Homeದಲಿತ್ ಫೈಲ್ಸ್ದಲಿತ ಬಾಲಕನಿಗೆ ಥಳಿಸಿ, ಮೂತ್ರ ಕುಡಿಸಿದ ಪೊಲೀಸರು : ಆರೋಪ

ದಲಿತ ಬಾಲಕನಿಗೆ ಥಳಿಸಿ, ಮೂತ್ರ ಕುಡಿಸಿದ ಪೊಲೀಸರು : ಆರೋಪ

- Advertisement -
- Advertisement -

ರಾಜಸ್ಥಾನದ ಸಿಕಾರ್ ಜಿಲ್ಲೆಯಲ್ಲಿ 13 ವರ್ಷದ ದಲಿತ ಬಾಲಕನನ್ನು ಬಂಧಿಸಿದ ಪೊಲೀಸರು, ಥಳಿಸಿ ಬಲವಂತವಾಗಿ ಮೂತ್ರ ಕುಡಿಸಿರುವ ಆರೋಪ ಕೇಳಿ ಬಂದಿದೆ.

ಈ ಘಟನೆಯು ಬಾಲಕನ ಕುಟುಂಬ ಮತ್ತು ದಲಿತ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದ್ದು,
ಸಿಕಾರ್‌ನಲ್ಲಿರುವ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಕಚೇರಿಯ ಹೊರಗೆ ಪ್ರತಿಭಟನೆ ನಡೆಸಿ ಪೊಲೀಸರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ ಎಂದು en.themooknayak.com ವರದಿ ಮಾಡಿದೆ.

ಸ್ಥಳೀಯ ನಿವಾಸಿ ಹಾಗೂ ಸಂತ್ರಸ್ತ ಬಾಲಕನ ಸಂಬಂಧಿ ಬಲ್ಬೀರ್ ಭಾರತೀಯ ಅವರ ಪ್ರಕಾರ, ಅಕ್ಟೋಬರ್ 21ರ ರಾತ್ರಿ ಕಳ್ಳತನದ ಆರೋಪದ ಮೇಲೆ ಬಾಲಕನನ್ನು ಖಂಡೇಲಾ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು. ಬಳಿಕ ಪೊಲೀಸ್‌ ಠಾಣೆಯ ಸೆಲ್‌ನಲ್ಲಿ ಬಂಧಿಸಿಟ್ಟಿದ್ದರು. ಅಲ್ಲಿ ಪೊಲೀಸರು ಬಾಲಕನನ್ನು ತೀವ್ರ ದೈಹಿಕ ಹಿಂಸೆಗೆ ಒಳಪಡಿಸಿದ್ದಾರೆ. ಆತನಿಗೆ ಥಳಿಸಿದ್ದಲ್ಲದೆ, ಮೂತ್ರ ಕುಡಿಸಿ ದೌರ್ಜನ್ಯವೆಸಗಿದ್ದಾರೆ.

ಬಾಲಕನನ್ನು ಮನೆಗೆ ಕರೆತರಲು ಪ್ರಯತ್ನಿಸಿದಾಗ, ಖಂಡೇಲಾ ಠಾಣಾಧಿಕಾರಿ ಮಂಗೀಲಾಲ್ ಮತ್ತು ಎಎಸ್‌ಐ ಪುರನ್‌ಮಲ್ ಅವರು ಬಿಡುಗಡೆ ಮಾಡಲು 50,000 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಬಾಲಕನ 70 ವರ್ಷದ ಅಜ್ಜ ತನ್ನ ಮೊಮ್ಮಗನ ಬಿಡುಗಡೆಗಾಗಿ ಮನವಿ ಮಾಡಲು ಠಾಣೆಗೆ ತೆರಳಿದ್ದಾಗ ಪೊಲೀಸ್ ಸಿಬ್ಬಂದಿ ಬಾಲಕನಿಗೆ ಥಳಿಸುವುದನ್ನು ನೋಡಿದ್ದಾರೆ. ಈ ವೇಳೆ ಮಧ್ಯಪ್ರವೇಶಿಸಿದ ಅವರು, ಮೊಮ್ಮಗನ ಮೇಲೆ ಏಕೆ ಹಲ್ಲೆ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದಾಗ, ಪೊಲೀಸರು ವೃದ್ದನ ಮೇಲೂ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಅಲ್ಲದೆ, ಅವರನ್ನು ಬಲವಂತವಾಗಿ ಠಾಣೆಯಿಂದ ಹೊರದಬ್ಬಿದ್ದಾರೆ. ಈ ವೇಳೆ ವೃದ್ದನ ಹೆಬ್ಬೆರಳು ಮುರಿದಿದೆ ಎಂದು ವರದಿ ವಿವರಿಸಿದೆ.

