Homeಮುಖಪುಟಮಹಾರಾಷ್ಟ್ರದ ಪನ್ಶೇಂದ್ರ ಗ್ರಾಮದ ದಲಿತರ ಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಒತ್ತಾಯ

ಮಹಾರಾಷ್ಟ್ರದ ಪನ್ಶೇಂದ್ರ ಗ್ರಾಮದ ದಲಿತರ ಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಒತ್ತಾಯ

ನಾವು ಮೊದಲೇ ದೂರು ಕೊಟ್ಟಾಗ ಪೊಲೀಸರು ಗಂಭೀರವಾಗಿ ಪರಿಗಣಿಸದೇ ಹೋದದ್ದು, ಸೆ.4ರ ರಕ್ತಸಿಕ್ತ ದಾಳಿಗೆ ಕಾರಣವಾಯಿತು. ಎರಡುವಾರ ಸಂಚುಹಾಕಿ ದಾಳಿ ಮಾಡಿದ್ದಾರೆ ಎಂದು ಕುಟುಂಬವರ್ಗ ತಿಳಿಸಿದೆ.

- Advertisement -
- Advertisement -

ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ಪನ್ಶೇಂದ್ರ ಗ್ರಾಮದಲ್ಲಿ ನಡೆದ, ಇಬ್ಬರು ದಲಿತರ ಹತ್ಯೆಯನ್ನು ಸಿಬಿಐ ತನಿಖೆಗೆ ನೀಡುವಂತೆ, ಹತ್ಯೆ ನಡೆದ 12 ದಿನಗಳ ಬಳಿಕ  ಕುಟುಂಬಸ್ಥರು ಒತ್ತಾಯಿಸಿದ್ದಾರೆ. ಮೃತ ರಾಹುಲ್ ಬೋರಾಡೆ ಮತ್ತು ಪ್ರದೀಪ್ ಬೋರಾಡೆ ಸಂಬಂಧಿಕರು ಮತ್ತು ಜಾತಿ ವಿರೋಧಿ ಸಂಘಟನೆ ಕಾರ್ಯಕರ್ತರು ಇದೊಂದು ಯೋಜಿತ ದಾಳಿ ಎಂದು ಆರೋಪಿಸಿದ್ದಾರೆ.

22 ವರ್ಷದ ರಾಹುಲ್ ಬೋರಾಡೆ ಮತ್ತು 25 ವರ್ಷದ ಪ್ರದೀಪ್ ಬೋರಾಡೆ ಎಂಬ ಇಬ್ಬರು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿದ್ದು, ದೀರ್ಘಕಾಲದ ಭೂ ವಿವಾದಕ್ಕೆ ಸಂಬಂಧಿಸಿದ ದಾಳಿಯಲ್ಲಿ 50 ಕ್ಕೂ ಹೆಚ್ಚು ಜನರ ಗುಂಪಿನಿಂದ ಸೆಪ್ಟೆಂಬರ್ 4 ರಂದು ಇವರ ಮೇಲೆ ಹಲ್ಲೆ ನಡೆಸಲಾಗಿತ್ತು. ಹಲ್ಲೆಯಲ್ಲಿ ಈ ಇಬ್ಬರು ಮೃತಪಟ್ಟಿದ್ದರು.

ಇದೇ ದಾಳಿಯಲ್ಲಿ ಮೃತರ ಸಹೋದರ ರಾಮೇಶ್ವರ ಮತ್ತು ತಾಯಿ ನರ್ಮದಾ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ. ಈಗ ಇಬ್ಬರೂ ಜಲ್ನಾ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಹುಲ್ ಮತ್ತು ಪ್ರದೀಪ್ ಬೋರಾಡೆ ಅವರ ಸಂಬಂಧಿಕರು ಈ ಕೊಲೆಗಳನ್ನು ಯೋಜಿತ ದಾಳಿ ಎಂದು ಕರೆದಿದ್ದಾರೆ.

ಇದನ್ನೂ ಓದಿ: ತಮ್ಮ ಭೂಮಿ ಆಕ್ರಮಿಸಿದ್ದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಕ್ಕೆ ದಲಿತ ಯುವಕನ ಹತ್ಯೆ

ಸದ್ಯ ಜಲ್ನಾ ಪೊಲೀಸರು ಆರೋಪಿಗಳ ವಿರುದ್ಧ, ಕೊಲೆ ಮತ್ತು ಕೊಲೆ ಯತ್ನಕ್ಕಾಗಿ ಐಪಿಸಿಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ, ಈವರೆಗೆ 25 ಜನರನ್ನು ಬಂಧಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸುತ್ತಿರುವ ಉಪ-ವಿಭಾಗೀಯ ಪೊಲೀಸ್ ಅಧಿಕಾರಿ ಸುಧೀರ್ ಖಿರಾದ್ಕರ್, “ಸಂತ್ರಸ್ತರ ಕುಟುಂಬದಿಂದ ಹೆಸರಿಸಲ್ಪಟ್ಟ ಇನ್ನೂ ಐದು ಜನರನ್ನು ಹುಡುಕುವ ಹಂತದಲ್ಲಿದ್ದೇವೆ” ಎಂದು ಹೇಳಿದ್ದಾರೆ.

