Homeಮುಖಪುಟಮಹಾರಾಷ್ಟ್ರದ ಪನ್ಶೇಂದ್ರ ಗ್ರಾಮದ ದಲಿತರ ಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಒತ್ತಾಯ

ಮಹಾರಾಷ್ಟ್ರದ ಪನ್ಶೇಂದ್ರ ಗ್ರಾಮದ ದಲಿತರ ಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಒತ್ತಾಯ

ನಾವು ಮೊದಲೇ ದೂರು ಕೊಟ್ಟಾಗ ಪೊಲೀಸರು ಗಂಭೀರವಾಗಿ ಪರಿಗಣಿಸದೇ ಹೋದದ್ದು, ಸೆ.4ರ ರಕ್ತಸಿಕ್ತ ದಾಳಿಗೆ ಕಾರಣವಾಯಿತು. ಎರಡುವಾರ ಸಂಚುಹಾಕಿ ದಾಳಿ ಮಾಡಿದ್ದಾರೆ ಎಂದು ಕುಟುಂಬವರ್ಗ ತಿಳಿಸಿದೆ.

- Advertisement -
- Advertisement -

ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ಪನ್ಶೇಂದ್ರ ಗ್ರಾಮದಲ್ಲಿ ನಡೆದ, ಇಬ್ಬರು ದಲಿತರ ಹತ್ಯೆಯನ್ನು ಸಿಬಿಐ ತನಿಖೆಗೆ ನೀಡುವಂತೆ, ಹತ್ಯೆ ನಡೆದ 12 ದಿನಗಳ ಬಳಿಕ  ಕುಟುಂಬಸ್ಥರು ಒತ್ತಾಯಿಸಿದ್ದಾರೆ. ಮೃತ ರಾಹುಲ್ ಬೋರಾಡೆ ಮತ್ತು ಪ್ರದೀಪ್ ಬೋರಾಡೆ ಸಂಬಂಧಿಕರು ಮತ್ತು ಜಾತಿ ವಿರೋಧಿ ಸಂಘಟನೆ ಕಾರ್ಯಕರ್ತರು ಇದೊಂದು ಯೋಜಿತ ದಾಳಿ ಎಂದು ಆರೋಪಿಸಿದ್ದಾರೆ.

22 ವರ್ಷದ ರಾಹುಲ್ ಬೋರಾಡೆ ಮತ್ತು 25 ವರ್ಷದ ಪ್ರದೀಪ್ ಬೋರಾಡೆ ಎಂಬ ಇಬ್ಬರು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿದ್ದು, ದೀರ್ಘಕಾಲದ ಭೂ ವಿವಾದಕ್ಕೆ ಸಂಬಂಧಿಸಿದ ದಾಳಿಯಲ್ಲಿ 50 ಕ್ಕೂ ಹೆಚ್ಚು ಜನರ ಗುಂಪಿನಿಂದ ಸೆಪ್ಟೆಂಬರ್ 4 ರಂದು ಇವರ ಮೇಲೆ ಹಲ್ಲೆ ನಡೆಸಲಾಗಿತ್ತು. ಹಲ್ಲೆಯಲ್ಲಿ ಈ ಇಬ್ಬರು ಮೃತಪಟ್ಟಿದ್ದರು.

ಇದೇ ದಾಳಿಯಲ್ಲಿ ಮೃತರ ಸಹೋದರ ರಾಮೇಶ್ವರ ಮತ್ತು ತಾಯಿ ನರ್ಮದಾ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ. ಈಗ ಇಬ್ಬರೂ ಜಲ್ನಾ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಹುಲ್ ಮತ್ತು ಪ್ರದೀಪ್ ಬೋರಾಡೆ ಅವರ ಸಂಬಂಧಿಕರು ಈ ಕೊಲೆಗಳನ್ನು ಯೋಜಿತ ದಾಳಿ ಎಂದು ಕರೆದಿದ್ದಾರೆ.

ಇದನ್ನೂ ಓದಿ: ತಮ್ಮ ಭೂಮಿ ಆಕ್ರಮಿಸಿದ್ದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಕ್ಕೆ ದಲಿತ ಯುವಕನ ಹತ್ಯೆ

ಸದ್ಯ ಜಲ್ನಾ ಪೊಲೀಸರು ಆರೋಪಿಗಳ ವಿರುದ್ಧ, ಕೊಲೆ ಮತ್ತು ಕೊಲೆ ಯತ್ನಕ್ಕಾಗಿ ಐಪಿಸಿಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ, ಈವರೆಗೆ 25 ಜನರನ್ನು ಬಂಧಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸುತ್ತಿರುವ ಉಪ-ವಿಭಾಗೀಯ ಪೊಲೀಸ್ ಅಧಿಕಾರಿ ಸುಧೀರ್ ಖಿರಾದ್ಕರ್, “ಸಂತ್ರಸ್ತರ ಕುಟುಂಬದಿಂದ ಹೆಸರಿಸಲ್ಪಟ್ಟ ಇನ್ನೂ ಐದು ಜನರನ್ನು ಹುಡುಕುವ ಹಂತದಲ್ಲಿದ್ದೇವೆ” ಎಂದು ಹೇಳಿದ್ದಾರೆ.

