Homeದಲಿತ್ ಫೈಲ್ಸ್ದಲಿತ ವ್ಯಕ್ತಿಗೆ ಥಳಿಸಿ, ತಲೆ ಬೋಳಿಸಿ ಮೆರವಣಿಗೆ ಮಾಡಿದ ಬಜರಂಗದಳದ ಕಾರ್ಯಕರ್ತರು

ದಲಿತ ವ್ಯಕ್ತಿಗೆ ಥಳಿಸಿ, ತಲೆ ಬೋಳಿಸಿ ಮೆರವಣಿಗೆ ಮಾಡಿದ ಬಜರಂಗದಳದ ಕಾರ್ಯಕರ್ತರು

- Advertisement -
- Advertisement -

ಕ್ರೈಸ್ತ ಧರ್ಮಕ್ಕೆ ಮತಾಂತರಗೊಳ್ಳುವಂತೆ ಜನರ ಮನವೊಲಿಸಲು ಪ್ರಯತ್ನಿಸಿದರು ಎಂಬ ಆರೋಪದ ಮೇಲೆ 47 ವರ್ಷದ ದಲಿತ ವ್ಯಕ್ತಿಗೆ ಥಳಿಸಿ, ತಲೆ ಬೋಳಿಸಿ ಮೆರವಣಿಗೆ ನಡೆಸಿದ ಆರೋಪ ಘಟನೆ ಉತ್ತರ ಪ್ರದೇಶದ ಫತೇಪುರ್ ಜಿಲ್ಲೆಯ ಬೆಹ್ಲೋಪುರ್ ಅಲೈ ಗ್ರಾಮದಲ್ಲಿ ಶುಕ್ರವಾರ (ಡಿ.27) ನಡೆದಿದೆ.

“ಕ್ರೈಸ್ತ ಧರ್ಮಕ್ಕೆ ಮತಾಂತರಗೊಳಿಸಲು ಯತ್ನಿಸಿದ ಆರೋಪ ಮಾಡಿ, ನನಗೆ ಸರಿಯಾದ ಪಾಠ ಕಲಿಸುವುದಾಗಿ ಹೇಳಿ ಪ್ರಬಲವರ್ಗದ (ಮೇಲ್ಜಾತಿ) ಜನರ ಗುಂಪು ನನಗೆ ಮತ್ತು ನನ್ನ ಕುಟುಂಬ ಸದಸ್ಯರ ಮೇಲೆ ಹಲ್ಲೆ ನಡೆಸಿದೆ” ಎಂದು ಸಂತ್ರಸ್ತ ಶಿವಬದನ್ ಅವರು ಆರೋಪಿಸಿದ್ದಾರೆ.

ವರದಿಗಳ ಪ್ರಕಾರ, ಮತಾಂತರ ತಡೆ ಕಾಯ್ದೆಯಡಿ ಎರಡು ವರ್ಷಗಳ ಹಿಂದೆ ಬಂಧನಕ್ಕೊಳಗಾಗಿದ್ದ ಶಿವಬದನ್ ಅವರು ಜಾಮೀನು ಪಡೆದು ಹೊರ ಬಂದಿದ್ದರು. ಈ ವೇಳೆ ನಡುವೆ ಅವರಿಗೆ ಥಳಿಸಲಾಗಿದೆ. ಘಟನೆ ಸಂಬಂಧ ಶಿವಬದನ್ ನೀಡಿದ ದೂರು ಆಧರಿಸಿ ಫತೇಪುರ್ ಪೊಲೀಸರು ರೋಹಿತ್ ದೀಕ್ಷಿತ್, ಲವಲೇಶ್ ಸಿಂಗ್, ಸೋಮಕರನ್ ಮತ್ತು ಕೆಲ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

ಈ ಮೂವರೂ ಹಿಂದುತ್ವ ಸಂಘಟನೆ ಬಜರಂಗದಳದೊಂದಿಗೆ ಸಂಬಂಧ ಹೊಂದಿರುವವರು ಎಂದು ಹೇಳಲಾಗಿದೆ.

