Homeದಲಿತ್ ಫೈಲ್ಸ್ದಲಿತ ವ್ಯಕ್ತಿ ಪೊಲೀಸ್ ಠಾಣೆಯಲ್ಲಿ ಸಾವು : ಕುಟುಂಬಸ್ಥರಿಂದ ಕೊಲೆ ಆರೋಪ

ದಲಿತ ವ್ಯಕ್ತಿ ಪೊಲೀಸ್ ಠಾಣೆಯಲ್ಲಿ ಸಾವು : ಕುಟುಂಬಸ್ಥರಿಂದ ಕೊಲೆ ಆರೋಪ

- Advertisement -
- Advertisement -

ಪೊಲೀಸ್ ಠಾಣೆಯಲ್ಲಿ 35 ವರ್ಷದ ದಲಿತ ವ್ಯಕ್ತಿಯೊಬ್ಬರು ಸಾವಿಗೀಡಾದ ಘಟನೆ ಮಧ್ಯಪ್ರದೇಶದ ದೇವಾಸ್ ಜಿಲ್ಲೆಯಲ್ಲಿ ಡಿಸೆಂಬರ್ 28ರಂದು ನಡೆದಿದ್ದು, ಆತನ ಕುಟುಂಬಸ್ಥರು ಮತ್ತು ರಾಜಕೀಯ ಪಕ್ಷಗಳ ಮುಖಂಡರು ಪೊಲೀಸರ ವಿರುದ್ದ ಕೊಲೆ ಆರೋಪ ಮಾಡಿದ್ದಾರೆ.

ಮೃತ ವ್ಯಕ್ತಿಯನ್ನು ಮುಖೇಶ್ ಲಾಂಗರೆ ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಡಿಸೆಂಬರ್ 26ರಂದು ಮುಖೇಶ್ ಅವರ ಗ್ರಾಮದ ಮಹಿಳೆಯೊಬ್ಬರು ಮುಖೇಶ್ ವಿರುದ್ದ ದೂರು ನೀಡಿದ್ದರು. ದೂರು ಆಧರಿಸಿ ಹೇಳಿಕೆ ದಾಖಲಿಸಿಕೊಳ್ಳಲು ಮುಖೇಶ್ ಅವರನ್ನು ಡಿಸೆಂಬರ್ 28ರಂದು ಸತ್ವಾಸ್ ಪೊಲೀಸ್ ಠಾಣೆಗೆ ಕರೆಯಲಾಗಿತ್ತು. ಈ ವೇಳೆ ಅವರು ಠಾಣೆಯಲ್ಲಿ ಸಾವನ್ನಪ್ಪಿದ್ದಾರೆ.

ಸಾವನ್ನಪ್ಪುವ ವೇಳೆ ಮುಖೇಶ್ ಅವರು ಪೊಲೀಸ್ ಕಸ್ಟಡಿಯಲ್ಲಿ ಇರಲಿಲ್ಲ. ಅವರು ಠಾಣೆಯ ಉಸ್ತುವಾರಿ ಅಧಿಕಾರಿ ಆಶಿಶ್ ರಜಪೂತ್ ಅವರ ಮುಂದೆ ವಿಚಾರಣಾ ಕೊಠಡಿಯಲ್ಲಿ ತನ್ನ ಹೇಳಿಕೆಯನ್ನು ದಾಖಲಿಸಿಕೊಳ್ಳುತ್ತಿದ್ದರು ಎಂದು ದೇವಾಸ್ ಪೊಲೀಸ್ ಅಧೀಕ್ಷಕ (ಎಸ್‌ಪಿ) ಪುನೀತ್ ಗಹ್ಲೋಟ್ ತಿಳಿಸಿದ್ದಾಗಿ ದಿ ಹಿಂದೂ ವರದಿ ಮಾಡಿದೆ.

ಮಹಿಳೆ ದೂರು ನೀಡಿದ ಬಳಿಕ ಮುಖೇಶ್ ವಿರುದ್ದದ ಪ್ರಕರಣವನ್ನು ಠಾಣೆಯ ಉಸ್ತುವಾರಿ ಅಧಿಕಾರಿ ಆಶಿಶ್ ರಜಪೂತ್ ನೋಡಿಕೊಳ್ಳುತ್ತಿದ್ದರು. ಮುಖೇಶ್ ಸಾವನ್ನಪ್ಪುವ ವೇಳೆ ಆಶಿಶ್ ಅವರು ಇನ್ನೊಂದು ಪ್ರಕರಣ ಸಂಬಂಧ ವಿಚಾರಣಾ ಕೊಠಡಿಯಿಂದ ಹೊರ ಹೋಗಿದ್ದರು. ಈ ವೇಳೆ ಮುಖೇಶ್ ಅವರು ತನ್ನಲ್ಲಿದ್ದ ಶಲ್ಯವನ್ನು ಕಿಟಕಿಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಠಾಣೆಯ ಸಿಬ್ಬಂದಿ ನೋಡಿದ ತಕ್ಷಣ ಅವರನ್ನು ನೇಣಿನಿಂದ ಬಿಡಿಸಿ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ ಎಂದು ಪೊಲೀಸ್ ಅಧೀಕ್ಷಕ ಪುನೀತ್ ಗಹ್ಲೋಟ್ ಹೇಳಿದ್ದಾರೆ ಎಂದು ವರದಿ ವಿವರಿಸಿದೆ.

