Homeಕರ್ನಾಟಕದಲಿತನೆಂಬ ಕಾರಣಕ್ಕೆ ಸಂಸದರಿಗೇ ಗೊಲ್ಲರಹಟ್ಟಿ ಗ್ರಾಮ ಪ್ರವೇಶಕ್ಕೆ ನಿರಾಕರಣೆ: ಎಲ್ಲೆಡೆ ತೀವ್ರ ಆಕ್ರೋಶ..

ದಲಿತನೆಂಬ ಕಾರಣಕ್ಕೆ ಸಂಸದರಿಗೇ ಗೊಲ್ಲರಹಟ್ಟಿ ಗ್ರಾಮ ಪ್ರವೇಶಕ್ಕೆ ನಿರಾಕರಣೆ: ಎಲ್ಲೆಡೆ ತೀವ್ರ ಆಕ್ರೋಶ..

- Advertisement -
- Advertisement -

ಚಿತ್ರದುರ್ಗದ ಸಂಸದರಾದ ಎ.ನಾರಾಯಣಸ್ವಾಮಿಯವರನ್ನು ದಲಿತರೆಂಬ ಕಾರಣಕ್ಕೆ ಪಾವಗಡದ ಪೆಮ್ಮನಹಳ್ಳಿಯ ಗೊಲ್ಲರಹಟ್ಟಿಯ ಪ್ರವೇಶ ನಿರಾಕರಿಸಿರುವ ಘಟನೆಗೆ ಎಲ್ಲೆಡೆ ತೀವ್ರ ಆಕ್ರೋಶ, ಟೀಕೆ ವ್ಯಕ್ತವಾಗಿದೆ. ಇದನ್ನು ಅಸ್ಪೃಶ್ಯತೆ ಅನ್ನದೇ ಮತ್ತೆ ಏನನ್ನಬೇಕು ಎಂದು ಜನ ತರಾಟೆಗೆ ತೆಗೆದುಕೊಂಡಿದ್ದಾರೆ.

ನಮ್ಮ ದೇಶದ ಪ್ರಜೆಗಳು ಜಾತಿಯ ವಿಚಾರದಲ್ಲಿ ಎಷ್ಟು ವಿಷ ರಕ್ತ ಹೊಂದಿದ್ದಾರೆ ಎಂಬುದನ್ನು ಸೂಚಿಸುತ್ತದೆ .
ಒಬ್ಬ ಸಂಸದರಿಗೆ ಗ್ರಾಮದ ಒಳಗೆ ಪ್ರವೇಶ ನಿರಾಕರಣೆ ಮಾಡಿದರೆ ಇನ್ನು ಸಾಮಾನ್ಯ ಪ್ರಜೆಗಳ ಸ್ಥಿತಿ ಹೇಗೆ ಊಹಿಸಲು ಸಾದ್ಯವಿಲ್ಲ !!! ಎಂದು ಹನುಮಂತ ನಂದಿಹಾಳ್ ರವರು ಪ್ರತಿಕ್ರಿಯಿಸಿದ್ದಾರೆ.

ವಿಕಾಸ್ ಆರ್.ಮೌರ್ಯ ರವರು ಫೇಸ್ ಬುಕ್ ನಲ್ಲಿ ಹೀಗೆ ಬರೆದಿದ್ದಾರೆ.

