Homeದಲಿತ್ ಫೈಲ್ಸ್ದಲಿತ ವ್ಯಕ್ತಿ ಪೊಲೀಸ್ ಠಾಣೆಯಲ್ಲಿ ಸಾವು : ಕುಟುಂಬಸ್ಥರಿಂದ ಕೊಲೆ ಆರೋಪ

ದಲಿತ ವ್ಯಕ್ತಿ ಪೊಲೀಸ್ ಠಾಣೆಯಲ್ಲಿ ಸಾವು : ಕುಟುಂಬಸ್ಥರಿಂದ ಕೊಲೆ ಆರೋಪ

- Advertisement -
- Advertisement -

ಪೊಲೀಸ್ ಠಾಣೆಯಲ್ಲಿ 35 ವರ್ಷದ ದಲಿತ ವ್ಯಕ್ತಿಯೊಬ್ಬರು ಸಾವಿಗೀಡಾದ ಘಟನೆ ಮಧ್ಯಪ್ರದೇಶದ ದೇವಾಸ್ ಜಿಲ್ಲೆಯಲ್ಲಿ ಡಿಸೆಂಬರ್ 28ರಂದು ನಡೆದಿದ್ದು, ಆತನ ಕುಟುಂಬಸ್ಥರು ಮತ್ತು ರಾಜಕೀಯ ಪಕ್ಷಗಳ ಮುಖಂಡರು ಪೊಲೀಸರ ವಿರುದ್ದ ಕೊಲೆ ಆರೋಪ ಮಾಡಿದ್ದಾರೆ.

ಮೃತ ವ್ಯಕ್ತಿಯನ್ನು ಮುಖೇಶ್ ಲಾಂಗರೆ ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಡಿಸೆಂಬರ್ 26ರಂದು ಮುಖೇಶ್ ಅವರ ಗ್ರಾಮದ ಮಹಿಳೆಯೊಬ್ಬರು ಮುಖೇಶ್ ವಿರುದ್ದ ದೂರು ನೀಡಿದ್ದರು. ದೂರು ಆಧರಿಸಿ ಹೇಳಿಕೆ ದಾಖಲಿಸಿಕೊಳ್ಳಲು ಮುಖೇಶ್ ಅವರನ್ನು ಡಿಸೆಂಬರ್ 28ರಂದು ಸತ್ವಾಸ್ ಪೊಲೀಸ್ ಠಾಣೆಗೆ ಕರೆಯಲಾಗಿತ್ತು. ಈ ವೇಳೆ ಅವರು ಠಾಣೆಯಲ್ಲಿ ಸಾವನ್ನಪ್ಪಿದ್ದಾರೆ.

ಸಾವನ್ನಪ್ಪುವ ವೇಳೆ ಮುಖೇಶ್ ಅವರು ಪೊಲೀಸ್ ಕಸ್ಟಡಿಯಲ್ಲಿ ಇರಲಿಲ್ಲ. ಅವರು ಠಾಣೆಯ ಉಸ್ತುವಾರಿ ಅಧಿಕಾರಿ ಆಶಿಶ್ ರಜಪೂತ್ ಅವರ ಮುಂದೆ ವಿಚಾರಣಾ ಕೊಠಡಿಯಲ್ಲಿ ತನ್ನ ಹೇಳಿಕೆಯನ್ನು ದಾಖಲಿಸಿಕೊಳ್ಳುತ್ತಿದ್ದರು ಎಂದು ದೇವಾಸ್ ಪೊಲೀಸ್ ಅಧೀಕ್ಷಕ (ಎಸ್‌ಪಿ) ಪುನೀತ್ ಗಹ್ಲೋಟ್ ತಿಳಿಸಿದ್ದಾಗಿ ದಿ ಹಿಂದೂ ವರದಿ ಮಾಡಿದೆ.

ಮಹಿಳೆ ದೂರು ನೀಡಿದ ಬಳಿಕ ಮುಖೇಶ್ ವಿರುದ್ದದ ಪ್ರಕರಣವನ್ನು ಠಾಣೆಯ ಉಸ್ತುವಾರಿ ಅಧಿಕಾರಿ ಆಶಿಶ್ ರಜಪೂತ್ ನೋಡಿಕೊಳ್ಳುತ್ತಿದ್ದರು. ಮುಖೇಶ್ ಸಾವನ್ನಪ್ಪುವ ವೇಳೆ ಆಶಿಶ್ ಅವರು ಇನ್ನೊಂದು ಪ್ರಕರಣ ಸಂಬಂಧ ವಿಚಾರಣಾ ಕೊಠಡಿಯಿಂದ ಹೊರ ಹೋಗಿದ್ದರು. ಈ ವೇಳೆ ಮುಖೇಶ್ ಅವರು ತನ್ನಲ್ಲಿದ್ದ ಶಲ್ಯವನ್ನು ಕಿಟಕಿಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಠಾಣೆಯ ಸಿಬ್ಬಂದಿ ನೋಡಿದ ತಕ್ಷಣ ಅವರನ್ನು ನೇಣಿನಿಂದ ಬಿಡಿಸಿ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ ಎಂದು ಪೊಲೀಸ್ ಅಧೀಕ್ಷಕ ಪುನೀತ್ ಗಹ್ಲೋಟ್ ಹೇಳಿದ್ದಾರೆ ಎಂದು ವರದಿ ವಿವರಿಸಿದೆ.

