Homeದಲಿತ್ ಫೈಲ್ಸ್ದಲಿತ ವ್ಯಕ್ತಿ ಪೊಲೀಸ್ ಠಾಣೆಯಲ್ಲಿ ಸಾವು : ಕುಟುಂಬಸ್ಥರಿಂದ ಕೊಲೆ ಆರೋಪ

ದಲಿತ ವ್ಯಕ್ತಿ ಪೊಲೀಸ್ ಠಾಣೆಯಲ್ಲಿ ಸಾವು : ಕುಟುಂಬಸ್ಥರಿಂದ ಕೊಲೆ ಆರೋಪ

- Advertisement -
- Advertisement -

ಪೊಲೀಸ್ ಠಾಣೆಯಲ್ಲಿ 35 ವರ್ಷದ ದಲಿತ ವ್ಯಕ್ತಿಯೊಬ್ಬರು ಸಾವಿಗೀಡಾದ ಘಟನೆ ಮಧ್ಯಪ್ರದೇಶದ ದೇವಾಸ್ ಜಿಲ್ಲೆಯಲ್ಲಿ ಡಿಸೆಂಬರ್ 28ರಂದು ನಡೆದಿದ್ದು, ಆತನ ಕುಟುಂಬಸ್ಥರು ಮತ್ತು ರಾಜಕೀಯ ಪಕ್ಷಗಳ ಮುಖಂಡರು ಪೊಲೀಸರ ವಿರುದ್ದ ಕೊಲೆ ಆರೋಪ ಮಾಡಿದ್ದಾರೆ.

ಮೃತ ವ್ಯಕ್ತಿಯನ್ನು ಮುಖೇಶ್ ಲಾಂಗರೆ ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಡಿಸೆಂಬರ್ 26ರಂದು ಮುಖೇಶ್ ಅವರ ಗ್ರಾಮದ ಮಹಿಳೆಯೊಬ್ಬರು ಮುಖೇಶ್ ವಿರುದ್ದ ದೂರು ನೀಡಿದ್ದರು. ದೂರು ಆಧರಿಸಿ ಹೇಳಿಕೆ ದಾಖಲಿಸಿಕೊಳ್ಳಲು ಮುಖೇಶ್ ಅವರನ್ನು ಡಿಸೆಂಬರ್ 28ರಂದು ಸತ್ವಾಸ್ ಪೊಲೀಸ್ ಠಾಣೆಗೆ ಕರೆಯಲಾಗಿತ್ತು. ಈ ವೇಳೆ ಅವರು ಠಾಣೆಯಲ್ಲಿ ಸಾವನ್ನಪ್ಪಿದ್ದಾರೆ.

ಸಾವನ್ನಪ್ಪುವ ವೇಳೆ ಮುಖೇಶ್ ಅವರು ಪೊಲೀಸ್ ಕಸ್ಟಡಿಯಲ್ಲಿ ಇರಲಿಲ್ಲ. ಅವರು ಠಾಣೆಯ ಉಸ್ತುವಾರಿ ಅಧಿಕಾರಿ ಆಶಿಶ್ ರಜಪೂತ್ ಅವರ ಮುಂದೆ ವಿಚಾರಣಾ ಕೊಠಡಿಯಲ್ಲಿ ತನ್ನ ಹೇಳಿಕೆಯನ್ನು ದಾಖಲಿಸಿಕೊಳ್ಳುತ್ತಿದ್ದರು ಎಂದು ದೇವಾಸ್ ಪೊಲೀಸ್ ಅಧೀಕ್ಷಕ (ಎಸ್‌ಪಿ) ಪುನೀತ್ ಗಹ್ಲೋಟ್ ತಿಳಿಸಿದ್ದಾಗಿ ದಿ ಹಿಂದೂ ವರದಿ ಮಾಡಿದೆ.

ಮಹಿಳೆ ದೂರು ನೀಡಿದ ಬಳಿಕ ಮುಖೇಶ್ ವಿರುದ್ದದ ಪ್ರಕರಣವನ್ನು ಠಾಣೆಯ ಉಸ್ತುವಾರಿ ಅಧಿಕಾರಿ ಆಶಿಶ್ ರಜಪೂತ್ ನೋಡಿಕೊಳ್ಳುತ್ತಿದ್ದರು. ಮುಖೇಶ್ ಸಾವನ್ನಪ್ಪುವ ವೇಳೆ ಆಶಿಶ್ ಅವರು ಇನ್ನೊಂದು ಪ್ರಕರಣ ಸಂಬಂಧ ವಿಚಾರಣಾ ಕೊಠಡಿಯಿಂದ ಹೊರ ಹೋಗಿದ್ದರು. ಈ ವೇಳೆ ಮುಖೇಶ್ ಅವರು ತನ್ನಲ್ಲಿದ್ದ ಶಲ್ಯವನ್ನು ಕಿಟಕಿಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಠಾಣೆಯ ಸಿಬ್ಬಂದಿ ನೋಡಿದ ತಕ್ಷಣ ಅವರನ್ನು ನೇಣಿನಿಂದ ಬಿಡಿಸಿ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ ಎಂದು ಪೊಲೀಸ್ ಅಧೀಕ್ಷಕ ಪುನೀತ್ ಗಹ್ಲೋಟ್ ಹೇಳಿದ್ದಾರೆ ಎಂದು ವರದಿ ವಿವರಿಸಿದೆ.

