Homeದಲಿತ್ ಫೈಲ್ಸ್ತಮಿಳುನಾಡು | ಕಸ್ಟಡಿಯಲ್ಲಿದ್ದ ದಲಿತ ಯುವಕ ಸಾವು : ಪೊಲೀಸರ ವಿರುದ್ಧ ಚಿತ್ರಹಿಂಸೆ ಆರೋಪ

ತಮಿಳುನಾಡು | ಕಸ್ಟಡಿಯಲ್ಲಿದ್ದ ದಲಿತ ಯುವಕ ಸಾವು : ಪೊಲೀಸರ ವಿರುದ್ಧ ಚಿತ್ರಹಿಂಸೆ ಆರೋಪ

- Advertisement -
- Advertisement -

ತಮಿಳುನಾಡಿನ ಶಿವಗಂಗಾ ಜಿಲ್ಲೆಯ ಮಾನಮದುರೈನಲ್ಲಿ ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದ 26 ವರ್ಷದ ದಲಿತ ಯುವಕ ಚಿಕಿತ್ಸೆ ಪಡೆಯುತ್ತಿದ್ದಾಗ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದು, ಪೊಲೀಸರ ಕಸ್ಟಡಿ ಚಿತ್ರಹಿಂಸೆಯೇ ಈ ಸಾವಿಗೆ ಕಾರಣ ಎಂದು ಆರೋಪಿಸಲಾಗಿದೆ.

ಇಂಜಿನಿಯರಿಂಗ್ ಪದವೀಧರನಾಗಿರುವ ಪರಿಶಿಷ್ಟ ಜಾತಿಯ ಆರ್. ಆಕಾಶ್ ಡೆಲಿಸನ್ ಮೃತ ಯುವ ಎಂದು ದಿ ಹಿಂದೂ ವರದಿ ಮಾಡಿದೆ.

ವರದಿಯ ಪ್ರಕಾರ, ಎರಡು ದಿನಗಳ ಹಿಂದೆ ಪಿ. ಜಯಕುಮಾರ್ (37) ಮತ್ತು ಆರ್. ಅಳಗರ್ (40) ಎಂಬುವವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಗಾಯಗೊಳಿಸಿದ ಆರೋಪದ ಮೇಲೆ ಮಾನಮದುರೈ ಪೊಲೀಸರು ಆಕಾಶ್ ಮತ್ತು ಆತನ ಪರಿಚಯಸ್ಥ ಗುಣ ಎಂಬುವವರನ್ನು ಬಂಧಿಸಿದ್ದರು.

ಅಳಗರ್ ನೀಡಿದ ದೂರಿನ ಮೇರೆಗೆ ಮಾರ್ಚ್ 6ರಂದು ಮಾನಮದುರೈ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ಸೆಕ್ಷನ್ 324(2), 296(b), 118(1), 109(1), ಮತ್ತು 351(3) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಆಕಾಶ ಡೆಲಿಸನ್ ಒಬ್ಬ ರೌಡಿಶೀಟರ್ ಆಗಿದ್ದು, ಆತನ ವಿರುದ್ಧ 1985ರ ಮಾದಕ ದ್ರವ್ಯಗಳು ಮತ್ತು ಮನೋತ್ತೇಜಕ ವಸ್ತುಗಳ ಕಾಯ್ದೆ (NDPS Act) ಅಡಿಯಲ್ಲಿ ಮೂರು ಪ್ರಕರಣಗಳು ಮತ್ತು ಒಂದು ಕೊಲೆ ಯತ್ನದ ಪ್ರಕರಣ ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾಗಿ ದಿ ಹಿಂದೂ ವರದಿ ಉಲ್ಲೇಖಿಸಿದೆ.

ಶಿವಗಂಗಾ ಜಿಲ್ಲಾ ಪೊಲೀಸರು ತಮ್ಮ ಹೇಳಿಕೆಯಲ್ಲಿ, ಅಳಗರ್ ಮತ್ತು ಆಕಾಶ್ ಡೆಲಿಸನ್ ಇಬ್ಬರೂ ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದು, ಪರಸ್ಪರ ಪರಿಚಿತರಾಗಿದ್ದರು ಎಂದು ತಿಳಿಸಿದ್ದಾಗಿ ವರದಿ ಹೇಳಿದೆ.

