Homeದಲಿತ್ ಫೈಲ್ಸ್ತಮಿಳುನಾಡು | ಕಸ್ಟಡಿಯಲ್ಲಿದ್ದ ದಲಿತ ಯುವಕ ಸಾವು : ಪೊಲೀಸರ ವಿರುದ್ಧ ಚಿತ್ರಹಿಂಸೆ ಆರೋಪ

ತಮಿಳುನಾಡು | ಕಸ್ಟಡಿಯಲ್ಲಿದ್ದ ದಲಿತ ಯುವಕ ಸಾವು : ಪೊಲೀಸರ ವಿರುದ್ಧ ಚಿತ್ರಹಿಂಸೆ ಆರೋಪ

- Advertisement -
- Advertisement -

ತಮಿಳುನಾಡಿನ ಶಿವಗಂಗಾ ಜಿಲ್ಲೆಯ ಮಾನಮದುರೈನಲ್ಲಿ ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದ 26 ವರ್ಷದ ದಲಿತ ಯುವಕ ಚಿಕಿತ್ಸೆ ಪಡೆಯುತ್ತಿದ್ದಾಗ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದು, ಪೊಲೀಸರ ಕಸ್ಟಡಿ ಚಿತ್ರಹಿಂಸೆಯೇ ಈ ಸಾವಿಗೆ ಕಾರಣ ಎಂದು ಆರೋಪಿಸಲಾಗಿದೆ.

ಇಂಜಿನಿಯರಿಂಗ್ ಪದವೀಧರನಾಗಿರುವ ಪರಿಶಿಷ್ಟ ಜಾತಿಯ ಆರ್. ಆಕಾಶ್ ಡೆಲಿಸನ್ ಮೃತ ಯುವ ಎಂದು ದಿ ಹಿಂದೂ ವರದಿ ಮಾಡಿದೆ.

ವರದಿಯ ಪ್ರಕಾರ, ಎರಡು ದಿನಗಳ ಹಿಂದೆ ಪಿ. ಜಯಕುಮಾರ್ (37) ಮತ್ತು ಆರ್. ಅಳಗರ್ (40) ಎಂಬುವವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಗಾಯಗೊಳಿಸಿದ ಆರೋಪದ ಮೇಲೆ ಮಾನಮದುರೈ ಪೊಲೀಸರು ಆಕಾಶ್ ಮತ್ತು ಆತನ ಪರಿಚಯಸ್ಥ ಗುಣ ಎಂಬುವವರನ್ನು ಬಂಧಿಸಿದ್ದರು.

ಅಳಗರ್ ನೀಡಿದ ದೂರಿನ ಮೇರೆಗೆ ಮಾರ್ಚ್ 6ರಂದು ಮಾನಮದುರೈ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ಸೆಕ್ಷನ್ 324(2), 296(b), 118(1), 109(1), ಮತ್ತು 351(3) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಆಕಾಶ ಡೆಲಿಸನ್ ಒಬ್ಬ ರೌಡಿಶೀಟರ್ ಆಗಿದ್ದು, ಆತನ ವಿರುದ್ಧ 1985ರ ಮಾದಕ ದ್ರವ್ಯಗಳು ಮತ್ತು ಮನೋತ್ತೇಜಕ ವಸ್ತುಗಳ ಕಾಯ್ದೆ (NDPS Act) ಅಡಿಯಲ್ಲಿ ಮೂರು ಪ್ರಕರಣಗಳು ಮತ್ತು ಒಂದು ಕೊಲೆ ಯತ್ನದ ಪ್ರಕರಣ ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾಗಿ ದಿ ಹಿಂದೂ ವರದಿ ಉಲ್ಲೇಖಿಸಿದೆ.

ಶಿವಗಂಗಾ ಜಿಲ್ಲಾ ಪೊಲೀಸರು ತಮ್ಮ ಹೇಳಿಕೆಯಲ್ಲಿ, ಅಳಗರ್ ಮತ್ತು ಆಕಾಶ್ ಡೆಲಿಸನ್ ಇಬ್ಬರೂ ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದು, ಪರಸ್ಪರ ಪರಿಚಿತರಾಗಿದ್ದರು ಎಂದು ತಿಳಿಸಿದ್ದಾಗಿ ವರದಿ ಹೇಳಿದೆ.