“ಘಟನೆ ನಡೆದ ಕೂಡಲೇ ಆರೋಪಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ನಾವು ಕಾರಣವನ್ನು ಕಂಡುಹಿಡಿಯುವ ಪ್ರಕ್ರಿಯೆಯಲ್ಲಿದ್ದೇವೆ” ಎಂದು ಖಿರಾದ್ಕರ್ ತಿಳಿಸಿದ್ದಾರೆ ಎಂದು ದಿ ವೈರ್  ವರದಿ ಮಾಡಿದೆ.

ಇದನ್ನೂ ಓದಿ: ಬುಡಕಟ್ಟು ಹೆಣ್ಣುಮಕ್ಕಳ ಮೇಲೆ ಸಾಮೂಹಿಕ ಅತ್ಯಾಚಾರ: ಆತ್ಮಹತ್ಯೆ; ಒಬ್ಬ ಬಾಲಕಿ ಸಾವು!

ಸೆಪ್ಟೆಂಬರ್ 4 ರಂದು, ಬೆಳಿಗ್ಗೆ 6 ಗಂಟೆ ಸುಮಾರಿಗೆ, ಬೋರಾಡ್ಸ್ ತಮ್ಮ ಮನೆಯಿಂದ ಬೆಳಗ್ಗಿನ ನಿತ್ಯಕರ್ಮಗಳಿಗಾಗಿ ಹೊರಟಿದ್ದಾಗ, ಅವರ ಮೇಲೆ 50ಕ್ಕೂ ಹೆಚ್ಚು ಜನರ ಗುಂಪು ಹಲ್ಲೆ ನಡೆಸಿತು. ಸಂತ್ರಸ್ತರ ಕುಟುಂಬದ ಪ್ರಕಾರ ಭಿಲ್ ಸಮುದಾಯದೊಂದಿಗಿನ ವಿವಾದದಿಂದ ಈ ಸಮಸ್ಯೆ ಉದ್ಭವಿಸಿದೆ ಎಂದು ಹೇಳಿಕೊಂಡಿದೆ.

ಆಗಸ್ಟ್ 17ರಂದು ಭಿಲ್ ಸಮುದಾಯದ ಹಬ್ಬವೊಂದರಲ್ಲಿ ಮೃತ ರಾಹುಲ್ ಮತ್ತು ಆರೋಪಿಗಳ ನಡುವೆ ವಾದ-ವಿವಾದಗಳಿಂದ ಜಗಳ ಉಂಟಾಗಿ, ಕೆಲವರು ರಾಹುಲ್‌ನನ್ನು ಥಳಿಸಿದ್ದರು ಎಂದು ರಾಹುಲ್ ಚಿಕ್ಕಪ್ಪ ತುಕಾರಂ ಕಹಳೆ ಹೇಳಿದ್ದಾರೆ.

PC: The Wire (ಮೃತ ರಾಹುಲ್ ಮತ್ತು ಪ್ರದೀಪ್ ಬೋರಾಡೆ ಅವರ ಮನೆ)

ಇದನ್ನೂ ಓದಿ: 16 ನಿಮಿಷಕ್ಕೊಮ್ಮೆ ದಲಿತರ ವಿರುದ್ಧ ದೌರ್ಜನ್ಯ, ಪ್ರತಿನಿತ್ಯ 6 ದಲಿತ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ

