಅಂದರೆ ದಲಿತರು ಮೌಲ್ಯಮಾಪನಕ್ಕೆ ಒಳಪಡುವ ತಕ್ಕಡಿಯ ತೂಕದ ಕಲ್ಲುಗಳ ಅಂತ. ಯಾವ ಕಡೆ ಬಾಗುತ್ತೆ ಅದರ ವಿರುದ್ದ ಕಲ್ಲೆಸೆಯಲು ಇತರರು ಸಿದ್ದರಿರುವುದು ದೊಡ್ಡ ದುರಂತವಾಗಿದೆ. ಮಲ್ಲಿಕಾರ್ಜುನ ಖರ್ಗೆಯವರನ್ನು ದಲಿತ ಮುಖ್ಯಮಂತ್ರಿ ಮಾಡಬೇಕೆಂಬ ಕೂಗ ಜೋರಾಗಿದ್ದಾಗ ಖರ್ಗೆಯವರು ಹೇಳಿದ್ದು ಮಾತು ಬಹಳ ಮಹತ್ವದ್ದು. “ದಲಿತ ಎಂಬ ಕಾರಣಕ್ಕೆ ನನ್ನನ್ನು ಮುಖ್ಯಮಂತ್ರಿ ಎಂದರೆ ನಾನು ಒಪ್ಪುವುದಿಲ್ಲ. ನನ್ನ ಸಾಮರ್ಥ್ಯದ ಕಾರಣಕ್ಕೆ ಮುಖ್ಯಮಂತ್ರಿ ಮಾಡಿದರೆ ಮಾತ್ರ ಒಪ್ಪುತ್ತೇನೆ” ಅಂದಿದ್ದರು. ಈ ಮಾತು ಕೇಳಿದ ಮೇಲೂ ಎಲ್ಲಾ ಪಕ್ಷಗಳ ಮುಖಂಡರು ತಮ್ಮ ಬಾಯಿಯನ್ನು ಮುಚ್ಚಿಕೊಂಡಿಲ್ಲ.

ಇನ್ನೂ ಸಂವಿಧಾನದಡಿಯಲ್ಲಿ ಚುನಾಯಿತರಾಗಿರುವ ಮಾನ್ಯ ದಲಿತ ಶಾಸಕ, ಸಂಸದರೆ ಎಚ್ಚೆತ್ತುಕೊಂಡು ಒಂದಾಗಬೇಕಿದ್ದು, ರಾಜಕೀಯಕ್ಕಾಗಿ ದಲಿತರ ಹೆಸರೇಳುತ್ತಿರುವ ನಾಯಕರಿಕೆ ಪಾಠ ಕಲಿಸಬೇಕಿದೆ. ಅವರ ರಾಜಕೀಯಕ್ಕೆ ದಾಳಗಳಾಗುವ ಬದಲಿಗೆ ತಮ್ಮ ಸಮುದಾಯದ ಪರವಾಗಿ ಸದನಗಳಲ್ಲಿ ಪ್ರಶ್ನಿಸಿ ತಮ್ಮ ಹಕ್ಕುಗಳನ್ನು ಕೇಳಬೇಕಿದೆ. ನಿಮಗೆ ಮತ ನೀಡಿದ ಮತದಾರರ ಸಮಸ್ಯೆಗಳನ್ನು ಆಲಿಸಿ, ಅವರ ಕಷ್ಟಗಳಿಗೆ ಸ್ಪಂದಿಸಬೇಕಿದೆ. ನಿಮ್ಮ ಸಾಮರ್ಥ್ಯವನ್ನು ನಿಮ್ಮ ಕ್ಷೇತ್ರಗಳಲ್ಲಿ ಪ್ರಾಮಾಣಿಕವಾಗಿ ವಿನಿಯೋಗಿಸಬೇಕು. ಆ ಮೂಲಕ ದೇಶದ ಎಲ್ಲಾ ಹುದ್ದೆಗಳನ್ನು ನಿರ್ವಹಿಸಲು ನಾವು ಸಿದ್ಧ ಎನ್ನುವುದನ್ನು ತೋರಿಸಬೇಕು.

