Homeದಲಿತ್ ಫೈಲ್ಸ್ದಲಿತ ವ್ಯಕ್ತಿ ಪೊಲೀಸ್ ಠಾಣೆಯಲ್ಲಿ ಸಾವು : ಕುಟುಂಬಸ್ಥರಿಂದ ಕೊಲೆ ಆರೋಪ

ದಲಿತ ವ್ಯಕ್ತಿ ಪೊಲೀಸ್ ಠಾಣೆಯಲ್ಲಿ ಸಾವು : ಕುಟುಂಬಸ್ಥರಿಂದ ಕೊಲೆ ಆರೋಪ

- Advertisement -
- Advertisement -

ಪೊಲೀಸ್ ಠಾಣೆಯಲ್ಲಿ 35 ವರ್ಷದ ದಲಿತ ವ್ಯಕ್ತಿಯೊಬ್ಬರು ಸಾವಿಗೀಡಾದ ಘಟನೆ ಮಧ್ಯಪ್ರದೇಶದ ದೇವಾಸ್ ಜಿಲ್ಲೆಯಲ್ಲಿ ಡಿಸೆಂಬರ್ 28ರಂದು ನಡೆದಿದ್ದು, ಆತನ ಕುಟುಂಬಸ್ಥರು ಮತ್ತು ರಾಜಕೀಯ ಪಕ್ಷಗಳ ಮುಖಂಡರು ಪೊಲೀಸರ ವಿರುದ್ದ ಕೊಲೆ ಆರೋಪ ಮಾಡಿದ್ದಾರೆ.

ಮೃತ ವ್ಯಕ್ತಿಯನ್ನು ಮುಖೇಶ್ ಲಾಂಗರೆ ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಡಿಸೆಂಬರ್ 26ರಂದು ಮುಖೇಶ್ ಅವರ ಗ್ರಾಮದ ಮಹಿಳೆಯೊಬ್ಬರು ಮುಖೇಶ್ ವಿರುದ್ದ ದೂರು ನೀಡಿದ್ದರು. ದೂರು ಆಧರಿಸಿ ಹೇಳಿಕೆ ದಾಖಲಿಸಿಕೊಳ್ಳಲು ಮುಖೇಶ್ ಅವರನ್ನು ಡಿಸೆಂಬರ್ 28ರಂದು ಸತ್ವಾಸ್ ಪೊಲೀಸ್ ಠಾಣೆಗೆ ಕರೆಯಲಾಗಿತ್ತು. ಈ ವೇಳೆ ಅವರು ಠಾಣೆಯಲ್ಲಿ ಸಾವನ್ನಪ್ಪಿದ್ದಾರೆ.

ಸಾವನ್ನಪ್ಪುವ ವೇಳೆ ಮುಖೇಶ್ ಅವರು ಪೊಲೀಸ್ ಕಸ್ಟಡಿಯಲ್ಲಿ ಇರಲಿಲ್ಲ. ಅವರು ಠಾಣೆಯ ಉಸ್ತುವಾರಿ ಅಧಿಕಾರಿ ಆಶಿಶ್ ರಜಪೂತ್ ಅವರ ಮುಂದೆ ವಿಚಾರಣಾ ಕೊಠಡಿಯಲ್ಲಿ ತನ್ನ ಹೇಳಿಕೆಯನ್ನು ದಾಖಲಿಸಿಕೊಳ್ಳುತ್ತಿದ್ದರು ಎಂದು ದೇವಾಸ್ ಪೊಲೀಸ್ ಅಧೀಕ್ಷಕ (ಎಸ್‌ಪಿ) ಪುನೀತ್ ಗಹ್ಲೋಟ್ ತಿಳಿಸಿದ್ದಾಗಿ ದಿ ಹಿಂದೂ ವರದಿ ಮಾಡಿದೆ.

ಮಹಿಳೆ ದೂರು ನೀಡಿದ ಬಳಿಕ ಮುಖೇಶ್ ವಿರುದ್ದದ ಪ್ರಕರಣವನ್ನು ಠಾಣೆಯ ಉಸ್ತುವಾರಿ ಅಧಿಕಾರಿ ಆಶಿಶ್ ರಜಪೂತ್ ನೋಡಿಕೊಳ್ಳುತ್ತಿದ್ದರು. ಮುಖೇಶ್ ಸಾವನ್ನಪ್ಪುವ ವೇಳೆ ಆಶಿಶ್ ಅವರು ಇನ್ನೊಂದು ಪ್ರಕರಣ ಸಂಬಂಧ ವಿಚಾರಣಾ ಕೊಠಡಿಯಿಂದ ಹೊರ ಹೋಗಿದ್ದರು. ಈ ವೇಳೆ ಮುಖೇಶ್ ಅವರು ತನ್ನಲ್ಲಿದ್ದ ಶಲ್ಯವನ್ನು ಕಿಟಕಿಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಠಾಣೆಯ ಸಿಬ್ಬಂದಿ ನೋಡಿದ ತಕ್ಷಣ ಅವರನ್ನು ನೇಣಿನಿಂದ ಬಿಡಿಸಿ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ ಎಂದು ಪೊಲೀಸ್ ಅಧೀಕ್ಷಕ ಪುನೀತ್ ಗಹ್ಲೋಟ್ ಹೇಳಿದ್ದಾರೆ ಎಂದು ವರದಿ ವಿವರಿಸಿದೆ.