ನ್ಯಾಯ ಮತ್ತು ತಕ್ಷಣ ಕ್ರಮಕ್ಕೆ ಒತ್ತಾಯಿಸಿದ ಕುಟುಂಬ

ಬಾಲಕನ ಕುಟುಂಬ ದಲಿತ ಸಮುದಾಯದ ಜನರೊಂದಿಗೆ ಎಸ್‌ಪಿ ಕಚೇರಿಯ ಬಳಿ ಪ್ರತಿಭಟನೆ ನಡೆಸಿ ತಮಗೆ ನ್ಯಾಯ ಕೊಡಿಸುವಂತೆ ಮತ್ತು ತಪ್ಪಿತಸ್ಥ ಪೊಲೀಸರ ವಿರುದ್ದ ಕ್ರಮಕ್ಕೆ ಒತ್ತಾಯಿಸಿದೆ. ಠಾಣಾಧಿಕಾರಿ ಮಂಗೀಲಾಲ್, ಎಎಸ್‌ಐ ಪುರನ್‌ಮಲ್ ಮತ್ತು ಇತರ ಇಬ್ಬರು ಪೊಲೀಸರ ವಿರುದ್ಧ ಮಕ್ಕಳ ಲೈಂಗಿಕ ಅಪರಾಧಗಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಪೊಲೀಸರು ಬಾಲಕನಿಗೆ ಲೈಂಗಿಕ ಕಿರುಕುಳವೂ ನೀಡಿದ್ದಾರೆ ಎಂದು ಬಾಲಕನ ಕುಟುಂಬ ಆರೋಪಿಸಿದೆ. ಹಾಗಾಗಿ, ಪೋಕ್ಸೋ ಪ್ರಕರಣ ದಾಖಲಿಸಲು ಆಗ್ರಹಿಸಿದೆ. ಪೊಲೀಸ್ ದೌರ್ಜನ್ಯದಿಂದ ಬಾಲಕ ತೀವ್ರ ಆಘಾತಕ್ಕೊಳಗಾಗಿದ್ದಾನೆ. ಆತ ಭಯಗೊಂಡಿದ್ದು, ನೋವಿನಿಂದ ನರಳುತ್ತಿದ್ದಾನೆ. ಪೊಲೀಸರ ಹಲ್ಲೆಯಿಂದ ಆತನ ಕಾಲುಗಳು ಊದಿಕೊಂಡಿವೆ ಎಂದು ಕುಟುಂಬ ಹೇಳಿಕೊಂಡಿದೆ.

ಕುಟುಂಬಸ್ಥರು ಆರಂಭದಲ್ಲಿ ಅಕ್ಟೋಬರ್ 22ರಂದು ಎಸ್ಪಿಗೆ ಲಿಖಿತ ದೂರು ನೀಡಿದ್ದಾರೆ. ಪೊಲೀಸರನ್ನು ಅಮಾನತಗೊಳಿಸಬೇಕು. ಅವರ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ ಎಂದು en.themooknayak.com ತಿಳಿಸಿದೆ.

ಪೊಲೀಸರ ವಿರುದ್ದ ಆರೋಪಗಳಿಗೆ ಪ್ರತಿಕ್ರಿಯಿಸಿದ ಸಿಕಾರ್ ಪೊಲೀಸ್ ವರಿಷ್ಠಾಧಿಕಾರಿ ಭುವನ್ ಭೂಷಣ್ ಯಾದವ್, “ಪ್ರಕರಣದ ಕುರಿತು ಮಾಹಿತಿ ಪಡೆಯಲು ಕುಟುಂಬವನ್ನು ಪ್ರತಿನಿಧಿಸುವ ನಿಯೋಗವನ್ನು ಸೋಮವಾರ ಭೇಟಿ ಮಾಡಿದ್ದೇನೆ ಎಂದು ಹೇಳಿದ್ದಾರೆ. ನಾನು ದೌರ್ಜನ್ಯಕ್ಕೊಳಗಾದ ಬಾಲಕನೊಂದಿಗೆ ವೈಯಕ್ತಿಕವಾಗಿ ಮಾತನಾದ್ದೇನೆ. ಸೂಕ್ತ ತನಿಖೆಯ ಭರವಸೆಯನ್ನು ಕುಟುಂಬಕ್ಕೆ ನೀಡಿದ್ದೇನೆ. ಪ್ರಕರಣವನ್ನು ರಿಂಗಸ್‌ನ ಸರ್ಕಲ್ ಆಫೀಸರ್ (ಸಿಒ) ಅವರಿಗೆ ವಹಿಸಲಾಗಿದ್ದು, 7 ದಿನಗಳಲ್ಲಿ ವಿವರವಾದ ತನಿಖೆ ನಡೆಸಿ ಸಮಗ್ರ ವರದಿಯನ್ನು ಸಲ್ಲಿಸುವಂತೆ ಸೂಚಿಸಲಾಗಿದೆ” ಎಂದು ತಿಳಿಸಿದ್ದಾರೆ.

ಎಸ್ಪಿ ನೀಡಿರುವ ಉತ್ತರಕ್ಕೆ ಸಮಾಧಾನಗೊಳ್ಳದ ಬಾಲಕನ ಕುಟುಂಬ, ಬಾಲಕನ ಮೇಲಿನ ದೌರ್ಜನ್ಯ ಮಕ್ಕಳ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ ಎಂದು ಹೇಳಿದ್ದು, ಪೊಲೀಸರನ್ನು ವಜಾಗೊಳಿಸಬೇಕ. ಅವರ ವಿರುದ್ದ ಕ್ರಿಮಿನಲ್ ಪ್ರಕರಣ ಹೂಡಬೇಕು ಎಂದು ಪಟ್ಟು ಹಿಡಿದಿದೆ

ಇದನ್ನೂ ಓದಿ : ಮಹಾರಾಷ್ಟ್ರ ವಿಧಾನಸಭೆ ಚುನಾವಣೆ | 8 ಸಾವಿರ ಅಭ್ಯರ್ಥಿಗಳಿಂದ 10 ಸಾವಿರಕ್ಕೂ ಅಧಿಕ ನಾಮಪತ್ರಗಳು ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...