Homeದಲಿತ್ ಫೈಲ್ಸ್ತಮ್ಮ ಪರವಾಗಿ ಮತ ಹಾಕಿಲ್ಲವೆಂದು ದಲಿತ ವ್ಯಕ್ತಿಯ ಮೇಲೆ ಹಲ್ಲೆ; ಎಫ್‌ಐಆರ್‌

ತಮ್ಮ ಪರವಾಗಿ ಮತ ಹಾಕಿಲ್ಲವೆಂದು ದಲಿತ ವ್ಯಕ್ತಿಯ ಮೇಲೆ ಹಲ್ಲೆ; ಎಫ್‌ಐಆರ್‌

- Advertisement -
- Advertisement -

ಪಂಚಾಯಿತಿ ಚುನಾವಣೆಯಲ್ಲಿ ತಮ್ಮ ಪರವಾಗಿ ಮತ ಚಲಾಯಿಸಲಿಲ್ಲ ಎಂಬ ಉದ್ದೇಶದಿಂದ 28 ವರ್ಷದ ದಲಿತ ವ್ಯಕ್ತಿಯನ್ನು ಐವರು ವ್ಯಕ್ತಿಗಳು ಕಿಡ್ನಾಪ್ ಮಾಡಿ ಥಳಿಸಿರುವ ಘಟನೆ ನಡೆದಿದ್ದು ಹರ್ಯಾಣ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಬಿಲಾಸ್‌ಪುರದ ರಥಿವಾಸ್ ಗ್ರಾಮದಲ್ಲಿ ಘಟನೆ ನಡೆದಿದ್ದು, “ನನ್ನ ವಿರುದ್ಧ ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆಯನ್ನು ಆರೋಪಿಗಳು ಹಾಕಿದ್ದಾರೆ” ಎಂದು ಹಲ್ಲೆಗೊಳಗಾದ ವ್ಯಕ್ತಿ ನೋವು ನೋಡಿಕೊಂಡಿದ್ದಾರೆ.

ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ, ಇತರ ಐಪಿಸಿ ಸೆಕ್ಷನ್‌ಗಳ ಜೊತೆಗೆ ಶಸ್ತ್ರಾಸ್ತ್ರ ಕಾಯ್ದೆಯಡಿ ಸೋಮವಾರ ಎಫ್‌ಐಆರ್ ದಾಖಲಿಸಲಾಗಿದೆ. ಐವರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರನ್ನು ಬಂಧಿಸುವ ಪ್ರಯತ್ನ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತ ವ್ಯಕ್ತಿ ಭಾನುವಾರ ರಾತ್ರಿ 10.15 ರ ಸುಮಾರಿಗೆ ಗ್ರಾಮದ ಹನುಮಾನ್ ಮಂದಿರದ ಬಳಿ ಕುಳಿತಿದ್ದಾಗ ಮನೀಶ್ ಸಿಂಗ್ ಮತ್ತು ಅವರ ಸೋದರಸಂಬಂಧಿ ಇವರತ್ತ ಬಂದಿದ್ದರು.

“ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಸಂಜಿತ್ ರಾಠಿ ನನ್ನನ್ನು ಕರೆಯುತ್ತಿದ್ದಾರೆ ಎಂದು ಹೇಳಿ ಅವರ ಮನೆಗೆ ಕರೆದುಕೊಂಡು ಹೋದರು. ನನ್ನನ್ನು ಮನೆಯೊಳಗೆ ಕರೆದೊಯ್ದರು ಮತ್ತು ರಾಠಿ ಮತ್ತು ಅವರ ಸ್ನೇಹಿತರು ಲಾಠಿಗಳಿಂದ ಹೊಡೆದರು. ನಂತರ, ಅವರು ನನ್ನ ಮೇಲೆ ಜಾತಿ ನಿಂದನೆಗಳನ್ನು ಮಾಡಿದರು, ಕೊಲ್ಲುವುದಾಗಿ ಬೆದರಿಕೆ ಹಾಕಿದರು” ಎಂದು ದಲಿತ ವ್ಯಕ್ತಿ ದೂರು ನೀಡಿದ್ದಾರೆ.