ನ್ಯಾಯಾಂಗ ತನಿಖೆ

“ವಿಷಯ ತಿಳಿದ ಕೂಡಲೇ ಹಿರಿಯ ಅಧಿಕಾರಿಗಳನ್ನು ಸತ್ವಾಸ್‌ಗೆ ದೌಡಾಯಿಸಿದ್ದೇವೆ. ಮುಖೇಶ್ ಅವರು ಠಾಣೆಯೊಳಗೆ ಆತ್ಮಹತ್ಯೆ ಮಾಡಿಕೊಂಡಿರುವುದರಿಂದ, ಕಸ್ಟಡಿ ಸಾವಿನ ಪ್ರಕರಣಗಳಲ್ಲಿ ಅನುಸರಿಸುವ ಎಲ್ಲಾ ಮಾನವ ಹಕ್ಕುಗಳ ಆಯೋಗದ ಎಲ್ಲಾ ಮಾರ್ಗಸೂಚಿಗಳನ್ನು ನಾವು ಅನುಸರಿಸಿದ್ದೇವೆ. ಉದಾ : ಕೊಠಡಿಯನ್ನು ಸೀಲ್ ಮಾಡುವುದು ಮತ್ತು ನ್ಯಾಯಾಂಗ ತನಿಖೆಗಾಗಿ ಜಿಲ್ಲಾ ನ್ಯಾಯಾಧೀಶರಿಗೆ ತಿಳಿಸುವುದು” ಎಂದು ಎಸ್‌ಪಿ ತಿಳಿಸಿದ್ದಾರೆ.

ನ್ಯಾಯಾಂಗ ತನಿಖೆ ನಡೆಸಲು ಶನಿವಾರ (ಡಿಸೆಂಬರ್ 28, 2024) ಸಂಜೆ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ (ಜೆಎಂಎಫ್‌ಸಿ) ನಂದನಿ ಉಯಿಕೆ ಅವರನ್ನು ನೇಮಿಸಲಾಗಿದೆ ಮತ್ತು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ನ್ಯಾಯಾಧೀಶರು ಮೂವರು ವೈದ್ಯರ ಸಮಿತಿಯನ್ನು ಹೆಸರಿಸಿದ್ದಾರೆ ಎಂದು ಎಸ್‌ಪಿ ಗಹ್ಲೋಟ್ ಮಾಹಿತಿ ನೀಡಿದ್ದಾರೆ.

“ನಾವು ಘಟನಾ ಸ್ಥಳದ ಪರಿಶೀಲನೆಗಾಗಿ ಉಜ್ಜಯಿನಿಯಿಂದ ವಿಧಿವಿಜ್ಞಾನ ಅಧಿಕಾರಿಯನ್ನು ಕರೆಸಿದ್ದೇವೆ. ಶನಿವಾರ (ಡಿಸೆಂಬರ್ 28, 2024) ತಡರಾತ್ರಿ ಠಾಣಾ ಉಸ್ತುವಾರಿಯನ್ನು ಅಮಾನತುಗೊಳಿಸಲಾಗಿದೆ. ಠಾಣೆಯ ಎಲ್ಲಾ ಸಿಸಿಟಿವಿ ದೃಶ್ಯಾವಳಿಗಳನ್ನು ನ್ಯಾಯಾಂಗ ತನಿಖಾ ತಂಡ ವಶಪಡಿಸಿಕೊಂಡಿದೆ. ಮ್ಯಾಜಿಸ್ಟ್ರೇಟ್ ಉಯಿಕೆ ಮತ್ತು ವಿಧಿವಿಜ್ಞಾನ ತಂಡ ಭಾನುವಾರ (ಡಿಸೆಂಬರ್ 29, 2024) ಬೆಳಿಗ್ಗೆ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಗಹ್ಲೋಟ್ ಹೇಳಿದ್ದಾರೆ.

ಕೊಲೆ ಆರೋಪ

ಮುಖೇಶ್ ಅವರ ಸಾವಿಗೆ ಸಂಬಂಧಿಸಿದಂತೆ ಭೀಮ್ ಆರ್ಮಿ ಕಾರ್ಯಕರ್ತರು ಮತ್ತು ಮೃತರ ಕುಟುಂಬಸ್ಥರು ಸ್ಥಳೀಯ ಪೊಲೀಸರ ವಿರುದ್ದ ಕೊಲೆ ಆರೋಪ ಮಾಡಿದ್ದಾರೆ. ಭೀಮ್ ಆರ್ಮಿ ಕಾರ್ಯಕರ್ತರು ಮೂರು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ : ನ್ಯಾಯಾಂಗ ತನಿಖೆ, ಅಪರಾಧಿಗಳಿಗೆ ಶಿಕ್ಷೆ ಮತ್ತು ಕುಟುಂಬಕ್ಕೆ ಆರ್ಥಿಕ ಪರಿಹಾರ. “ಅವರ ಎರಡು ಬೇಡಿಕೆಗಳನ್ನು ಈಗಾಗಲೇ ಈಡೇರಿಸಲಾಗಿದೆ ಮತ್ತು ಪರಿಹಾರದ ಬಗ್ಗೆ ನಾವು ಉನ್ನತ ಅಧಿಕಾರಿಗಳಿಗೆ ತಿಳಿಸಿದ್ದೇವೆ” ಎಂದು ಎಸ್‌ಪಿ ಹೇಳಿದ್ದಾರೆ.

