Homeಕರ್ನಾಟಕದಲಿತನೆಂಬ ಕಾರಣಕ್ಕೆ ಸಂಸದರಿಗೇ ಗೊಲ್ಲರಹಟ್ಟಿ ಗ್ರಾಮ ಪ್ರವೇಶಕ್ಕೆ ನಿರಾಕರಣೆ: ಎಲ್ಲೆಡೆ ತೀವ್ರ ಆಕ್ರೋಶ..

ದಲಿತನೆಂಬ ಕಾರಣಕ್ಕೆ ಸಂಸದರಿಗೇ ಗೊಲ್ಲರಹಟ್ಟಿ ಗ್ರಾಮ ಪ್ರವೇಶಕ್ಕೆ ನಿರಾಕರಣೆ: ಎಲ್ಲೆಡೆ ತೀವ್ರ ಆಕ್ರೋಶ..

- Advertisement -
- Advertisement -

ಚಿತ್ರದುರ್ಗದ ಸಂಸದರಾದ ಎ.ನಾರಾಯಣಸ್ವಾಮಿಯವರನ್ನು ದಲಿತರೆಂಬ ಕಾರಣಕ್ಕೆ ಪಾವಗಡದ ಪೆಮ್ಮನಹಳ್ಳಿಯ ಗೊಲ್ಲರಹಟ್ಟಿಯ ಪ್ರವೇಶ ನಿರಾಕರಿಸಿರುವ ಘಟನೆಗೆ ಎಲ್ಲೆಡೆ ತೀವ್ರ ಆಕ್ರೋಶ, ಟೀಕೆ ವ್ಯಕ್ತವಾಗಿದೆ. ಇದನ್ನು ಅಸ್ಪೃಶ್ಯತೆ ಅನ್ನದೇ ಮತ್ತೆ ಏನನ್ನಬೇಕು ಎಂದು ಜನ ತರಾಟೆಗೆ ತೆಗೆದುಕೊಂಡಿದ್ದಾರೆ.

ನಮ್ಮ ದೇಶದ ಪ್ರಜೆಗಳು ಜಾತಿಯ ವಿಚಾರದಲ್ಲಿ ಎಷ್ಟು ವಿಷ ರಕ್ತ ಹೊಂದಿದ್ದಾರೆ ಎಂಬುದನ್ನು ಸೂಚಿಸುತ್ತದೆ .
ಒಬ್ಬ ಸಂಸದರಿಗೆ ಗ್ರಾಮದ ಒಳಗೆ ಪ್ರವೇಶ ನಿರಾಕರಣೆ ಮಾಡಿದರೆ ಇನ್ನು ಸಾಮಾನ್ಯ ಪ್ರಜೆಗಳ ಸ್ಥಿತಿ ಹೇಗೆ ಊಹಿಸಲು ಸಾದ್ಯವಿಲ್ಲ !!! ಎಂದು ಹನುಮಂತ ನಂದಿಹಾಳ್ ರವರು ಪ್ರತಿಕ್ರಿಯಿಸಿದ್ದಾರೆ.

ವಿಕಾಸ್ ಆರ್.ಮೌರ್ಯ ರವರು ಫೇಸ್ ಬುಕ್ ನಲ್ಲಿ ಹೀಗೆ ಬರೆದಿದ್ದಾರೆ.