“ಘಟನೆ ನಡೆದ ಕೂಡಲೇ ಆರೋಪಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ನಾವು ಕಾರಣವನ್ನು ಕಂಡುಹಿಡಿಯುವ ಪ್ರಕ್ರಿಯೆಯಲ್ಲಿದ್ದೇವೆ” ಎಂದು ಖಿರಾದ್ಕರ್ ತಿಳಿಸಿದ್ದಾರೆ ಎಂದು ದಿ ವೈರ್  ವರದಿ ಮಾಡಿದೆ.

ಇದನ್ನೂ ಓದಿ: ಬುಡಕಟ್ಟು ಹೆಣ್ಣುಮಕ್ಕಳ ಮೇಲೆ ಸಾಮೂಹಿಕ ಅತ್ಯಾಚಾರ: ಆತ್ಮಹತ್ಯೆ; ಒಬ್ಬ ಬಾಲಕಿ ಸಾವು!

ಸೆಪ್ಟೆಂಬರ್ 4 ರಂದು, ಬೆಳಿಗ್ಗೆ 6 ಗಂಟೆ ಸುಮಾರಿಗೆ, ಬೋರಾಡ್ಸ್ ತಮ್ಮ ಮನೆಯಿಂದ ಬೆಳಗ್ಗಿನ ನಿತ್ಯಕರ್ಮಗಳಿಗಾಗಿ ಹೊರಟಿದ್ದಾಗ, ಅವರ ಮೇಲೆ 50ಕ್ಕೂ ಹೆಚ್ಚು ಜನರ ಗುಂಪು ಹಲ್ಲೆ ನಡೆಸಿತು. ಸಂತ್ರಸ್ತರ ಕುಟುಂಬದ ಪ್ರಕಾರ ಭಿಲ್ ಸಮುದಾಯದೊಂದಿಗಿನ ವಿವಾದದಿಂದ ಈ ಸಮಸ್ಯೆ ಉದ್ಭವಿಸಿದೆ ಎಂದು ಹೇಳಿಕೊಂಡಿದೆ.

ಆಗಸ್ಟ್ 17ರಂದು ಭಿಲ್ ಸಮುದಾಯದ ಹಬ್ಬವೊಂದರಲ್ಲಿ ಮೃತ ರಾಹುಲ್ ಮತ್ತು ಆರೋಪಿಗಳ ನಡುವೆ ವಾದ-ವಿವಾದಗಳಿಂದ ಜಗಳ ಉಂಟಾಗಿ, ಕೆಲವರು ರಾಹುಲ್‌ನನ್ನು ಥಳಿಸಿದ್ದರು ಎಂದು ರಾಹುಲ್ ಚಿಕ್ಕಪ್ಪ ತುಕಾರಂ ಕಹಳೆ ಹೇಳಿದ್ದಾರೆ.

PC: The Wire (ಮೃತ ರಾಹುಲ್ ಮತ್ತು ಪ್ರದೀಪ್ ಬೋರಾಡೆ ಅವರ ಮನೆ)

ಇದನ್ನೂ ಓದಿ: 16 ನಿಮಿಷಕ್ಕೊಮ್ಮೆ ದಲಿತರ ವಿರುದ್ಧ ದೌರ್ಜನ್ಯ, ಪ್ರತಿನಿತ್ಯ 6 ದಲಿತ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ

