Homeದಲಿತ್ ಫೈಲ್ಸ್ದಲಿತ ವ್ಯಕ್ತಿ ಪೊಲೀಸ್ ಠಾಣೆಯಲ್ಲಿ ಸಾವು : ಕುಟುಂಬಸ್ಥರಿಂದ ಕೊಲೆ ಆರೋಪ

ದಲಿತ ವ್ಯಕ್ತಿ ಪೊಲೀಸ್ ಠಾಣೆಯಲ್ಲಿ ಸಾವು : ಕುಟುಂಬಸ್ಥರಿಂದ ಕೊಲೆ ಆರೋಪ

- Advertisement -
- Advertisement -

ಪೊಲೀಸ್ ಠಾಣೆಯಲ್ಲಿ 35 ವರ್ಷದ ದಲಿತ ವ್ಯಕ್ತಿಯೊಬ್ಬರು ಸಾವಿಗೀಡಾದ ಘಟನೆ ಮಧ್ಯಪ್ರದೇಶದ ದೇವಾಸ್ ಜಿಲ್ಲೆಯಲ್ಲಿ ಡಿಸೆಂಬರ್ 28ರಂದು ನಡೆದಿದ್ದು, ಆತನ ಕುಟುಂಬಸ್ಥರು ಮತ್ತು ರಾಜಕೀಯ ಪಕ್ಷಗಳ ಮುಖಂಡರು ಪೊಲೀಸರ ವಿರುದ್ದ ಕೊಲೆ ಆರೋಪ ಮಾಡಿದ್ದಾರೆ.

ಮೃತ ವ್ಯಕ್ತಿಯನ್ನು ಮುಖೇಶ್ ಲಾಂಗರೆ ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಡಿಸೆಂಬರ್ 26ರಂದು ಮುಖೇಶ್ ಅವರ ಗ್ರಾಮದ ಮಹಿಳೆಯೊಬ್ಬರು ಮುಖೇಶ್ ವಿರುದ್ದ ದೂರು ನೀಡಿದ್ದರು. ದೂರು ಆಧರಿಸಿ ಹೇಳಿಕೆ ದಾಖಲಿಸಿಕೊಳ್ಳಲು ಮುಖೇಶ್ ಅವರನ್ನು ಡಿಸೆಂಬರ್ 28ರಂದು ಸತ್ವಾಸ್ ಪೊಲೀಸ್ ಠಾಣೆಗೆ ಕರೆಯಲಾಗಿತ್ತು. ಈ ವೇಳೆ ಅವರು ಠಾಣೆಯಲ್ಲಿ ಸಾವನ್ನಪ್ಪಿದ್ದಾರೆ.

ಸಾವನ್ನಪ್ಪುವ ವೇಳೆ ಮುಖೇಶ್ ಅವರು ಪೊಲೀಸ್ ಕಸ್ಟಡಿಯಲ್ಲಿ ಇರಲಿಲ್ಲ. ಅವರು ಠಾಣೆಯ ಉಸ್ತುವಾರಿ ಅಧಿಕಾರಿ ಆಶಿಶ್ ರಜಪೂತ್ ಅವರ ಮುಂದೆ ವಿಚಾರಣಾ ಕೊಠಡಿಯಲ್ಲಿ ತನ್ನ ಹೇಳಿಕೆಯನ್ನು ದಾಖಲಿಸಿಕೊಳ್ಳುತ್ತಿದ್ದರು ಎಂದು ದೇವಾಸ್ ಪೊಲೀಸ್ ಅಧೀಕ್ಷಕ (ಎಸ್‌ಪಿ) ಪುನೀತ್ ಗಹ್ಲೋಟ್ ತಿಳಿಸಿದ್ದಾಗಿ ದಿ ಹಿಂದೂ ವರದಿ ಮಾಡಿದೆ.

ಮಹಿಳೆ ದೂರು ನೀಡಿದ ಬಳಿಕ ಮುಖೇಶ್ ವಿರುದ್ದದ ಪ್ರಕರಣವನ್ನು ಠಾಣೆಯ ಉಸ್ತುವಾರಿ ಅಧಿಕಾರಿ ಆಶಿಶ್ ರಜಪೂತ್ ನೋಡಿಕೊಳ್ಳುತ್ತಿದ್ದರು. ಮುಖೇಶ್ ಸಾವನ್ನಪ್ಪುವ ವೇಳೆ ಆಶಿಶ್ ಅವರು ಇನ್ನೊಂದು ಪ್ರಕರಣ ಸಂಬಂಧ ವಿಚಾರಣಾ ಕೊಠಡಿಯಿಂದ ಹೊರ ಹೋಗಿದ್ದರು. ಈ ವೇಳೆ ಮುಖೇಶ್ ಅವರು ತನ್ನಲ್ಲಿದ್ದ ಶಲ್ಯವನ್ನು ಕಿಟಕಿಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಠಾಣೆಯ ಸಿಬ್ಬಂದಿ ನೋಡಿದ ತಕ್ಷಣ ಅವರನ್ನು ನೇಣಿನಿಂದ ಬಿಡಿಸಿ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ ಎಂದು ಪೊಲೀಸ್ ಅಧೀಕ್ಷಕ ಪುನೀತ್ ಗಹ್ಲೋಟ್ ಹೇಳಿದ್ದಾರೆ ಎಂದು ವರದಿ ವಿವರಿಸಿದೆ.