ಪೊಲೀಸ್ ಇನ್ಸ್‌ಪೆಕ್ಟರ್ ಮತ್ತು ಅವರ ತಂಡ ಆಕಾಶ್‌ನನ್ನು ಹುಡುಕಿಕೊಂಡು ಹೋದಾಗ, ಆತ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ಸೇತುವೆಯಿಂದ ಕೆಳಕ್ಕೆ ಬಿದ್ದ ಪರಿಣಾಮ ಆತನಿಗೆ ಗಂಭೀರ ಗಾಯಗಳಾಗಿವೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಮಾರ್ಚ್ 6ರಂದು ಆಕಾಶ್ ಕುಟುಂಬಕ್ಕೆ ಅಧಿಕೃತವಾಗಿ ಬಂಧನದ ಮಾಹಿತಿ ನೀಡಿದ ನಂತರ, ಆತನನ್ನು ಶಿವಗಂಗಾ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮಾರ್ಚ್ 7ರಂದು ಮಾನಮದುರೈ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಆಸ್ಪತ್ರೆಗೆ ಭೇಟಿ ನೀಡಿ, ಆತನಿಗೆ ಮಾರ್ಚ್ 18 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದ್ದರು. ಅಲ್ಲದೆ, ಮಧುರೈನ ಸರ್ಕಾರಿ ರಾಜಾಜಿ ಆಸ್ಪತ್ರೆಯ (ಜಿಆರ್‌ಹೆಚ್‌) ಕೈದಿಗಳ ವಾರ್ಡ್‌ನಲ್ಲಿ ಇರಿಸುವಂತೆ ನಿರ್ದೇಶನ ನೀಡಿದ್ದರು. ಅದರಂತೆ ಆತನನ್ನು ಜಿಆರ್‌ಹೆಚ್‌ಗೆ ಸ್ಥಳಾಂತರಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಆಕಾಶ್ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಜಿಆರ್‌ಹೆಚ್‌ ಮೂಲಗಳ ಪ್ರಕಾರ, ಆಕಾಶ್ ದೇಹದ ಹಲವು ಭಾಗಗಳಲ್ಲಿ ಮೂಳೆ ಮುರಿತಗಳಾಗಿದ್ದವು ಮತ್ತು ಸಾವಿಗೆ ‘ಫ್ಯಾಟ್ ಎಂಬೋಲಿಸಂ’ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಆದರೂ, ಸಾವಿನ ನಿಖರವಾದ ಕಾರಣ ಮರಣೋತ್ತರ ಪರೀಕ್ಷೆಯ ನಂತರವಷ್ಟೇ ತಿಳಿದುಬರಲಿದೆ ಎಂದು ದಿ ಹಿಂದೂ ವರದಿ ಉಲ್ಲೇಖಿಸಿದೆ.

ಪೊಲೀಸ್ ದೌರ್ಜನ್ಯ ಆರೋಪ

ಪೊಲೀಸರು ಆಕಾಶ್‌ನನ್ನು ಅಜ್ಞಾತ ಅರಣ್ಯ ಪ್ರದೇಶಕ್ಕೆ ಕರೆದೊಯ್ದು ತೀವ್ರವಾಗಿ ಚಿತ್ರಹಿಂಸೆ ನೀಡಿದ್ದಾರೆ. ಆತನ ಕಾಲಿನ ಮೇಲೆ ದೊಡ್ಡ ಕಲ್ಲುಗಳನ್ನು ಹಾಕಿ ಮೂಳೆ ಮುರಿಯುವಂತೆ ಮಾಡಿದ್ದಾರೆ ಎಂದು ಆತನ ತಂದೆ ರಾಜೇಶ್ ಕಣ್ಣನ್ ಆರೋಪಿಸಿದ್ದಾರೆ.

