Homeಕರ್ನಾಟಕದಲಿತರೆಂದರೆ ತಕ್ಕಡಿಯ ಕಲ್ಲುಗಳಲ್ಲ. ಸಮರ್ಥ ನಾಯಕರು ಎಂಬುದನ್ನು ಮರೆಯಬೇಡಿ

ದಲಿತರೆಂದರೆ ತಕ್ಕಡಿಯ ಕಲ್ಲುಗಳಲ್ಲ. ಸಮರ್ಥ ನಾಯಕರು ಎಂಬುದನ್ನು ಮರೆಯಬೇಡಿ

"ದಲಿತ ಎಂಬ ಕಾರಣಕ್ಕೆ ನನ್ನನ್ನು ಮುಖ್ಯಮಂತ್ರಿ ಎಂದರೆ ನಾನು ಒಪ್ಪುವುದಿಲ್ಲ. ನನ್ನ ಸಾಮರ್ಥ್ಯದ ಕಾರಣಕ್ಕೆ ಮುಖ್ಯಮಂತ್ರಿ ಮಾಡಿದರೆ ಮಾತ್ರ ಒಪ್ಪುತ್ತೇನೆ" ಅಂದಿದ್ದರು ಖರ್ಗೆಯವರು.

- Advertisement -
- Advertisement -

| ಅಭಿಷೇಕ್ ಮೌರ್ಯ |

ರಾಜಕೀಯದಲ್ಲಿ ಜಾತಿ ಎಂಬುದು ಮುಖ್ಯ ದಾಳವಾಗಿ ಉರುಳಲ್ಪಡುತ್ತಿದೆ. ಇತ್ತೀಚೆಗಂತೂ ಗ್ರಾಮ ಪಂಚಾಯ್ತಿ ಚುನಾವಣೆಯ ಟಿಕೆಟ್‌, ಅಧ್ಯಕ್ಷ ಉಪಾಧ್ಯಕ್ಷನ ಸ್ಥಾನದಿಂದ ಹಿಡಿದು ಲೋಕಸಭೆಯ ಕೇಂದ್ರ ಸಚಿವರ ಸ್ಥಾನದವರೆಗೂ ಜಾತಿಯೇ ಮುಖ್ಯವಾಗಿದೆ.  ತಾನು ಮೇಲ್ವರ್ಗದವನಾಗಿದ್ದು, ಸಮಾಜದ ಮುಖ್ಯವಾಹಿನಿಯಲ್ಲಿ  ಹತ್ಯೆ, ಹಲ್ಲೆಗಳಂತಹ ಹೇಯ ಕೃತ್ಯಗಳನ್ನು ಮಾಡಿದರು ಸರಿ, ರಾಜಕೀಯದಿಂದ ಎಲ್ಲವನ್ನೂ ಮುಚ್ಚಿಹಾಕುವುದರೊಂದಿಗೆ ಉನ್ನತ ಹುದ್ದೆಗೆ ಏರಬಹುದು. ಕೊಲೆ ಹತ್ಯೆಗಳಂತಹ ಹಿಂಸಾತ್ಮಕ ಪ್ರಕರಣಗಳಲ್ಲಿ ಆರೋಪಿ ಅಪರಾಧಿಗಳಾಗಿದ್ದರು, ಗೃಹ ಸಚಿವ, ರಕ್ಷಣಾ ಸ‍ಚಿವರಂತಹ ಮುಖ್ಯ ಹುದ್ದೆಗಳನ್ನೇ ಪಡೆಯಬಹುದು. ಒಂದು ಕಡೆ ಇದು ಸವರ್ಣೀಯ ಅಥವಾ ಮೇಲ್ವರ್ಗದ ಕತೆಯಾದರೆ ಇಂದಿನ ರಾಜಕೀಯದಲ್ಲಿ ದಲಿತ ನಾಯಕರುಗಳು ಪರಿಸ್ಥಿತಿ ಮಾತ್ರ ಸುಧಾರಿಸುತ್ತಿಲ್ಲ.

ಅಂದಹಾಗೆ ರಾಜ್ಯರಾಜಕಾರಣದಲ್ಲಿ ಚದುರಂಗದಾಟ ಭರ್ಜರಿಯಾಗಿಯೇ ಸಾಗುತ್ತಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೆಡವಿ ನೂತನ ಸರ್ಕಾರ ರಚಿಸಲು ಬಿಜೆಪಿ ಪ್ರಯತ್ನಿಸುತ್ತಿದ್ದರೆ, ಅತ್ತ ಕೈ-ತೆನೆ ನಾಯಕರು ತಮ್ಮ ಖುರ್ಚಿಗಳನ್ನು ಭದ್ರ ಪಡಿಸಿಕೊಳ್ಳುವಲ್ಲಿ ಸರ್ಕಸ್ ಮಾಡುತ್ತಿದ್ದಾರೆ. ಇವರ ನಡುವಿನ ವಾಕ್ ಸಮರಕ್ಕೆ ದಲಿತ ನಾಯಕರು ತುತ್ತಾಗುತ್ತಿದ್ದಾರೆ.

