Homeದಲಿತ್ ಫೈಲ್ಸ್ದಲಿತ ವ್ಯಕ್ತಿ ಪೊಲೀಸ್ ಠಾಣೆಯಲ್ಲಿ ಸಾವು : ಕುಟುಂಬಸ್ಥರಿಂದ ಕೊಲೆ ಆರೋಪ

ದಲಿತ ವ್ಯಕ್ತಿ ಪೊಲೀಸ್ ಠಾಣೆಯಲ್ಲಿ ಸಾವು : ಕುಟುಂಬಸ್ಥರಿಂದ ಕೊಲೆ ಆರೋಪ

- Advertisement -
- Advertisement -

ಪೊಲೀಸ್ ಠಾಣೆಯಲ್ಲಿ 35 ವರ್ಷದ ದಲಿತ ವ್ಯಕ್ತಿಯೊಬ್ಬರು ಸಾವಿಗೀಡಾದ ಘಟನೆ ಮಧ್ಯಪ್ರದೇಶದ ದೇವಾಸ್ ಜಿಲ್ಲೆಯಲ್ಲಿ ಡಿಸೆಂಬರ್ 28ರಂದು ನಡೆದಿದ್ದು, ಆತನ ಕುಟುಂಬಸ್ಥರು ಮತ್ತು ರಾಜಕೀಯ ಪಕ್ಷಗಳ ಮುಖಂಡರು ಪೊಲೀಸರ ವಿರುದ್ದ ಕೊಲೆ ಆರೋಪ ಮಾಡಿದ್ದಾರೆ.

ಮೃತ ವ್ಯಕ್ತಿಯನ್ನು ಮುಖೇಶ್ ಲಾಂಗರೆ ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಡಿಸೆಂಬರ್ 26ರಂದು ಮುಖೇಶ್ ಅವರ ಗ್ರಾಮದ ಮಹಿಳೆಯೊಬ್ಬರು ಮುಖೇಶ್ ವಿರುದ್ದ ದೂರು ನೀಡಿದ್ದರು. ದೂರು ಆಧರಿಸಿ ಹೇಳಿಕೆ ದಾಖಲಿಸಿಕೊಳ್ಳಲು ಮುಖೇಶ್ ಅವರನ್ನು ಡಿಸೆಂಬರ್ 28ರಂದು ಸತ್ವಾಸ್ ಪೊಲೀಸ್ ಠಾಣೆಗೆ ಕರೆಯಲಾಗಿತ್ತು. ಈ ವೇಳೆ ಅವರು ಠಾಣೆಯಲ್ಲಿ ಸಾವನ್ನಪ್ಪಿದ್ದಾರೆ.

ಸಾವನ್ನಪ್ಪುವ ವೇಳೆ ಮುಖೇಶ್ ಅವರು ಪೊಲೀಸ್ ಕಸ್ಟಡಿಯಲ್ಲಿ ಇರಲಿಲ್ಲ. ಅವರು ಠಾಣೆಯ ಉಸ್ತುವಾರಿ ಅಧಿಕಾರಿ ಆಶಿಶ್ ರಜಪೂತ್ ಅವರ ಮುಂದೆ ವಿಚಾರಣಾ ಕೊಠಡಿಯಲ್ಲಿ ತನ್ನ ಹೇಳಿಕೆಯನ್ನು ದಾಖಲಿಸಿಕೊಳ್ಳುತ್ತಿದ್ದರು ಎಂದು ದೇವಾಸ್ ಪೊಲೀಸ್ ಅಧೀಕ್ಷಕ (ಎಸ್‌ಪಿ) ಪುನೀತ್ ಗಹ್ಲೋಟ್ ತಿಳಿಸಿದ್ದಾಗಿ ದಿ ಹಿಂದೂ ವರದಿ ಮಾಡಿದೆ.

ಮಹಿಳೆ ದೂರು ನೀಡಿದ ಬಳಿಕ ಮುಖೇಶ್ ವಿರುದ್ದದ ಪ್ರಕರಣವನ್ನು ಠಾಣೆಯ ಉಸ್ತುವಾರಿ ಅಧಿಕಾರಿ ಆಶಿಶ್ ರಜಪೂತ್ ನೋಡಿಕೊಳ್ಳುತ್ತಿದ್ದರು. ಮುಖೇಶ್ ಸಾವನ್ನಪ್ಪುವ ವೇಳೆ ಆಶಿಶ್ ಅವರು ಇನ್ನೊಂದು ಪ್ರಕರಣ ಸಂಬಂಧ ವಿಚಾರಣಾ ಕೊಠಡಿಯಿಂದ ಹೊರ ಹೋಗಿದ್ದರು. ಈ ವೇಳೆ ಮುಖೇಶ್ ಅವರು ತನ್ನಲ್ಲಿದ್ದ ಶಲ್ಯವನ್ನು ಕಿಟಕಿಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಠಾಣೆಯ ಸಿಬ್ಬಂದಿ ನೋಡಿದ ತಕ್ಷಣ ಅವರನ್ನು ನೇಣಿನಿಂದ ಬಿಡಿಸಿ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ ಎಂದು ಪೊಲೀಸ್ ಅಧೀಕ್ಷಕ ಪುನೀತ್ ಗಹ್ಲೋಟ್ ಹೇಳಿದ್ದಾರೆ ಎಂದು ವರದಿ ವಿವರಿಸಿದೆ.

