Homeಮುಖಪುಟದಲಿತ ಮಹಾಸಂಘದ ಅಧ್ಯಕ್ಷನ ಇರಿದು ಹತ್ಯೆ : ಹುಟ್ಟು ಹಬ್ಬ ಆಚರಣೆ ವೇಳೆಯೇ ಘಟನೆ

ದಲಿತ ಮಹಾಸಂಘದ ಅಧ್ಯಕ್ಷನ ಇರಿದು ಹತ್ಯೆ : ಹುಟ್ಟು ಹಬ್ಬ ಆಚರಣೆ ವೇಳೆಯೇ ಘಟನೆ

- Advertisement -
- Advertisement -

ಮಹಾರಾಷ್ಟ್ರ ದಲಿತ ಮಹಾಸಂಘದ ಅಧ್ಯಕ್ಷ ಉತ್ತಮ್ ಮೋಹಿತೆ (38) ಅವರನ್ನು ಮಂಗಳವಾರ ಸಂಜೆ (ನ.11) ಸಾಂಗ್ಲಿಯಲ್ಲಿ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದ ಸಂದರ್ಭದಲ್ಲೇ ಎಂಟು ಜನರ ತಂಡ ಇರಿದು ಹತ್ಯೆ ಮಾಡಿದೆ. ಹಳೆಯ ದ್ವೇಷದ ಹಿನ್ನೆಲೆ ಕೃತ್ಯವೆಸಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳಲ್ಲಿ ಒಬ್ಬನಾದ ಶಾರುಖ್ ರಫೀಕ್ ಶೇಖ್ (26) ಎಂಬಾತ ಗಲಾಟೆಯಲ್ಲಿ ತೀವ್ರವಾಗಿ ಗಾಯಗೊಂಡು ಬುಧವಾರ (ನ.12) ಬೆಳಿಗ್ಗೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಮೋಹಿತೆ ಅವರ ಹುಟ್ಟು ಹಬ್ಬ ಕಾರ್ಯಕ್ರಮ ಮುಗಿದು ಅತಿಥಿಗಳು ನಿರ್ಗಮಿಸುತ್ತಿದ್ದರು. ಈ ವೇಳೆ ಚಾಕು, ಕಬ್ಬಿಣದ ರಾಡ್ ಮತ್ತು ದೊಣ್ಣೆಗಳೊಂದಿಗೆ ಶಸ್ತ್ರ ಸಜ್ಜಿತವಾಗಿ ಆಗಮಿಸಿದ ಪುರುಷರ ಗುಂಪು ದಾಳಿ ಪ್ರಾರಂಭಿಸಿದೆ. ತನ್ನ ಜೀವಕ್ಕೆ ಅಪಾಯವಿದೆ ಎಂದು ಅರಿತ ಮೋಹಿತೆ, ರಕ್ಷಣೆಗಾಗಿ ಮನೆಯೊಳಗೆ ಓಡಿ ಹೋಗಿದ್ದರು. ಅಲ್ಲಿಗೆ ನುಗ್ಗಿದ ತಂಡ ಮೋಹಿತೆ ಅವರ ಹೊಟ್ಟೆ ಮತ್ತು ಎದೆಗೆ ಹಲವು ಬಾರಿ ಇರಿದಿದೆ. ತಲೆ ಮತ್ತು ತೋಳುಗಳಿಗೆ ಕಬ್ಬಿಣದ ರಾಡ್‌ಗಳು ಮತ್ತು ದೊಣ್ಣೆಗಳಿಂದ ಹೊಡೆದಿದ್ದಾರೆ ಎಂದು ವರದಿಗಳು ಹೇಳಿವೆ.

ಈ ಘರ್ಷಣೆಯ ಸಮಯದಲ್ಲಿ, ದಾಳಿಕೋರರಲ್ಲಿ ಒಬ್ಬನಾದ ಶೇಖ್ ಎಂಬಾತನಿಗೆ ತೊಡೆಯ ಮೇಲೆ ತೀವ್ರವಾದ ಇರಿತದ ಗಾಯವಾಗಿತ್ತು. ಇದು ಆಕಸ್ಮಿಕವಾಗಿ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಮೋಹಿತೆ ಅವರನ್ನು ಸೋದರಳಿಯ ಸಾಂಗ್ಲಿ ಸಿವಿಲ್ ಆಸ್ಪತ್ರೆಗೆ ಕರೆದೊಯ್ದಿದ್ದರು. ಅಲ್ಲಿ ವೈದ್ಯರು ಅವರು ಆಗಲೇ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.

ಈ ನಡುವೆ ದಾಳಿಕೋರರು ಕೂಡ ತೀವ್ರವಾಗಿ ಗಾಯಗೊಂಡಿದ್ದ ಶೇಖ್ ಅವರನ್ನು ಆಸ್ಪತ್ರೆಗೆ ಸಾಗಿಸಿದ್ದರು. ಆದರೆ, ಬುಧವಾರ ಬೆಳಿಗ್ಗೆ ಆತ ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಹುಟ್ಟು ಹಬ್ಬ ಆಚರಣೆಯ ಸಮಯದಲ್ಲಿ ಮೋಹಿತೆ ಮತ್ತು ಆರೋಪಿಗಳಲ್ಲಿ ಒಬ್ಬನಾದ ಗಣೇಶ್ ಮೋರೆ ನಡುವೆ ವಾಗ್ವಾದ ನಡೆದಿತ್ತು. ಸ್ಥಳದಿಂದ ಹೊರಡುವ ಮೊದಲು, “ನಿನ್ನನ್ನು ಬಿಡುವುದಿಲ್ಲ” ಎಂದು ಗಣೇಶ್ ಮೋಹಿತೆಗೆ ಬೆದರಿಕೆ ಹಾಕಿದ್ದ. ಈ ಬೆನ್ನಲ್ಲೇ ದಾಳಿ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮೋಹಿತೆ ಅವರ ಪತ್ನಿ ಜ್ಯೋತಿ ನೀಡಿದ ದೂರಿನ ಆಧಾರದ ಮೇಲೆ, ಸಾಂಗ್ಲಿಯ ಇಂದಿರಾನಗರ ಪ್ರದೇಶದ ನಿವಾಸಿಗಳಾದ ಗಣೇಶ್ ಮೋರೆ, ಸತೀಶ್ ಲೋಖಂಡೆ, ಶಾರುಖ್ ಶೇಖ್ (ಮೃತ), ಬನ್ಯಾ ಅಲಿಯಾಸ್ ಯಶ್ ಲೋಂಧೆ, ಅಜಯ್ ಘಾಡ್ಗೆ, ಜಿತೇಂದ್ರ ಲೋಂಧೆ, ಯೋಗೇಶ್ ಶಿಂಧೆ ಮತ್ತು ಸಮೀರ್ ಧೋಲೆ ಎಂಬ ಎಂಟು ಜನರ ವಿರುದ್ಧ ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದಾರೆ.

ಮಹಿಳಾ ಸಿಬ್ಬಂದಿಯ ‘ಮುಟ್ಟು ಸಾಬೀತಿಗೆ ಫೋಟೋ’ ಕೇಳಿದ ಪ್ರಕರಣ : ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಎಸ್‌ಸಿಬಿಎ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...