ಇದಕ್ಕೇ #ಪೂನಾ_ಪ್ಯಾಕ್ಟ್ ದಲಿತರ ಬದುಕನ್ನೇ ಕಿತ್ತುಕೊಂಡಿತು ಎನ್ನುವುದು

ಸಂಸದ ನಾರಾಯಣಸ್ವಾಮಿಯವರನ್ನು ಗೊಲ್ಲರು ತಮ್ಮ ಹಟ್ಟಿಗೆ ಬಿಟ್ಟುಕೊಳ್ಳದೆ ಸಂಸದರು ಅಂಗಲಾಚಿದರೂ ಒಪ್ಪದೇ ಹಟ್ಟಿಯಿಂದ ಹೊರಗೇ ಎಲ್ಲವನ್ನು ವಿಚಾರಿಸಿ ಅಟ್ಟಿದ್ದಾರೆ. ಸಂವಿಧಾನದ ಕಲಂ 17 ಅಸ್ಪೃಶ್ಯತೆ ನಿಷೇಧಿಸಲಾಗಿದೆ ಎನ್ನುತ್ತದೆ. ಆದರೆ ಈ ಘಟನೆಯಲ್ಲಿ ಕಾನೂನು ನಯಾಪೈಸೆಯ ಕೆಲಸ ಮಾಡಿಲ್ಲ, ಮಾಡಲ್ಲ. ಇದು ನಿಜ ಭಾರತದ ಸ್ಥಿತಿ. ಇರಲಿ. ಇಲ್ಲಿ ಸಂಸದರು ಆ ಅಮಾನವೀಯ ಜನರ ವಿರುದ್ಧ ಕ್ರಮ ಏಕೆ ಕೈಗೊಳ್ಳಲಿಲ್ಲ? ಅದಕ್ಕೆ ಕಾರಣ ಅವರೇ ಹೇಳಿದ್ದಾರೆ. ಶೇ. 80 ಗೊಲ್ಲ ಸಮುದಾಯ ಅವರಿಗೆ ಮತ ನೀಡಿ ಗೆಲ್ಲಿಸಿದೆ. ಹೀಗಿರುವಾಗ ಸಂಸದರೇನಾದರೂ ಕಾನೂನು ರೀತಿಯ ಕ್ರಮ ಕೈಗೊಂಡರೆ ಮುಂದಿನ ಬಾರಿ ಅವರು ಸೋಲುವುದು ಖಚಿತ.

ಈ ಕಾರಣಕ್ಕಾಗಿಯೇ ಅಂಬೇಡ್ಕರರು 1933 ರ ಪೂನಾ ಒಪ್ಪಂದವನ್ನು ಕಂಠಮಟ್ಟ ವಿರೋಧಿಸಿದ್ದು. ಏಕೆಂದರೆ ದುಂಡು ಮೇಜಿನ ಸಭೆಯಲ್ಲಿ ದಲಿತರಿಗೆ ಎರಡು ಓಟು ನೀಡುವ ಹಕ್ಕು ಸಿಕ್ಕಿತ್ತು. ಆಂದರೆ ದಲಿತ ಮೀಸಲು ಕ್ಷೇತ್ರಗಳಲ್ಲಿ ದಲಿತರಿಂದ ದಲಿತರಿಗಾಗಿ ದಲಿತರಿಗೋಸ್ಕರ ಆರಿಸಿ ಬರುವ ದಲಿತರನ್ನು ಅಯ್ಕೆ ಮಾಡಲು ಒಂದು ಓಟು. ಅದೇ ಕ್ಷೇತ್ರದಲ್ಲಿ ದಲಿತೇತರರನ್ನು ಆಯ್ಕೆ ಮಾಡಲು ಒಂದು ಓಟು. ಇದನ್ನೇ ಪ್ರತ್ಯೇಕ ಮತಕ್ಷೇತ್ರವೆನ್ನುವರು. ಇವತ್ತು ಸಿಖ್ ಜನಾಂಗ ಬಲಿಷ್ಟವಾಗಿರುವುದಕ್ಕೆ ಕಾರಣ ಅವರಿಗೆ ದಕ್ಕಿದ ಪ್ರತ್ಯೇಕ ಮತಕ್ಷೇತ್ರವೇ ಆಗಿದೆ. ಆದರೆ ಇದು ದಲಿತರಿಗೆ ಸಿಗಲಿಲ್ಲ. ಇದಕ್ಕೆ ನೇರವಾಗಿ ಗಾಂಧಿಯವರನ್ನು ನಾವು ಹೊಣೆ ಮಾಡುತ್ತೇವೆ. ಅದು ಸತ್ಯವಾದರೂ ಅವರಷ್ಟೇ ಹೊಣೆಗಾರರು ಅವರಿಗೆ ಬೇಷರತ್ ಬೆಂಬಲ ನೀಡಿದ ಅಖಿಲ ಭಾರತ ಹಿಂದೂ ಮಹಾಸಭಾ, ಸರ್ದಾರ್ ವಲ್ಲಭಬಾಯಿ ಪಟೇಲ್ ಹಾಗೂ ಗಾಂಧಿವಾದಿ ದಲಿತರು.

