Homeಕರ್ನಾಟಕದಲಿತನೆಂಬ ಕಾರಣಕ್ಕೆ ಸಂಸದರಿಗೇ ಗೊಲ್ಲರಹಟ್ಟಿ ಗ್ರಾಮ ಪ್ರವೇಶಕ್ಕೆ ನಿರಾಕರಣೆ: ಎಲ್ಲೆಡೆ ತೀವ್ರ ಆಕ್ರೋಶ..

ದಲಿತನೆಂಬ ಕಾರಣಕ್ಕೆ ಸಂಸದರಿಗೇ ಗೊಲ್ಲರಹಟ್ಟಿ ಗ್ರಾಮ ಪ್ರವೇಶಕ್ಕೆ ನಿರಾಕರಣೆ: ಎಲ್ಲೆಡೆ ತೀವ್ರ ಆಕ್ರೋಶ..

- Advertisement -
- Advertisement -

ಚಿತ್ರದುರ್ಗದ ಸಂಸದರಾದ ಎ.ನಾರಾಯಣಸ್ವಾಮಿಯವರನ್ನು ದಲಿತರೆಂಬ ಕಾರಣಕ್ಕೆ ಪಾವಗಡದ ಪೆಮ್ಮನಹಳ್ಳಿಯ ಗೊಲ್ಲರಹಟ್ಟಿಯ ಪ್ರವೇಶ ನಿರಾಕರಿಸಿರುವ ಘಟನೆಗೆ ಎಲ್ಲೆಡೆ ತೀವ್ರ ಆಕ್ರೋಶ, ಟೀಕೆ ವ್ಯಕ್ತವಾಗಿದೆ. ಇದನ್ನು ಅಸ್ಪೃಶ್ಯತೆ ಅನ್ನದೇ ಮತ್ತೆ ಏನನ್ನಬೇಕು ಎಂದು ಜನ ತರಾಟೆಗೆ ತೆಗೆದುಕೊಂಡಿದ್ದಾರೆ.

ನಮ್ಮ ದೇಶದ ಪ್ರಜೆಗಳು ಜಾತಿಯ ವಿಚಾರದಲ್ಲಿ ಎಷ್ಟು ವಿಷ ರಕ್ತ ಹೊಂದಿದ್ದಾರೆ ಎಂಬುದನ್ನು ಸೂಚಿಸುತ್ತದೆ .
ಒಬ್ಬ ಸಂಸದರಿಗೆ ಗ್ರಾಮದ ಒಳಗೆ ಪ್ರವೇಶ ನಿರಾಕರಣೆ ಮಾಡಿದರೆ ಇನ್ನು ಸಾಮಾನ್ಯ ಪ್ರಜೆಗಳ ಸ್ಥಿತಿ ಹೇಗೆ ಊಹಿಸಲು ಸಾದ್ಯವಿಲ್ಲ !!! ಎಂದು ಹನುಮಂತ ನಂದಿಹಾಳ್ ರವರು ಪ್ರತಿಕ್ರಿಯಿಸಿದ್ದಾರೆ.

ವಿಕಾಸ್ ಆರ್.ಮೌರ್ಯ ರವರು ಫೇಸ್ ಬುಕ್ ನಲ್ಲಿ ಹೀಗೆ ಬರೆದಿದ್ದಾರೆ.