ಇದಕ್ಕೇ #ಪೂನಾ_ಪ್ಯಾಕ್ಟ್ ದಲಿತರ ಬದುಕನ್ನೇ ಕಿತ್ತುಕೊಂಡಿತು ಎನ್ನುವುದು

ಸಂಸದ ನಾರಾಯಣಸ್ವಾಮಿಯವರನ್ನು ಗೊಲ್ಲರು ತಮ್ಮ ಹಟ್ಟಿಗೆ ಬಿಟ್ಟುಕೊಳ್ಳದೆ ಸಂಸದರು ಅಂಗಲಾಚಿದರೂ ಒಪ್ಪದೇ ಹಟ್ಟಿಯಿಂದ ಹೊರಗೇ ಎಲ್ಲವನ್ನು ವಿಚಾರಿಸಿ ಅಟ್ಟಿದ್ದಾರೆ. ಸಂವಿಧಾನದ ಕಲಂ 17 ಅಸ್ಪೃಶ್ಯತೆ ನಿಷೇಧಿಸಲಾಗಿದೆ ಎನ್ನುತ್ತದೆ. ಆದರೆ ಈ ಘಟನೆಯಲ್ಲಿ ಕಾನೂನು ನಯಾಪೈಸೆಯ ಕೆಲಸ ಮಾಡಿಲ್ಲ, ಮಾಡಲ್ಲ. ಇದು ನಿಜ ಭಾರತದ ಸ್ಥಿತಿ. ಇರಲಿ. ಇಲ್ಲಿ ಸಂಸದರು ಆ ಅಮಾನವೀಯ ಜನರ ವಿರುದ್ಧ ಕ್ರಮ ಏಕೆ ಕೈಗೊಳ್ಳಲಿಲ್ಲ? ಅದಕ್ಕೆ ಕಾರಣ ಅವರೇ ಹೇಳಿದ್ದಾರೆ. ಶೇ. 80 ಗೊಲ್ಲ ಸಮುದಾಯ ಅವರಿಗೆ ಮತ ನೀಡಿ ಗೆಲ್ಲಿಸಿದೆ. ಹೀಗಿರುವಾಗ ಸಂಸದರೇನಾದರೂ ಕಾನೂನು ರೀತಿಯ ಕ್ರಮ ಕೈಗೊಂಡರೆ ಮುಂದಿನ ಬಾರಿ ಅವರು ಸೋಲುವುದು ಖಚಿತ.

ಈ ಕಾರಣಕ್ಕಾಗಿಯೇ ಅಂಬೇಡ್ಕರರು 1933 ರ ಪೂನಾ ಒಪ್ಪಂದವನ್ನು ಕಂಠಮಟ್ಟ ವಿರೋಧಿಸಿದ್ದು. ಏಕೆಂದರೆ ದುಂಡು ಮೇಜಿನ ಸಭೆಯಲ್ಲಿ ದಲಿತರಿಗೆ ಎರಡು ಓಟು ನೀಡುವ ಹಕ್ಕು ಸಿಕ್ಕಿತ್ತು. ಆಂದರೆ ದಲಿತ ಮೀಸಲು ಕ್ಷೇತ್ರಗಳಲ್ಲಿ ದಲಿತರಿಂದ ದಲಿತರಿಗಾಗಿ ದಲಿತರಿಗೋಸ್ಕರ ಆರಿಸಿ ಬರುವ ದಲಿತರನ್ನು ಅಯ್ಕೆ ಮಾಡಲು ಒಂದು ಓಟು. ಅದೇ ಕ್ಷೇತ್ರದಲ್ಲಿ ದಲಿತೇತರರನ್ನು ಆಯ್ಕೆ ಮಾಡಲು ಒಂದು ಓಟು. ಇದನ್ನೇ ಪ್ರತ್ಯೇಕ ಮತಕ್ಷೇತ್ರವೆನ್ನುವರು. ಇವತ್ತು ಸಿಖ್ ಜನಾಂಗ ಬಲಿಷ್ಟವಾಗಿರುವುದಕ್ಕೆ ಕಾರಣ ಅವರಿಗೆ ದಕ್ಕಿದ ಪ್ರತ್ಯೇಕ ಮತಕ್ಷೇತ್ರವೇ ಆಗಿದೆ. ಆದರೆ ಇದು ದಲಿತರಿಗೆ ಸಿಗಲಿಲ್ಲ. ಇದಕ್ಕೆ ನೇರವಾಗಿ ಗಾಂಧಿಯವರನ್ನು ನಾವು ಹೊಣೆ ಮಾಡುತ್ತೇವೆ. ಅದು ಸತ್ಯವಾದರೂ ಅವರಷ್ಟೇ ಹೊಣೆಗಾರರು ಅವರಿಗೆ ಬೇಷರತ್ ಬೆಂಬಲ ನೀಡಿದ ಅಖಿಲ ಭಾರತ ಹಿಂದೂ ಮಹಾಸಭಾ, ಸರ್ದಾರ್ ವಲ್ಲಭಬಾಯಿ ಪಟೇಲ್ ಹಾಗೂ ಗಾಂಧಿವಾದಿ ದಲಿತರು.

