Homeದಲಿತ್ ಫೈಲ್ಸ್ದಲಿತ ಬಾಲಕನಿಗೆ ಥಳಿಸಿ, ಮೂತ್ರ ಕುಡಿಸಿದ ಪೊಲೀಸರು : ಆರೋಪ

ದಲಿತ ಬಾಲಕನಿಗೆ ಥಳಿಸಿ, ಮೂತ್ರ ಕುಡಿಸಿದ ಪೊಲೀಸರು : ಆರೋಪ

- Advertisement -
- Advertisement -

ರಾಜಸ್ಥಾನದ ಸಿಕಾರ್ ಜಿಲ್ಲೆಯಲ್ಲಿ 13 ವರ್ಷದ ದಲಿತ ಬಾಲಕನನ್ನು ಬಂಧಿಸಿದ ಪೊಲೀಸರು, ಥಳಿಸಿ ಬಲವಂತವಾಗಿ ಮೂತ್ರ ಕುಡಿಸಿರುವ ಆರೋಪ ಕೇಳಿ ಬಂದಿದೆ.

ಈ ಘಟನೆಯು ಬಾಲಕನ ಕುಟುಂಬ ಮತ್ತು ದಲಿತ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದ್ದು,
ಸಿಕಾರ್‌ನಲ್ಲಿರುವ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಕಚೇರಿಯ ಹೊರಗೆ ಪ್ರತಿಭಟನೆ ನಡೆಸಿ ಪೊಲೀಸರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ ಎಂದು en.themooknayak.com ವರದಿ ಮಾಡಿದೆ.

ಸ್ಥಳೀಯ ನಿವಾಸಿ ಹಾಗೂ ಸಂತ್ರಸ್ತ ಬಾಲಕನ ಸಂಬಂಧಿ ಬಲ್ಬೀರ್ ಭಾರತೀಯ ಅವರ ಪ್ರಕಾರ, ಅಕ್ಟೋಬರ್ 21ರ ರಾತ್ರಿ ಕಳ್ಳತನದ ಆರೋಪದ ಮೇಲೆ ಬಾಲಕನನ್ನು ಖಂಡೇಲಾ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು. ಬಳಿಕ ಪೊಲೀಸ್‌ ಠಾಣೆಯ ಸೆಲ್‌ನಲ್ಲಿ ಬಂಧಿಸಿಟ್ಟಿದ್ದರು. ಅಲ್ಲಿ ಪೊಲೀಸರು ಬಾಲಕನನ್ನು ತೀವ್ರ ದೈಹಿಕ ಹಿಂಸೆಗೆ ಒಳಪಡಿಸಿದ್ದಾರೆ. ಆತನಿಗೆ ಥಳಿಸಿದ್ದಲ್ಲದೆ, ಮೂತ್ರ ಕುಡಿಸಿ ದೌರ್ಜನ್ಯವೆಸಗಿದ್ದಾರೆ.

ಬಾಲಕನನ್ನು ಮನೆಗೆ ಕರೆತರಲು ಪ್ರಯತ್ನಿಸಿದಾಗ, ಖಂಡೇಲಾ ಠಾಣಾಧಿಕಾರಿ ಮಂಗೀಲಾಲ್ ಮತ್ತು ಎಎಸ್‌ಐ ಪುರನ್‌ಮಲ್ ಅವರು ಬಿಡುಗಡೆ ಮಾಡಲು 50,000 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಬಾಲಕನ 70 ವರ್ಷದ ಅಜ್ಜ ತನ್ನ ಮೊಮ್ಮಗನ ಬಿಡುಗಡೆಗಾಗಿ ಮನವಿ ಮಾಡಲು ಠಾಣೆಗೆ ತೆರಳಿದ್ದಾಗ ಪೊಲೀಸ್ ಸಿಬ್ಬಂದಿ ಬಾಲಕನಿಗೆ ಥಳಿಸುವುದನ್ನು ನೋಡಿದ್ದಾರೆ. ಈ ವೇಳೆ ಮಧ್ಯಪ್ರವೇಶಿಸಿದ ಅವರು, ಮೊಮ್ಮಗನ ಮೇಲೆ ಏಕೆ ಹಲ್ಲೆ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದಾಗ, ಪೊಲೀಸರು ವೃದ್ದನ ಮೇಲೂ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಅಲ್ಲದೆ, ಅವರನ್ನು ಬಲವಂತವಾಗಿ ಠಾಣೆಯಿಂದ ಹೊರದಬ್ಬಿದ್ದಾರೆ. ಈ ವೇಳೆ ವೃದ್ದನ ಹೆಬ್ಬೆರಳು ಮುರಿದಿದೆ ಎಂದು ವರದಿ ವಿವರಿಸಿದೆ.