ಪೊಲೀಸ್ ಇನ್ಸ್‌ಪೆಕ್ಟರ್ ಮತ್ತು ಅವರ ತಂಡ ಆಕಾಶ್‌ನನ್ನು ಹುಡುಕಿಕೊಂಡು ಹೋದಾಗ, ಆತ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ಸೇತುವೆಯಿಂದ ಕೆಳಕ್ಕೆ ಬಿದ್ದ ಪರಿಣಾಮ ಆತನಿಗೆ ಗಂಭೀರ ಗಾಯಗಳಾಗಿವೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಮಾರ್ಚ್ 6ರಂದು ಆಕಾಶ್ ಕುಟುಂಬಕ್ಕೆ ಅಧಿಕೃತವಾಗಿ ಬಂಧನದ ಮಾಹಿತಿ ನೀಡಿದ ನಂತರ, ಆತನನ್ನು ಶಿವಗಂಗಾ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮಾರ್ಚ್ 7ರಂದು ಮಾನಮದುರೈ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಆಸ್ಪತ್ರೆಗೆ ಭೇಟಿ ನೀಡಿ, ಆತನಿಗೆ ಮಾರ್ಚ್ 18 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದ್ದರು. ಅಲ್ಲದೆ, ಮಧುರೈನ ಸರ್ಕಾರಿ ರಾಜಾಜಿ ಆಸ್ಪತ್ರೆಯ (ಜಿಆರ್‌ಹೆಚ್‌) ಕೈದಿಗಳ ವಾರ್ಡ್‌ನಲ್ಲಿ ಇರಿಸುವಂತೆ ನಿರ್ದೇಶನ ನೀಡಿದ್ದರು. ಅದರಂತೆ ಆತನನ್ನು ಜಿಆರ್‌ಹೆಚ್‌ಗೆ ಸ್ಥಳಾಂತರಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಆಕಾಶ್ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಜಿಆರ್‌ಹೆಚ್‌ ಮೂಲಗಳ ಪ್ರಕಾರ, ಆಕಾಶ್ ದೇಹದ ಹಲವು ಭಾಗಗಳಲ್ಲಿ ಮೂಳೆ ಮುರಿತಗಳಾಗಿದ್ದವು ಮತ್ತು ಸಾವಿಗೆ ‘ಫ್ಯಾಟ್ ಎಂಬೋಲಿಸಂ’ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಆದರೂ, ಸಾವಿನ ನಿಖರವಾದ ಕಾರಣ ಮರಣೋತ್ತರ ಪರೀಕ್ಷೆಯ ನಂತರವಷ್ಟೇ ತಿಳಿದುಬರಲಿದೆ ಎಂದು ದಿ ಹಿಂದೂ ವರದಿ ಉಲ್ಲೇಖಿಸಿದೆ.

ಪೊಲೀಸ್ ದೌರ್ಜನ್ಯ ಆರೋಪ

ಪೊಲೀಸರು ಆಕಾಶ್‌ನನ್ನು ಅಜ್ಞಾತ ಅರಣ್ಯ ಪ್ರದೇಶಕ್ಕೆ ಕರೆದೊಯ್ದು ತೀವ್ರವಾಗಿ ಚಿತ್ರಹಿಂಸೆ ನೀಡಿದ್ದಾರೆ. ಆತನ ಕಾಲಿನ ಮೇಲೆ ದೊಡ್ಡ ಕಲ್ಲುಗಳನ್ನು ಹಾಕಿ ಮೂಳೆ ಮುರಿಯುವಂತೆ ಮಾಡಿದ್ದಾರೆ ಎಂದು ಆತನ ತಂದೆ ರಾಜೇಶ್ ಕಣ್ಣನ್ ಆರೋಪಿಸಿದ್ದಾರೆ.

