Homeಮುಖಪುಟಪರ್ಭಾನಿಯಲ್ಲಿ ಪೊಲೀಸರಿಂದ ದಲಿತ ವ್ಯಕ್ತಿ ಹತ್ಯೆ, ಸಿಎಂ ಸುಳ್ಳು ಹೇಳಿದ್ದಾರೆ: ರಾಹುಲ್ ಗಾಂಧಿ ಆರೋಪ

ಪರ್ಭಾನಿಯಲ್ಲಿ ಪೊಲೀಸರಿಂದ ದಲಿತ ವ್ಯಕ್ತಿ ಹತ್ಯೆ, ಸಿಎಂ ಸುಳ್ಳು ಹೇಳಿದ್ದಾರೆ: ರಾಹುಲ್ ಗಾಂಧಿ ಆರೋಪ

- Advertisement -
- Advertisement -

“ಪರ್ಭಾನಿಯಲ್ಲಿ ದಲಿತ ವ್ಯಕ್ತಿಯನ್ನು ‘ಪೊಲೀಸರು ಹತ್ಯೆ ಮಾಡಿದ್ದಾರೆ’, ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಈ ವಿಷಯದ ಬಗ್ಗೆ ಸುಳ್ಳು ಹೇಳಿದ್ದಾರೆ” ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪ ಮಾಡಿದ್ದಾರೆ.

ಡಾ.ಬಿ.ಆರ್. ಅವರ ಪ್ರತಿಮೆ ಮುಂದೆ ಇರಿಸಿದ್ದ ಸಂವಿಧಾನ ಪ್ರತಿ ಧ್ವಂಸಗೊಳಿಸಿದ ನಂತರ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ಕೇವಲ 72 ಗಂಟೆಗಳ ನಂತರ, ಡಿಸೆಂಬರ್ 15 ರಂದು ನ್ಯಾಯಾಂಗ ಬಂಧನದಲ್ಲಿ ಸೋಮನಾಥ್ ವ್ಯಂಕತ್ ಸೂರ್ಯವಂಶಿ (35) ಶವವಾಗಿ ಪತ್ತೆಯಾಗಿದ್ದರು. ಮೃತ ವ್ಯಕ್ತಿ ದಲಿತ ಸಮುದಾಯಕ್ಕೆ ಸೇರಿದ್ದು, ಕಾನೂನು ಪದವಿ ಅಧ್ಯಯನ ಮಾಡುತ್ತಿದ್ದರು. ಇಂದು  ಅವರ ಮನೆಗೆ ಪಕ್ಷದ ಉನ್ನತ ನಾಯಕರ ಜೊತೆಯಲ್ಲಿ ರಾಹುಲ್ ಗಾಂಧಿ ಭೇಟಿ ನೀಡಿದರು.

ಕುಟುಂಬಕ್ಕೆ ಸಾಂತ್ವನ ಹೇಳಿದ ನಂತರ ಹೊರಬಂದ ರಾಹುಲ್ ಗಾಂಧಿ, “ಇದು 100 ಪ್ರತಿಶತ ಕೊಲೆಯಾಗಿದೆ. ಪೋಲೀಸರು ಥಳಿಸಿದ್ದಾರೆ… ಪೋಲೀಸರು ಕಸ್ಟಡಿಯಲ್ಲಿ ಕೊಲೆ ಮಾಡಿದ್ದಾರೆ. ದಲಿತ ಎಂಬ ಕಾರಣಕ್ಕೆ ಸಂವಿಧಾನ ರಕ್ಷಣೆಗೆ ಯತ್ನಿಸುತ್ತಿದ್ದ ಅವರನ್ನು ಹತ್ಯೆ ಮಾಡಲಾಗಿದೆ. ಅವರನ್ನು ಹೊಡೆದು ಮುಗಿಸಿದರು” ಎಂದು ರಾಹುಲ್ ಗಾಂಧಿ ಕಟುವಾಗಿ ಹೇಳಿದರು.

“ಪೊಲೀಸರಿಗೆ ಸಂದೇಶ ರವಾನಿಸಲು ಮೇಲ್ನೋಟಕ್ಕೆ ಸಿಎಂ ವಿಧಾನಸಭೆಯಲ್ಲಿ ಸುಳ್ಳು ಹೇಳಿದ್ದಾರೆ” ಎಂದು ಆರೋಪಿಸಿ ಫಡ್ನವೀಸ್ ಅವರತ್ತ ಬೆರಳು ತೋರಿಸಿದರು.

“ಸಂವಿಧಾನವನ್ನು ಮುಗಿಸುವುದು ಆರ್‌ಎಸ್‌ಎಸ್ ಸಿದ್ಧಾಂತ, (ಮಹಾಯುತಿ) ಸರ್ಕಾರ ಮತ್ತು ಬಿಜೆಪಿಯ ಸಿದ್ಧಾಂತವು ಸೂರ್ಯವಂಶಿಯ ಸಾವಿಗೆ ಕಾರಣವಾಗಿದೆ. ಇದಕ್ಕೆಲ್ಲ ಸಿಎಂ ಮತ್ತು ದಲಿತ ವ್ಯಕ್ತಿಯನ್ನು ಥಳಿಸಿದವರೇ ಹೊಣೆ” ಎಂದು ರಾಹುಲ್ ಗಾಂಧಿ ಹೇಳಿದರು.