“ನಾವು ಮೊದಲೇ ದೂರು ಕೊಟ್ಟಾಗ ಪೊಲೀಸರು ಗಂಭೀರವಾಗಿ ಪರಿಗಣಿಸದಿದ್ದದ್ದು, ಸೆಪ್ಟೆಂಬರ್ 4 ರ ರಕ್ತಸಿಕ್ತ ದಾಳಿಗೆ ಕಾರಣವಾಯಿತು. ಎರಡು ವಾರ ಸಂಚು ರೂಪಿಸಿ ದಾಳಿ ಮಾಡಿದ್ದಾರೆ. ಇಲ್ಲಿನ ಹಿಂಸಾಚಾರಕ್ಕೆ ಸುಧೀರ್ಘ ಇತಿಹಾಸವಿದೆ. ಪೊಲೀಸರು ಇದರ ಬಗ್ಗೆ ಸರಿಯಾಗಿ ಗಮನಹರಿಸಿ, ಪ್ರಕರಣವನ್ನು ತನಿಖೆ ಮಾಡಲಾಗುವುದಿಲ್ಲ. ಆದ್ದರಿಂದಲೇ ನಿಷ್ಪಕ್ಷಪಾತ ತನಿಖೆಗಾಗಿ ಸಿಬಿಐಗೆ ಒತ್ತಾಯಿಸುತ್ತಿದ್ದೇವೆ ಎಂದು ತುಕಾರಂ ಕಹಳೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ದಲಿತನೊಬ್ಬ ಗ್ರಾ.ಪಂ ಮುಖ್ಯಸ್ಥನಾದುದ್ದನ್ನು ಸಹಿಸದ ಮೇಲ್ಜಾತಿಗಳು: ಗುಂಡಿಕ್ಕಿ ಕೊಲೆ

ಬೋರಾಡೆ ಕುಟುಂಬವು ಹಲವು ವರ್ಷಗಳಿಂದ ಭೂಮಿ ಹೊಂದಿದ್ದು, ಅದು ಹಳ್ಳಿಯ ಬೇರೆ ದಲಿತರಿಗೂ ಪ್ರೋತ್ಸಾಹ ಸಿಕ್ಕಂತಾಗಿ ಅವರೂ ಭೂಮಿ ಹೊಂದಲು ಪ್ರಾರಂಭಿಸಿದ್ದರು. ಇದು ಭೂ ವಿವಾದಗಳಿಗೆ ಕಾರಣವಾಯಿತು ಎಂದು ಬೋರಾಡೆ ಸಂಬಂಧಿಕರು ತಿಳಿಸಿದ್ದಾರೆ.

“ಲ್ಯಾಂಡ್ ಮಾಫಿಯಾಗಳ ಮೂಲಕ ಬೆದರಿಕೆ ಹಾಕಿಸಿ, ಭೂಮಿಯನ್ನು ಬಿಟ್ಟುಕೊಡಬೇಕೆಂದು ಒತ್ತಾಯಿಸಿದ್ದರು. ಕಳೆದ ಮೂರು ವರ್ಷಗಳಿಂದ ಅವರು ನಮಗೆ ತೊಂದರೆ ಕೊಡುತ್ತಿದ್ದಾರೆ” ಎಂದು ಮೃತರ ಕುಟುಂಬದ ಸದಸ್ಯರೊಬ್ಬರು ಆರೋಪಿಸಿದ್ದಾರೆ.

ಇವರು ವಾಸಿಸುತ್ತಿದ್ದ ಪನ್ಶೇಂದ್ರ ಗ್ರಾಮದಲ್ಲಿ ಸುಮಾರು 350 ಮನೆಗಳಿವೆ. ಅವುಗಳಲ್ಲಿ, 20% ಕ್ಕೂ ಹೆಚ್ಚು ಮನೆಗಳು ಭಿಲ್ ಸಮುದಾಯಕ್ಕೆ ಸೇರಿವೆ, ಸುಮಾರು 8% ಬೌದ್ಧರು (ಬೋರಾಡೆಗಳು ಸಹ ಬೌದ್ಧರು) ಮತ್ತು ಕೆಲವು ಮರಾಠರು ಮತ್ತು ಅಲೆಮಾರಿ ಸಮುದಾಯಗಳಿಗೆ ಸೇರಿದವರು ಇದ್ದಾರೆ. ಗ್ರಾಮದಲ್ಲಿ ಸಾಕ್ಷರತೆಯ ಪ್ರಮಾಣ 70% ಕ್ಕಿಂತ ಕಡಿಮೆಯಿದೆ ಮತ್ತು ಇಲ್ಲಿ ಹೆಚ್ಚಿನ ದಲಿತ ಕುಟುಂಬಗಳು ತುಂಡು ಭೂಮಿಯಿರುವ ರೈತರು.


ಇದನ್ನೂ ಓದಿ: ಮಧ್ಯಪ್ರದೇಶದ ದಲಿತ ದಂಪತಿಯ ಮೇಲಿನ ಅಮಾನವೀಯ ಹಲ್ಲೆಗೆ ತೀವ್ರ ಖಂಡನೆ: ಡಿಸಿ, ಎಸ್ಪಿ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...