“ಪ್ರಕರಣದ ತನಿಖೆ ನಡೆಯುತ್ತಿದೆ. ಸಂಗ್ರಹಿಸಿದ ಸಾಕ್ಷ್ಯಗಳ ಆಧಾರದ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಇದುವರೆಗೆ ಯಾರನ್ನೂ ಬಂಧಿಸಿಲ್ಲ” ಎಂದು ಫತೇಪುರ್ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿ.ಎಸ್.ಮಿಶ್ರಾ ಮಾಹಿತಿ ನೀಡಿದ್ದಾರೆ.

“ಡಿಸೆಂಬರ್ 26ರಂದು ರೈಲ್ವೆ ನಿಲ್ದಾಣಕ್ಕೆ ತೆರಳುವ ಸಲುವಾಗಿ ಟ್ಯಾಕ್ಸಿ ಹಿಡಿಯಲು ನಾನು ಹಳ್ಳಿಯ ಕ್ರಾಸಿಂಗ್‌ನಲ್ಲಿ ನಿಂತಿದ್ದೆ. ಈ ವೇಳೆ ಅಲ್ಲಿಗೆ ಬಂದ ಆರೋಪಿಗಳು ನನಗೆ ತಕ್ಕ ಪಾಠ ಕಲಿಸುವುದಾಗಿ ಹೇಳಿ ನಿಂದಿಸಿದರು. ಮರುದಿನ ಬೆಳಿಗ್ಗೆ ಮನೆಗೆ ಹಿಂದಿರುಗಿದಾಗ ಆರೋಪಿಗಳಾದ ರೋಹಿತ್ ದೀಕ್ಷಿತ್, ಲವಲೇಶ್ ಸಿಂಗ್ ಮತ್ತು ಸೋಮಕರನ್ ನೇತೃತ್ವದ ಜನರ ಗುಂಪು ನನ್ನ ಮೇಲೆ ಹಲ್ಲೆ ನಡೆಸಿತು. ಅವರು ಹೆಂಡತಿ ಮಕ್ಕಳು ಸೇರಿದಂತೆ ನನ್ನ ಕುಟುಂಬವನ್ನೂ ಗುರಿಯಾಗಿಸಿದ್ದಾರೆ” ಎಂದು ಶಿವಬದನ್ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.

ಮುಂದುವರಿದು, “ಆರೋಪಿಗಳು ನನ್ನನ್ನು ಸಮೀಪದ ದೇವಸ್ಥಾನಕ್ಕೆ ಎಳೆದೊಯ್ದು ತಲೆ ಬೋಳಿಸಿದರು. ನಂತರ ಗ್ರಾಮದಾದ್ಯಂತ ಮೆರವಣಿಗೆ ಮಾಡಿ ಮತ್ತೊಂದು ದೇವಸ್ಥಾನಕ್ಕೆ ಕರೆದೊಯ್ದು ಅಲ್ಲಿ ಹನುಮಾನ್ ಚಾಲೀಸಾ ಪಠಿಸುವಂತೆ ಒತ್ತಾಯಿಸಿ ಪದೇ ಪದೇ ಥಳಿಸಿದ್ದಾರೆ” ಎಂದು ವಿವರಿಸಿದ್ದಾರೆ.

“ನಾನು ಕ್ರೈಸ್ತ ಧರ್ಮ ಅನುಸರಿಸದಿದ್ದರೂ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿ ಜಿಲ್ಲಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ” ಎಂದು ಶಿವಬದನ್ ಹೇಳಿದ್ದಾರೆ.

