Homeದಲಿತ್ ಫೈಲ್ಸ್ದಲಿತ ವ್ಯಕ್ತಿ ಪೊಲೀಸ್ ಠಾಣೆಯಲ್ಲಿ ಸಾವು : ಕುಟುಂಬಸ್ಥರಿಂದ ಕೊಲೆ ಆರೋಪ

ದಲಿತ ವ್ಯಕ್ತಿ ಪೊಲೀಸ್ ಠಾಣೆಯಲ್ಲಿ ಸಾವು : ಕುಟುಂಬಸ್ಥರಿಂದ ಕೊಲೆ ಆರೋಪ

- Advertisement -
- Advertisement -

ಪೊಲೀಸ್ ಠಾಣೆಯಲ್ಲಿ 35 ವರ್ಷದ ದಲಿತ ವ್ಯಕ್ತಿಯೊಬ್ಬರು ಸಾವಿಗೀಡಾದ ಘಟನೆ ಮಧ್ಯಪ್ರದೇಶದ ದೇವಾಸ್ ಜಿಲ್ಲೆಯಲ್ಲಿ ಡಿಸೆಂಬರ್ 28ರಂದು ನಡೆದಿದ್ದು, ಆತನ ಕುಟುಂಬಸ್ಥರು ಮತ್ತು ರಾಜಕೀಯ ಪಕ್ಷಗಳ ಮುಖಂಡರು ಪೊಲೀಸರ ವಿರುದ್ದ ಕೊಲೆ ಆರೋಪ ಮಾಡಿದ್ದಾರೆ.

ಮೃತ ವ್ಯಕ್ತಿಯನ್ನು ಮುಖೇಶ್ ಲಾಂಗರೆ ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಡಿಸೆಂಬರ್ 26ರಂದು ಮುಖೇಶ್ ಅವರ ಗ್ರಾಮದ ಮಹಿಳೆಯೊಬ್ಬರು ಮುಖೇಶ್ ವಿರುದ್ದ ದೂರು ನೀಡಿದ್ದರು. ದೂರು ಆಧರಿಸಿ ಹೇಳಿಕೆ ದಾಖಲಿಸಿಕೊಳ್ಳಲು ಮುಖೇಶ್ ಅವರನ್ನು ಡಿಸೆಂಬರ್ 28ರಂದು ಸತ್ವಾಸ್ ಪೊಲೀಸ್ ಠಾಣೆಗೆ ಕರೆಯಲಾಗಿತ್ತು. ಈ ವೇಳೆ ಅವರು ಠಾಣೆಯಲ್ಲಿ ಸಾವನ್ನಪ್ಪಿದ್ದಾರೆ.

ಸಾವನ್ನಪ್ಪುವ ವೇಳೆ ಮುಖೇಶ್ ಅವರು ಪೊಲೀಸ್ ಕಸ್ಟಡಿಯಲ್ಲಿ ಇರಲಿಲ್ಲ. ಅವರು ಠಾಣೆಯ ಉಸ್ತುವಾರಿ ಅಧಿಕಾರಿ ಆಶಿಶ್ ರಜಪೂತ್ ಅವರ ಮುಂದೆ ವಿಚಾರಣಾ ಕೊಠಡಿಯಲ್ಲಿ ತನ್ನ ಹೇಳಿಕೆಯನ್ನು ದಾಖಲಿಸಿಕೊಳ್ಳುತ್ತಿದ್ದರು ಎಂದು ದೇವಾಸ್ ಪೊಲೀಸ್ ಅಧೀಕ್ಷಕ (ಎಸ್‌ಪಿ) ಪುನೀತ್ ಗಹ್ಲೋಟ್ ತಿಳಿಸಿದ್ದಾಗಿ ದಿ ಹಿಂದೂ ವರದಿ ಮಾಡಿದೆ.

ಮಹಿಳೆ ದೂರು ನೀಡಿದ ಬಳಿಕ ಮುಖೇಶ್ ವಿರುದ್ದದ ಪ್ರಕರಣವನ್ನು ಠಾಣೆಯ ಉಸ್ತುವಾರಿ ಅಧಿಕಾರಿ ಆಶಿಶ್ ರಜಪೂತ್ ನೋಡಿಕೊಳ್ಳುತ್ತಿದ್ದರು. ಮುಖೇಶ್ ಸಾವನ್ನಪ್ಪುವ ವೇಳೆ ಆಶಿಶ್ ಅವರು ಇನ್ನೊಂದು ಪ್ರಕರಣ ಸಂಬಂಧ ವಿಚಾರಣಾ ಕೊಠಡಿಯಿಂದ ಹೊರ ಹೋಗಿದ್ದರು. ಈ ವೇಳೆ ಮುಖೇಶ್ ಅವರು ತನ್ನಲ್ಲಿದ್ದ ಶಲ್ಯವನ್ನು ಕಿಟಕಿಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಠಾಣೆಯ ಸಿಬ್ಬಂದಿ ನೋಡಿದ ತಕ್ಷಣ ಅವರನ್ನು ನೇಣಿನಿಂದ ಬಿಡಿಸಿ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ ಎಂದು ಪೊಲೀಸ್ ಅಧೀಕ್ಷಕ ಪುನೀತ್ ಗಹ್ಲೋಟ್ ಹೇಳಿದ್ದಾರೆ ಎಂದು ವರದಿ ವಿವರಿಸಿದೆ.

