Homeದಲಿತ್ ಫೈಲ್ಸ್ದಲಿತ ಬಾಲಕನಿಗೆ ಥಳಿಸಿ, ಮೂತ್ರ ಕುಡಿಸಿದ ಪೊಲೀಸರು : ಆರೋಪ

ದಲಿತ ಬಾಲಕನಿಗೆ ಥಳಿಸಿ, ಮೂತ್ರ ಕುಡಿಸಿದ ಪೊಲೀಸರು : ಆರೋಪ

- Advertisement -
- Advertisement -

ರಾಜಸ್ಥಾನದ ಸಿಕಾರ್ ಜಿಲ್ಲೆಯಲ್ಲಿ 13 ವರ್ಷದ ದಲಿತ ಬಾಲಕನನ್ನು ಬಂಧಿಸಿದ ಪೊಲೀಸರು, ಥಳಿಸಿ ಬಲವಂತವಾಗಿ ಮೂತ್ರ ಕುಡಿಸಿರುವ ಆರೋಪ ಕೇಳಿ ಬಂದಿದೆ.

ಈ ಘಟನೆಯು ಬಾಲಕನ ಕುಟುಂಬ ಮತ್ತು ದಲಿತ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದ್ದು,
ಸಿಕಾರ್‌ನಲ್ಲಿರುವ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಕಚೇರಿಯ ಹೊರಗೆ ಪ್ರತಿಭಟನೆ ನಡೆಸಿ ಪೊಲೀಸರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ ಎಂದು en.themooknayak.com ವರದಿ ಮಾಡಿದೆ.

ಸ್ಥಳೀಯ ನಿವಾಸಿ ಹಾಗೂ ಸಂತ್ರಸ್ತ ಬಾಲಕನ ಸಂಬಂಧಿ ಬಲ್ಬೀರ್ ಭಾರತೀಯ ಅವರ ಪ್ರಕಾರ, ಅಕ್ಟೋಬರ್ 21ರ ರಾತ್ರಿ ಕಳ್ಳತನದ ಆರೋಪದ ಮೇಲೆ ಬಾಲಕನನ್ನು ಖಂಡೇಲಾ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು. ಬಳಿಕ ಪೊಲೀಸ್‌ ಠಾಣೆಯ ಸೆಲ್‌ನಲ್ಲಿ ಬಂಧಿಸಿಟ್ಟಿದ್ದರು. ಅಲ್ಲಿ ಪೊಲೀಸರು ಬಾಲಕನನ್ನು ತೀವ್ರ ದೈಹಿಕ ಹಿಂಸೆಗೆ ಒಳಪಡಿಸಿದ್ದಾರೆ. ಆತನಿಗೆ ಥಳಿಸಿದ್ದಲ್ಲದೆ, ಮೂತ್ರ ಕುಡಿಸಿ ದೌರ್ಜನ್ಯವೆಸಗಿದ್ದಾರೆ.

ಬಾಲಕನನ್ನು ಮನೆಗೆ ಕರೆತರಲು ಪ್ರಯತ್ನಿಸಿದಾಗ, ಖಂಡೇಲಾ ಠಾಣಾಧಿಕಾರಿ ಮಂಗೀಲಾಲ್ ಮತ್ತು ಎಎಸ್‌ಐ ಪುರನ್‌ಮಲ್ ಅವರು ಬಿಡುಗಡೆ ಮಾಡಲು 50,000 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಬಾಲಕನ 70 ವರ್ಷದ ಅಜ್ಜ ತನ್ನ ಮೊಮ್ಮಗನ ಬಿಡುಗಡೆಗಾಗಿ ಮನವಿ ಮಾಡಲು ಠಾಣೆಗೆ ತೆರಳಿದ್ದಾಗ ಪೊಲೀಸ್ ಸಿಬ್ಬಂದಿ ಬಾಲಕನಿಗೆ ಥಳಿಸುವುದನ್ನು ನೋಡಿದ್ದಾರೆ. ಈ ವೇಳೆ ಮಧ್ಯಪ್ರವೇಶಿಸಿದ ಅವರು, ಮೊಮ್ಮಗನ ಮೇಲೆ ಏಕೆ ಹಲ್ಲೆ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದಾಗ, ಪೊಲೀಸರು ವೃದ್ದನ ಮೇಲೂ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಅಲ್ಲದೆ, ಅವರನ್ನು ಬಲವಂತವಾಗಿ ಠಾಣೆಯಿಂದ ಹೊರದಬ್ಬಿದ್ದಾರೆ. ಈ ವೇಳೆ ವೃದ್ದನ ಹೆಬ್ಬೆರಳು ಮುರಿದಿದೆ ಎಂದು ವರದಿ ವಿವರಿಸಿದೆ.

