Homeದಲಿತ್ ಫೈಲ್ಸ್ದಲಿತ ವ್ಯಕ್ತಿಗೆ ಥಳಿಸಿ, ತಲೆ ಬೋಳಿಸಿ ಮೆರವಣಿಗೆ ಮಾಡಿದ ಬಜರಂಗದಳದ ಕಾರ್ಯಕರ್ತರು

ದಲಿತ ವ್ಯಕ್ತಿಗೆ ಥಳಿಸಿ, ತಲೆ ಬೋಳಿಸಿ ಮೆರವಣಿಗೆ ಮಾಡಿದ ಬಜರಂಗದಳದ ಕಾರ್ಯಕರ್ತರು

- Advertisement -
- Advertisement -

ಕ್ರೈಸ್ತ ಧರ್ಮಕ್ಕೆ ಮತಾಂತರಗೊಳ್ಳುವಂತೆ ಜನರ ಮನವೊಲಿಸಲು ಪ್ರಯತ್ನಿಸಿದರು ಎಂಬ ಆರೋಪದ ಮೇಲೆ 47 ವರ್ಷದ ದಲಿತ ವ್ಯಕ್ತಿಗೆ ಥಳಿಸಿ, ತಲೆ ಬೋಳಿಸಿ ಮೆರವಣಿಗೆ ನಡೆಸಿದ ಆರೋಪ ಘಟನೆ ಉತ್ತರ ಪ್ರದೇಶದ ಫತೇಪುರ್ ಜಿಲ್ಲೆಯ ಬೆಹ್ಲೋಪುರ್ ಅಲೈ ಗ್ರಾಮದಲ್ಲಿ ಶುಕ್ರವಾರ (ಡಿ.27) ನಡೆದಿದೆ.

“ಕ್ರೈಸ್ತ ಧರ್ಮಕ್ಕೆ ಮತಾಂತರಗೊಳಿಸಲು ಯತ್ನಿಸಿದ ಆರೋಪ ಮಾಡಿ, ನನಗೆ ಸರಿಯಾದ ಪಾಠ ಕಲಿಸುವುದಾಗಿ ಹೇಳಿ ಪ್ರಬಲವರ್ಗದ (ಮೇಲ್ಜಾತಿ) ಜನರ ಗುಂಪು ನನಗೆ ಮತ್ತು ನನ್ನ ಕುಟುಂಬ ಸದಸ್ಯರ ಮೇಲೆ ಹಲ್ಲೆ ನಡೆಸಿದೆ” ಎಂದು ಸಂತ್ರಸ್ತ ಶಿವಬದನ್ ಅವರು ಆರೋಪಿಸಿದ್ದಾರೆ.

ವರದಿಗಳ ಪ್ರಕಾರ, ಮತಾಂತರ ತಡೆ ಕಾಯ್ದೆಯಡಿ ಎರಡು ವರ್ಷಗಳ ಹಿಂದೆ ಬಂಧನಕ್ಕೊಳಗಾಗಿದ್ದ ಶಿವಬದನ್ ಅವರು ಜಾಮೀನು ಪಡೆದು ಹೊರ ಬಂದಿದ್ದರು. ಈ ವೇಳೆ ನಡುವೆ ಅವರಿಗೆ ಥಳಿಸಲಾಗಿದೆ. ಘಟನೆ ಸಂಬಂಧ ಶಿವಬದನ್ ನೀಡಿದ ದೂರು ಆಧರಿಸಿ ಫತೇಪುರ್ ಪೊಲೀಸರು ರೋಹಿತ್ ದೀಕ್ಷಿತ್, ಲವಲೇಶ್ ಸಿಂಗ್, ಸೋಮಕರನ್ ಮತ್ತು ಕೆಲ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

ಈ ಮೂವರೂ ಹಿಂದುತ್ವ ಸಂಘಟನೆ ಬಜರಂಗದಳದೊಂದಿಗೆ ಸಂಬಂಧ ಹೊಂದಿರುವವರು ಎಂದು ಹೇಳಲಾಗಿದೆ.

“ಪ್ರಕರಣದ ತನಿಖೆ ನಡೆಯುತ್ತಿದೆ. ಸಂಗ್ರಹಿಸಿದ ಸಾಕ್ಷ್ಯಗಳ ಆಧಾರದ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಇದುವರೆಗೆ ಯಾರನ್ನೂ ಬಂಧಿಸಿಲ್ಲ” ಎಂದು ಫತೇಪುರ್ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿ.ಎಸ್.ಮಿಶ್ರಾ ಮಾಹಿತಿ ನೀಡಿದ್ದಾರೆ.