ನ್ಯಾಯಾಂಗ ತನಿಖೆ

“ವಿಷಯ ತಿಳಿದ ಕೂಡಲೇ ಹಿರಿಯ ಅಧಿಕಾರಿಗಳನ್ನು ಸತ್ವಾಸ್‌ಗೆ ದೌಡಾಯಿಸಿದ್ದೇವೆ. ಮುಖೇಶ್ ಅವರು ಠಾಣೆಯೊಳಗೆ ಆತ್ಮಹತ್ಯೆ ಮಾಡಿಕೊಂಡಿರುವುದರಿಂದ, ಕಸ್ಟಡಿ ಸಾವಿನ ಪ್ರಕರಣಗಳಲ್ಲಿ ಅನುಸರಿಸುವ ಎಲ್ಲಾ ಮಾನವ ಹಕ್ಕುಗಳ ಆಯೋಗದ ಎಲ್ಲಾ ಮಾರ್ಗಸೂಚಿಗಳನ್ನು ನಾವು ಅನುಸರಿಸಿದ್ದೇವೆ. ಉದಾ : ಕೊಠಡಿಯನ್ನು ಸೀಲ್ ಮಾಡುವುದು ಮತ್ತು ನ್ಯಾಯಾಂಗ ತನಿಖೆಗಾಗಿ ಜಿಲ್ಲಾ ನ್ಯಾಯಾಧೀಶರಿಗೆ ತಿಳಿಸುವುದು” ಎಂದು ಎಸ್‌ಪಿ ತಿಳಿಸಿದ್ದಾರೆ.

ನ್ಯಾಯಾಂಗ ತನಿಖೆ ನಡೆಸಲು ಶನಿವಾರ (ಡಿಸೆಂಬರ್ 28, 2024) ಸಂಜೆ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ (ಜೆಎಂಎಫ್‌ಸಿ) ನಂದನಿ ಉಯಿಕೆ ಅವರನ್ನು ನೇಮಿಸಲಾಗಿದೆ ಮತ್ತು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ನ್ಯಾಯಾಧೀಶರು ಮೂವರು ವೈದ್ಯರ ಸಮಿತಿಯನ್ನು ಹೆಸರಿಸಿದ್ದಾರೆ ಎಂದು ಎಸ್‌ಪಿ ಗಹ್ಲೋಟ್ ಮಾಹಿತಿ ನೀಡಿದ್ದಾರೆ.

“ನಾವು ಘಟನಾ ಸ್ಥಳದ ಪರಿಶೀಲನೆಗಾಗಿ ಉಜ್ಜಯಿನಿಯಿಂದ ವಿಧಿವಿಜ್ಞಾನ ಅಧಿಕಾರಿಯನ್ನು ಕರೆಸಿದ್ದೇವೆ. ಶನಿವಾರ (ಡಿಸೆಂಬರ್ 28, 2024) ತಡರಾತ್ರಿ ಠಾಣಾ ಉಸ್ತುವಾರಿಯನ್ನು ಅಮಾನತುಗೊಳಿಸಲಾಗಿದೆ. ಠಾಣೆಯ ಎಲ್ಲಾ ಸಿಸಿಟಿವಿ ದೃಶ್ಯಾವಳಿಗಳನ್ನು ನ್ಯಾಯಾಂಗ ತನಿಖಾ ತಂಡ ವಶಪಡಿಸಿಕೊಂಡಿದೆ. ಮ್ಯಾಜಿಸ್ಟ್ರೇಟ್ ಉಯಿಕೆ ಮತ್ತು ವಿಧಿವಿಜ್ಞಾನ ತಂಡ ಭಾನುವಾರ (ಡಿಸೆಂಬರ್ 29, 2024) ಬೆಳಿಗ್ಗೆ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಗಹ್ಲೋಟ್ ಹೇಳಿದ್ದಾರೆ.

ಕೊಲೆ ಆರೋಪ

ಮುಖೇಶ್ ಅವರ ಸಾವಿಗೆ ಸಂಬಂಧಿಸಿದಂತೆ ಭೀಮ್ ಆರ್ಮಿ ಕಾರ್ಯಕರ್ತರು ಮತ್ತು ಮೃತರ ಕುಟುಂಬಸ್ಥರು ಸ್ಥಳೀಯ ಪೊಲೀಸರ ವಿರುದ್ದ ಕೊಲೆ ಆರೋಪ ಮಾಡಿದ್ದಾರೆ. ಭೀಮ್ ಆರ್ಮಿ ಕಾರ್ಯಕರ್ತರು ಮೂರು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ : ನ್ಯಾಯಾಂಗ ತನಿಖೆ, ಅಪರಾಧಿಗಳಿಗೆ ಶಿಕ್ಷೆ ಮತ್ತು ಕುಟುಂಬಕ್ಕೆ ಆರ್ಥಿಕ ಪರಿಹಾರ. “ಅವರ ಎರಡು ಬೇಡಿಕೆಗಳನ್ನು ಈಗಾಗಲೇ ಈಡೇರಿಸಲಾಗಿದೆ ಮತ್ತು ಪರಿಹಾರದ ಬಗ್ಗೆ ನಾವು ಉನ್ನತ ಅಧಿಕಾರಿಗಳಿಗೆ ತಿಳಿಸಿದ್ದೇವೆ” ಎಂದು ಎಸ್‌ಪಿ ಹೇಳಿದ್ದಾರೆ.

