Homeದಲಿತ್ ಫೈಲ್ಸ್ತಮ್ಮ ಪರವಾಗಿ ಮತ ಹಾಕಿಲ್ಲವೆಂದು ದಲಿತ ವ್ಯಕ್ತಿಯ ಮೇಲೆ ಹಲ್ಲೆ; ಎಫ್‌ಐಆರ್‌

ತಮ್ಮ ಪರವಾಗಿ ಮತ ಹಾಕಿಲ್ಲವೆಂದು ದಲಿತ ವ್ಯಕ್ತಿಯ ಮೇಲೆ ಹಲ್ಲೆ; ಎಫ್‌ಐಆರ್‌

- Advertisement -
- Advertisement -

ಪಂಚಾಯಿತಿ ಚುನಾವಣೆಯಲ್ಲಿ ತಮ್ಮ ಪರವಾಗಿ ಮತ ಚಲಾಯಿಸಲಿಲ್ಲ ಎಂಬ ಉದ್ದೇಶದಿಂದ 28 ವರ್ಷದ ದಲಿತ ವ್ಯಕ್ತಿಯನ್ನು ಐವರು ವ್ಯಕ್ತಿಗಳು ಕಿಡ್ನಾಪ್ ಮಾಡಿ ಥಳಿಸಿರುವ ಘಟನೆ ನಡೆದಿದ್ದು ಹರ್ಯಾಣ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಬಿಲಾಸ್‌ಪುರದ ರಥಿವಾಸ್ ಗ್ರಾಮದಲ್ಲಿ ಘಟನೆ ನಡೆದಿದ್ದು, “ನನ್ನ ವಿರುದ್ಧ ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆಯನ್ನು ಆರೋಪಿಗಳು ಹಾಕಿದ್ದಾರೆ” ಎಂದು ಹಲ್ಲೆಗೊಳಗಾದ ವ್ಯಕ್ತಿ ನೋವು ನೋಡಿಕೊಂಡಿದ್ದಾರೆ.

ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ, ಇತರ ಐಪಿಸಿ ಸೆಕ್ಷನ್‌ಗಳ ಜೊತೆಗೆ ಶಸ್ತ್ರಾಸ್ತ್ರ ಕಾಯ್ದೆಯಡಿ ಸೋಮವಾರ ಎಫ್‌ಐಆರ್ ದಾಖಲಿಸಲಾಗಿದೆ. ಐವರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರನ್ನು ಬಂಧಿಸುವ ಪ್ರಯತ್ನ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತ ವ್ಯಕ್ತಿ ಭಾನುವಾರ ರಾತ್ರಿ 10.15 ರ ಸುಮಾರಿಗೆ ಗ್ರಾಮದ ಹನುಮಾನ್ ಮಂದಿರದ ಬಳಿ ಕುಳಿತಿದ್ದಾಗ ಮನೀಶ್ ಸಿಂಗ್ ಮತ್ತು ಅವರ ಸೋದರಸಂಬಂಧಿ ಇವರತ್ತ ಬಂದಿದ್ದರು.

“ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಸಂಜಿತ್ ರಾಠಿ ನನ್ನನ್ನು ಕರೆಯುತ್ತಿದ್ದಾರೆ ಎಂದು ಹೇಳಿ ಅವರ ಮನೆಗೆ ಕರೆದುಕೊಂಡು ಹೋದರು. ನನ್ನನ್ನು ಮನೆಯೊಳಗೆ ಕರೆದೊಯ್ದರು ಮತ್ತು ರಾಠಿ ಮತ್ತು ಅವರ ಸ್ನೇಹಿತರು ಲಾಠಿಗಳಿಂದ ಹೊಡೆದರು. ನಂತರ, ಅವರು ನನ್ನ ಮೇಲೆ ಜಾತಿ ನಿಂದನೆಗಳನ್ನು ಮಾಡಿದರು, ಕೊಲ್ಲುವುದಾಗಿ ಬೆದರಿಕೆ ಹಾಕಿದರು” ಎಂದು ದಲಿತ ವ್ಯಕ್ತಿ ದೂರು ನೀಡಿದ್ದಾರೆ.