ಇದಕ್ಕೇ #ಪೂನಾ_ಪ್ಯಾಕ್ಟ್ ದಲಿತರ ಬದುಕನ್ನೇ ಕಿತ್ತುಕೊಂಡಿತು ಎನ್ನುವುದು

ಸಂಸದ ನಾರಾಯಣಸ್ವಾಮಿಯವರನ್ನು ಗೊಲ್ಲರು ತಮ್ಮ ಹಟ್ಟಿಗೆ ಬಿಟ್ಟುಕೊಳ್ಳದೆ ಸಂಸದರು ಅಂಗಲಾಚಿದರೂ ಒಪ್ಪದೇ ಹಟ್ಟಿಯಿಂದ ಹೊರಗೇ ಎಲ್ಲವನ್ನು ವಿಚಾರಿಸಿ ಅಟ್ಟಿದ್ದಾರೆ. ಸಂವಿಧಾನದ ಕಲಂ 17 ಅಸ್ಪೃಶ್ಯತೆ ನಿಷೇಧಿಸಲಾಗಿದೆ ಎನ್ನುತ್ತದೆ. ಆದರೆ ಈ ಘಟನೆಯಲ್ಲಿ ಕಾನೂನು ನಯಾಪೈಸೆಯ ಕೆಲಸ ಮಾಡಿಲ್ಲ, ಮಾಡಲ್ಲ. ಇದು ನಿಜ ಭಾರತದ ಸ್ಥಿತಿ. ಇರಲಿ. ಇಲ್ಲಿ ಸಂಸದರು ಆ ಅಮಾನವೀಯ ಜನರ ವಿರುದ್ಧ ಕ್ರಮ ಏಕೆ ಕೈಗೊಳ್ಳಲಿಲ್ಲ? ಅದಕ್ಕೆ ಕಾರಣ ಅವರೇ ಹೇಳಿದ್ದಾರೆ. ಶೇ. 80 ಗೊಲ್ಲ ಸಮುದಾಯ ಅವರಿಗೆ ಮತ ನೀಡಿ ಗೆಲ್ಲಿಸಿದೆ. ಹೀಗಿರುವಾಗ ಸಂಸದರೇನಾದರೂ ಕಾನೂನು ರೀತಿಯ ಕ್ರಮ ಕೈಗೊಂಡರೆ ಮುಂದಿನ ಬಾರಿ ಅವರು ಸೋಲುವುದು ಖಚಿತ.

ಈ ಕಾರಣಕ್ಕಾಗಿಯೇ ಅಂಬೇಡ್ಕರರು 1933 ರ ಪೂನಾ ಒಪ್ಪಂದವನ್ನು ಕಂಠಮಟ್ಟ ವಿರೋಧಿಸಿದ್ದು. ಏಕೆಂದರೆ ದುಂಡು ಮೇಜಿನ ಸಭೆಯಲ್ಲಿ ದಲಿತರಿಗೆ ಎರಡು ಓಟು ನೀಡುವ ಹಕ್ಕು ಸಿಕ್ಕಿತ್ತು. ಆಂದರೆ ದಲಿತ ಮೀಸಲು ಕ್ಷೇತ್ರಗಳಲ್ಲಿ ದಲಿತರಿಂದ ದಲಿತರಿಗಾಗಿ ದಲಿತರಿಗೋಸ್ಕರ ಆರಿಸಿ ಬರುವ ದಲಿತರನ್ನು ಅಯ್ಕೆ ಮಾಡಲು ಒಂದು ಓಟು. ಅದೇ ಕ್ಷೇತ್ರದಲ್ಲಿ ದಲಿತೇತರರನ್ನು ಆಯ್ಕೆ ಮಾಡಲು ಒಂದು ಓಟು. ಇದನ್ನೇ ಪ್ರತ್ಯೇಕ ಮತಕ್ಷೇತ್ರವೆನ್ನುವರು. ಇವತ್ತು ಸಿಖ್ ಜನಾಂಗ ಬಲಿಷ್ಟವಾಗಿರುವುದಕ್ಕೆ ಕಾರಣ ಅವರಿಗೆ ದಕ್ಕಿದ ಪ್ರತ್ಯೇಕ ಮತಕ್ಷೇತ್ರವೇ ಆಗಿದೆ. ಆದರೆ ಇದು ದಲಿತರಿಗೆ ಸಿಗಲಿಲ್ಲ. ಇದಕ್ಕೆ ನೇರವಾಗಿ ಗಾಂಧಿಯವರನ್ನು ನಾವು ಹೊಣೆ ಮಾಡುತ್ತೇವೆ. ಅದು ಸತ್ಯವಾದರೂ ಅವರಷ್ಟೇ ಹೊಣೆಗಾರರು ಅವರಿಗೆ ಬೇಷರತ್ ಬೆಂಬಲ ನೀಡಿದ ಅಖಿಲ ಭಾರತ ಹಿಂದೂ ಮಹಾಸಭಾ, ಸರ್ದಾರ್ ವಲ್ಲಭಬಾಯಿ ಪಟೇಲ್ ಹಾಗೂ ಗಾಂಧಿವಾದಿ ದಲಿತರು.