“ಡಿಸೆಂಬರ್ 26ರಂದು ರೈಲ್ವೆ ನಿಲ್ದಾಣಕ್ಕೆ ತೆರಳುವ ಸಲುವಾಗಿ ಟ್ಯಾಕ್ಸಿ ಹಿಡಿಯಲು ನಾನು ಹಳ್ಳಿಯ ಕ್ರಾಸಿಂಗ್‌ನಲ್ಲಿ ನಿಂತಿದ್ದೆ. ಈ ವೇಳೆ ಅಲ್ಲಿಗೆ ಬಂದ ಆರೋಪಿಗಳು ನನಗೆ ತಕ್ಕ ಪಾಠ ಕಲಿಸುವುದಾಗಿ ಹೇಳಿ ನಿಂದಿಸಿದರು. ಮರುದಿನ ಬೆಳಿಗ್ಗೆ ಮನೆಗೆ ಹಿಂದಿರುಗಿದಾಗ ಆರೋಪಿಗಳಾದ ರೋಹಿತ್ ದೀಕ್ಷಿತ್, ಲವಲೇಶ್ ಸಿಂಗ್ ಮತ್ತು ಸೋಮಕರನ್ ನೇತೃತ್ವದ ಜನರ ಗುಂಪು ನನ್ನ ಮೇಲೆ ಹಲ್ಲೆ ನಡೆಸಿತು. ಅವರು ಹೆಂಡತಿ ಮಕ್ಕಳು ಸೇರಿದಂತೆ ನನ್ನ ಕುಟುಂಬವನ್ನೂ ಗುರಿಯಾಗಿಸಿದ್ದಾರೆ” ಎಂದು ಶಿವಬದನ್ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.

ಮುಂದುವರಿದು, “ಆರೋಪಿಗಳು ನನ್ನನ್ನು ಸಮೀಪದ ದೇವಸ್ಥಾನಕ್ಕೆ ಎಳೆದೊಯ್ದು ತಲೆ ಬೋಳಿಸಿದರು. ನಂತರ ಗ್ರಾಮದಾದ್ಯಂತ ಮೆರವಣಿಗೆ ಮಾಡಿ ಮತ್ತೊಂದು ದೇವಸ್ಥಾನಕ್ಕೆ ಕರೆದೊಯ್ದು ಅಲ್ಲಿ ಹನುಮಾನ್ ಚಾಲೀಸಾ ಪಠಿಸುವಂತೆ ಒತ್ತಾಯಿಸಿ ಪದೇ ಪದೇ ಥಳಿಸಿದ್ದಾರೆ” ಎಂದು ವಿವರಿಸಿದ್ದಾರೆ.

“ನಾನು ಕ್ರೈಸ್ತ ಧರ್ಮ ಅನುಸರಿಸದಿದ್ದರೂ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿ ಜಿಲ್ಲಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ” ಎಂದು ಶಿವಬದನ್ ಹೇಳಿದ್ದಾರೆ.

ಮತ್ತೊಂದೆಡೆ ಆರೋಪಿ ರೋಹಿತ್ ದೀಕ್ಷಿತ್ ಕೂಡ ದೂರು ದಾಖಲಿಸಿದ್ದು, ಅದರಲ್ಲಿ ” ಡಿಸೆಂಬರ್ 26ರಂದು ನಾನು ಗ್ರಾಮದ ಅಂಗಡಿಯಲ್ಲಿ ಕುಳಿತಿದ್ದಾಗ ರಾಮ್ ಬಹದ್ದೂರ್, ಸಂತೋಷ್ ಮತ್ತು ಶಿವಪಾಲ್ ಪಾಸ್ವಾನ್ ಎಂಬ ಮೂವರು ಸಹಚರರು ಮತ್ತು ಇತರ ನಾಲ್ವರು ಅಪರಿಚಿತರ ಜೊತೆ ಕಾರಿನಲ್ಲಿ ಆಗಮಿಸಿದ ಶಿವಬದನ್ ಅವರು, ಕ್ರೈಸ್ತ ಧರ್ಮಕ್ಕೆ ಮತಾಂತರಗೊಳ್ಳಿ ನಿಮಗೆ ಆಸ್ಪತ್ರೆಯಲ್ಲಿ ಕೆಲಸ ಕೊಡಿಸುತ್ತೇನೆ. ಪ್ರಾರ್ಥನೆಗೆ ಬಂದವರಿಂದ ಹಣ ಸಂಗ್ರಹಿಸಿ ನೀಡುತ್ತೇನೆ ಎಂದು ಹೇಳಿದರು. ನಾನು ಮತಾಂತರಗೊಳ್ಳಲು ವಿರೋಧಿಸಿದಾಗ ಶಿವಬದನ್ ನನಗೆ ಕಿರುಕುಳ ನೀಡಿ, ಸುಳ್ಳು ಮೊಕದ್ದಮೆ ಹೂಡುವ ಬೆದರಿಕೆ ಹಾಕಿದ್ದಾರೆ”ಎಂದು ಆರೋಪಿಸಿದ್ದಾರೆ.

ರೋಹಿತ್ ದೀಕ್ಷಿತ್ ದೂರು ಆಧರಿಸಿ ಶಿವಬದನ್ ಆತನ ಸಹಚರರಾದ ರಾಮ್ ಬಹದ್ದೂರ್, ಸಂತೋಷ್ ಮತ್ತು ಶಿವಪಾಲ್ ಪಾಸ್ವಾನ್ ಹಾಗೂ ನಾಲ್ವರು ಅಪರಿಚಿತರ ವಿರುದ್ದ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ : ಒಡಿಶಾ | ಬುಡಕಟ್ಟು ಮಹಿಳೆಯರನ್ನು ಮರಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...