ನ್ಯಾಯಾಂಗ ತನಿಖೆ

“ವಿಷಯ ತಿಳಿದ ಕೂಡಲೇ ಹಿರಿಯ ಅಧಿಕಾರಿಗಳನ್ನು ಸತ್ವಾಸ್‌ಗೆ ದೌಡಾಯಿಸಿದ್ದೇವೆ. ಮುಖೇಶ್ ಅವರು ಠಾಣೆಯೊಳಗೆ ಆತ್ಮಹತ್ಯೆ ಮಾಡಿಕೊಂಡಿರುವುದರಿಂದ, ಕಸ್ಟಡಿ ಸಾವಿನ ಪ್ರಕರಣಗಳಲ್ಲಿ ಅನುಸರಿಸುವ ಎಲ್ಲಾ ಮಾನವ ಹಕ್ಕುಗಳ ಆಯೋಗದ ಎಲ್ಲಾ ಮಾರ್ಗಸೂಚಿಗಳನ್ನು ನಾವು ಅನುಸರಿಸಿದ್ದೇವೆ. ಉದಾ : ಕೊಠಡಿಯನ್ನು ಸೀಲ್ ಮಾಡುವುದು ಮತ್ತು ನ್ಯಾಯಾಂಗ ತನಿಖೆಗಾಗಿ ಜಿಲ್ಲಾ ನ್ಯಾಯಾಧೀಶರಿಗೆ ತಿಳಿಸುವುದು” ಎಂದು ಎಸ್‌ಪಿ ತಿಳಿಸಿದ್ದಾರೆ.

ನ್ಯಾಯಾಂಗ ತನಿಖೆ ನಡೆಸಲು ಶನಿವಾರ (ಡಿಸೆಂಬರ್ 28, 2024) ಸಂಜೆ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ (ಜೆಎಂಎಫ್‌ಸಿ) ನಂದನಿ ಉಯಿಕೆ ಅವರನ್ನು ನೇಮಿಸಲಾಗಿದೆ ಮತ್ತು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ನ್ಯಾಯಾಧೀಶರು ಮೂವರು ವೈದ್ಯರ ಸಮಿತಿಯನ್ನು ಹೆಸರಿಸಿದ್ದಾರೆ ಎಂದು ಎಸ್‌ಪಿ ಗಹ್ಲೋಟ್ ಮಾಹಿತಿ ನೀಡಿದ್ದಾರೆ.

“ನಾವು ಘಟನಾ ಸ್ಥಳದ ಪರಿಶೀಲನೆಗಾಗಿ ಉಜ್ಜಯಿನಿಯಿಂದ ವಿಧಿವಿಜ್ಞಾನ ಅಧಿಕಾರಿಯನ್ನು ಕರೆಸಿದ್ದೇವೆ. ಶನಿವಾರ (ಡಿಸೆಂಬರ್ 28, 2024) ತಡರಾತ್ರಿ ಠಾಣಾ ಉಸ್ತುವಾರಿಯನ್ನು ಅಮಾನತುಗೊಳಿಸಲಾಗಿದೆ. ಠಾಣೆಯ ಎಲ್ಲಾ ಸಿಸಿಟಿವಿ ದೃಶ್ಯಾವಳಿಗಳನ್ನು ನ್ಯಾಯಾಂಗ ತನಿಖಾ ತಂಡ ವಶಪಡಿಸಿಕೊಂಡಿದೆ. ಮ್ಯಾಜಿಸ್ಟ್ರೇಟ್ ಉಯಿಕೆ ಮತ್ತು ವಿಧಿವಿಜ್ಞಾನ ತಂಡ ಭಾನುವಾರ (ಡಿಸೆಂಬರ್ 29, 2024) ಬೆಳಿಗ್ಗೆ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಗಹ್ಲೋಟ್ ಹೇಳಿದ್ದಾರೆ.

ಕೊಲೆ ಆರೋಪ

ಮುಖೇಶ್ ಅವರ ಸಾವಿಗೆ ಸಂಬಂಧಿಸಿದಂತೆ ಭೀಮ್ ಆರ್ಮಿ ಕಾರ್ಯಕರ್ತರು ಮತ್ತು ಮೃತರ ಕುಟುಂಬಸ್ಥರು ಸ್ಥಳೀಯ ಪೊಲೀಸರ ವಿರುದ್ದ ಕೊಲೆ ಆರೋಪ ಮಾಡಿದ್ದಾರೆ. ಭೀಮ್ ಆರ್ಮಿ ಕಾರ್ಯಕರ್ತರು ಮೂರು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ : ನ್ಯಾಯಾಂಗ ತನಿಖೆ, ಅಪರಾಧಿಗಳಿಗೆ ಶಿಕ್ಷೆ ಮತ್ತು ಕುಟುಂಬಕ್ಕೆ ಆರ್ಥಿಕ ಪರಿಹಾರ. “ಅವರ ಎರಡು ಬೇಡಿಕೆಗಳನ್ನು ಈಗಾಗಲೇ ಈಡೇರಿಸಲಾಗಿದೆ ಮತ್ತು ಪರಿಹಾರದ ಬಗ್ಗೆ ನಾವು ಉನ್ನತ ಅಧಿಕಾರಿಗಳಿಗೆ ತಿಳಿಸಿದ್ದೇವೆ” ಎಂದು ಎಸ್‌ಪಿ ಹೇಳಿದ್ದಾರೆ.