ರಾಹುಲ್ ಗಾಂಧಿ ತಮ್ಮ ಭೇಟಿ ಮತ್ತು ಹೇಳಿಕೆಗಳೊಂದಿಗೆ ಸಮಸ್ಯೆಯನ್ನು ರಾಜಕೀಯಗೊಳಿಸಲು ಪ್ರಯತ್ನಿಸುತ್ತಿದ್ದಾರೆಯೇ ಎಂದು ಮಾಧ್ಯಮಗಳು ಪ್ರಶ್ನಿಸಿದಾಗ, “ಇಲ್ಲಿ ರಾಜಕೀಯ ಇಲ್ಲ. ಇದು ನ್ಯಾಯದ ವಿಷಯ. ಒಂದು ಕೊಲೆ ನಡೆದಿದೆ. ಇದು ಸಿದ್ಧಾಂತದ ಪ್ರಶ್ನೆ; ನಾವು ಈ ವಿಷಯದಲ್ಲಿ ತಕ್ಷಣದ ಕ್ರಮವನ್ನು ಬಯಸುತ್ತೇವೆ. ಇದನ್ನು ಬಗೆಹರಿಸಬೇಕು ಮತ್ತು ಇದರ ಹಿಂದಿರುವವರಿಗೆ ಶಿಕ್ಷೆಯಾಗಬೇಕು ಎಂದು ನಾವು ಬಯಸುತ್ತೇವೆ” ಎಂದು ರಾಹುಲ್ ಗಾಂಧಿ ಆಗ್ರಹಿಸಿದರು.

ಸೂರ್ಯವಂಶಿ ಅವರ ಸಾವಿನ ಕುರಿತು ಸದನವನ್ನು ದಾರಿತಪ್ಪಿಸಿರುವ ಸಿಎಂ ವಿರುದ್ಧ ಪ್ರತಿಪಕ್ಷ ಮಹಾ ವಿಕಾಸ್ ಅಘಾಡಿ (ಎಂವಿಎ) ಶೀಘ್ರದಲ್ಲೇ ವಿಶೇಷ ಹಕ್ಕು ಉಲ್ಲಂಘನೆಯ ಪ್ರಸ್ತಾಪವನ್ನು ಮುಂದಿಡಲಿದೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಎಫ್.ಪಟೋಲೆ ಹೇಳಿದ್ದಾರೆ.

“ಸಿಎಂ ಅವರು, ಸೂರ್ಯವಂಶಿ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರಿಂದ ನಿಧನರಾದರು ಎಂದು ಹೇಳಿದ್ದರು. ಎದೆನೋವು ಎಂದು ದೂರು ನೀಡಿದ್ದರು ಎಂದು ಪೊಲೀಸರು ಮೊದಲು ಹೇಳಿದ್ದರು. ಶವಪರೀಕ್ಷೆ ವರದಿಯಲ್ಲಿ (ಡಿಸೆಂಬರ್ 16) ‘ಬಹು ಗಾಯಗಳ ನಂತರ ಆಘಾತ’ ಸಾವಿಗೆ ಕಾರಣ ಎಂದು ಉಲ್ಲೇಖಿಸಲಾಗಿದೆ” ಎಂದು ಪಟೋಲೆ ಸೂಚಿಸಿದರು.

ರಾಹುಲ್ ಗಾಂಧಿಯವರ ಹೇಳಿಕೆಗಳನ್ನು ‘ರಾಜಕೀಯ’ ಎಂದು ತಳ್ಳಿಹಾಕಿದ ಫಡ್ನವಿಸ್, ಮಹಾಯುತಿ ಸರ್ಕಾರವು ಈಗಾಗಲೇ ಈ ವಿಷಯದ ಬಗ್ಗೆ ಎರಡು ತನಿಖೆಗಳನ್ನು ಪ್ರಾರಂಭಿಸಿದೆ. ಆರೋಪಿಗಳಿಗೆ ಕಠಿಣ ಶಿಕ್ಷೆಯೊಂದಿಗೆ ನ್ಯಾಯವನ್ನು ನೀಡಲಾಗುವುದು ಎಂದು ಪುನರುಚ್ಚರಿಸಿದರು.

ಇದಕ್ಕೂ ಮುನ್ನ ಕಡು ನೀಲಿ ಬಣ್ಣದ ಟೀ ಶರ್ಟ್ ಧರಿಸಿದ ರಾಹುಲ್ ಗಾಂಧಿ ಅವರು ಸೂರ್ಯವಂಶಿ ಮನೆಗೆ ಬರಿಗಾಲಿನಲ್ಲಿ ಪ್ರವೇಶಿಸಿ, ಕಾನೂನು ವಿದ್ಯಾರ್ಥಿ ಸೋಮನಾಥ್ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿದರು.