ನ್ಯಾಯಾಂಗ ತನಿಖೆ

“ವಿಷಯ ತಿಳಿದ ಕೂಡಲೇ ಹಿರಿಯ ಅಧಿಕಾರಿಗಳನ್ನು ಸತ್ವಾಸ್‌ಗೆ ದೌಡಾಯಿಸಿದ್ದೇವೆ. ಮುಖೇಶ್ ಅವರು ಠಾಣೆಯೊಳಗೆ ಆತ್ಮಹತ್ಯೆ ಮಾಡಿಕೊಂಡಿರುವುದರಿಂದ, ಕಸ್ಟಡಿ ಸಾವಿನ ಪ್ರಕರಣಗಳಲ್ಲಿ ಅನುಸರಿಸುವ ಎಲ್ಲಾ ಮಾನವ ಹಕ್ಕುಗಳ ಆಯೋಗದ ಎಲ್ಲಾ ಮಾರ್ಗಸೂಚಿಗಳನ್ನು ನಾವು ಅನುಸರಿಸಿದ್ದೇವೆ. ಉದಾ : ಕೊಠಡಿಯನ್ನು ಸೀಲ್ ಮಾಡುವುದು ಮತ್ತು ನ್ಯಾಯಾಂಗ ತನಿಖೆಗಾಗಿ ಜಿಲ್ಲಾ ನ್ಯಾಯಾಧೀಶರಿಗೆ ತಿಳಿಸುವುದು” ಎಂದು ಎಸ್‌ಪಿ ತಿಳಿಸಿದ್ದಾರೆ.

ನ್ಯಾಯಾಂಗ ತನಿಖೆ ನಡೆಸಲು ಶನಿವಾರ (ಡಿಸೆಂಬರ್ 28, 2024) ಸಂಜೆ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ (ಜೆಎಂಎಫ್‌ಸಿ) ನಂದನಿ ಉಯಿಕೆ ಅವರನ್ನು ನೇಮಿಸಲಾಗಿದೆ ಮತ್ತು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ನ್ಯಾಯಾಧೀಶರು ಮೂವರು ವೈದ್ಯರ ಸಮಿತಿಯನ್ನು ಹೆಸರಿಸಿದ್ದಾರೆ ಎಂದು ಎಸ್‌ಪಿ ಗಹ್ಲೋಟ್ ಮಾಹಿತಿ ನೀಡಿದ್ದಾರೆ.

“ನಾವು ಘಟನಾ ಸ್ಥಳದ ಪರಿಶೀಲನೆಗಾಗಿ ಉಜ್ಜಯಿನಿಯಿಂದ ವಿಧಿವಿಜ್ಞಾನ ಅಧಿಕಾರಿಯನ್ನು ಕರೆಸಿದ್ದೇವೆ. ಶನಿವಾರ (ಡಿಸೆಂಬರ್ 28, 2024) ತಡರಾತ್ರಿ ಠಾಣಾ ಉಸ್ತುವಾರಿಯನ್ನು ಅಮಾನತುಗೊಳಿಸಲಾಗಿದೆ. ಠಾಣೆಯ ಎಲ್ಲಾ ಸಿಸಿಟಿವಿ ದೃಶ್ಯಾವಳಿಗಳನ್ನು ನ್ಯಾಯಾಂಗ ತನಿಖಾ ತಂಡ ವಶಪಡಿಸಿಕೊಂಡಿದೆ. ಮ್ಯಾಜಿಸ್ಟ್ರೇಟ್ ಉಯಿಕೆ ಮತ್ತು ವಿಧಿವಿಜ್ಞಾನ ತಂಡ ಭಾನುವಾರ (ಡಿಸೆಂಬರ್ 29, 2024) ಬೆಳಿಗ್ಗೆ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಗಹ್ಲೋಟ್ ಹೇಳಿದ್ದಾರೆ.

ಕೊಲೆ ಆರೋಪ

ಮುಖೇಶ್ ಅವರ ಸಾವಿಗೆ ಸಂಬಂಧಿಸಿದಂತೆ ಭೀಮ್ ಆರ್ಮಿ ಕಾರ್ಯಕರ್ತರು ಮತ್ತು ಮೃತರ ಕುಟುಂಬಸ್ಥರು ಸ್ಥಳೀಯ ಪೊಲೀಸರ ವಿರುದ್ದ ಕೊಲೆ ಆರೋಪ ಮಾಡಿದ್ದಾರೆ. ಭೀಮ್ ಆರ್ಮಿ ಕಾರ್ಯಕರ್ತರು ಮೂರು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ : ನ್ಯಾಯಾಂಗ ತನಿಖೆ, ಅಪರಾಧಿಗಳಿಗೆ ಶಿಕ್ಷೆ ಮತ್ತು ಕುಟುಂಬಕ್ಕೆ ಆರ್ಥಿಕ ಪರಿಹಾರ. “ಅವರ ಎರಡು ಬೇಡಿಕೆಗಳನ್ನು ಈಗಾಗಲೇ ಈಡೇರಿಸಲಾಗಿದೆ ಮತ್ತು ಪರಿಹಾರದ ಬಗ್ಗೆ ನಾವು ಉನ್ನತ ಅಧಿಕಾರಿಗಳಿಗೆ ತಿಳಿಸಿದ್ದೇವೆ” ಎಂದು ಎಸ್‌ಪಿ ಹೇಳಿದ್ದಾರೆ.