ನ್ಯಾಯಾಂಗ ತನಿಖೆ

“ವಿಷಯ ತಿಳಿದ ಕೂಡಲೇ ಹಿರಿಯ ಅಧಿಕಾರಿಗಳನ್ನು ಸತ್ವಾಸ್‌ಗೆ ದೌಡಾಯಿಸಿದ್ದೇವೆ. ಮುಖೇಶ್ ಅವರು ಠಾಣೆಯೊಳಗೆ ಆತ್ಮಹತ್ಯೆ ಮಾಡಿಕೊಂಡಿರುವುದರಿಂದ, ಕಸ್ಟಡಿ ಸಾವಿನ ಪ್ರಕರಣಗಳಲ್ಲಿ ಅನುಸರಿಸುವ ಎಲ್ಲಾ ಮಾನವ ಹಕ್ಕುಗಳ ಆಯೋಗದ ಎಲ್ಲಾ ಮಾರ್ಗಸೂಚಿಗಳನ್ನು ನಾವು ಅನುಸರಿಸಿದ್ದೇವೆ. ಉದಾ : ಕೊಠಡಿಯನ್ನು ಸೀಲ್ ಮಾಡುವುದು ಮತ್ತು ನ್ಯಾಯಾಂಗ ತನಿಖೆಗಾಗಿ ಜಿಲ್ಲಾ ನ್ಯಾಯಾಧೀಶರಿಗೆ ತಿಳಿಸುವುದು” ಎಂದು ಎಸ್‌ಪಿ ತಿಳಿಸಿದ್ದಾರೆ.

ನ್ಯಾಯಾಂಗ ತನಿಖೆ ನಡೆಸಲು ಶನಿವಾರ (ಡಿಸೆಂಬರ್ 28, 2024) ಸಂಜೆ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ (ಜೆಎಂಎಫ್‌ಸಿ) ನಂದನಿ ಉಯಿಕೆ ಅವರನ್ನು ನೇಮಿಸಲಾಗಿದೆ ಮತ್ತು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ನ್ಯಾಯಾಧೀಶರು ಮೂವರು ವೈದ್ಯರ ಸಮಿತಿಯನ್ನು ಹೆಸರಿಸಿದ್ದಾರೆ ಎಂದು ಎಸ್‌ಪಿ ಗಹ್ಲೋಟ್ ಮಾಹಿತಿ ನೀಡಿದ್ದಾರೆ.

“ನಾವು ಘಟನಾ ಸ್ಥಳದ ಪರಿಶೀಲನೆಗಾಗಿ ಉಜ್ಜಯಿನಿಯಿಂದ ವಿಧಿವಿಜ್ಞಾನ ಅಧಿಕಾರಿಯನ್ನು ಕರೆಸಿದ್ದೇವೆ. ಶನಿವಾರ (ಡಿಸೆಂಬರ್ 28, 2024) ತಡರಾತ್ರಿ ಠಾಣಾ ಉಸ್ತುವಾರಿಯನ್ನು ಅಮಾನತುಗೊಳಿಸಲಾಗಿದೆ. ಠಾಣೆಯ ಎಲ್ಲಾ ಸಿಸಿಟಿವಿ ದೃಶ್ಯಾವಳಿಗಳನ್ನು ನ್ಯಾಯಾಂಗ ತನಿಖಾ ತಂಡ ವಶಪಡಿಸಿಕೊಂಡಿದೆ. ಮ್ಯಾಜಿಸ್ಟ್ರೇಟ್ ಉಯಿಕೆ ಮತ್ತು ವಿಧಿವಿಜ್ಞಾನ ತಂಡ ಭಾನುವಾರ (ಡಿಸೆಂಬರ್ 29, 2024) ಬೆಳಿಗ್ಗೆ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಗಹ್ಲೋಟ್ ಹೇಳಿದ್ದಾರೆ.

ಕೊಲೆ ಆರೋಪ

ಮುಖೇಶ್ ಅವರ ಸಾವಿಗೆ ಸಂಬಂಧಿಸಿದಂತೆ ಭೀಮ್ ಆರ್ಮಿ ಕಾರ್ಯಕರ್ತರು ಮತ್ತು ಮೃತರ ಕುಟುಂಬಸ್ಥರು ಸ್ಥಳೀಯ ಪೊಲೀಸರ ವಿರುದ್ದ ಕೊಲೆ ಆರೋಪ ಮಾಡಿದ್ದಾರೆ. ಭೀಮ್ ಆರ್ಮಿ ಕಾರ್ಯಕರ್ತರು ಮೂರು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ : ನ್ಯಾಯಾಂಗ ತನಿಖೆ, ಅಪರಾಧಿಗಳಿಗೆ ಶಿಕ್ಷೆ ಮತ್ತು ಕುಟುಂಬಕ್ಕೆ ಆರ್ಥಿಕ ಪರಿಹಾರ. “ಅವರ ಎರಡು ಬೇಡಿಕೆಗಳನ್ನು ಈಗಾಗಲೇ ಈಡೇರಿಸಲಾಗಿದೆ ಮತ್ತು ಪರಿಹಾರದ ಬಗ್ಗೆ ನಾವು ಉನ್ನತ ಅಧಿಕಾರಿಗಳಿಗೆ ತಿಳಿಸಿದ್ದೇವೆ” ಎಂದು ಎಸ್‌ಪಿ ಹೇಳಿದ್ದಾರೆ.