ನ್ಯಾಯಾಂಗ ತನಿಖೆ

“ವಿಷಯ ತಿಳಿದ ಕೂಡಲೇ ಹಿರಿಯ ಅಧಿಕಾರಿಗಳನ್ನು ಸತ್ವಾಸ್‌ಗೆ ದೌಡಾಯಿಸಿದ್ದೇವೆ. ಮುಖೇಶ್ ಅವರು ಠಾಣೆಯೊಳಗೆ ಆತ್ಮಹತ್ಯೆ ಮಾಡಿಕೊಂಡಿರುವುದರಿಂದ, ಕಸ್ಟಡಿ ಸಾವಿನ ಪ್ರಕರಣಗಳಲ್ಲಿ ಅನುಸರಿಸುವ ಎಲ್ಲಾ ಮಾನವ ಹಕ್ಕುಗಳ ಆಯೋಗದ ಎಲ್ಲಾ ಮಾರ್ಗಸೂಚಿಗಳನ್ನು ನಾವು ಅನುಸರಿಸಿದ್ದೇವೆ. ಉದಾ : ಕೊಠಡಿಯನ್ನು ಸೀಲ್ ಮಾಡುವುದು ಮತ್ತು ನ್ಯಾಯಾಂಗ ತನಿಖೆಗಾಗಿ ಜಿಲ್ಲಾ ನ್ಯಾಯಾಧೀಶರಿಗೆ ತಿಳಿಸುವುದು” ಎಂದು ಎಸ್‌ಪಿ ತಿಳಿಸಿದ್ದಾರೆ.

ನ್ಯಾಯಾಂಗ ತನಿಖೆ ನಡೆಸಲು ಶನಿವಾರ (ಡಿಸೆಂಬರ್ 28, 2024) ಸಂಜೆ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ (ಜೆಎಂಎಫ್‌ಸಿ) ನಂದನಿ ಉಯಿಕೆ ಅವರನ್ನು ನೇಮಿಸಲಾಗಿದೆ ಮತ್ತು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ನ್ಯಾಯಾಧೀಶರು ಮೂವರು ವೈದ್ಯರ ಸಮಿತಿಯನ್ನು ಹೆಸರಿಸಿದ್ದಾರೆ ಎಂದು ಎಸ್‌ಪಿ ಗಹ್ಲೋಟ್ ಮಾಹಿತಿ ನೀಡಿದ್ದಾರೆ.

“ನಾವು ಘಟನಾ ಸ್ಥಳದ ಪರಿಶೀಲನೆಗಾಗಿ ಉಜ್ಜಯಿನಿಯಿಂದ ವಿಧಿವಿಜ್ಞಾನ ಅಧಿಕಾರಿಯನ್ನು ಕರೆಸಿದ್ದೇವೆ. ಶನಿವಾರ (ಡಿಸೆಂಬರ್ 28, 2024) ತಡರಾತ್ರಿ ಠಾಣಾ ಉಸ್ತುವಾರಿಯನ್ನು ಅಮಾನತುಗೊಳಿಸಲಾಗಿದೆ. ಠಾಣೆಯ ಎಲ್ಲಾ ಸಿಸಿಟಿವಿ ದೃಶ್ಯಾವಳಿಗಳನ್ನು ನ್ಯಾಯಾಂಗ ತನಿಖಾ ತಂಡ ವಶಪಡಿಸಿಕೊಂಡಿದೆ. ಮ್ಯಾಜಿಸ್ಟ್ರೇಟ್ ಉಯಿಕೆ ಮತ್ತು ವಿಧಿವಿಜ್ಞಾನ ತಂಡ ಭಾನುವಾರ (ಡಿಸೆಂಬರ್ 29, 2024) ಬೆಳಿಗ್ಗೆ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಗಹ್ಲೋಟ್ ಹೇಳಿದ್ದಾರೆ.

ಕೊಲೆ ಆರೋಪ

ಮುಖೇಶ್ ಅವರ ಸಾವಿಗೆ ಸಂಬಂಧಿಸಿದಂತೆ ಭೀಮ್ ಆರ್ಮಿ ಕಾರ್ಯಕರ್ತರು ಮತ್ತು ಮೃತರ ಕುಟುಂಬಸ್ಥರು ಸ್ಥಳೀಯ ಪೊಲೀಸರ ವಿರುದ್ದ ಕೊಲೆ ಆರೋಪ ಮಾಡಿದ್ದಾರೆ. ಭೀಮ್ ಆರ್ಮಿ ಕಾರ್ಯಕರ್ತರು ಮೂರು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ : ನ್ಯಾಯಾಂಗ ತನಿಖೆ, ಅಪರಾಧಿಗಳಿಗೆ ಶಿಕ್ಷೆ ಮತ್ತು ಕುಟುಂಬಕ್ಕೆ ಆರ್ಥಿಕ ಪರಿಹಾರ. “ಅವರ ಎರಡು ಬೇಡಿಕೆಗಳನ್ನು ಈಗಾಗಲೇ ಈಡೇರಿಸಲಾಗಿದೆ ಮತ್ತು ಪರಿಹಾರದ ಬಗ್ಗೆ ನಾವು ಉನ್ನತ ಅಧಿಕಾರಿಗಳಿಗೆ ತಿಳಿಸಿದ್ದೇವೆ” ಎಂದು ಎಸ್‌ಪಿ ಹೇಳಿದ್ದಾರೆ.