ನ್ಯಾಯಾಂಗ ತನಿಖೆ

“ವಿಷಯ ತಿಳಿದ ಕೂಡಲೇ ಹಿರಿಯ ಅಧಿಕಾರಿಗಳನ್ನು ಸತ್ವಾಸ್‌ಗೆ ದೌಡಾಯಿಸಿದ್ದೇವೆ. ಮುಖೇಶ್ ಅವರು ಠಾಣೆಯೊಳಗೆ ಆತ್ಮಹತ್ಯೆ ಮಾಡಿಕೊಂಡಿರುವುದರಿಂದ, ಕಸ್ಟಡಿ ಸಾವಿನ ಪ್ರಕರಣಗಳಲ್ಲಿ ಅನುಸರಿಸುವ ಎಲ್ಲಾ ಮಾನವ ಹಕ್ಕುಗಳ ಆಯೋಗದ ಎಲ್ಲಾ ಮಾರ್ಗಸೂಚಿಗಳನ್ನು ನಾವು ಅನುಸರಿಸಿದ್ದೇವೆ. ಉದಾ : ಕೊಠಡಿಯನ್ನು ಸೀಲ್ ಮಾಡುವುದು ಮತ್ತು ನ್ಯಾಯಾಂಗ ತನಿಖೆಗಾಗಿ ಜಿಲ್ಲಾ ನ್ಯಾಯಾಧೀಶರಿಗೆ ತಿಳಿಸುವುದು” ಎಂದು ಎಸ್‌ಪಿ ತಿಳಿಸಿದ್ದಾರೆ.

ನ್ಯಾಯಾಂಗ ತನಿಖೆ ನಡೆಸಲು ಶನಿವಾರ (ಡಿಸೆಂಬರ್ 28, 2024) ಸಂಜೆ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ (ಜೆಎಂಎಫ್‌ಸಿ) ನಂದನಿ ಉಯಿಕೆ ಅವರನ್ನು ನೇಮಿಸಲಾಗಿದೆ ಮತ್ತು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ನ್ಯಾಯಾಧೀಶರು ಮೂವರು ವೈದ್ಯರ ಸಮಿತಿಯನ್ನು ಹೆಸರಿಸಿದ್ದಾರೆ ಎಂದು ಎಸ್‌ಪಿ ಗಹ್ಲೋಟ್ ಮಾಹಿತಿ ನೀಡಿದ್ದಾರೆ.

“ನಾವು ಘಟನಾ ಸ್ಥಳದ ಪರಿಶೀಲನೆಗಾಗಿ ಉಜ್ಜಯಿನಿಯಿಂದ ವಿಧಿವಿಜ್ಞಾನ ಅಧಿಕಾರಿಯನ್ನು ಕರೆಸಿದ್ದೇವೆ. ಶನಿವಾರ (ಡಿಸೆಂಬರ್ 28, 2024) ತಡರಾತ್ರಿ ಠಾಣಾ ಉಸ್ತುವಾರಿಯನ್ನು ಅಮಾನತುಗೊಳಿಸಲಾಗಿದೆ. ಠಾಣೆಯ ಎಲ್ಲಾ ಸಿಸಿಟಿವಿ ದೃಶ್ಯಾವಳಿಗಳನ್ನು ನ್ಯಾಯಾಂಗ ತನಿಖಾ ತಂಡ ವಶಪಡಿಸಿಕೊಂಡಿದೆ. ಮ್ಯಾಜಿಸ್ಟ್ರೇಟ್ ಉಯಿಕೆ ಮತ್ತು ವಿಧಿವಿಜ್ಞಾನ ತಂಡ ಭಾನುವಾರ (ಡಿಸೆಂಬರ್ 29, 2024) ಬೆಳಿಗ್ಗೆ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಗಹ್ಲೋಟ್ ಹೇಳಿದ್ದಾರೆ.

ಕೊಲೆ ಆರೋಪ

ಮುಖೇಶ್ ಅವರ ಸಾವಿಗೆ ಸಂಬಂಧಿಸಿದಂತೆ ಭೀಮ್ ಆರ್ಮಿ ಕಾರ್ಯಕರ್ತರು ಮತ್ತು ಮೃತರ ಕುಟುಂಬಸ್ಥರು ಸ್ಥಳೀಯ ಪೊಲೀಸರ ವಿರುದ್ದ ಕೊಲೆ ಆರೋಪ ಮಾಡಿದ್ದಾರೆ. ಭೀಮ್ ಆರ್ಮಿ ಕಾರ್ಯಕರ್ತರು ಮೂರು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ : ನ್ಯಾಯಾಂಗ ತನಿಖೆ, ಅಪರಾಧಿಗಳಿಗೆ ಶಿಕ್ಷೆ ಮತ್ತು ಕುಟುಂಬಕ್ಕೆ ಆರ್ಥಿಕ ಪರಿಹಾರ. “ಅವರ ಎರಡು ಬೇಡಿಕೆಗಳನ್ನು ಈಗಾಗಲೇ ಈಡೇರಿಸಲಾಗಿದೆ ಮತ್ತು ಪರಿಹಾರದ ಬಗ್ಗೆ ನಾವು ಉನ್ನತ ಅಧಿಕಾರಿಗಳಿಗೆ ತಿಳಿಸಿದ್ದೇವೆ” ಎಂದು ಎಸ್‌ಪಿ ಹೇಳಿದ್ದಾರೆ.