ಭಾನುವಾರ (ಡಿಸೆಂಬರ್ 29, 2024) ಮಧ್ಯಾಹ್ನ, ಮಧ್ಯಪ್ರದೇಶ ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷ ಜಿತು ಪಟ್ವಾರಿ ಅವರು ಸತ್ವಾಸ್ ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿದ್ದು, ಠಾಣೆಯ ಎಲ್ಲಾ ಸಿಬ್ಬಂದಿಯನ್ನು ಅಮಾನತುಗೊಳಿಸಬೇಕು ಮತ್ತು ಮೃತನ ಕುಟುಂಬಸ್ಥರಿಗೆ 1 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಮುಖ್ಯಮಂತ್ರಿ ಮೋಹನ್ ಯಾದವ್ ಅವರಿಗೆ ಒತ್ತಾಯಿಸಿದ್ದಾರೆ.

ಪೊಲೀಸ್ ಅಧಿಕಾರಿಗಳು ಮುಖೇಶ್ ಲಾಂಗ್ರೆ ಅವರಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಹಣ ಕೊಡದ ಕಾರಣ ಕೊಲೆ ಮಾಡಿದ್ದಾರೆ ಎಂದು ಜಿತು ಪಟ್ವಾರಿ ಆರೋಪಿಸಿದ್ದಾರೆ.

ಪ್ರಕರಣದ ಹಿಂದೆ ರಾಜಕೀಯ

ಮೃತ ಮುಖೇಶ್ ಅವರ ಕುಟುಂಬವು ಆರಂಭದಲ್ಲಿ ಯಾವುದೇ ಆರೋಪವನ್ನು ಮಾಡಿರಲಿಲ್ಲ. ಮರಣೋತ್ತರ ಪರೀಕ್ಷೆಗೆ ಮಾಡುವುದಕ್ಕೆ ಮಾತ್ರ ನಿರಾಕದ್ದರು. ಕೆಲ ರಾಜಕಾರಣಿಗಳ ಸಂಪರ್ಕಕ್ಕೆ ಬಂದ ನಂತರವೇ ಅವರು ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ನ್ಯಾಯಾಂಗ ತನಿಖೆ ನಡೆಯುತ್ತಿದೆ ಮತ್ತು ಹೆಚ್ಚುವರಿ ಎಸ್ಪಿ (ಗ್ರಾಮೀಣ) ಅವರು ಲಂಚದ ಆರೋಪದ ಬಗ್ಗೆಯೂ ಪ್ರತ್ಯೇಕವಾಗಿ ತನಿಖೆ ನಡೆಸುತ್ತಿದ್ದಾರೆ. ಭಾನುವಾರ (ಡಿಸೆಂಬರ್ 29, 2024) ರಾತ್ರಿ ನಡೆಸಲಾದ ಮರಣೋತ್ತರ ಪರೀಕ್ಷೆಗೆ ಮುಖೇಶ್ ಅವರ ಕುಟುಂಬಸ್ಥರು ಒಪ್ಪಿಗೆ ನೀಡಿದ್ದಾರೆ ಎಂದು ಎಸ್‌ಪಿ ಗಹ್ಲೋಟ್ ತಿಳಿಸಿದ್ದಾರೆ.

ಮತ್ತೊಬ್ಬರು ಪೊಲೀಸ್ ಅಧಿಕಾರಿ ಮಾತನಾಡಿ, ” ಮೃತ ಮುಖೇಶ್ ಲಾಂಗ್ರೆ ಅವರ ವಿರುದ್ದ 6 ಕ್ರಿಮಿನಲ್ ಪ್ರಕರಣಗಳಿವೆ. ಮುಖೇಶ್ ವಿರುದ್ದ ದೂರು ನೀಡಿರುವ ಮಹಿಳೆ ಕಳೆದ ಆಗಸ್ಟ್‌ನಲ್ಲಿಯೂ ದೂರು ನೀಡಿದ್ದರು. ಇತ್ತೀಚಿನ ದೂರಿನಲ್ಲಿ, ಮುಖೇಶ್ ಅವರು ಪಾನಮತ್ತನಾಗಿ ಬಂದು ತನಗೆ ಮತ್ತು ತನ್ನ ಗಂಡನಿಗೆ ನಿಂದಿಸಿದ್ದಾರೆ, ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ : ಒಡಿಶಾ | ಬುಡಕಟ್ಟು ಮಹಿಳೆಯರನ್ನು ಮರಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...