Homeದಲಿತ್ ಫೈಲ್ಸ್ದಲಿತ ವ್ಯಕ್ತಿಗೆ ಥಳಿಸಿ, ತಲೆ ಬೋಳಿಸಿ ಮೆರವಣಿಗೆ ಮಾಡಿದ ಬಜರಂಗದಳದ ಕಾರ್ಯಕರ್ತರು

ದಲಿತ ವ್ಯಕ್ತಿಗೆ ಥಳಿಸಿ, ತಲೆ ಬೋಳಿಸಿ ಮೆರವಣಿಗೆ ಮಾಡಿದ ಬಜರಂಗದಳದ ಕಾರ್ಯಕರ್ತರು

- Advertisement -
- Advertisement -

ಕ್ರೈಸ್ತ ಧರ್ಮಕ್ಕೆ ಮತಾಂತರಗೊಳ್ಳುವಂತೆ ಜನರ ಮನವೊಲಿಸಲು ಪ್ರಯತ್ನಿಸಿದರು ಎಂಬ ಆರೋಪದ ಮೇಲೆ 47 ವರ್ಷದ ದಲಿತ ವ್ಯಕ್ತಿಗೆ ಥಳಿಸಿ, ತಲೆ ಬೋಳಿಸಿ ಮೆರವಣಿಗೆ ನಡೆಸಿದ ಆರೋಪ ಘಟನೆ ಉತ್ತರ ಪ್ರದೇಶದ ಫತೇಪುರ್ ಜಿಲ್ಲೆಯ ಬೆಹ್ಲೋಪುರ್ ಅಲೈ ಗ್ರಾಮದಲ್ಲಿ ಶುಕ್ರವಾರ (ಡಿ.27) ನಡೆದಿದೆ.

“ಕ್ರೈಸ್ತ ಧರ್ಮಕ್ಕೆ ಮತಾಂತರಗೊಳಿಸಲು ಯತ್ನಿಸಿದ ಆರೋಪ ಮಾಡಿ, ನನಗೆ ಸರಿಯಾದ ಪಾಠ ಕಲಿಸುವುದಾಗಿ ಹೇಳಿ ಪ್ರಬಲವರ್ಗದ (ಮೇಲ್ಜಾತಿ) ಜನರ ಗುಂಪು ನನಗೆ ಮತ್ತು ನನ್ನ ಕುಟುಂಬ ಸದಸ್ಯರ ಮೇಲೆ ಹಲ್ಲೆ ನಡೆಸಿದೆ” ಎಂದು ಸಂತ್ರಸ್ತ ಶಿವಬದನ್ ಅವರು ಆರೋಪಿಸಿದ್ದಾರೆ.

ವರದಿಗಳ ಪ್ರಕಾರ, ಮತಾಂತರ ತಡೆ ಕಾಯ್ದೆಯಡಿ ಎರಡು ವರ್ಷಗಳ ಹಿಂದೆ ಬಂಧನಕ್ಕೊಳಗಾಗಿದ್ದ ಶಿವಬದನ್ ಅವರು ಜಾಮೀನು ಪಡೆದು ಹೊರ ಬಂದಿದ್ದರು. ಈ ವೇಳೆ ನಡುವೆ ಅವರಿಗೆ ಥಳಿಸಲಾಗಿದೆ. ಘಟನೆ ಸಂಬಂಧ ಶಿವಬದನ್ ನೀಡಿದ ದೂರು ಆಧರಿಸಿ ಫತೇಪುರ್ ಪೊಲೀಸರು ರೋಹಿತ್ ದೀಕ್ಷಿತ್, ಲವಲೇಶ್ ಸಿಂಗ್, ಸೋಮಕರನ್ ಮತ್ತು ಕೆಲ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

ಈ ಮೂವರೂ ಹಿಂದುತ್ವ ಸಂಘಟನೆ ಬಜರಂಗದಳದೊಂದಿಗೆ ಸಂಬಂಧ ಹೊಂದಿರುವವರು ಎಂದು ಹೇಳಲಾಗಿದೆ.

“ಪ್ರಕರಣದ ತನಿಖೆ ನಡೆಯುತ್ತಿದೆ. ಸಂಗ್ರಹಿಸಿದ ಸಾಕ್ಷ್ಯಗಳ ಆಧಾರದ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಇದುವರೆಗೆ ಯಾರನ್ನೂ ಬಂಧಿಸಿಲ್ಲ” ಎಂದು ಫತೇಪುರ್ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿ.ಎಸ್.ಮಿಶ್ರಾ ಮಾಹಿತಿ ನೀಡಿದ್ದಾರೆ.