ಅಂಬೇಡ್ಕರರು ಜುಲೈ 1947 ರವರೆಗೂ ಹಾಗೂ ಸಂವಿಧಾನ ಸಭೆಯಲ್ಲೂ ಮತ್ತೆ ದಲಿತರಿಗೆ ಪ್ರತ್ಯೇಕ ಮತಕ್ಷೇತ್ರ ಸಿಗಬೇಕೆಂದು ಹೋರಾಡಿದರು. ಆದರೆ ಗಾಂಧಿವಾದಿ ದಲಿತರು ಹಾಗೂ ಕಾಂಗ್ರೆಸ್ ಅದನ್ನು ಕಂಠಮಟ್ಟ ವಿರೋಧಿಸಿ ಮೂಲೆಗುಂಪು ಮಾಡಿದರು. ಅವರ ಮುಂದೆ ಅಂಬೇಡ್ಕರ್ ಸೋಲೊಪ್ಪಲೇಬೇಕಾಯಿತು.

ಇಂದು ಯಾವುದೇ ದಲಿತ ಜನಪ್ರತಿನಿದಿ ಲೋಕಸಭೆಗೆ ಅಗಲೀ, ವಿಧಾನಸಭೆಗೆ ಆಗಲೀ ಆರಿಸಿ ಬರುತ್ತಿರುವುದು ದಲಿತೇತರರ ಓಟಿನಿಂದ. ದಲಿತರ ಓಟುಗಳಿಗೆ ಇಲ್ಲಿ ಬಿಡಿಗಾಸಿನ ಬೆಲೆಯಿಲ್ಲ. ಯಾವ ದಲಿತ ಅಥವಾ ಯಾವ ಜಾತಿಯ ದಲಿತ, ಶಾಸಕ ಅಥವಾ ಸಂಸದ ಆಗಬೇಕೆನ್ನುವುದನ್ನು ತೀರ್ಮಾನ ಮಾಡುವವರು ದಲಿತೇತರರೇ ಆಗಿರುವಾಗ ಯಾವ ದಲಿತ ರಾಜಕೀಯ ನಾಯಕ ತಾನೇ ದಲಿತೇತರರ ಓಟೆಂಬ ಭಿಕ್ಷೆಯ ವಿರುದ್ಧ ನಿಲ್ಲುತ್ತಾನೆ? ತನ್ನ ಸ್ವಾಭಿಮಾನವನ್ನು ತಾನೇ ಕೊಲೆ ಮಾಡಿಕೊಂಡು ಶಾಸಕ, ಸಂಸದನಾಗುತ್ತಾನೆ. ಅಷ್ಟೆ.

“ನನ್ನ ಮುತ್ತಾತಂದಿರು ಮತಾಂತರ ಆದದ್ದಕ್ಕೆ ಕಾರಣ ಇದು. ಅಂದು ಕೀಳು ಜಾತಿ ಅಂತ ಅವಮಾನಿಸಿದಿರಿ, ಇಂದು ದೇಶ ವಿರೋಧಿಗಳು ಅಂತ ಅನುಮಾನಿಸುತ್ತಿದ್ದೀರಿ” ಎಂದು ಅಬ್ದುಲ್ ಮುನೀರ್ ಪ್ರತಿಕ್ರಿಯಿಸಿದ್ದಾರೆ.