ಭಾನುವಾರ (ಡಿಸೆಂಬರ್ 29, 2024) ಮಧ್ಯಾಹ್ನ, ಮಧ್ಯಪ್ರದೇಶ ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷ ಜಿತು ಪಟ್ವಾರಿ ಅವರು ಸತ್ವಾಸ್ ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿದ್ದು, ಠಾಣೆಯ ಎಲ್ಲಾ ಸಿಬ್ಬಂದಿಯನ್ನು ಅಮಾನತುಗೊಳಿಸಬೇಕು ಮತ್ತು ಮೃತನ ಕುಟುಂಬಸ್ಥರಿಗೆ 1 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಮುಖ್ಯಮಂತ್ರಿ ಮೋಹನ್ ಯಾದವ್ ಅವರಿಗೆ ಒತ್ತಾಯಿಸಿದ್ದಾರೆ.

ಪೊಲೀಸ್ ಅಧಿಕಾರಿಗಳು ಮುಖೇಶ್ ಲಾಂಗ್ರೆ ಅವರಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಹಣ ಕೊಡದ ಕಾರಣ ಕೊಲೆ ಮಾಡಿದ್ದಾರೆ ಎಂದು ಜಿತು ಪಟ್ವಾರಿ ಆರೋಪಿಸಿದ್ದಾರೆ.

ಪ್ರಕರಣದ ಹಿಂದೆ ರಾಜಕೀಯ

ಮೃತ ಮುಖೇಶ್ ಅವರ ಕುಟುಂಬವು ಆರಂಭದಲ್ಲಿ ಯಾವುದೇ ಆರೋಪವನ್ನು ಮಾಡಿರಲಿಲ್ಲ. ಮರಣೋತ್ತರ ಪರೀಕ್ಷೆಗೆ ಮಾಡುವುದಕ್ಕೆ ಮಾತ್ರ ನಿರಾಕದ್ದರು. ಕೆಲ ರಾಜಕಾರಣಿಗಳ ಸಂಪರ್ಕಕ್ಕೆ ಬಂದ ನಂತರವೇ ಅವರು ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ನ್ಯಾಯಾಂಗ ತನಿಖೆ ನಡೆಯುತ್ತಿದೆ ಮತ್ತು ಹೆಚ್ಚುವರಿ ಎಸ್ಪಿ (ಗ್ರಾಮೀಣ) ಅವರು ಲಂಚದ ಆರೋಪದ ಬಗ್ಗೆಯೂ ಪ್ರತ್ಯೇಕವಾಗಿ ತನಿಖೆ ನಡೆಸುತ್ತಿದ್ದಾರೆ. ಭಾನುವಾರ (ಡಿಸೆಂಬರ್ 29, 2024) ರಾತ್ರಿ ನಡೆಸಲಾದ ಮರಣೋತ್ತರ ಪರೀಕ್ಷೆಗೆ ಮುಖೇಶ್ ಅವರ ಕುಟುಂಬಸ್ಥರು ಒಪ್ಪಿಗೆ ನೀಡಿದ್ದಾರೆ ಎಂದು ಎಸ್‌ಪಿ ಗಹ್ಲೋಟ್ ತಿಳಿಸಿದ್ದಾರೆ.

ಮತ್ತೊಬ್ಬರು ಪೊಲೀಸ್ ಅಧಿಕಾರಿ ಮಾತನಾಡಿ, ” ಮೃತ ಮುಖೇಶ್ ಲಾಂಗ್ರೆ ಅವರ ವಿರುದ್ದ 6 ಕ್ರಿಮಿನಲ್ ಪ್ರಕರಣಗಳಿವೆ. ಮುಖೇಶ್ ವಿರುದ್ದ ದೂರು ನೀಡಿರುವ ಮಹಿಳೆ ಕಳೆದ ಆಗಸ್ಟ್‌ನಲ್ಲಿಯೂ ದೂರು ನೀಡಿದ್ದರು. ಇತ್ತೀಚಿನ ದೂರಿನಲ್ಲಿ, ಮುಖೇಶ್ ಅವರು ಪಾನಮತ್ತನಾಗಿ ಬಂದು ತನಗೆ ಮತ್ತು ತನ್ನ ಗಂಡನಿಗೆ ನಿಂದಿಸಿದ್ದಾರೆ, ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ : ಒಡಿಶಾ | ಬುಡಕಟ್ಟು ಮಹಿಳೆಯರನ್ನು ಮರಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...