ಭಾನುವಾರ (ಡಿಸೆಂಬರ್ 29, 2024) ಮಧ್ಯಾಹ್ನ, ಮಧ್ಯಪ್ರದೇಶ ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷ ಜಿತು ಪಟ್ವಾರಿ ಅವರು ಸತ್ವಾಸ್ ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿದ್ದು, ಠಾಣೆಯ ಎಲ್ಲಾ ಸಿಬ್ಬಂದಿಯನ್ನು ಅಮಾನತುಗೊಳಿಸಬೇಕು ಮತ್ತು ಮೃತನ ಕುಟುಂಬಸ್ಥರಿಗೆ 1 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಮುಖ್ಯಮಂತ್ರಿ ಮೋಹನ್ ಯಾದವ್ ಅವರಿಗೆ ಒತ್ತಾಯಿಸಿದ್ದಾರೆ.

ಪೊಲೀಸ್ ಅಧಿಕಾರಿಗಳು ಮುಖೇಶ್ ಲಾಂಗ್ರೆ ಅವರಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಹಣ ಕೊಡದ ಕಾರಣ ಕೊಲೆ ಮಾಡಿದ್ದಾರೆ ಎಂದು ಜಿತು ಪಟ್ವಾರಿ ಆರೋಪಿಸಿದ್ದಾರೆ.

ಪ್ರಕರಣದ ಹಿಂದೆ ರಾಜಕೀಯ

ಮೃತ ಮುಖೇಶ್ ಅವರ ಕುಟುಂಬವು ಆರಂಭದಲ್ಲಿ ಯಾವುದೇ ಆರೋಪವನ್ನು ಮಾಡಿರಲಿಲ್ಲ. ಮರಣೋತ್ತರ ಪರೀಕ್ಷೆಗೆ ಮಾಡುವುದಕ್ಕೆ ಮಾತ್ರ ನಿರಾಕದ್ದರು. ಕೆಲ ರಾಜಕಾರಣಿಗಳ ಸಂಪರ್ಕಕ್ಕೆ ಬಂದ ನಂತರವೇ ಅವರು ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ನ್ಯಾಯಾಂಗ ತನಿಖೆ ನಡೆಯುತ್ತಿದೆ ಮತ್ತು ಹೆಚ್ಚುವರಿ ಎಸ್ಪಿ (ಗ್ರಾಮೀಣ) ಅವರು ಲಂಚದ ಆರೋಪದ ಬಗ್ಗೆಯೂ ಪ್ರತ್ಯೇಕವಾಗಿ ತನಿಖೆ ನಡೆಸುತ್ತಿದ್ದಾರೆ. ಭಾನುವಾರ (ಡಿಸೆಂಬರ್ 29, 2024) ರಾತ್ರಿ ನಡೆಸಲಾದ ಮರಣೋತ್ತರ ಪರೀಕ್ಷೆಗೆ ಮುಖೇಶ್ ಅವರ ಕುಟುಂಬಸ್ಥರು ಒಪ್ಪಿಗೆ ನೀಡಿದ್ದಾರೆ ಎಂದು ಎಸ್‌ಪಿ ಗಹ್ಲೋಟ್ ತಿಳಿಸಿದ್ದಾರೆ.

ಮತ್ತೊಬ್ಬರು ಪೊಲೀಸ್ ಅಧಿಕಾರಿ ಮಾತನಾಡಿ, ” ಮೃತ ಮುಖೇಶ್ ಲಾಂಗ್ರೆ ಅವರ ವಿರುದ್ದ 6 ಕ್ರಿಮಿನಲ್ ಪ್ರಕರಣಗಳಿವೆ. ಮುಖೇಶ್ ವಿರುದ್ದ ದೂರು ನೀಡಿರುವ ಮಹಿಳೆ ಕಳೆದ ಆಗಸ್ಟ್‌ನಲ್ಲಿಯೂ ದೂರು ನೀಡಿದ್ದರು. ಇತ್ತೀಚಿನ ದೂರಿನಲ್ಲಿ, ಮುಖೇಶ್ ಅವರು ಪಾನಮತ್ತನಾಗಿ ಬಂದು ತನಗೆ ಮತ್ತು ತನ್ನ ಗಂಡನಿಗೆ ನಿಂದಿಸಿದ್ದಾರೆ, ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ : ಒಡಿಶಾ | ಬುಡಕಟ್ಟು ಮಹಿಳೆಯರನ್ನು ಮರಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...