ಬಿಜೆಪಿ ಪಕ್ಷ ದಲಿತರಿಗೆ ಏನೇನು ಮಾಡದಿದ್ದರೂ, ಸಂವಿಧಾನ ಕಿತ್ತು ಹಾಕುತ್ತೇವೆಂದು ಹೇಳುತ್ತದೆ. ಆ ಪಕ್ಷದ ರಾಜ್ಯಾಧ್ಯಕ್ಷ “ತಾಕತ್ತಿದ್ದರೆ ದಲಿತರನ್ನು ಮುಖ್ಯಮಂತ್ರಿ ಮಾಡಿ” ಅಂತಾ ಊರ ತುಂಬಾ ಡಂಗೂರ ಸಾರಿಕೊಂಡು ಕೈ-ತೆನೆ ನಾಯಕರಿಗೆ ಸವಾಲಾಕಿಕೊಂಡು ಬರುತ್ತಿದ್ದಾರೆ. ನಾನೇನು ಕಡಿಮೆ ಇಲ್ಲ ಎನ್ನುವಂತೆ ಮೈತ್ರಿ ಪಕ್ಷದ ಸಮನ್ವಯ ಸಮಿತಿಯ ಅಧ್ಯಕ್ಷರಾದ ಸಿದ್ದರಾಮಯ್ಯನವರು “ತಾಕತ್ತಿದ್ದರೆ ದಲಿತರನ್ನು ಕೇಂದ್ರ ಸಚಿವರನ್ನಾಗಿ ಮಾಡಿ” ಎಂದು ಪ್ರತಿ ಸವಾಲ್ ಹಾಕಿತ್ತಿದ್ದಾರೆ. ಈ ಬೆಳವಣಿಗೆಗಳನ್ನು ನೋಡಿದ್ರೆ ದಲಿತನಾಯಕರೇನು ಇವರ ರಾಜಕೀಯ ಚದುರಂಗಕ್ಕೆ ಅನಿವಾರ್ಯವಾಗಿರುವ ಕಾಲಾಳುಗಳ ಅಥವಾ ದಾಳವ ಅನ್ನೋ ಪ್ರಶ್ನೆ ಕಾಡತೊಡಗಿದೆ.

ಅಂದರೆ ದಲಿತರು ಮೌಲ್ಯಮಾಪನಕ್ಕೆ ಒಳಪಡುವ ತಕ್ಕಡಿಯ ತೂಕದ ಕಲ್ಲುಗಳ ಅಂತ. ಯಾವ ಕಡೆ ಬಾಗುತ್ತೆ ಅದರ ವಿರುದ್ದ ಕಲ್ಲೆಸೆಯಲು ಇತರರು ಸಿದ್ದರಿರುವುದು ದೊಡ್ಡ ದುರಂತವಾಗಿದೆ. ಮಲ್ಲಿಕಾರ್ಜುನ ಖರ್ಗೆಯವರನ್ನು ದಲಿತ ಮುಖ್ಯಮಂತ್ರಿ ಮಾಡಬೇಕೆಂಬ ಕೂಗ ಜೋರಾಗಿದ್ದಾಗ ಖರ್ಗೆಯವರು ಹೇಳಿದ್ದು ಮಾತು ಬಹಳ ಮಹತ್ವದ್ದು. “ದಲಿತ ಎಂಬ ಕಾರಣಕ್ಕೆ ನನ್ನನ್ನು ಮುಖ್ಯಮಂತ್ರಿ ಎಂದರೆ ನಾನು ಒಪ್ಪುವುದಿಲ್ಲ. ನನ್ನ ಸಾಮರ್ಥ್ಯದ ಕಾರಣಕ್ಕೆ ಮುಖ್ಯಮಂತ್ರಿ ಮಾಡಿದರೆ ಮಾತ್ರ ಒಪ್ಪುತ್ತೇನೆ” ಅಂದಿದ್ದರು. ಈ ಮಾತು ಕೇಳಿದ ಮೇಲೂ ಎಲ್ಲಾ ಪಕ್ಷಗಳ ಮುಖಂಡರು ತಮ್ಮ ಬಾಯಿಯನ್ನು ಮುಚ್ಚಿಕೊಂಡಿಲ್ಲ.