ನ್ಯಾಯ ಮತ್ತು ತಕ್ಷಣ ಕ್ರಮಕ್ಕೆ ಒತ್ತಾಯಿಸಿದ ಕುಟುಂಬ

ಬಾಲಕನ ಕುಟುಂಬ ದಲಿತ ಸಮುದಾಯದ ಜನರೊಂದಿಗೆ ಎಸ್‌ಪಿ ಕಚೇರಿಯ ಬಳಿ ಪ್ರತಿಭಟನೆ ನಡೆಸಿ ತಮಗೆ ನ್ಯಾಯ ಕೊಡಿಸುವಂತೆ ಮತ್ತು ತಪ್ಪಿತಸ್ಥ ಪೊಲೀಸರ ವಿರುದ್ದ ಕ್ರಮಕ್ಕೆ ಒತ್ತಾಯಿಸಿದೆ. ಠಾಣಾಧಿಕಾರಿ ಮಂಗೀಲಾಲ್, ಎಎಸ್‌ಐ ಪುರನ್‌ಮಲ್ ಮತ್ತು ಇತರ ಇಬ್ಬರು ಪೊಲೀಸರ ವಿರುದ್ಧ ಮಕ್ಕಳ ಲೈಂಗಿಕ ಅಪರಾಧಗಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಪೊಲೀಸರು ಬಾಲಕನಿಗೆ ಲೈಂಗಿಕ ಕಿರುಕುಳವೂ ನೀಡಿದ್ದಾರೆ ಎಂದು ಬಾಲಕನ ಕುಟುಂಬ ಆರೋಪಿಸಿದೆ. ಹಾಗಾಗಿ, ಪೋಕ್ಸೋ ಪ್ರಕರಣ ದಾಖಲಿಸಲು ಆಗ್ರಹಿಸಿದೆ. ಪೊಲೀಸ್ ದೌರ್ಜನ್ಯದಿಂದ ಬಾಲಕ ತೀವ್ರ ಆಘಾತಕ್ಕೊಳಗಾಗಿದ್ದಾನೆ. ಆತ ಭಯಗೊಂಡಿದ್ದು, ನೋವಿನಿಂದ ನರಳುತ್ತಿದ್ದಾನೆ. ಪೊಲೀಸರ ಹಲ್ಲೆಯಿಂದ ಆತನ ಕಾಲುಗಳು ಊದಿಕೊಂಡಿವೆ ಎಂದು ಕುಟುಂಬ ಹೇಳಿಕೊಂಡಿದೆ.

ಕುಟುಂಬಸ್ಥರು ಆರಂಭದಲ್ಲಿ ಅಕ್ಟೋಬರ್ 22ರಂದು ಎಸ್ಪಿಗೆ ಲಿಖಿತ ದೂರು ನೀಡಿದ್ದಾರೆ. ಪೊಲೀಸರನ್ನು ಅಮಾನತಗೊಳಿಸಬೇಕು. ಅವರ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ ಎಂದು en.themooknayak.com ತಿಳಿಸಿದೆ.

ಪೊಲೀಸರ ವಿರುದ್ದ ಆರೋಪಗಳಿಗೆ ಪ್ರತಿಕ್ರಿಯಿಸಿದ ಸಿಕಾರ್ ಪೊಲೀಸ್ ವರಿಷ್ಠಾಧಿಕಾರಿ ಭುವನ್ ಭೂಷಣ್ ಯಾದವ್, “ಪ್ರಕರಣದ ಕುರಿತು ಮಾಹಿತಿ ಪಡೆಯಲು ಕುಟುಂಬವನ್ನು ಪ್ರತಿನಿಧಿಸುವ ನಿಯೋಗವನ್ನು ಸೋಮವಾರ ಭೇಟಿ ಮಾಡಿದ್ದೇನೆ ಎಂದು ಹೇಳಿದ್ದಾರೆ. ನಾನು ದೌರ್ಜನ್ಯಕ್ಕೊಳಗಾದ ಬಾಲಕನೊಂದಿಗೆ ವೈಯಕ್ತಿಕವಾಗಿ ಮಾತನಾದ್ದೇನೆ. ಸೂಕ್ತ ತನಿಖೆಯ ಭರವಸೆಯನ್ನು ಕುಟುಂಬಕ್ಕೆ ನೀಡಿದ್ದೇನೆ. ಪ್ರಕರಣವನ್ನು ರಿಂಗಸ್‌ನ ಸರ್ಕಲ್ ಆಫೀಸರ್ (ಸಿಒ) ಅವರಿಗೆ ವಹಿಸಲಾಗಿದ್ದು, 7 ದಿನಗಳಲ್ಲಿ ವಿವರವಾದ ತನಿಖೆ ನಡೆಸಿ ಸಮಗ್ರ ವರದಿಯನ್ನು ಸಲ್ಲಿಸುವಂತೆ ಸೂಚಿಸಲಾಗಿದೆ” ಎಂದು ತಿಳಿಸಿದ್ದಾರೆ.

ಎಸ್ಪಿ ನೀಡಿರುವ ಉತ್ತರಕ್ಕೆ ಸಮಾಧಾನಗೊಳ್ಳದ ಬಾಲಕನ ಕುಟುಂಬ, ಬಾಲಕನ ಮೇಲಿನ ದೌರ್ಜನ್ಯ ಮಕ್ಕಳ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ ಎಂದು ಹೇಳಿದ್ದು, ಪೊಲೀಸರನ್ನು ವಜಾಗೊಳಿಸಬೇಕ. ಅವರ ವಿರುದ್ದ ಕ್ರಿಮಿನಲ್ ಪ್ರಕರಣ ಹೂಡಬೇಕು ಎಂದು ಪಟ್ಟು ಹಿಡಿದಿದೆ

ಇದನ್ನೂ ಓದಿ : ಮಹಾರಾಷ್ಟ್ರ ವಿಧಾನಸಭೆ ಚುನಾವಣೆ | 8 ಸಾವಿರ ಅಭ್ಯರ್ಥಿಗಳಿಂದ 10 ಸಾವಿರಕ್ಕೂ ಅಧಿಕ ನಾಮಪತ್ರಗಳು ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...