ಮತ್ತೊಂದೆಡೆ ಆರೋಪಿ ರೋಹಿತ್ ದೀಕ್ಷಿತ್ ಕೂಡ ದೂರು ದಾಖಲಿಸಿದ್ದು, ಅದರಲ್ಲಿ ” ಡಿಸೆಂಬರ್ 26ರಂದು ನಾನು ಗ್ರಾಮದ ಅಂಗಡಿಯಲ್ಲಿ ಕುಳಿತಿದ್ದಾಗ ರಾಮ್ ಬಹದ್ದೂರ್, ಸಂತೋಷ್ ಮತ್ತು ಶಿವಪಾಲ್ ಪಾಸ್ವಾನ್ ಎಂಬ ಮೂವರು ಸಹಚರರು ಮತ್ತು ಇತರ ನಾಲ್ವರು ಅಪರಿಚಿತರ ಜೊತೆ ಕಾರಿನಲ್ಲಿ ಆಗಮಿಸಿದ ಶಿವಬದನ್ ಅವರು, ಕ್ರೈಸ್ತ ಧರ್ಮಕ್ಕೆ ಮತಾಂತರಗೊಳ್ಳಿ ನಿಮಗೆ ಆಸ್ಪತ್ರೆಯಲ್ಲಿ ಕೆಲಸ ಕೊಡಿಸುತ್ತೇನೆ. ಪ್ರಾರ್ಥನೆಗೆ ಬಂದವರಿಂದ ಹಣ ಸಂಗ್ರಹಿಸಿ ನೀಡುತ್ತೇನೆ ಎಂದು ಹೇಳಿದರು. ನಾನು ಮತಾಂತರಗೊಳ್ಳಲು ವಿರೋಧಿಸಿದಾಗ ಶಿವಬದನ್ ನನಗೆ ಕಿರುಕುಳ ನೀಡಿ, ಸುಳ್ಳು ಮೊಕದ್ದಮೆ ಹೂಡುವ ಬೆದರಿಕೆ ಹಾಕಿದ್ದಾರೆ”ಎಂದು ಆರೋಪಿಸಿದ್ದಾರೆ.

ರೋಹಿತ್ ದೀಕ್ಷಿತ್ ದೂರು ಆಧರಿಸಿ ಶಿವಬದನ್ ಆತನ ಸಹಚರರಾದ ರಾಮ್ ಬಹದ್ದೂರ್, ಸಂತೋಷ್ ಮತ್ತು ಶಿವಪಾಲ್ ಪಾಸ್ವಾನ್ ಹಾಗೂ ನಾಲ್ವರು ಅಪರಿಚಿತರ ವಿರುದ್ದ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ : ಒಡಿಶಾ | ಬುಡಕಟ್ಟು ಮಹಿಳೆಯರನ್ನು ಮರಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...

ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಜನವರಿ 5ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉಮರ್ ಖಾಲಿದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರಕ್ಕೆ (ಏ.15) ನಿಗದಿಯಾಗಿದೆ ಎಂದು...

ಜಾರ್ಖಂಡ್| ಅಬಕಾರಿ ಕಾನ್‌ಸ್ಟೆಬಲ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ; 159 ಅಭ್ಯರ್ಥಿಗಳ ಬಂಧನ

ರಾಂಚಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಿಂದ 159 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ ನಂತರ ಪರೀಕ್ಷೆ ಪತ್ರಿಕೆ ಸೋರಿಕೆ ಕೃತ್ಯ ಬೆಳಕಿಗೆ ಬಂದಿದೆ. ತಮರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾರ್ಗಾಂವ್‌ನಲ್ಲಿರುವ ಸ್ಥಳದಲ್ಲಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದ್ದು, ಪರೀಕ್ಷೆಗೆ ಮೊದಲು...

ನೋಯ್ಡಾ: ವೇತನ ಹೆಚ್ಚಳಕ್ಕೆ ಒತ್ತಾಯಿಸಿ ನಡೆದ ಕಾರ್ಮಿಕರ ಪ್ರತಿಭಟನೆಯಲ್ಲಿ ಹೆಚ್ಚಿದ ಹಿಂಸಾಚಾರ; ಕಲ್ಲು ತೂರಾಟ, ವಾಹನಗಳು ಧ್ವಂಸ

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ತೀವ್ರ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯ ಸಮಯದಲ್ಲಿ, ವಾಹನಗಳು ಮತ್ತು ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಲಾಗಿದ್ದು, ಕಲ್ಲು ತೂರಾಟ...

