Homeದಲಿತ್ ಫೈಲ್ಸ್ತಮ್ಮ ಪರವಾಗಿ ಮತ ಹಾಕಿಲ್ಲವೆಂದು ದಲಿತ ವ್ಯಕ್ತಿಯ ಮೇಲೆ ಹಲ್ಲೆ; ಎಫ್‌ಐಆರ್‌

ತಮ್ಮ ಪರವಾಗಿ ಮತ ಹಾಕಿಲ್ಲವೆಂದು ದಲಿತ ವ್ಯಕ್ತಿಯ ಮೇಲೆ ಹಲ್ಲೆ; ಎಫ್‌ಐಆರ್‌

- Advertisement -
- Advertisement -

ಪಂಚಾಯಿತಿ ಚುನಾವಣೆಯಲ್ಲಿ ತಮ್ಮ ಪರವಾಗಿ ಮತ ಚಲಾಯಿಸಲಿಲ್ಲ ಎಂಬ ಉದ್ದೇಶದಿಂದ 28 ವರ್ಷದ ದಲಿತ ವ್ಯಕ್ತಿಯನ್ನು ಐವರು ವ್ಯಕ್ತಿಗಳು ಕಿಡ್ನಾಪ್ ಮಾಡಿ ಥಳಿಸಿರುವ ಘಟನೆ ನಡೆದಿದ್ದು ಹರ್ಯಾಣ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಬಿಲಾಸ್‌ಪುರದ ರಥಿವಾಸ್ ಗ್ರಾಮದಲ್ಲಿ ಘಟನೆ ನಡೆದಿದ್ದು, “ನನ್ನ ವಿರುದ್ಧ ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆಯನ್ನು ಆರೋಪಿಗಳು ಹಾಕಿದ್ದಾರೆ” ಎಂದು ಹಲ್ಲೆಗೊಳಗಾದ ವ್ಯಕ್ತಿ ನೋವು ನೋಡಿಕೊಂಡಿದ್ದಾರೆ.

ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ, ಇತರ ಐಪಿಸಿ ಸೆಕ್ಷನ್‌ಗಳ ಜೊತೆಗೆ ಶಸ್ತ್ರಾಸ್ತ್ರ ಕಾಯ್ದೆಯಡಿ ಸೋಮವಾರ ಎಫ್‌ಐಆರ್ ದಾಖಲಿಸಲಾಗಿದೆ. ಐವರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರನ್ನು ಬಂಧಿಸುವ ಪ್ರಯತ್ನ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತ ವ್ಯಕ್ತಿ ಭಾನುವಾರ ರಾತ್ರಿ 10.15 ರ ಸುಮಾರಿಗೆ ಗ್ರಾಮದ ಹನುಮಾನ್ ಮಂದಿರದ ಬಳಿ ಕುಳಿತಿದ್ದಾಗ ಮನೀಶ್ ಸಿಂಗ್ ಮತ್ತು ಅವರ ಸೋದರಸಂಬಂಧಿ ಇವರತ್ತ ಬಂದಿದ್ದರು.

“ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಸಂಜಿತ್ ರಾಠಿ ನನ್ನನ್ನು ಕರೆಯುತ್ತಿದ್ದಾರೆ ಎಂದು ಹೇಳಿ ಅವರ ಮನೆಗೆ ಕರೆದುಕೊಂಡು ಹೋದರು. ನನ್ನನ್ನು ಮನೆಯೊಳಗೆ ಕರೆದೊಯ್ದರು ಮತ್ತು ರಾಠಿ ಮತ್ತು ಅವರ ಸ್ನೇಹಿತರು ಲಾಠಿಗಳಿಂದ ಹೊಡೆದರು. ನಂತರ, ಅವರು ನನ್ನ ಮೇಲೆ ಜಾತಿ ನಿಂದನೆಗಳನ್ನು ಮಾಡಿದರು, ಕೊಲ್ಲುವುದಾಗಿ ಬೆದರಿಕೆ ಹಾಕಿದರು” ಎಂದು ದಲಿತ ವ್ಯಕ್ತಿ ದೂರು ನೀಡಿದ್ದಾರೆ.