ಅಂಬೇಡ್ಕರರು ಜುಲೈ 1947 ರವರೆಗೂ ಹಾಗೂ ಸಂವಿಧಾನ ಸಭೆಯಲ್ಲೂ ಮತ್ತೆ ದಲಿತರಿಗೆ ಪ್ರತ್ಯೇಕ ಮತಕ್ಷೇತ್ರ ಸಿಗಬೇಕೆಂದು ಹೋರಾಡಿದರು. ಆದರೆ ಗಾಂಧಿವಾದಿ ದಲಿತರು ಹಾಗೂ ಕಾಂಗ್ರೆಸ್ ಅದನ್ನು ಕಂಠಮಟ್ಟ ವಿರೋಧಿಸಿ ಮೂಲೆಗುಂಪು ಮಾಡಿದರು. ಅವರ ಮುಂದೆ ಅಂಬೇಡ್ಕರ್ ಸೋಲೊಪ್ಪಲೇಬೇಕಾಯಿತು.

ಇಂದು ಯಾವುದೇ ದಲಿತ ಜನಪ್ರತಿನಿದಿ ಲೋಕಸಭೆಗೆ ಅಗಲೀ, ವಿಧಾನಸಭೆಗೆ ಆಗಲೀ ಆರಿಸಿ ಬರುತ್ತಿರುವುದು ದಲಿತೇತರರ ಓಟಿನಿಂದ. ದಲಿತರ ಓಟುಗಳಿಗೆ ಇಲ್ಲಿ ಬಿಡಿಗಾಸಿನ ಬೆಲೆಯಿಲ್ಲ. ಯಾವ ದಲಿತ ಅಥವಾ ಯಾವ ಜಾತಿಯ ದಲಿತ, ಶಾಸಕ ಅಥವಾ ಸಂಸದ ಆಗಬೇಕೆನ್ನುವುದನ್ನು ತೀರ್ಮಾನ ಮಾಡುವವರು ದಲಿತೇತರರೇ ಆಗಿರುವಾಗ ಯಾವ ದಲಿತ ರಾಜಕೀಯ ನಾಯಕ ತಾನೇ ದಲಿತೇತರರ ಓಟೆಂಬ ಭಿಕ್ಷೆಯ ವಿರುದ್ಧ ನಿಲ್ಲುತ್ತಾನೆ? ತನ್ನ ಸ್ವಾಭಿಮಾನವನ್ನು ತಾನೇ ಕೊಲೆ ಮಾಡಿಕೊಂಡು ಶಾಸಕ, ಸಂಸದನಾಗುತ್ತಾನೆ. ಅಷ್ಟೆ.

“ನನ್ನ ಮುತ್ತಾತಂದಿರು ಮತಾಂತರ ಆದದ್ದಕ್ಕೆ ಕಾರಣ ಇದು. ಅಂದು ಕೀಳು ಜಾತಿ ಅಂತ ಅವಮಾನಿಸಿದಿರಿ, ಇಂದು ದೇಶ ವಿರೋಧಿಗಳು ಅಂತ ಅನುಮಾನಿಸುತ್ತಿದ್ದೀರಿ” ಎಂದು ಅಬ್ದುಲ್ ಮುನೀರ್ ಪ್ರತಿಕ್ರಿಯಿಸಿದ್ದಾರೆ.