ಭಾನುವಾರ (ಡಿಸೆಂಬರ್ 29, 2024) ಮಧ್ಯಾಹ್ನ, ಮಧ್ಯಪ್ರದೇಶ ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷ ಜಿತು ಪಟ್ವಾರಿ ಅವರು ಸತ್ವಾಸ್ ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿದ್ದು, ಠಾಣೆಯ ಎಲ್ಲಾ ಸಿಬ್ಬಂದಿಯನ್ನು ಅಮಾನತುಗೊಳಿಸಬೇಕು ಮತ್ತು ಮೃತನ ಕುಟುಂಬಸ್ಥರಿಗೆ 1 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಮುಖ್ಯಮಂತ್ರಿ ಮೋಹನ್ ಯಾದವ್ ಅವರಿಗೆ ಒತ್ತಾಯಿಸಿದ್ದಾರೆ.

ಪೊಲೀಸ್ ಅಧಿಕಾರಿಗಳು ಮುಖೇಶ್ ಲಾಂಗ್ರೆ ಅವರಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಹಣ ಕೊಡದ ಕಾರಣ ಕೊಲೆ ಮಾಡಿದ್ದಾರೆ ಎಂದು ಜಿತು ಪಟ್ವಾರಿ ಆರೋಪಿಸಿದ್ದಾರೆ.

ಪ್ರಕರಣದ ಹಿಂದೆ ರಾಜಕೀಯ

ಮೃತ ಮುಖೇಶ್ ಅವರ ಕುಟುಂಬವು ಆರಂಭದಲ್ಲಿ ಯಾವುದೇ ಆರೋಪವನ್ನು ಮಾಡಿರಲಿಲ್ಲ. ಮರಣೋತ್ತರ ಪರೀಕ್ಷೆಗೆ ಮಾಡುವುದಕ್ಕೆ ಮಾತ್ರ ನಿರಾಕದ್ದರು. ಕೆಲ ರಾಜಕಾರಣಿಗಳ ಸಂಪರ್ಕಕ್ಕೆ ಬಂದ ನಂತರವೇ ಅವರು ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ನ್ಯಾಯಾಂಗ ತನಿಖೆ ನಡೆಯುತ್ತಿದೆ ಮತ್ತು ಹೆಚ್ಚುವರಿ ಎಸ್ಪಿ (ಗ್ರಾಮೀಣ) ಅವರು ಲಂಚದ ಆರೋಪದ ಬಗ್ಗೆಯೂ ಪ್ರತ್ಯೇಕವಾಗಿ ತನಿಖೆ ನಡೆಸುತ್ತಿದ್ದಾರೆ. ಭಾನುವಾರ (ಡಿಸೆಂಬರ್ 29, 2024) ರಾತ್ರಿ ನಡೆಸಲಾದ ಮರಣೋತ್ತರ ಪರೀಕ್ಷೆಗೆ ಮುಖೇಶ್ ಅವರ ಕುಟುಂಬಸ್ಥರು ಒಪ್ಪಿಗೆ ನೀಡಿದ್ದಾರೆ ಎಂದು ಎಸ್‌ಪಿ ಗಹ್ಲೋಟ್ ತಿಳಿಸಿದ್ದಾರೆ.

ಮತ್ತೊಬ್ಬರು ಪೊಲೀಸ್ ಅಧಿಕಾರಿ ಮಾತನಾಡಿ, ” ಮೃತ ಮುಖೇಶ್ ಲಾಂಗ್ರೆ ಅವರ ವಿರುದ್ದ 6 ಕ್ರಿಮಿನಲ್ ಪ್ರಕರಣಗಳಿವೆ. ಮುಖೇಶ್ ವಿರುದ್ದ ದೂರು ನೀಡಿರುವ ಮಹಿಳೆ ಕಳೆದ ಆಗಸ್ಟ್‌ನಲ್ಲಿಯೂ ದೂರು ನೀಡಿದ್ದರು. ಇತ್ತೀಚಿನ ದೂರಿನಲ್ಲಿ, ಮುಖೇಶ್ ಅವರು ಪಾನಮತ್ತನಾಗಿ ಬಂದು ತನಗೆ ಮತ್ತು ತನ್ನ ಗಂಡನಿಗೆ ನಿಂದಿಸಿದ್ದಾರೆ, ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ : ಒಡಿಶಾ | ಬುಡಕಟ್ಟು ಮಹಿಳೆಯರನ್ನು ಮರಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...