Homeದಲಿತ್ ಫೈಲ್ಸ್ದಲಿತ ಬಾಲಕನಿಗೆ ಥಳಿಸಿ, ಮೂತ್ರ ಕುಡಿಸಿದ ಪೊಲೀಸರು : ಆರೋಪ

ದಲಿತ ಬಾಲಕನಿಗೆ ಥಳಿಸಿ, ಮೂತ್ರ ಕುಡಿಸಿದ ಪೊಲೀಸರು : ಆರೋಪ

- Advertisement -
- Advertisement -

ರಾಜಸ್ಥಾನದ ಸಿಕಾರ್ ಜಿಲ್ಲೆಯಲ್ಲಿ 13 ವರ್ಷದ ದಲಿತ ಬಾಲಕನನ್ನು ಬಂಧಿಸಿದ ಪೊಲೀಸರು, ಥಳಿಸಿ ಬಲವಂತವಾಗಿ ಮೂತ್ರ ಕುಡಿಸಿರುವ ಆರೋಪ ಕೇಳಿ ಬಂದಿದೆ.

ಈ ಘಟನೆಯು ಬಾಲಕನ ಕುಟುಂಬ ಮತ್ತು ದಲಿತ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದ್ದು,
ಸಿಕಾರ್‌ನಲ್ಲಿರುವ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಕಚೇರಿಯ ಹೊರಗೆ ಪ್ರತಿಭಟನೆ ನಡೆಸಿ ಪೊಲೀಸರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ ಎಂದು en.themooknayak.com ವರದಿ ಮಾಡಿದೆ.

ಸ್ಥಳೀಯ ನಿವಾಸಿ ಹಾಗೂ ಸಂತ್ರಸ್ತ ಬಾಲಕನ ಸಂಬಂಧಿ ಬಲ್ಬೀರ್ ಭಾರತೀಯ ಅವರ ಪ್ರಕಾರ, ಅಕ್ಟೋಬರ್ 21ರ ರಾತ್ರಿ ಕಳ್ಳತನದ ಆರೋಪದ ಮೇಲೆ ಬಾಲಕನನ್ನು ಖಂಡೇಲಾ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು. ಬಳಿಕ ಪೊಲೀಸ್‌ ಠಾಣೆಯ ಸೆಲ್‌ನಲ್ಲಿ ಬಂಧಿಸಿಟ್ಟಿದ್ದರು. ಅಲ್ಲಿ ಪೊಲೀಸರು ಬಾಲಕನನ್ನು ತೀವ್ರ ದೈಹಿಕ ಹಿಂಸೆಗೆ ಒಳಪಡಿಸಿದ್ದಾರೆ. ಆತನಿಗೆ ಥಳಿಸಿದ್ದಲ್ಲದೆ, ಮೂತ್ರ ಕುಡಿಸಿ ದೌರ್ಜನ್ಯವೆಸಗಿದ್ದಾರೆ.

ಬಾಲಕನನ್ನು ಮನೆಗೆ ಕರೆತರಲು ಪ್ರಯತ್ನಿಸಿದಾಗ, ಖಂಡೇಲಾ ಠಾಣಾಧಿಕಾರಿ ಮಂಗೀಲಾಲ್ ಮತ್ತು ಎಎಸ್‌ಐ ಪುರನ್‌ಮಲ್ ಅವರು ಬಿಡುಗಡೆ ಮಾಡಲು 50,000 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಬಾಲಕನ 70 ವರ್ಷದ ಅಜ್ಜ ತನ್ನ ಮೊಮ್ಮಗನ ಬಿಡುಗಡೆಗಾಗಿ ಮನವಿ ಮಾಡಲು ಠಾಣೆಗೆ ತೆರಳಿದ್ದಾಗ ಪೊಲೀಸ್ ಸಿಬ್ಬಂದಿ ಬಾಲಕನಿಗೆ ಥಳಿಸುವುದನ್ನು ನೋಡಿದ್ದಾರೆ. ಈ ವೇಳೆ ಮಧ್ಯಪ್ರವೇಶಿಸಿದ ಅವರು, ಮೊಮ್ಮಗನ ಮೇಲೆ ಏಕೆ ಹಲ್ಲೆ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದಾಗ, ಪೊಲೀಸರು ವೃದ್ದನ ಮೇಲೂ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಅಲ್ಲದೆ, ಅವರನ್ನು ಬಲವಂತವಾಗಿ ಠಾಣೆಯಿಂದ ಹೊರದಬ್ಬಿದ್ದಾರೆ. ಈ ವೇಳೆ ವೃದ್ದನ ಹೆಬ್ಬೆರಳು ಮುರಿದಿದೆ ಎಂದು ವರದಿ ವಿವರಿಸಿದೆ.