“ನಾವು ಮೊದಲೇ ದೂರು ಕೊಟ್ಟಾಗ ಪೊಲೀಸರು ಗಂಭೀರವಾಗಿ ಪರಿಗಣಿಸದಿದ್ದದ್ದು, ಸೆಪ್ಟೆಂಬರ್ 4 ರ ರಕ್ತಸಿಕ್ತ ದಾಳಿಗೆ ಕಾರಣವಾಯಿತು. ಎರಡು ವಾರ ಸಂಚು ರೂಪಿಸಿ ದಾಳಿ ಮಾಡಿದ್ದಾರೆ. ಇಲ್ಲಿನ ಹಿಂಸಾಚಾರಕ್ಕೆ ಸುಧೀರ್ಘ ಇತಿಹಾಸವಿದೆ. ಪೊಲೀಸರು ಇದರ ಬಗ್ಗೆ ಸರಿಯಾಗಿ ಗಮನಹರಿಸಿ, ಪ್ರಕರಣವನ್ನು ತನಿಖೆ ಮಾಡಲಾಗುವುದಿಲ್ಲ. ಆದ್ದರಿಂದಲೇ ನಿಷ್ಪಕ್ಷಪಾತ ತನಿಖೆಗಾಗಿ ಸಿಬಿಐಗೆ ಒತ್ತಾಯಿಸುತ್ತಿದ್ದೇವೆ ಎಂದು ತುಕಾರಂ ಕಹಳೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ದಲಿತನೊಬ್ಬ ಗ್ರಾ.ಪಂ ಮುಖ್ಯಸ್ಥನಾದುದ್ದನ್ನು ಸಹಿಸದ ಮೇಲ್ಜಾತಿಗಳು: ಗುಂಡಿಕ್ಕಿ ಕೊಲೆ

ಬೋರಾಡೆ ಕುಟುಂಬವು ಹಲವು ವರ್ಷಗಳಿಂದ ಭೂಮಿ ಹೊಂದಿದ್ದು, ಅದು ಹಳ್ಳಿಯ ಬೇರೆ ದಲಿತರಿಗೂ ಪ್ರೋತ್ಸಾಹ ಸಿಕ್ಕಂತಾಗಿ ಅವರೂ ಭೂಮಿ ಹೊಂದಲು ಪ್ರಾರಂಭಿಸಿದ್ದರು. ಇದು ಭೂ ವಿವಾದಗಳಿಗೆ ಕಾರಣವಾಯಿತು ಎಂದು ಬೋರಾಡೆ ಸಂಬಂಧಿಕರು ತಿಳಿಸಿದ್ದಾರೆ.

“ಲ್ಯಾಂಡ್ ಮಾಫಿಯಾಗಳ ಮೂಲಕ ಬೆದರಿಕೆ ಹಾಕಿಸಿ, ಭೂಮಿಯನ್ನು ಬಿಟ್ಟುಕೊಡಬೇಕೆಂದು ಒತ್ತಾಯಿಸಿದ್ದರು. ಕಳೆದ ಮೂರು ವರ್ಷಗಳಿಂದ ಅವರು ನಮಗೆ ತೊಂದರೆ ಕೊಡುತ್ತಿದ್ದಾರೆ” ಎಂದು ಮೃತರ ಕುಟುಂಬದ ಸದಸ್ಯರೊಬ್ಬರು ಆರೋಪಿಸಿದ್ದಾರೆ.

ಇವರು ವಾಸಿಸುತ್ತಿದ್ದ ಪನ್ಶೇಂದ್ರ ಗ್ರಾಮದಲ್ಲಿ ಸುಮಾರು 350 ಮನೆಗಳಿವೆ. ಅವುಗಳಲ್ಲಿ, 20% ಕ್ಕೂ ಹೆಚ್ಚು ಮನೆಗಳು ಭಿಲ್ ಸಮುದಾಯಕ್ಕೆ ಸೇರಿವೆ, ಸುಮಾರು 8% ಬೌದ್ಧರು (ಬೋರಾಡೆಗಳು ಸಹ ಬೌದ್ಧರು) ಮತ್ತು ಕೆಲವು ಮರಾಠರು ಮತ್ತು ಅಲೆಮಾರಿ ಸಮುದಾಯಗಳಿಗೆ ಸೇರಿದವರು ಇದ್ದಾರೆ. ಗ್ರಾಮದಲ್ಲಿ ಸಾಕ್ಷರತೆಯ ಪ್ರಮಾಣ 70% ಕ್ಕಿಂತ ಕಡಿಮೆಯಿದೆ ಮತ್ತು ಇಲ್ಲಿ ಹೆಚ್ಚಿನ ದಲಿತ ಕುಟುಂಬಗಳು ತುಂಡು ಭೂಮಿಯಿರುವ ರೈತರು.


ಇದನ್ನೂ ಓದಿ: ಮಧ್ಯಪ್ರದೇಶದ ದಲಿತ ದಂಪತಿಯ ಮೇಲಿನ ಅಮಾನವೀಯ ಹಲ್ಲೆಗೆ ತೀವ್ರ ಖಂಡನೆ: ಡಿಸಿ, ಎಸ್ಪಿ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...