“ಒಬ್ಬ ವ್ಯಕ್ತಿ ತನ್ನ ಪಿಸ್ತೂಲ್ ಅನ್ನು ನನ್ನ ತಲೆಗೆ ತೋರಿಸಿ ಕೊಲ್ಲುವುದಾಗಿ ಹೇಳಿದನು. ಚುನಾವಣೆಯಲ್ಲಿ ರಾಠಿಗೆ ಏಕೆ ಮತ ಹಾಕಲಿಲ್ಲ ಎಂದು ಪ್ರಶ್ನಿಸಿದನು. ನನ್ನನ್ನು ರಾಠಿಯ ಮನೆಯಲ್ಲಿ ಬಂಧಿಸಲಾಗಿದೆ ಎಂದು ತಿಳಿದ ನನ್ನ ಪೋಷಕರು ಸ್ಥಳಕ್ಕೆ ಬಂದರು. ನನ್ನನ್ನು ಬಿಟ್ಟುಕೊಡುವಂತೆ ಮನವಿ ಮಾಡಿದರು. ನಂತರ, ನನ್ನನ್ನು ಬಿಲಾಸ್‌ಪುರದ ಆಸ್ಪತ್ರೆಗೆ ದಾಖಲಿಸಲಾಯಿತು” ಎಂದು ಪೊಲೀಸರಿಗೆ ವಿವರಿಸಿದ್ದಾರೆ.

ಸಂತ್ರಸ್ತ ವ್ಯಕ್ತಿಯನ್ನು ಮನೆಗೆ ಕರೆತರಲಾಗಿದೆ, ಯಾವುದೇ ಬೆದರಿಕೆಗಳು ಅಥವಾ ಇನ್ನಾವುದೇ ಸಮಸ್ಯೆಗಳನ್ನು ಎದುರಿಸಿದರೆ ಮಾಹಿತಿ ನೀಡುವಂತೆ ಕುಟಂಬಕ್ಕೆ ಪೊಲೀಸರು ಸೂಚಿಸಿದ್ದಾರೆ.

ಇದನ್ನೂ ಓದಿರಿ: ಉತ್ತರಪ್ರದೇಶ: ಮಲಗುಂಡಿಗೆ ಸಿಲುಕಿ ಒಂದೇ ಕುಟುಂಬ ನಾಲ್ವರು ನಿಧನ

ಸಂತ್ರಸ್ತ ಮತ್ತು ಆರೋಪಿಗಳು ಒಂದೇ ಗ್ರಾಮದವರಾಗಿದ್ದು, ಕಳೆದ ವರ್ಷ ನಡೆದ ಚುನಾವಣೆಗೆ ಸಂಬಂಧಿಸಿದಂತೆ ಈ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ. ದಲಿತ ವ್ಯಕ್ತಿಯ ದೇಹದ ಮೇಲೆ ಲಾಠಿಗಳಿಂದ ಹೊಡೆದ ಗುರುತುಗಳಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ನನ್ನ ಜಾತಿಯ ಕಾರಣಕ್ಕಾಗಿ ಐವರು ಆರೋಪಿಗಳು ನನ್ನನ್ನು ಅಪಹರಿಸಿ, ಥಳಿಸಿ, ಜೀವ ಬೆದರಿಕೆ ಹಾಕಿದ್ದಾರೆ” ಎಂದು ದೂರುದಾರರು ಆರೋಪಿಸಿದ್ದಾರೆ. ತಮ್ಮ ಕುಟುಂಬವೂ ಅಪಾಯದಲ್ಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಐಪಿಸಿ ಸೆಕ್ಷನ್ 148, 149, 323, 342, 365, 506, ಶಸ್ತ್ರಾಸ್ತ್ರ ಕಾಯ್ದೆ 25 (1-ಬಿ ಎ) ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆ 3(1) (ಆರ್) ಅಡಿಯಲ್ಲಿ ಬಿಲಾಸ್‌ಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...