ನ್ಯಾಯ ಮತ್ತು ತಕ್ಷಣ ಕ್ರಮಕ್ಕೆ ಒತ್ತಾಯಿಸಿದ ಕುಟುಂಬ

ಬಾಲಕನ ಕುಟುಂಬ ದಲಿತ ಸಮುದಾಯದ ಜನರೊಂದಿಗೆ ಎಸ್‌ಪಿ ಕಚೇರಿಯ ಬಳಿ ಪ್ರತಿಭಟನೆ ನಡೆಸಿ ತಮಗೆ ನ್ಯಾಯ ಕೊಡಿಸುವಂತೆ ಮತ್ತು ತಪ್ಪಿತಸ್ಥ ಪೊಲೀಸರ ವಿರುದ್ದ ಕ್ರಮಕ್ಕೆ ಒತ್ತಾಯಿಸಿದೆ. ಠಾಣಾಧಿಕಾರಿ ಮಂಗೀಲಾಲ್, ಎಎಸ್‌ಐ ಪುರನ್‌ಮಲ್ ಮತ್ತು ಇತರ ಇಬ್ಬರು ಪೊಲೀಸರ ವಿರುದ್ಧ ಮಕ್ಕಳ ಲೈಂಗಿಕ ಅಪರಾಧಗಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಪೊಲೀಸರು ಬಾಲಕನಿಗೆ ಲೈಂಗಿಕ ಕಿರುಕುಳವೂ ನೀಡಿದ್ದಾರೆ ಎಂದು ಬಾಲಕನ ಕುಟುಂಬ ಆರೋಪಿಸಿದೆ. ಹಾಗಾಗಿ, ಪೋಕ್ಸೋ ಪ್ರಕರಣ ದಾಖಲಿಸಲು ಆಗ್ರಹಿಸಿದೆ. ಪೊಲೀಸ್ ದೌರ್ಜನ್ಯದಿಂದ ಬಾಲಕ ತೀವ್ರ ಆಘಾತಕ್ಕೊಳಗಾಗಿದ್ದಾನೆ. ಆತ ಭಯಗೊಂಡಿದ್ದು, ನೋವಿನಿಂದ ನರಳುತ್ತಿದ್ದಾನೆ. ಪೊಲೀಸರ ಹಲ್ಲೆಯಿಂದ ಆತನ ಕಾಲುಗಳು ಊದಿಕೊಂಡಿವೆ ಎಂದು ಕುಟುಂಬ ಹೇಳಿಕೊಂಡಿದೆ.

ಕುಟುಂಬಸ್ಥರು ಆರಂಭದಲ್ಲಿ ಅಕ್ಟೋಬರ್ 22ರಂದು ಎಸ್ಪಿಗೆ ಲಿಖಿತ ದೂರು ನೀಡಿದ್ದಾರೆ. ಪೊಲೀಸರನ್ನು ಅಮಾನತಗೊಳಿಸಬೇಕು. ಅವರ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ ಎಂದು en.themooknayak.com ತಿಳಿಸಿದೆ.

ಪೊಲೀಸರ ವಿರುದ್ದ ಆರೋಪಗಳಿಗೆ ಪ್ರತಿಕ್ರಿಯಿಸಿದ ಸಿಕಾರ್ ಪೊಲೀಸ್ ವರಿಷ್ಠಾಧಿಕಾರಿ ಭುವನ್ ಭೂಷಣ್ ಯಾದವ್, “ಪ್ರಕರಣದ ಕುರಿತು ಮಾಹಿತಿ ಪಡೆಯಲು ಕುಟುಂಬವನ್ನು ಪ್ರತಿನಿಧಿಸುವ ನಿಯೋಗವನ್ನು ಸೋಮವಾರ ಭೇಟಿ ಮಾಡಿದ್ದೇನೆ ಎಂದು ಹೇಳಿದ್ದಾರೆ. ನಾನು ದೌರ್ಜನ್ಯಕ್ಕೊಳಗಾದ ಬಾಲಕನೊಂದಿಗೆ ವೈಯಕ್ತಿಕವಾಗಿ ಮಾತನಾದ್ದೇನೆ. ಸೂಕ್ತ ತನಿಖೆಯ ಭರವಸೆಯನ್ನು ಕುಟುಂಬಕ್ಕೆ ನೀಡಿದ್ದೇನೆ. ಪ್ರಕರಣವನ್ನು ರಿಂಗಸ್‌ನ ಸರ್ಕಲ್ ಆಫೀಸರ್ (ಸಿಒ) ಅವರಿಗೆ ವಹಿಸಲಾಗಿದ್ದು, 7 ದಿನಗಳಲ್ಲಿ ವಿವರವಾದ ತನಿಖೆ ನಡೆಸಿ ಸಮಗ್ರ ವರದಿಯನ್ನು ಸಲ್ಲಿಸುವಂತೆ ಸೂಚಿಸಲಾಗಿದೆ” ಎಂದು ತಿಳಿಸಿದ್ದಾರೆ.

ಎಸ್ಪಿ ನೀಡಿರುವ ಉತ್ತರಕ್ಕೆ ಸಮಾಧಾನಗೊಳ್ಳದ ಬಾಲಕನ ಕುಟುಂಬ, ಬಾಲಕನ ಮೇಲಿನ ದೌರ್ಜನ್ಯ ಮಕ್ಕಳ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ ಎಂದು ಹೇಳಿದ್ದು, ಪೊಲೀಸರನ್ನು ವಜಾಗೊಳಿಸಬೇಕ. ಅವರ ವಿರುದ್ದ ಕ್ರಿಮಿನಲ್ ಪ್ರಕರಣ ಹೂಡಬೇಕು ಎಂದು ಪಟ್ಟು ಹಿಡಿದಿದೆ

ಇದನ್ನೂ ಓದಿ : ಮಹಾರಾಷ್ಟ್ರ ವಿಧಾನಸಭೆ ಚುನಾವಣೆ | 8 ಸಾವಿರ ಅಭ್ಯರ್ಥಿಗಳಿಂದ 10 ಸಾವಿರಕ್ಕೂ ಅಧಿಕ ನಾಮಪತ್ರಗಳು ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...