‘ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ ಅವರ ನಿಜವಾದ ವಿಷಯ..’; ಕೇಂದ್ರದ ಮೇಲೆ ಸೋನಿಯಾ ಗಾಂಧಿ ವಾಗ್ದಾಳಿ

ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ (ಕ್ಷೇತ್ರ ಪುನರ್‌ ವಿಂಗಡಣೆ) ನಿರ್ಣಯವು ಏಪ್ರಿಲ್ 16 ರಿಂದ 18 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯುವ ಕೇಂದ್ರದ ನಿರ್ಧಾರದ ಹಿಂದಿನ ಪ್ರಮುಖ ವಿಷಯವಾಗಿದೆ ಎಂದು ಕಾಂಗ್ರೆಸ್ ಸಂಸದೀಯ...

ಜಾತಿ ದೌರ್ಜನ್ಯಕ್ಕೆ ದಲಿತ ವಿದ್ಯಾರ್ಥಿ ಬಲಿ | ಸಂತಾಪ ಸೂಚಿಸಲು ಬಾರದ ಕಾಲೇಜು ಸಿಬ್ಬಂದಿ : ಅನುಮಾನ ವ್ಯಕ್ತಪಡಿಸಿದ ಶಿಕ್ಷಣ ಸಚಿವ

ಜಾತಿ ದೌರ್ಜನ್ಯದ ಆರೋಪ ಮಾಡಿ ದಲಿತ ವಿದ್ಯಾರ್ಥಿ ನಿತಿನ್ ರಾಜ್ ಸಾವಿಗೆ ಶರಣಾದ ನಂತರ, ಅವರ ಕಾಲೇಜಿನ ಒಬ್ಬನೇ ಒಬ್ಬ ಪ್ರತಿನಿಧಿಯೂ ಮನೆಗೆ ಭೇಟಿ ನೀಡದಿರುವುದು 'ಗಂಭೀರವಾದ ವಿಷಯ' ಎಂದು ಕೇರಳದ ಸಾರ್ವಜನಿಕ...

ಹಂಗೇರಿ ಚುನಾವಣೆಯಲ್ಲಿ ತೀವ್ರ ಬಲಪಂಥೀಯ ವಿಕ್ಟರ್ ಒರ್ಬಾನ್‌ಗೆ ಸೋಲು : ಟ್ರಂಪ್ ಆಪ್ತನ ಯುಗಾಂತ್ಯ

ಹಂಗೇರಿಯ ಸಾರ್ವತ್ರಿಕ ಚುನಾವಣೆಯಲ್ಲಿ, ಕಳೆದ 16 ವರ್ಷಗಳಿಂದ ದೇಶವನ್ನು ಆಳಿದ ತೀವ್ರ ಬಲಪಂಥೀಯ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ವಿಕ್ಟರ್ ಒರ್ಬಾನ್ ಸೋಲಾಗಿದೆ. ಆರ್ಥಿಕ ಸ್ಥಗಿತ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚದ...

ಹಾರ್ಮುಝ್ ಜಲಸಂಧಿ ಮೇಲೆ ನಿಯಂತ್ರಣ ಸಾಧಿಸಲು ಮುಂದಾದ ಅಮೆರಿಕ : ಕಠಿಣ ಕ್ರಮದ ಎಚ್ಚರಿಕೆ ನೀಡಿದ ಇರಾನ್

ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿದ್ದ ಅಮೆರಿಕ-ಇರಾನ್ ನಡುವಿನ ಐತಿಹಾಸಿಕ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ, ಹಾರ್ಮುಝ್ ಜಲಸಂಧಿಯ ಸುತ್ತಲಿನ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿದೆ.  ಮಾತುಕತೆ ವಿಫಲವಾದ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಝ್...

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...