ಇನ್ನು ಮೂರು ಪಕ್ಷದವರು ಸಹ ಸಹಜವಾಗಿ ದಲಿತ ವ್ಯಕ್ತಿಗಳು ಮುಖ್ಯಮಂತ್ರಿಗಳಾಗದಂತೆ ತಡೆಯಲು ಸೋಲಿಸುವ ಗೆಲ್ಲಿಸುವ ಆಟವನ್ನು ಇದುವರೆಗೂ ಆಡಿದ್ದಾರೆ. ಇನ್ನು ಮುಂದೆ ಆ ಆಟ ನಡೆಯದಂತೆ ಎಚ್ಚರವಹಿಸಬೇಕು.

ಜೊತೆಗೆ ನೀವಿರುವ ಪಕ್ಷಗಳಲ್ಲಿ ಪ್ರಜಾತಂತ್ರ, ಸಂವಿಧಾನದ ಆಶಯಗಳು ಜಾರಿಯಾಗುತ್ತಿಲ್ಲ. ಆ ಬಗ್ಗೆ ನೀವು ಪ್ರಶ್ನಿಸಿ ಸರಿಪಡಿಸಬೇಕು. ದೇಶದ ಎಲ್ಲೆ ಜನರ ಮೇಲಿನ ದೌರ್ಜನ್ಯ ನಡೆದರೆ ನೀವು ಅದನ್ನು ಪ್ರತಿಭಟಿಸಿ ದನಿ ಎತ್ತಬೇಕು. ನಾನು ಆ ಪಕ್ಷ, ನಾನು ಈ ಪಕ್ಷ ಹಾಗಾಗಿ ಆ ಘಟನೆ ಬಗ್ಗೆ ಮಾತಾಡುವುದಿಲ್ಲ ಎಂಬುದನ್ನು ಬಿಡಬೇಕು. ತಪ್ಪು ತಮ್ಮದೇ ಪಕ್ಷ ಮಾಡಿದರೂ ಸಹ ಅದನ್ನು ಖಂಡಿಸಿ, ಮುಂದೆ ಆ ರೀತಿಯ ತಪ್ಪುಗಳಾಗದಂತೆ ಎಚ್ಚರಿಕೆ ವಹಿಸಬೇಕಿದೆ.

ಜೊತೆಗೆ ದಲಿತ ಸಮುದಾಯದಿಂದಲೂ ಇದುವರೆಗೆ ಬಹಳಷ್ಟು ಜನ ದೊಡ್ಡ ದೊಡ್ಡ ಹುದ್ದೆಗಳನ್ನು ಪಡೆದಿದ್ದಾರೆ. ಆದರೆ ಅವರು ಅವರ ಸಮುದಾಯಕ್ಕೆ ಹೆಚ್ಚೆನೂ ಮಾಡಿಲ್ಲ, ಮೂಲಭೂತ ಬದಲಾವಣೆ ಬಂದಿಲ್ಲ ಎಂಬ ಆರೋಪಗಳಿವೆ. ಅದನ್ನು ತೊಡೆದು ಹಾಕಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಆ ಮೂಲಕ ರಾಜಕಾರಣಕ್ಕೆ ಹೊಸ ಅರ್ಥ ನೀಡಬೇಕು.

(ಮೇಲಿನ ಬರಹದಲ್ಲಿನ ಅಭಿಪ್ರಾಯಗಳು ಲೇಖಕರದ್ದಾಗಿರುತ್ತವೆ. ಅತಿಥಿ ಲೇಖಕರ ಅನಿಸಿಕೆಗಳು ನಾನುಗೌರಿ.ಕಾಂ ವೆಬ್‌ಪತ್ರಿಕೆಯ ಸಂಪಾದಕೀಯ ತಂಡದ ಅಭಿಪ್ರಾಯಗಳೇ ಆಗಿರಬೇಕೆಂದೇನಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...