ಭಾನುವಾರ (ಡಿಸೆಂಬರ್ 29, 2024) ಮಧ್ಯಾಹ್ನ, ಮಧ್ಯಪ್ರದೇಶ ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷ ಜಿತು ಪಟ್ವಾರಿ ಅವರು ಸತ್ವಾಸ್ ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿದ್ದು, ಠಾಣೆಯ ಎಲ್ಲಾ ಸಿಬ್ಬಂದಿಯನ್ನು ಅಮಾನತುಗೊಳಿಸಬೇಕು ಮತ್ತು ಮೃತನ ಕುಟುಂಬಸ್ಥರಿಗೆ 1 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಮುಖ್ಯಮಂತ್ರಿ ಮೋಹನ್ ಯಾದವ್ ಅವರಿಗೆ ಒತ್ತಾಯಿಸಿದ್ದಾರೆ.

ಪೊಲೀಸ್ ಅಧಿಕಾರಿಗಳು ಮುಖೇಶ್ ಲಾಂಗ್ರೆ ಅವರಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಹಣ ಕೊಡದ ಕಾರಣ ಕೊಲೆ ಮಾಡಿದ್ದಾರೆ ಎಂದು ಜಿತು ಪಟ್ವಾರಿ ಆರೋಪಿಸಿದ್ದಾರೆ.

ಪ್ರಕರಣದ ಹಿಂದೆ ರಾಜಕೀಯ

ಮೃತ ಮುಖೇಶ್ ಅವರ ಕುಟುಂಬವು ಆರಂಭದಲ್ಲಿ ಯಾವುದೇ ಆರೋಪವನ್ನು ಮಾಡಿರಲಿಲ್ಲ. ಮರಣೋತ್ತರ ಪರೀಕ್ಷೆಗೆ ಮಾಡುವುದಕ್ಕೆ ಮಾತ್ರ ನಿರಾಕದ್ದರು. ಕೆಲ ರಾಜಕಾರಣಿಗಳ ಸಂಪರ್ಕಕ್ಕೆ ಬಂದ ನಂತರವೇ ಅವರು ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ನ್ಯಾಯಾಂಗ ತನಿಖೆ ನಡೆಯುತ್ತಿದೆ ಮತ್ತು ಹೆಚ್ಚುವರಿ ಎಸ್ಪಿ (ಗ್ರಾಮೀಣ) ಅವರು ಲಂಚದ ಆರೋಪದ ಬಗ್ಗೆಯೂ ಪ್ರತ್ಯೇಕವಾಗಿ ತನಿಖೆ ನಡೆಸುತ್ತಿದ್ದಾರೆ. ಭಾನುವಾರ (ಡಿಸೆಂಬರ್ 29, 2024) ರಾತ್ರಿ ನಡೆಸಲಾದ ಮರಣೋತ್ತರ ಪರೀಕ್ಷೆಗೆ ಮುಖೇಶ್ ಅವರ ಕುಟುಂಬಸ್ಥರು ಒಪ್ಪಿಗೆ ನೀಡಿದ್ದಾರೆ ಎಂದು ಎಸ್‌ಪಿ ಗಹ್ಲೋಟ್ ತಿಳಿಸಿದ್ದಾರೆ.

ಮತ್ತೊಬ್ಬರು ಪೊಲೀಸ್ ಅಧಿಕಾರಿ ಮಾತನಾಡಿ, ” ಮೃತ ಮುಖೇಶ್ ಲಾಂಗ್ರೆ ಅವರ ವಿರುದ್ದ 6 ಕ್ರಿಮಿನಲ್ ಪ್ರಕರಣಗಳಿವೆ. ಮುಖೇಶ್ ವಿರುದ್ದ ದೂರು ನೀಡಿರುವ ಮಹಿಳೆ ಕಳೆದ ಆಗಸ್ಟ್‌ನಲ್ಲಿಯೂ ದೂರು ನೀಡಿದ್ದರು. ಇತ್ತೀಚಿನ ದೂರಿನಲ್ಲಿ, ಮುಖೇಶ್ ಅವರು ಪಾನಮತ್ತನಾಗಿ ಬಂದು ತನಗೆ ಮತ್ತು ತನ್ನ ಗಂಡನಿಗೆ ನಿಂದಿಸಿದ್ದಾರೆ, ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ : ಒಡಿಶಾ | ಬುಡಕಟ್ಟು ಮಹಿಳೆಯರನ್ನು ಮರಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...