Homeಮುಖಪುಟದಲಿತ ಯುವಕನ ಮೇಲೆ ಹಲ್ಲೆ ನಡೆಸಿ ಮೈಮೇಲೆ ಮೂತ್ರ ವಿಸರ್ಜನೆ: 6 ಮಂದಿ ದುಷ್ಕರ್ಮಿಗಳ ಬಂಧನ

ದಲಿತ ಯುವಕನ ಮೇಲೆ ಹಲ್ಲೆ ನಡೆಸಿ ಮೈಮೇಲೆ ಮೂತ್ರ ವಿಸರ್ಜನೆ: 6 ಮಂದಿ ದುಷ್ಕರ್ಮಿಗಳ ಬಂಧನ

- Advertisement -
- Advertisement -

ದಲಿತ ಯುವಕನ ಮೇಲೆ ಹಲ್ಲೆ ನಡೆಸಿ ಮೈಮೇಲೆ ಮೂತ್ರ ವಿಸರ್ಜನೆ ಮಾಡಿರುವ ಆಘಾತಕಾರಿ ಘಟನೆ ಆಂಧ್ರಪ್ರದೇಶದ ಎನ್‌ಟಿಆರ್ ಜಿಲ್ಲೆಯಲ್ಲಿ ನಡೆದಿದೆ.

ಹಲ್ಲೆಗೊಳಗಾದ ವ್ಯಕ್ತಿಯನ್ನು ಶ್ಯಾಮ್ ಕುಮಾರ್ ಎಂದು ಗುರುತಿಸಲಾಗಿದೆ. ಘಟನೆಗೆ ಸಂಬಂಧಿಸಿ  ಪ್ರಕರಣ ದಾಖಲಿಸಿಕೊಂಡ ಪೊಲೀಸರು ಎಲ್ಲಾ 6 ಆರೋಪಿಗಳನ್ನು ಬಂಧಿಸಿದ್ದಾರೆ.

ದಲಿತ ಯುವಕನನ್ನು 6 ಮಂದಿ ಆರೋಪಿಗಳು 4 ಗಂಟೆಗಳ ಕಾಲ ಥಳಿಸಿದ್ದು, ನೀರು ಕೇಳಿದಾಗ ಆರೋಪಿಗಳು  ಆತನ ಮೈಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ಬಗ್ಗೆ ವರದಿಯಾಗುತ್ತಿದ್ದಂತೆ ತೆಲುಗು ದೇಶಂ ಪಕ್ಷದ (ಟಿಡಿಪಿ) ಎಸ್‌ಸಿ ಸೆಲ್ ಘಟನೆಯನ್ನು ಖಂಡಿಸಿ ರಸ್ತೆ ತಡೆ ನಡೆಸಿ ಪ್ರತಿಭಟನೆಯನ್ನು ಮಾಡಿದೆ. ಟಿಡಿಪಿ ಎಸ್ಸಿ ಸೆಲ್ ಅಧ್ಯಕ್ಷ ಎಂಎಂಎಸ್ ರಾಜು ನೇತೃತ್ವದಲ್ಲಿ ಕಂಚಿಕಚಾರ್ಲ ಬಳಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗಿದೆ.

ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಟಿಡಿಪಿ ಎಸ್‌ಸಿ ಸೆಲ್ ಅಧ್ಯಕ್ಷ ಎಂಎಂಎಸ್ ರಾಜು, ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಆಡಳಿತದಲ್ಲಿ ದಲಿತರ ಮೇಲಿನ ಹಲ್ಲೆಗಳು ಹೆಚ್ಚಿವೆ. ರಾಜ್ಯದಲ್ಲಿ ದಲಿತರ ಮೇಲೆ  ದಾಳಿಗಳು ನಡೆಯುತ್ತಿವೆ. ಶ್ಯಾಮ್ ಕುಮಾರ್ ಎಂಬ ಬಾಲಕನ ಮೇಲೆ ಆಡಳಿತ ಪಕ್ಷದ ಬೆಂಬಲಿಗರು  ಹಲ್ಲೆ ಮಾಡಿದ್ದಾರೆ. ಅವರಿಗೆ ಸ್ಟೇಷನ್ ಜಾಮೀನು ನೀಡಲಾಯಿತು. ದಲಿತ ಯುವಕನ ಮೇಲೆ ಕ್ರೂರವಾಗಿ ಹಲ್ಲೆ ಮಾಡಿದ ನಂತರವೂ ಅವರು ಭಯವಿಲ್ಲದೆ ಹೊರಗೆ ಓಡಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಶ್ಯಾಮ್ ಅವರ ದವಡೆಗೆ ಆಪರೇಷನ್ ಮಾಡುವಂತೆ ವೈದ್ಯರು ಸಲಹೆ ನೀಡಿದ್ದು, ಅದಕ್ಕೆ ಮೂರು ದಿನ ಬೇಕು ಎಂದು ಎಂಎಂಎಸ್ ರಾಜು ಹೇಳಿದ್ದು, ದಲಿತರ ಮೇಲಿನ ಹಲ್ಲೆ ಖಂಡನಾರ್ಹವಾಗಿದೆ. ಈ ಘಟನೆಯಲ್ಲಿ ಭಾಗಿಯಾದ ಎಲ್ಲರನ್ನೂ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

ವಿಜಯವಾಡ ನಗರ ಪೊಲೀಸ್ ಕಮಿಷನರ್ ಕಾಂತಿ ರಾಣಾ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ್ದು, ಕಂಚಿಕಚೆರ್ಲಾ ಗ್ರಾಮದ ನಿವಾಸಿ ಶ್ಯಾಮ್ ಕುಮಾರ್ ಎಂಬ ದಲಿತ ಯುವಕನ ಮೇಲೆ ಆತನ ಹಳೆಯ ಸ್ನೇಹಿತ ಹರೀಶ್ ರೆಡ್ಡಿ ಮತ್ತು ಇತರ ಐವರು ಸೇರಿ ಹಲ್ಲೆ ನಡೆಸಿದ್ದಾರೆ. ಹರೀಶ್ ರೆಡ್ಡಿ ಶ್ಯಾಮ್ ಕುಮಾರ್‌ನನ್ನು ಶಿವಸಾಯಿ ಕ್ಷೇತ್ರ ಪ್ರದೇಶಕ್ಕೆ ಕರೆದು ಅಲ್ಲಿಂದ ಬಲವಂತವಾಗಿ ಕಾರಿನಲ್ಲಿ ಗುಂಟೂರಿಗೆ ಕರೆದೊಯ್ದು ಹಲ್ಲೆ ನಡೆಸಿದ್ದಾರೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಗಾಝಾದ ಅಲ್-ಮಘಾಝಿ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ ದಾಳಿ: 30ಕ್ಕೂ ಹೆಚ್ಚು ಜನರ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...