“ಡಿಸೆಂಬರ್ 26ರಂದು ರೈಲ್ವೆ ನಿಲ್ದಾಣಕ್ಕೆ ತೆರಳುವ ಸಲುವಾಗಿ ಟ್ಯಾಕ್ಸಿ ಹಿಡಿಯಲು ನಾನು ಹಳ್ಳಿಯ ಕ್ರಾಸಿಂಗ್‌ನಲ್ಲಿ ನಿಂತಿದ್ದೆ. ಈ ವೇಳೆ ಅಲ್ಲಿಗೆ ಬಂದ ಆರೋಪಿಗಳು ನನಗೆ ತಕ್ಕ ಪಾಠ ಕಲಿಸುವುದಾಗಿ ಹೇಳಿ ನಿಂದಿಸಿದರು. ಮರುದಿನ ಬೆಳಿಗ್ಗೆ ಮನೆಗೆ ಹಿಂದಿರುಗಿದಾಗ ಆರೋಪಿಗಳಾದ ರೋಹಿತ್ ದೀಕ್ಷಿತ್, ಲವಲೇಶ್ ಸಿಂಗ್ ಮತ್ತು ಸೋಮಕರನ್ ನೇತೃತ್ವದ ಜನರ ಗುಂಪು ನನ್ನ ಮೇಲೆ ಹಲ್ಲೆ ನಡೆಸಿತು. ಅವರು ಹೆಂಡತಿ ಮಕ್ಕಳು ಸೇರಿದಂತೆ ನನ್ನ ಕುಟುಂಬವನ್ನೂ ಗುರಿಯಾಗಿಸಿದ್ದಾರೆ” ಎಂದು ಶಿವಬದನ್ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.

ಮುಂದುವರಿದು, “ಆರೋಪಿಗಳು ನನ್ನನ್ನು ಸಮೀಪದ ದೇವಸ್ಥಾನಕ್ಕೆ ಎಳೆದೊಯ್ದು ತಲೆ ಬೋಳಿಸಿದರು. ನಂತರ ಗ್ರಾಮದಾದ್ಯಂತ ಮೆರವಣಿಗೆ ಮಾಡಿ ಮತ್ತೊಂದು ದೇವಸ್ಥಾನಕ್ಕೆ ಕರೆದೊಯ್ದು ಅಲ್ಲಿ ಹನುಮಾನ್ ಚಾಲೀಸಾ ಪಠಿಸುವಂತೆ ಒತ್ತಾಯಿಸಿ ಪದೇ ಪದೇ ಥಳಿಸಿದ್ದಾರೆ” ಎಂದು ವಿವರಿಸಿದ್ದಾರೆ.

“ನಾನು ಕ್ರೈಸ್ತ ಧರ್ಮ ಅನುಸರಿಸದಿದ್ದರೂ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿ ಜಿಲ್ಲಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ” ಎಂದು ಶಿವಬದನ್ ಹೇಳಿದ್ದಾರೆ.

ಮತ್ತೊಂದೆಡೆ ಆರೋಪಿ ರೋಹಿತ್ ದೀಕ್ಷಿತ್ ಕೂಡ ದೂರು ದಾಖಲಿಸಿದ್ದು, ಅದರಲ್ಲಿ ” ಡಿಸೆಂಬರ್ 26ರಂದು ನಾನು ಗ್ರಾಮದ ಅಂಗಡಿಯಲ್ಲಿ ಕುಳಿತಿದ್ದಾಗ ರಾಮ್ ಬಹದ್ದೂರ್, ಸಂತೋಷ್ ಮತ್ತು ಶಿವಪಾಲ್ ಪಾಸ್ವಾನ್ ಎಂಬ ಮೂವರು ಸಹಚರರು ಮತ್ತು ಇತರ ನಾಲ್ವರು ಅಪರಿಚಿತರ ಜೊತೆ ಕಾರಿನಲ್ಲಿ ಆಗಮಿಸಿದ ಶಿವಬದನ್ ಅವರು, ಕ್ರೈಸ್ತ ಧರ್ಮಕ್ಕೆ ಮತಾಂತರಗೊಳ್ಳಿ ನಿಮಗೆ ಆಸ್ಪತ್ರೆಯಲ್ಲಿ ಕೆಲಸ ಕೊಡಿಸುತ್ತೇನೆ. ಪ್ರಾರ್ಥನೆಗೆ ಬಂದವರಿಂದ ಹಣ ಸಂಗ್ರಹಿಸಿ ನೀಡುತ್ತೇನೆ ಎಂದು ಹೇಳಿದರು. ನಾನು ಮತಾಂತರಗೊಳ್ಳಲು ವಿರೋಧಿಸಿದಾಗ ಶಿವಬದನ್ ನನಗೆ ಕಿರುಕುಳ ನೀಡಿ, ಸುಳ್ಳು ಮೊಕದ್ದಮೆ ಹೂಡುವ ಬೆದರಿಕೆ ಹಾಕಿದ್ದಾರೆ”ಎಂದು ಆರೋಪಿಸಿದ್ದಾರೆ.

ರೋಹಿತ್ ದೀಕ್ಷಿತ್ ದೂರು ಆಧರಿಸಿ ಶಿವಬದನ್ ಆತನ ಸಹಚರರಾದ ರಾಮ್ ಬಹದ್ದೂರ್, ಸಂತೋಷ್ ಮತ್ತು ಶಿವಪಾಲ್ ಪಾಸ್ವಾನ್ ಹಾಗೂ ನಾಲ್ವರು ಅಪರಿಚಿತರ ವಿರುದ್ದ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ : ಒಡಿಶಾ | ಬುಡಕಟ್ಟು ಮಹಿಳೆಯರನ್ನು ಮರಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...