ಅಂಬೇಡ್ಕರರು ಜುಲೈ 1947 ರವರೆಗೂ ಹಾಗೂ ಸಂವಿಧಾನ ಸಭೆಯಲ್ಲೂ ಮತ್ತೆ ದಲಿತರಿಗೆ ಪ್ರತ್ಯೇಕ ಮತಕ್ಷೇತ್ರ ಸಿಗಬೇಕೆಂದು ಹೋರಾಡಿದರು. ಆದರೆ ಗಾಂಧಿವಾದಿ ದಲಿತರು ಹಾಗೂ ಕಾಂಗ್ರೆಸ್ ಅದನ್ನು ಕಂಠಮಟ್ಟ ವಿರೋಧಿಸಿ ಮೂಲೆಗುಂಪು ಮಾಡಿದರು. ಅವರ ಮುಂದೆ ಅಂಬೇಡ್ಕರ್ ಸೋಲೊಪ್ಪಲೇಬೇಕಾಯಿತು.

ಇಂದು ಯಾವುದೇ ದಲಿತ ಜನಪ್ರತಿನಿದಿ ಲೋಕಸಭೆಗೆ ಅಗಲೀ, ವಿಧಾನಸಭೆಗೆ ಆಗಲೀ ಆರಿಸಿ ಬರುತ್ತಿರುವುದು ದಲಿತೇತರರ ಓಟಿನಿಂದ. ದಲಿತರ ಓಟುಗಳಿಗೆ ಇಲ್ಲಿ ಬಿಡಿಗಾಸಿನ ಬೆಲೆಯಿಲ್ಲ. ಯಾವ ದಲಿತ ಅಥವಾ ಯಾವ ಜಾತಿಯ ದಲಿತ, ಶಾಸಕ ಅಥವಾ ಸಂಸದ ಆಗಬೇಕೆನ್ನುವುದನ್ನು ತೀರ್ಮಾನ ಮಾಡುವವರು ದಲಿತೇತರರೇ ಆಗಿರುವಾಗ ಯಾವ ದಲಿತ ರಾಜಕೀಯ ನಾಯಕ ತಾನೇ ದಲಿತೇತರರ ಓಟೆಂಬ ಭಿಕ್ಷೆಯ ವಿರುದ್ಧ ನಿಲ್ಲುತ್ತಾನೆ? ತನ್ನ ಸ್ವಾಭಿಮಾನವನ್ನು ತಾನೇ ಕೊಲೆ ಮಾಡಿಕೊಂಡು ಶಾಸಕ, ಸಂಸದನಾಗುತ್ತಾನೆ. ಅಷ್ಟೆ.

“ನನ್ನ ಮುತ್ತಾತಂದಿರು ಮತಾಂತರ ಆದದ್ದಕ್ಕೆ ಕಾರಣ ಇದು. ಅಂದು ಕೀಳು ಜಾತಿ ಅಂತ ಅವಮಾನಿಸಿದಿರಿ, ಇಂದು ದೇಶ ವಿರೋಧಿಗಳು ಅಂತ ಅನುಮಾನಿಸುತ್ತಿದ್ದೀರಿ” ಎಂದು ಅಬ್ದುಲ್ ಮುನೀರ್ ಪ್ರತಿಕ್ರಿಯಿಸಿದ್ದಾರೆ.