ವಿಚಾರಣೆಯ ನೆಪದಲ್ಲಿ ಪೊಲೀಸರು ಆಕಾಶ್‌ಗೆ ಜಾತಿ ನಿಂದನೆ ಮಾಡಿದ್ದಾರೆ ಎಂದು ಕುಟುಂಬಸ್ಥರು ದೂರಿದ್ದಾರೆ. ಇದು ಆಕಸ್ಮಿಕವಲ್ಲ, ಬದಲಿಗೆ ಪೊಲೀಸ್ ಕಸ್ಟಡಿಯಲ್ಲಿ ನಡೆದ ಕೊಲೆ ಎಂದು ಆರೋಪ ಮಾಡಿದ್ದಾರೆ.

ಆರೋಪ ಅಲ್ಲಗಳೆದ ಪೊಲೀಸರು

ಆಕಾಶ್ ಕುಟುಂಬಸ್ಥರ ಆರೋಪವನ್ನು ಪೊಲೀಸರು ಅಲ್ಲಗಳೆದಿದ್ದಾರೆ. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕಾಶ್‌ನನ್ನು ಬಂಧಿಸಲು ಹೋದಾಗ, ಆತ ಪೊಲೀಸರಿಂದ ತಪ್ಪಿಸಿಕೊಳ್ಳಲು ಸೇತುವೆಯಿಂದ ಕೆಳಕ್ಕೆ ಜಿಗಿದಿದ್ದಾನೆ ಎಂದಿದ್ದಾರೆ.

ಸೇತುವೆಯಿಂದ ಬಿದ್ದ ಕಾರಣ ಕಾಲಿನ ಮೂಳೆ ಮುರಿತದಂತಹ ಗಂಭೀರ ಗಾಯಗಳಾಗಿವೆ ಹೊರತು ಪೊಲೀಸರು ಹಲ್ಲೆ ನಡೆಸಿಲ್ಲ ಎಂದು ಹೇಳಿದ್ದಾರೆ.

ಮ್ಯಾಜಿಸ್ಟ್ರೇಟ್ ತನಿಖೆ

ಪೊಲೀಸ್ ಕಸ್ಟಡಿಯಲ್ಲಿ ಸಾವು ಸಂಭವಿಸಿದಾಗ ಅನುಸರಿಸಬೇಕಾದ ಕಾನೂನು ಪ್ರಕ್ರಿಯೆಯಂತೆ, ಘಟನೆಯ ಕುರಿತು ಸಮಗ್ರ ತನಿಖೆ ನಡೆಸಲು ಮ್ಯಾಜಿಸ್ಟ್ರೇಟ್ ಅವರಿಗೆ ಸೂಚಿಸಲಾಗಿದೆ.

ಮೃತರ ದೇಹವನ್ನು ಮರಣೋತ್ತರ ಪರೀಕ್ಷೆ ಮತ್ತು ಮ್ಯಾಜಿಸ್ಟ್ರೇಟ್ ತನಿಖೆಯ ಪ್ರಕ್ರಿಯೆಗಳಿಗಾಗಿ ಮಧುರೈ ರಾಜಾಜಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.

ಸಾವಿನ ನಿಖರ ಕಾರಣ ತಿಳಿಯಲು ಮರಣೋತ್ತರ ಪರೀಕ್ಷೆಯ ವರದಿಗಾಗಿ ಮ್ಯಾಜಿಸ್ಟ್ರೇಟ್ ಕಾಯುತ್ತಿದ್ದಾರೆ. ಪ್ರಾಥಮಿಕವಾಗಿ ಇದು ‘ಫ್ಯಾಟ್ ಎಂಬೋಲಿಸಂ’ನಿಂದ ಸಂಭವಿಸಿದ ಸಾವು ಎಂದು ಶಂಕಿಸಲಾಗಿದ್ದರೂ, ತನಿಖೆಯ ನಂತರವಷ್ಟೇ ಸತ್ಯಾಂಶ ಹೊರಬರಲಿದೆ.

ತನಿಖೆಯು ಪಾರದರ್ಶಕವಾಗಿರಬೇಕು ಮತ್ತು ತಪ್ಪಿತಸ್ಥ ಪೊಲೀಸರ ವಿರುದ್ಧ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕೆಂದು ಕುಟುಂಬದವರು ಒತ್ತಾಯಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...