ಭಾನುವಾರ (ಡಿಸೆಂಬರ್ 29, 2024) ಮಧ್ಯಾಹ್ನ, ಮಧ್ಯಪ್ರದೇಶ ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷ ಜಿತು ಪಟ್ವಾರಿ ಅವರು ಸತ್ವಾಸ್ ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿದ್ದು, ಠಾಣೆಯ ಎಲ್ಲಾ ಸಿಬ್ಬಂದಿಯನ್ನು ಅಮಾನತುಗೊಳಿಸಬೇಕು ಮತ್ತು ಮೃತನ ಕುಟುಂಬಸ್ಥರಿಗೆ 1 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಮುಖ್ಯಮಂತ್ರಿ ಮೋಹನ್ ಯಾದವ್ ಅವರಿಗೆ ಒತ್ತಾಯಿಸಿದ್ದಾರೆ.

ಪೊಲೀಸ್ ಅಧಿಕಾರಿಗಳು ಮುಖೇಶ್ ಲಾಂಗ್ರೆ ಅವರಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಹಣ ಕೊಡದ ಕಾರಣ ಕೊಲೆ ಮಾಡಿದ್ದಾರೆ ಎಂದು ಜಿತು ಪಟ್ವಾರಿ ಆರೋಪಿಸಿದ್ದಾರೆ.

ಪ್ರಕರಣದ ಹಿಂದೆ ರಾಜಕೀಯ

ಮೃತ ಮುಖೇಶ್ ಅವರ ಕುಟುಂಬವು ಆರಂಭದಲ್ಲಿ ಯಾವುದೇ ಆರೋಪವನ್ನು ಮಾಡಿರಲಿಲ್ಲ. ಮರಣೋತ್ತರ ಪರೀಕ್ಷೆಗೆ ಮಾಡುವುದಕ್ಕೆ ಮಾತ್ರ ನಿರಾಕದ್ದರು. ಕೆಲ ರಾಜಕಾರಣಿಗಳ ಸಂಪರ್ಕಕ್ಕೆ ಬಂದ ನಂತರವೇ ಅವರು ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ನ್ಯಾಯಾಂಗ ತನಿಖೆ ನಡೆಯುತ್ತಿದೆ ಮತ್ತು ಹೆಚ್ಚುವರಿ ಎಸ್ಪಿ (ಗ್ರಾಮೀಣ) ಅವರು ಲಂಚದ ಆರೋಪದ ಬಗ್ಗೆಯೂ ಪ್ರತ್ಯೇಕವಾಗಿ ತನಿಖೆ ನಡೆಸುತ್ತಿದ್ದಾರೆ. ಭಾನುವಾರ (ಡಿಸೆಂಬರ್ 29, 2024) ರಾತ್ರಿ ನಡೆಸಲಾದ ಮರಣೋತ್ತರ ಪರೀಕ್ಷೆಗೆ ಮುಖೇಶ್ ಅವರ ಕುಟುಂಬಸ್ಥರು ಒಪ್ಪಿಗೆ ನೀಡಿದ್ದಾರೆ ಎಂದು ಎಸ್‌ಪಿ ಗಹ್ಲೋಟ್ ತಿಳಿಸಿದ್ದಾರೆ.

ಮತ್ತೊಬ್ಬರು ಪೊಲೀಸ್ ಅಧಿಕಾರಿ ಮಾತನಾಡಿ, ” ಮೃತ ಮುಖೇಶ್ ಲಾಂಗ್ರೆ ಅವರ ವಿರುದ್ದ 6 ಕ್ರಿಮಿನಲ್ ಪ್ರಕರಣಗಳಿವೆ. ಮುಖೇಶ್ ವಿರುದ್ದ ದೂರು ನೀಡಿರುವ ಮಹಿಳೆ ಕಳೆದ ಆಗಸ್ಟ್‌ನಲ್ಲಿಯೂ ದೂರು ನೀಡಿದ್ದರು. ಇತ್ತೀಚಿನ ದೂರಿನಲ್ಲಿ, ಮುಖೇಶ್ ಅವರು ಪಾನಮತ್ತನಾಗಿ ಬಂದು ತನಗೆ ಮತ್ತು ತನ್ನ ಗಂಡನಿಗೆ ನಿಂದಿಸಿದ್ದಾರೆ, ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ : ಒಡಿಶಾ | ಬುಡಕಟ್ಟು ಮಹಿಳೆಯರನ್ನು ಮರಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...