“ಒಬ್ಬ ವ್ಯಕ್ತಿ ತನ್ನ ಪಿಸ್ತೂಲ್ ಅನ್ನು ನನ್ನ ತಲೆಗೆ ತೋರಿಸಿ ಕೊಲ್ಲುವುದಾಗಿ ಹೇಳಿದನು. ಚುನಾವಣೆಯಲ್ಲಿ ರಾಠಿಗೆ ಏಕೆ ಮತ ಹಾಕಲಿಲ್ಲ ಎಂದು ಪ್ರಶ್ನಿಸಿದನು. ನನ್ನನ್ನು ರಾಠಿಯ ಮನೆಯಲ್ಲಿ ಬಂಧಿಸಲಾಗಿದೆ ಎಂದು ತಿಳಿದ ನನ್ನ ಪೋಷಕರು ಸ್ಥಳಕ್ಕೆ ಬಂದರು. ನನ್ನನ್ನು ಬಿಟ್ಟುಕೊಡುವಂತೆ ಮನವಿ ಮಾಡಿದರು. ನಂತರ, ನನ್ನನ್ನು ಬಿಲಾಸ್‌ಪುರದ ಆಸ್ಪತ್ರೆಗೆ ದಾಖಲಿಸಲಾಯಿತು” ಎಂದು ಪೊಲೀಸರಿಗೆ ವಿವರಿಸಿದ್ದಾರೆ.

ಸಂತ್ರಸ್ತ ವ್ಯಕ್ತಿಯನ್ನು ಮನೆಗೆ ಕರೆತರಲಾಗಿದೆ, ಯಾವುದೇ ಬೆದರಿಕೆಗಳು ಅಥವಾ ಇನ್ನಾವುದೇ ಸಮಸ್ಯೆಗಳನ್ನು ಎದುರಿಸಿದರೆ ಮಾಹಿತಿ ನೀಡುವಂತೆ ಕುಟಂಬಕ್ಕೆ ಪೊಲೀಸರು ಸೂಚಿಸಿದ್ದಾರೆ.

ಇದನ್ನೂ ಓದಿರಿ: ಉತ್ತರಪ್ರದೇಶ: ಮಲಗುಂಡಿಗೆ ಸಿಲುಕಿ ಒಂದೇ ಕುಟುಂಬ ನಾಲ್ವರು ನಿಧನ

ಸಂತ್ರಸ್ತ ಮತ್ತು ಆರೋಪಿಗಳು ಒಂದೇ ಗ್ರಾಮದವರಾಗಿದ್ದು, ಕಳೆದ ವರ್ಷ ನಡೆದ ಚುನಾವಣೆಗೆ ಸಂಬಂಧಿಸಿದಂತೆ ಈ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ. ದಲಿತ ವ್ಯಕ್ತಿಯ ದೇಹದ ಮೇಲೆ ಲಾಠಿಗಳಿಂದ ಹೊಡೆದ ಗುರುತುಗಳಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ನನ್ನ ಜಾತಿಯ ಕಾರಣಕ್ಕಾಗಿ ಐವರು ಆರೋಪಿಗಳು ನನ್ನನ್ನು ಅಪಹರಿಸಿ, ಥಳಿಸಿ, ಜೀವ ಬೆದರಿಕೆ ಹಾಕಿದ್ದಾರೆ” ಎಂದು ದೂರುದಾರರು ಆರೋಪಿಸಿದ್ದಾರೆ. ತಮ್ಮ ಕುಟುಂಬವೂ ಅಪಾಯದಲ್ಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಐಪಿಸಿ ಸೆಕ್ಷನ್ 148, 149, 323, 342, 365, 506, ಶಸ್ತ್ರಾಸ್ತ್ರ ಕಾಯ್ದೆ 25 (1-ಬಿ ಎ) ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆ 3(1) (ಆರ್) ಅಡಿಯಲ್ಲಿ ಬಿಲಾಸ್‌ಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...