ಈ ಸಂಸದರಿಗೆ ದೇಶದ ಜ್ವಲಂತ ಸಮಸ್ಯೆ ಯಾವುದು ಎಂದು ಮನದಟ್ಟು ಮಾಡಿಕೊಟ್ಟ ಆ ಹಳ್ಳಿಗರಿಗೆ ವಂದನೆಗಳು. ಇನ್ನಾದರೂ ಅವರು ಸಂಸತ್ತಿನಲ್ಲಿ ಈ ಸಮಸ್ಯೆಯ ಬಗ್ಗೆ ದನಿ ಎತ್ತಬೇಕು. ಆಗಿಲ್ಲವೆಂದರೆ ಊರ ಹೊರಗೆ ಕುರ್ಚಿ ಹಾಕಿ ಕಾರ್ಯಕ್ರಮ ನಡೆಸಲಿ. ಅದೂ ಆಗಿಲ್ಲವೆಂದರೆ ರಾಜೀನಾಮೆ ನೀಡಿ ಹೋರಾಟಕ್ಕೆ ಮುಂದಾಗಲಿ ಎಂದು ಸಂತೋಷ್ ಗುಡ್ಡಿಯಂಗಡಿಯವರು ಪ್ರತಿಕ್ರಿಯಿಸಿದ್ದಾರೆ.

ಬೆಳಗ್ಗೆಯಿಂದ ಒಂದಷ್ಟು ಗೊಲ್ಲ ಸಮುದಾಯದ ಸ್ನೇಹಿತರು ಪೋನ್ ಮಾಡಿ ಸಂಸದರಿಗೆ ತಟ್ಟಿದ ಅಸ್ಪೃಶ್ಯತೆ ಬಗ್ಗೆ ತೀವ್ರ ಸಂಕಟ ಹೊರಹಾಕಿದರು..ಅರಿವು ,ಬದ್ದತೆ ಇರುವ ಆ ಸಮುದಾಯದ ಗೆಳೆಯರೊಂದಿಗೆ ನಾವೆಲ್ಲರೂ ಸೇರಿ ಜಾಗೃತಿ ಮೂಡಿಸುವ ಅಥವಾ ಮನಸ್ಸು ಗಳನ್ನ ಪರಿವರ್ತಿಸುವ ಕೆಲಸ ಈ ಕ್ಷಣದ ತುರ್ತು…
ಶಿಕ್ಷೆಯಿಂದ ಎಲ್ಲಾ ಬದಲಾಗುವಂತಿದ್ದರೆ ಹೆಚ್ಚೂಕಮ್ಮಿ ಮೌಡ್ಯ ಇರುವ ಎಲ್ಲಾ ಗೊಲ್ಲರಟ್ಟಿಯವರ ಮೇಲೆ ಎರಡೂ ದಲಿತ ದೌರ್ಜನ್ಯ ಪ್ರಕರಣಗಳು ದಾಖಲಗುತ್ತಿದ್ದವು .
ಹಟ್ಟಿಗಳ ಪರಿವರ್ತನೆ ಗೆ ಇದು ರೈಟ್ ಟೈಮ್ ಎಂದು ಕೊಟ್ಟ ಶಂಕರ್ ರವರು ತಿಳಿಸಿದ್ದಾರೆ.

ಈ ವಿಚಾರ ಪತ್ರಿಕೆ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ಕೂಡಲೇ ಗೊಲ್ಲರಹಟ್ಟಿಯ ಜನ ಎಚ್ಚೆತ್ತುಕೊಂಡಿದ್ದಾರೆ. “ನಮ್ಮ ನಡವಳಿಕೆಗಳಿಂದ ಸಂಸದರಿಗೆ ನೋವಾಗಿದ್ದರೆ ದಯವಿಟ್ಟು ಕ್ಷಮಿಸಿ, ನೀವು ಮತ್ತೊಮ್ಮೆ ನಮ್ಮ ಹಟ್ಟಿಗೆ ಬಂದು ನಮ್ಮ ಸಮಸ್ಯೆ ಆಲಿಸಿ, ನಮಗೆಲ್ಲಾ ಮನೆ ಕಟ್ಟಿಕೊಡಿ” ಎಂದು ಮನವಿ ಮಾಡಿದ್ದಾರೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...