ಇನ್ನೂ ಸಂವಿಧಾನದಡಿಯಲ್ಲಿ ಚುನಾಯಿತರಾಗಿರುವ ಮಾನ್ಯ ದಲಿತ ಶಾಸಕ, ಸಂಸದರೆ ಎಚ್ಚೆತ್ತುಕೊಂಡು ಒಂದಾಗಬೇಕಿದ್ದು, ರಾಜಕೀಯಕ್ಕಾಗಿ ದಲಿತರ ಹೆಸರೇಳುತ್ತಿರುವ ನಾಯಕರಿಕೆ ಪಾಠ ಕಲಿಸಬೇಕಿದೆ. ಅವರ ರಾಜಕೀಯಕ್ಕೆ ದಾಳಗಳಾಗುವ ಬದಲಿಗೆ ತಮ್ಮ ಸಮುದಾಯದ ಪರವಾಗಿ ಸದನಗಳಲ್ಲಿ ಪ್ರಶ್ನಿಸಿ ತಮ್ಮ ಹಕ್ಕುಗಳನ್ನು ಕೇಳಬೇಕಿದೆ. ನಿಮಗೆ ಮತ ನೀಡಿದ ಮತದಾರರ ಸಮಸ್ಯೆಗಳನ್ನು ಆಲಿಸಿ, ಅವರ ಕಷ್ಟಗಳಿಗೆ ಸ್ಪಂದಿಸಬೇಕಿದೆ. ನಿಮ್ಮ ಸಾಮರ್ಥ್ಯವನ್ನು ನಿಮ್ಮ ಕ್ಷೇತ್ರಗಳಲ್ಲಿ ಪ್ರಾಮಾಣಿಕವಾಗಿ ವಿನಿಯೋಗಿಸಬೇಕು. ಆ ಮೂಲಕ ದೇಶದ ಎಲ್ಲಾ ಹುದ್ದೆಗಳನ್ನು ನಿರ್ವಹಿಸಲು ನಾವು ಸಿದ್ಧ ಎನ್ನುವುದನ್ನು ತೋರಿಸಬೇಕು.

ಇನ್ನು ಮೂರು ಪಕ್ಷದವರು ಸಹ ಸಹಜವಾಗಿ ದಲಿತ ವ್ಯಕ್ತಿಗಳು ಮುಖ್ಯಮಂತ್ರಿಗಳಾಗದಂತೆ ತಡೆಯಲು ಸೋಲಿಸುವ ಗೆಲ್ಲಿಸುವ ಆಟವನ್ನು ಇದುವರೆಗೂ ಆಡಿದ್ದಾರೆ. ಇನ್ನು ಮುಂದೆ ಆ ಆಟ ನಡೆಯದಂತೆ ಎಚ್ಚರವಹಿಸಬೇಕು.

ಜೊತೆಗೆ ನೀವಿರುವ ಪಕ್ಷಗಳಲ್ಲಿ ಪ್ರಜಾತಂತ್ರ, ಸಂವಿಧಾನದ ಆಶಯಗಳು ಜಾರಿಯಾಗುತ್ತಿಲ್ಲ. ಆ ಬಗ್ಗೆ ನೀವು ಪ್ರಶ್ನಿಸಿ ಸರಿಪಡಿಸಬೇಕು. ದೇಶದ ಎಲ್ಲೆ ಜನರ ಮೇಲಿನ ದೌರ್ಜನ್ಯ ನಡೆದರೆ ನೀವು ಅದನ್ನು ಪ್ರತಿಭಟಿಸಿ ದನಿ ಎತ್ತಬೇಕು. ನಾನು ಆ ಪಕ್ಷ, ನಾನು ಈ ಪಕ್ಷ ಹಾಗಾಗಿ ಆ ಘಟನೆ ಬಗ್ಗೆ ಮಾತಾಡುವುದಿಲ್ಲ ಎಂಬುದನ್ನು ಬಿಡಬೇಕು. ತಪ್ಪು ತಮ್ಮದೇ ಪಕ್ಷ ಮಾಡಿದರೂ ಸಹ ಅದನ್ನು ಖಂಡಿಸಿ, ಮುಂದೆ ಆ ರೀತಿಯ ತಪ್ಪುಗಳಾಗದಂತೆ ಎಚ್ಚರಿಕೆ ವಹಿಸಬೇಕಿದೆ.

ಜೊತೆಗೆ ದಲಿತ ಸಮುದಾಯದಿಂದಲೂ ಇದುವರೆಗೆ ಬಹಳಷ್ಟು ಜನ ದೊಡ್ಡ ದೊಡ್ಡ ಹುದ್ದೆಗಳನ್ನು ಪಡೆದಿದ್ದಾರೆ. ಆದರೆ ಅವರು ಅವರ ಸಮುದಾಯಕ್ಕೆ ಹೆಚ್ಚೆನೂ ಮಾಡಿಲ್ಲ, ಮೂಲಭೂತ ಬದಲಾವಣೆ ಬಂದಿಲ್ಲ ಎಂಬ ಆರೋಪಗಳಿವೆ. ಅದನ್ನು ತೊಡೆದು ಹಾಕಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಆ ಮೂಲಕ ರಾಜಕಾರಣಕ್ಕೆ ಹೊಸ ಅರ್ಥ ನೀಡಬೇಕು.

(ಮೇಲಿನ ಬರಹದಲ್ಲಿನ ಅಭಿಪ್ರಾಯಗಳು ಲೇಖಕರದ್ದಾಗಿರುತ್ತವೆ. ಅತಿಥಿ ಲೇಖಕರ ಅನಿಸಿಕೆಗಳು ನಾನುಗೌರಿ.ಕಾಂ ವೆಬ್‌ಪತ್ರಿಕೆಯ ಸಂಪಾದಕೀಯ ತಂಡದ ಅಭಿಪ್ರಾಯಗಳೇ ಆಗಿರಬೇಕೆಂದೇನಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...