ವಿಚಾರಣೆಯ ನೆಪದಲ್ಲಿ ಪೊಲೀಸರು ಆಕಾಶ್‌ಗೆ ಜಾತಿ ನಿಂದನೆ ಮಾಡಿದ್ದಾರೆ ಎಂದು ಕುಟುಂಬಸ್ಥರು ದೂರಿದ್ದಾರೆ. ಇದು ಆಕಸ್ಮಿಕವಲ್ಲ, ಬದಲಿಗೆ ಪೊಲೀಸ್ ಕಸ್ಟಡಿಯಲ್ಲಿ ನಡೆದ ಕೊಲೆ ಎಂದು ಆರೋಪ ಮಾಡಿದ್ದಾರೆ.

ಆರೋಪ ಅಲ್ಲಗಳೆದ ಪೊಲೀಸರು

ಆಕಾಶ್ ಕುಟುಂಬಸ್ಥರ ಆರೋಪವನ್ನು ಪೊಲೀಸರು ಅಲ್ಲಗಳೆದಿದ್ದಾರೆ. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕಾಶ್‌ನನ್ನು ಬಂಧಿಸಲು ಹೋದಾಗ, ಆತ ಪೊಲೀಸರಿಂದ ತಪ್ಪಿಸಿಕೊಳ್ಳಲು ಸೇತುವೆಯಿಂದ ಕೆಳಕ್ಕೆ ಜಿಗಿದಿದ್ದಾನೆ ಎಂದಿದ್ದಾರೆ.

ಸೇತುವೆಯಿಂದ ಬಿದ್ದ ಕಾರಣ ಕಾಲಿನ ಮೂಳೆ ಮುರಿತದಂತಹ ಗಂಭೀರ ಗಾಯಗಳಾಗಿವೆ ಹೊರತು ಪೊಲೀಸರು ಹಲ್ಲೆ ನಡೆಸಿಲ್ಲ ಎಂದು ಹೇಳಿದ್ದಾರೆ.

ಮ್ಯಾಜಿಸ್ಟ್ರೇಟ್ ತನಿಖೆ

ಪೊಲೀಸ್ ಕಸ್ಟಡಿಯಲ್ಲಿ ಸಾವು ಸಂಭವಿಸಿದಾಗ ಅನುಸರಿಸಬೇಕಾದ ಕಾನೂನು ಪ್ರಕ್ರಿಯೆಯಂತೆ, ಘಟನೆಯ ಕುರಿತು ಸಮಗ್ರ ತನಿಖೆ ನಡೆಸಲು ಮ್ಯಾಜಿಸ್ಟ್ರೇಟ್ ಅವರಿಗೆ ಸೂಚಿಸಲಾಗಿದೆ.

ಮೃತರ ದೇಹವನ್ನು ಮರಣೋತ್ತರ ಪರೀಕ್ಷೆ ಮತ್ತು ಮ್ಯಾಜಿಸ್ಟ್ರೇಟ್ ತನಿಖೆಯ ಪ್ರಕ್ರಿಯೆಗಳಿಗಾಗಿ ಮಧುರೈ ರಾಜಾಜಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.

ಸಾವಿನ ನಿಖರ ಕಾರಣ ತಿಳಿಯಲು ಮರಣೋತ್ತರ ಪರೀಕ್ಷೆಯ ವರದಿಗಾಗಿ ಮ್ಯಾಜಿಸ್ಟ್ರೇಟ್ ಕಾಯುತ್ತಿದ್ದಾರೆ. ಪ್ರಾಥಮಿಕವಾಗಿ ಇದು ‘ಫ್ಯಾಟ್ ಎಂಬೋಲಿಸಂ’ನಿಂದ ಸಂಭವಿಸಿದ ಸಾವು ಎಂದು ಶಂಕಿಸಲಾಗಿದ್ದರೂ, ತನಿಖೆಯ ನಂತರವಷ್ಟೇ ಸತ್ಯಾಂಶ ಹೊರಬರಲಿದೆ.

ತನಿಖೆಯು ಪಾರದರ್ಶಕವಾಗಿರಬೇಕು ಮತ್ತು ತಪ್ಪಿತಸ್ಥ ಪೊಲೀಸರ ವಿರುದ್ಧ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕೆಂದು ಕುಟುಂಬದವರು ಒತ್ತಾಯಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...