“ಒಬ್ಬ ವ್ಯಕ್ತಿ ತನ್ನ ಪಿಸ್ತೂಲ್ ಅನ್ನು ನನ್ನ ತಲೆಗೆ ತೋರಿಸಿ ಕೊಲ್ಲುವುದಾಗಿ ಹೇಳಿದನು. ಚುನಾವಣೆಯಲ್ಲಿ ರಾಠಿಗೆ ಏಕೆ ಮತ ಹಾಕಲಿಲ್ಲ ಎಂದು ಪ್ರಶ್ನಿಸಿದನು. ನನ್ನನ್ನು ರಾಠಿಯ ಮನೆಯಲ್ಲಿ ಬಂಧಿಸಲಾಗಿದೆ ಎಂದು ತಿಳಿದ ನನ್ನ ಪೋಷಕರು ಸ್ಥಳಕ್ಕೆ ಬಂದರು. ನನ್ನನ್ನು ಬಿಟ್ಟುಕೊಡುವಂತೆ ಮನವಿ ಮಾಡಿದರು. ನಂತರ, ನನ್ನನ್ನು ಬಿಲಾಸ್‌ಪುರದ ಆಸ್ಪತ್ರೆಗೆ ದಾಖಲಿಸಲಾಯಿತು” ಎಂದು ಪೊಲೀಸರಿಗೆ ವಿವರಿಸಿದ್ದಾರೆ.

ಸಂತ್ರಸ್ತ ವ್ಯಕ್ತಿಯನ್ನು ಮನೆಗೆ ಕರೆತರಲಾಗಿದೆ, ಯಾವುದೇ ಬೆದರಿಕೆಗಳು ಅಥವಾ ಇನ್ನಾವುದೇ ಸಮಸ್ಯೆಗಳನ್ನು ಎದುರಿಸಿದರೆ ಮಾಹಿತಿ ನೀಡುವಂತೆ ಕುಟಂಬಕ್ಕೆ ಪೊಲೀಸರು ಸೂಚಿಸಿದ್ದಾರೆ.

ಇದನ್ನೂ ಓದಿರಿ: ಉತ್ತರಪ್ರದೇಶ: ಮಲಗುಂಡಿಗೆ ಸಿಲುಕಿ ಒಂದೇ ಕುಟುಂಬ ನಾಲ್ವರು ನಿಧನ

ಸಂತ್ರಸ್ತ ಮತ್ತು ಆರೋಪಿಗಳು ಒಂದೇ ಗ್ರಾಮದವರಾಗಿದ್ದು, ಕಳೆದ ವರ್ಷ ನಡೆದ ಚುನಾವಣೆಗೆ ಸಂಬಂಧಿಸಿದಂತೆ ಈ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ. ದಲಿತ ವ್ಯಕ್ತಿಯ ದೇಹದ ಮೇಲೆ ಲಾಠಿಗಳಿಂದ ಹೊಡೆದ ಗುರುತುಗಳಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ನನ್ನ ಜಾತಿಯ ಕಾರಣಕ್ಕಾಗಿ ಐವರು ಆರೋಪಿಗಳು ನನ್ನನ್ನು ಅಪಹರಿಸಿ, ಥಳಿಸಿ, ಜೀವ ಬೆದರಿಕೆ ಹಾಕಿದ್ದಾರೆ” ಎಂದು ದೂರುದಾರರು ಆರೋಪಿಸಿದ್ದಾರೆ. ತಮ್ಮ ಕುಟುಂಬವೂ ಅಪಾಯದಲ್ಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಐಪಿಸಿ ಸೆಕ್ಷನ್ 148, 149, 323, 342, 365, 506, ಶಸ್ತ್ರಾಸ್ತ್ರ ಕಾಯ್ದೆ 25 (1-ಬಿ ಎ) ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆ 3(1) (ಆರ್) ಅಡಿಯಲ್ಲಿ ಬಿಲಾಸ್‌ಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...