ಈ ಸಂಸದರಿಗೆ ದೇಶದ ಜ್ವಲಂತ ಸಮಸ್ಯೆ ಯಾವುದು ಎಂದು ಮನದಟ್ಟು ಮಾಡಿಕೊಟ್ಟ ಆ ಹಳ್ಳಿಗರಿಗೆ ವಂದನೆಗಳು. ಇನ್ನಾದರೂ ಅವರು ಸಂಸತ್ತಿನಲ್ಲಿ ಈ ಸಮಸ್ಯೆಯ ಬಗ್ಗೆ ದನಿ ಎತ್ತಬೇಕು. ಆಗಿಲ್ಲವೆಂದರೆ ಊರ ಹೊರಗೆ ಕುರ್ಚಿ ಹಾಕಿ ಕಾರ್ಯಕ್ರಮ ನಡೆಸಲಿ. ಅದೂ ಆಗಿಲ್ಲವೆಂದರೆ ರಾಜೀನಾಮೆ ನೀಡಿ ಹೋರಾಟಕ್ಕೆ ಮುಂದಾಗಲಿ ಎಂದು ಸಂತೋಷ್ ಗುಡ್ಡಿಯಂಗಡಿಯವರು ಪ್ರತಿಕ್ರಿಯಿಸಿದ್ದಾರೆ.

ಬೆಳಗ್ಗೆಯಿಂದ ಒಂದಷ್ಟು ಗೊಲ್ಲ ಸಮುದಾಯದ ಸ್ನೇಹಿತರು ಪೋನ್ ಮಾಡಿ ಸಂಸದರಿಗೆ ತಟ್ಟಿದ ಅಸ್ಪೃಶ್ಯತೆ ಬಗ್ಗೆ ತೀವ್ರ ಸಂಕಟ ಹೊರಹಾಕಿದರು..ಅರಿವು ,ಬದ್ದತೆ ಇರುವ ಆ ಸಮುದಾಯದ ಗೆಳೆಯರೊಂದಿಗೆ ನಾವೆಲ್ಲರೂ ಸೇರಿ ಜಾಗೃತಿ ಮೂಡಿಸುವ ಅಥವಾ ಮನಸ್ಸು ಗಳನ್ನ ಪರಿವರ್ತಿಸುವ ಕೆಲಸ ಈ ಕ್ಷಣದ ತುರ್ತು…
ಶಿಕ್ಷೆಯಿಂದ ಎಲ್ಲಾ ಬದಲಾಗುವಂತಿದ್ದರೆ ಹೆಚ್ಚೂಕಮ್ಮಿ ಮೌಡ್ಯ ಇರುವ ಎಲ್ಲಾ ಗೊಲ್ಲರಟ್ಟಿಯವರ ಮೇಲೆ ಎರಡೂ ದಲಿತ ದೌರ್ಜನ್ಯ ಪ್ರಕರಣಗಳು ದಾಖಲಗುತ್ತಿದ್ದವು .
ಹಟ್ಟಿಗಳ ಪರಿವರ್ತನೆ ಗೆ ಇದು ರೈಟ್ ಟೈಮ್ ಎಂದು ಕೊಟ್ಟ ಶಂಕರ್ ರವರು ತಿಳಿಸಿದ್ದಾರೆ.

ಈ ವಿಚಾರ ಪತ್ರಿಕೆ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ಕೂಡಲೇ ಗೊಲ್ಲರಹಟ್ಟಿಯ ಜನ ಎಚ್ಚೆತ್ತುಕೊಂಡಿದ್ದಾರೆ. “ನಮ್ಮ ನಡವಳಿಕೆಗಳಿಂದ ಸಂಸದರಿಗೆ ನೋವಾಗಿದ್ದರೆ ದಯವಿಟ್ಟು ಕ್ಷಮಿಸಿ, ನೀವು ಮತ್ತೊಮ್ಮೆ ನಮ್ಮ ಹಟ್ಟಿಗೆ ಬಂದು ನಮ್ಮ ಸಮಸ್ಯೆ ಆಲಿಸಿ, ನಮಗೆಲ್ಲಾ ಮನೆ ಕಟ್ಟಿಕೊಡಿ” ಎಂದು ಮನವಿ ಮಾಡಿದ್ದಾರೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...