ದಲಿತ ಚಳವಳಿಯ ಪ್ರಮುಖ ಹೋರಾಟಗಾರ ಕೆ.ಎಂ. ಕೊಮ್ಮಣ್ಣ ನಿಧನ
ದಲಿತ ಚಳವಳಿಯ ಪ್ರಮುಖ ಹೋರಾಟಗಾರರಾದ ಕೆ.ಎಂ. ಕೊಮ್ಮಣ್ಣ ಅವರು ಬುಧವಾರ ಮಧ್ಯಾಹ್ನ ನಿಧನ ಹೊಂದಿದ್ದಾರೆ. ಹಲವು ತಿಂಗಳಿಂದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ ಎಂದು ಈದಿನ.ಕಾಂ ವರದಿ ಮಾಡಿದೆ. ಕೋಲಾರದ ಬಂಗಾರಪೇಟೆಯಲ್ಲಿ ಇಂಗ್ಲೀಷ್ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದ ಕೊಮ್ಮಣ್ಣ ಅವರು, ವಿದ್ಯಾರ್ಥಿ ದೆಸೆಯಿಂದಲೇ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದರು. ಕೋಲಾರ ಹೊರವಲಯದ ತೇರಹಳ್ಳಿ ಬೆಟ್ಟದಲ್ಲಿರುವ ಆದಿಮ ಸಾಂಸ್ಕೃತಿಕ ಕೇಂದ್ರದ … Continue reading ದಲಿತ ಚಳವಳಿಯ ಪ್ರಮುಖ ಹೋರಾಟಗಾರ ಕೆ.ಎಂ. ಕೊಮ್ಮಣ್ಣ ನಿಧನ
Copy and paste this URL into your WordPress site to embed
Copy and paste this code into your site to embed