ಭಾನುವಾರ (ಡಿಸೆಂಬರ್ 29, 2024) ಮಧ್ಯಾಹ್ನ, ಮಧ್ಯಪ್ರದೇಶ ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷ ಜಿತು ಪಟ್ವಾರಿ ಅವರು ಸತ್ವಾಸ್ ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿದ್ದು, ಠಾಣೆಯ ಎಲ್ಲಾ ಸಿಬ್ಬಂದಿಯನ್ನು ಅಮಾನತುಗೊಳಿಸಬೇಕು ಮತ್ತು ಮೃತನ ಕುಟುಂಬಸ್ಥರಿಗೆ 1 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಮುಖ್ಯಮಂತ್ರಿ ಮೋಹನ್ ಯಾದವ್ ಅವರಿಗೆ ಒತ್ತಾಯಿಸಿದ್ದಾರೆ.

ಪೊಲೀಸ್ ಅಧಿಕಾರಿಗಳು ಮುಖೇಶ್ ಲಾಂಗ್ರೆ ಅವರಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಹಣ ಕೊಡದ ಕಾರಣ ಕೊಲೆ ಮಾಡಿದ್ದಾರೆ ಎಂದು ಜಿತು ಪಟ್ವಾರಿ ಆರೋಪಿಸಿದ್ದಾರೆ.

ಪ್ರಕರಣದ ಹಿಂದೆ ರಾಜಕೀಯ

ಮೃತ ಮುಖೇಶ್ ಅವರ ಕುಟುಂಬವು ಆರಂಭದಲ್ಲಿ ಯಾವುದೇ ಆರೋಪವನ್ನು ಮಾಡಿರಲಿಲ್ಲ. ಮರಣೋತ್ತರ ಪರೀಕ್ಷೆಗೆ ಮಾಡುವುದಕ್ಕೆ ಮಾತ್ರ ನಿರಾಕದ್ದರು. ಕೆಲ ರಾಜಕಾರಣಿಗಳ ಸಂಪರ್ಕಕ್ಕೆ ಬಂದ ನಂತರವೇ ಅವರು ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ನ್ಯಾಯಾಂಗ ತನಿಖೆ ನಡೆಯುತ್ತಿದೆ ಮತ್ತು ಹೆಚ್ಚುವರಿ ಎಸ್ಪಿ (ಗ್ರಾಮೀಣ) ಅವರು ಲಂಚದ ಆರೋಪದ ಬಗ್ಗೆಯೂ ಪ್ರತ್ಯೇಕವಾಗಿ ತನಿಖೆ ನಡೆಸುತ್ತಿದ್ದಾರೆ. ಭಾನುವಾರ (ಡಿಸೆಂಬರ್ 29, 2024) ರಾತ್ರಿ ನಡೆಸಲಾದ ಮರಣೋತ್ತರ ಪರೀಕ್ಷೆಗೆ ಮುಖೇಶ್ ಅವರ ಕುಟುಂಬಸ್ಥರು ಒಪ್ಪಿಗೆ ನೀಡಿದ್ದಾರೆ ಎಂದು ಎಸ್‌ಪಿ ಗಹ್ಲೋಟ್ ತಿಳಿಸಿದ್ದಾರೆ.

ಮತ್ತೊಬ್ಬರು ಪೊಲೀಸ್ ಅಧಿಕಾರಿ ಮಾತನಾಡಿ, ” ಮೃತ ಮುಖೇಶ್ ಲಾಂಗ್ರೆ ಅವರ ವಿರುದ್ದ 6 ಕ್ರಿಮಿನಲ್ ಪ್ರಕರಣಗಳಿವೆ. ಮುಖೇಶ್ ವಿರುದ್ದ ದೂರು ನೀಡಿರುವ ಮಹಿಳೆ ಕಳೆದ ಆಗಸ್ಟ್‌ನಲ್ಲಿಯೂ ದೂರು ನೀಡಿದ್ದರು. ಇತ್ತೀಚಿನ ದೂರಿನಲ್ಲಿ, ಮುಖೇಶ್ ಅವರು ಪಾನಮತ್ತನಾಗಿ ಬಂದು ತನಗೆ ಮತ್ತು ತನ್ನ ಗಂಡನಿಗೆ ನಿಂದಿಸಿದ್ದಾರೆ, ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ : ಒಡಿಶಾ | ಬುಡಕಟ್ಟು ಮಹಿಳೆಯರನ್ನು ಮರಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...