ರಾಹುಲ್ ಗಾಂಧಿ ಮೃತ ಕಾನೂನು ವಿದ್ಯಾರ್ಥಿ ಕುಟುಂಬ ಸದಸ್ಯರ ಪಕ್ಕದಲ್ಲಿ ನೆಲದ ಮೇಲೆ ಕುಳಿತುಕೊಂಡರು. ಅವರು ನ್ಯಾಯಾಂಗ ಬಂಧನದಲ್ಲಿ ಸೋಮನಾಥ್ ಸೂರ್ಯವಂಶಿ ಅವರ ಸಾವಿಗೆ ಕಾರಣವಾದ ಘಟನೆಗಳನ್ನು ವಿವರಿಸಿ, ಅವರಿಗೆ ಕೆಲವು ದಾಖಲೆಗಳನ್ನು ತೋರಿಸಿದರು.

ರಾಹುಲ್ ಗಾಂಧಿ ಅವರಿಗೆ ತಾಳ್ಮೆಯ ವಿಚಾರಣೆಯನ್ನು ನೀಡಿದರು, ಹಲವಾರು ಸಂದರ್ಭಗಳಲ್ಲಿ ತಲೆದೂಗಿದರು, ಸಂತಾಪ ಸೂಚಿಸಿದ ಅವರು, ಮೃತ ವ್ಯಕ್ತಿಗೆ ನ್ಯಾಯ ಒದಗಿಸುವ ಭರವಸೆ ನೀಡಿದರು.

ನಂತರ, ಅವರು ಮತ್ತೊಬ್ಬ ದಲಿತ ಸಮಾಜ ಸೇವಕ ವಿಜಯ್ ವಾಕೋಡೆ ಅವರ ಮನೆಗೆ ಭೇಟಿ ನೀಡಿದರು. ಅವರು ಡಿಸೆಂಬರ್ 11-12 ರಂದು ಗುಂಪನ್ನು ನಿಯಂತ್ರಿಸಲು ಪ್ರಯತ್ನಿಸುವಾಗ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದರು.

ಡಿಸೆಂಬರ್ 10 ರಂದು ಪರ್ಭಾನಿ ರೈಲು ನಿಲ್ದಾಣದ ಬಳಿಯ ಡಾ. ಅಂಬೇಡ್ಕರ್ ಪ್ರತಿಮೆ ಮುಂದೆ ಇರಿಸಲಾಗಿದ್ದ ಸಂವಿಧಾನ ಪ್ರತಿಯನ್ನು ಸೋಪಾನ್ ಪವಾರ್ ಎಂಬ ‘ಮಾನಸಿಕ ಅಸ್ತವ್ಯಸ್ತ’ ವ್ಯಕ್ತಿ ವಿರೂಪಗೊಳಿಸಿದ್ದು, ನಂತರ ಉಂಟಾದ ಹಿಂಸಾತ್ಮಕ ಘಟನೆಗಳಿಗೆ ಸಂಬಂಧಿಸಿದಂತೆ ಸೂರ್ಯವಂಶಿ ಅವರನ್ನು ಬಂಧಿಸಲಾಯಿತು.

ಪರ್ಭಾನಿಯಲ್ಲಿ ಹಿಂಸಾತ್ಮಕ ಮತ್ತು ಉದ್ವಿಗ್ನತೆಯಿಂದ ನಗರ ಸ್ಥಗಿತಗೊಂಡಿತ್ತು. ಆದರೆ ಸ್ಥಳೀಯ ಪೊಲೀಸರು ಡಿಸೆಂಬರ್ 12 ರಂದು ಸೂರ್ಯವಂಶಿ ಸೇರಿದಂತೆ ಸುಮಾರು 300 ಜನರನ್ನು, ಬಹುತೇಕ ದಲಿತರನ್ನು ಬಂಧಿಸಿದರು.

ಕೇವಲ 72 ಗಂಟೆಗಳ ನಂತರ, ಸೂರ್ಯವಂಶಿ ನ್ಯಾಯಾಂಗ ಬಂಧನದಲ್ಲಿ ಸತ್ತರು, ವಿರೋಧ ಪಕ್ಷದ ಮಹಾ ವಿಕಾಸ್ ಅಘಾಡಿ (ಎಂವಿಎ) ಮತ್ತು ಇಂಡಿಯಾ ಬ್ಲಾಕ್ ಮಿತ್ರಪಕ್ಷಗಳು ಈ ವಿಷಯವನ್ನು ಅನೇಕ ಹಂತಗಳಲ್ಲಿ ಧ್ವನಿ ಎತ್ತಿದರು.

ಇದನ್ನೂ ಓದಿ; ತಮಿಳುನಾಡು: ಕಾರಿನ ಧೂಳಿನ ಮೇಲೆ ಗೀಚಿದ ದಲಿತ ಬಾಲಕನಿಗೆ ಥಳಿಸಿದ ಮಾಲೀಕ, ಪ್ರಶ್ನಿಸಿದವರಿಗೆ ಚಾಕು ಇರಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...