ನ್ಯಾಯ ಮತ್ತು ತಕ್ಷಣ ಕ್ರಮಕ್ಕೆ ಒತ್ತಾಯಿಸಿದ ಕುಟುಂಬ

ಬಾಲಕನ ಕುಟುಂಬ ದಲಿತ ಸಮುದಾಯದ ಜನರೊಂದಿಗೆ ಎಸ್‌ಪಿ ಕಚೇರಿಯ ಬಳಿ ಪ್ರತಿಭಟನೆ ನಡೆಸಿ ತಮಗೆ ನ್ಯಾಯ ಕೊಡಿಸುವಂತೆ ಮತ್ತು ತಪ್ಪಿತಸ್ಥ ಪೊಲೀಸರ ವಿರುದ್ದ ಕ್ರಮಕ್ಕೆ ಒತ್ತಾಯಿಸಿದೆ. ಠಾಣಾಧಿಕಾರಿ ಮಂಗೀಲಾಲ್, ಎಎಸ್‌ಐ ಪುರನ್‌ಮಲ್ ಮತ್ತು ಇತರ ಇಬ್ಬರು ಪೊಲೀಸರ ವಿರುದ್ಧ ಮಕ್ಕಳ ಲೈಂಗಿಕ ಅಪರಾಧಗಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಪೊಲೀಸರು ಬಾಲಕನಿಗೆ ಲೈಂಗಿಕ ಕಿರುಕುಳವೂ ನೀಡಿದ್ದಾರೆ ಎಂದು ಬಾಲಕನ ಕುಟುಂಬ ಆರೋಪಿಸಿದೆ. ಹಾಗಾಗಿ, ಪೋಕ್ಸೋ ಪ್ರಕರಣ ದಾಖಲಿಸಲು ಆಗ್ರಹಿಸಿದೆ. ಪೊಲೀಸ್ ದೌರ್ಜನ್ಯದಿಂದ ಬಾಲಕ ತೀವ್ರ ಆಘಾತಕ್ಕೊಳಗಾಗಿದ್ದಾನೆ. ಆತ ಭಯಗೊಂಡಿದ್ದು, ನೋವಿನಿಂದ ನರಳುತ್ತಿದ್ದಾನೆ. ಪೊಲೀಸರ ಹಲ್ಲೆಯಿಂದ ಆತನ ಕಾಲುಗಳು ಊದಿಕೊಂಡಿವೆ ಎಂದು ಕುಟುಂಬ ಹೇಳಿಕೊಂಡಿದೆ.

ಕುಟುಂಬಸ್ಥರು ಆರಂಭದಲ್ಲಿ ಅಕ್ಟೋಬರ್ 22ರಂದು ಎಸ್ಪಿಗೆ ಲಿಖಿತ ದೂರು ನೀಡಿದ್ದಾರೆ. ಪೊಲೀಸರನ್ನು ಅಮಾನತಗೊಳಿಸಬೇಕು. ಅವರ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ ಎಂದು en.themooknayak.com ತಿಳಿಸಿದೆ.

ಪೊಲೀಸರ ವಿರುದ್ದ ಆರೋಪಗಳಿಗೆ ಪ್ರತಿಕ್ರಿಯಿಸಿದ ಸಿಕಾರ್ ಪೊಲೀಸ್ ವರಿಷ್ಠಾಧಿಕಾರಿ ಭುವನ್ ಭೂಷಣ್ ಯಾದವ್, “ಪ್ರಕರಣದ ಕುರಿತು ಮಾಹಿತಿ ಪಡೆಯಲು ಕುಟುಂಬವನ್ನು ಪ್ರತಿನಿಧಿಸುವ ನಿಯೋಗವನ್ನು ಸೋಮವಾರ ಭೇಟಿ ಮಾಡಿದ್ದೇನೆ ಎಂದು ಹೇಳಿದ್ದಾರೆ. ನಾನು ದೌರ್ಜನ್ಯಕ್ಕೊಳಗಾದ ಬಾಲಕನೊಂದಿಗೆ ವೈಯಕ್ತಿಕವಾಗಿ ಮಾತನಾದ್ದೇನೆ. ಸೂಕ್ತ ತನಿಖೆಯ ಭರವಸೆಯನ್ನು ಕುಟುಂಬಕ್ಕೆ ನೀಡಿದ್ದೇನೆ. ಪ್ರಕರಣವನ್ನು ರಿಂಗಸ್‌ನ ಸರ್ಕಲ್ ಆಫೀಸರ್ (ಸಿಒ) ಅವರಿಗೆ ವಹಿಸಲಾಗಿದ್ದು, 7 ದಿನಗಳಲ್ಲಿ ವಿವರವಾದ ತನಿಖೆ ನಡೆಸಿ ಸಮಗ್ರ ವರದಿಯನ್ನು ಸಲ್ಲಿಸುವಂತೆ ಸೂಚಿಸಲಾಗಿದೆ” ಎಂದು ತಿಳಿಸಿದ್ದಾರೆ.

ಎಸ್ಪಿ ನೀಡಿರುವ ಉತ್ತರಕ್ಕೆ ಸಮಾಧಾನಗೊಳ್ಳದ ಬಾಲಕನ ಕುಟುಂಬ, ಬಾಲಕನ ಮೇಲಿನ ದೌರ್ಜನ್ಯ ಮಕ್ಕಳ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ ಎಂದು ಹೇಳಿದ್ದು, ಪೊಲೀಸರನ್ನು ವಜಾಗೊಳಿಸಬೇಕ. ಅವರ ವಿರುದ್ದ ಕ್ರಿಮಿನಲ್ ಪ್ರಕರಣ ಹೂಡಬೇಕು ಎಂದು ಪಟ್ಟು ಹಿಡಿದಿದೆ

ಇದನ್ನೂ ಓದಿ : ಮಹಾರಾಷ್ಟ್ರ ವಿಧಾನಸಭೆ ಚುನಾವಣೆ | 8 ಸಾವಿರ ಅಭ್ಯರ್ಥಿಗಳಿಂದ 10 ಸಾವಿರಕ್ಕೂ ಅಧಿಕ ನಾಮಪತ್ರಗಳು ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...