ಈ ಸಂಸದರಿಗೆ ದೇಶದ ಜ್ವಲಂತ ಸಮಸ್ಯೆ ಯಾವುದು ಎಂದು ಮನದಟ್ಟು ಮಾಡಿಕೊಟ್ಟ ಆ ಹಳ್ಳಿಗರಿಗೆ ವಂದನೆಗಳು. ಇನ್ನಾದರೂ ಅವರು ಸಂಸತ್ತಿನಲ್ಲಿ ಈ ಸಮಸ್ಯೆಯ ಬಗ್ಗೆ ದನಿ ಎತ್ತಬೇಕು. ಆಗಿಲ್ಲವೆಂದರೆ ಊರ ಹೊರಗೆ ಕುರ್ಚಿ ಹಾಕಿ ಕಾರ್ಯಕ್ರಮ ನಡೆಸಲಿ. ಅದೂ ಆಗಿಲ್ಲವೆಂದರೆ ರಾಜೀನಾಮೆ ನೀಡಿ ಹೋರಾಟಕ್ಕೆ ಮುಂದಾಗಲಿ ಎಂದು ಸಂತೋಷ್ ಗುಡ್ಡಿಯಂಗಡಿಯವರು ಪ್ರತಿಕ್ರಿಯಿಸಿದ್ದಾರೆ.

ಬೆಳಗ್ಗೆಯಿಂದ ಒಂದಷ್ಟು ಗೊಲ್ಲ ಸಮುದಾಯದ ಸ್ನೇಹಿತರು ಪೋನ್ ಮಾಡಿ ಸಂಸದರಿಗೆ ತಟ್ಟಿದ ಅಸ್ಪೃಶ್ಯತೆ ಬಗ್ಗೆ ತೀವ್ರ ಸಂಕಟ ಹೊರಹಾಕಿದರು..ಅರಿವು ,ಬದ್ದತೆ ಇರುವ ಆ ಸಮುದಾಯದ ಗೆಳೆಯರೊಂದಿಗೆ ನಾವೆಲ್ಲರೂ ಸೇರಿ ಜಾಗೃತಿ ಮೂಡಿಸುವ ಅಥವಾ ಮನಸ್ಸು ಗಳನ್ನ ಪರಿವರ್ತಿಸುವ ಕೆಲಸ ಈ ಕ್ಷಣದ ತುರ್ತು…
ಶಿಕ್ಷೆಯಿಂದ ಎಲ್ಲಾ ಬದಲಾಗುವಂತಿದ್ದರೆ ಹೆಚ್ಚೂಕಮ್ಮಿ ಮೌಡ್ಯ ಇರುವ ಎಲ್ಲಾ ಗೊಲ್ಲರಟ್ಟಿಯವರ ಮೇಲೆ ಎರಡೂ ದಲಿತ ದೌರ್ಜನ್ಯ ಪ್ರಕರಣಗಳು ದಾಖಲಗುತ್ತಿದ್ದವು .
ಹಟ್ಟಿಗಳ ಪರಿವರ್ತನೆ ಗೆ ಇದು ರೈಟ್ ಟೈಮ್ ಎಂದು ಕೊಟ್ಟ ಶಂಕರ್ ರವರು ತಿಳಿಸಿದ್ದಾರೆ.

ಈ ವಿಚಾರ ಪತ್ರಿಕೆ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ಕೂಡಲೇ ಗೊಲ್ಲರಹಟ್ಟಿಯ ಜನ ಎಚ್ಚೆತ್ತುಕೊಂಡಿದ್ದಾರೆ. “ನಮ್ಮ ನಡವಳಿಕೆಗಳಿಂದ ಸಂಸದರಿಗೆ ನೋವಾಗಿದ್ದರೆ ದಯವಿಟ್ಟು ಕ್ಷಮಿಸಿ, ನೀವು ಮತ್ತೊಮ್ಮೆ ನಮ್ಮ ಹಟ್ಟಿಗೆ ಬಂದು ನಮ್ಮ ಸಮಸ್ಯೆ ಆಲಿಸಿ, ನಮಗೆಲ್ಲಾ ಮನೆ ಕಟ್ಟಿಕೊಡಿ” ಎಂದು ಮನವಿ ಮಾಡಿದ್ದಾರೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...