Homeಮುಖಪುಟಮಹಾರಾಷ್ಟ್ರದ ಪನ್ಶೇಂದ್ರ ಗ್ರಾಮದ ದಲಿತರ ಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಒತ್ತಾಯ

ಮಹಾರಾಷ್ಟ್ರದ ಪನ್ಶೇಂದ್ರ ಗ್ರಾಮದ ದಲಿತರ ಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಒತ್ತಾಯ

ನಾವು ಮೊದಲೇ ದೂರು ಕೊಟ್ಟಾಗ ಪೊಲೀಸರು ಗಂಭೀರವಾಗಿ ಪರಿಗಣಿಸದೇ ಹೋದದ್ದು, ಸೆ.4ರ ರಕ್ತಸಿಕ್ತ ದಾಳಿಗೆ ಕಾರಣವಾಯಿತು. ಎರಡುವಾರ ಸಂಚುಹಾಕಿ ದಾಳಿ ಮಾಡಿದ್ದಾರೆ ಎಂದು ಕುಟುಂಬವರ್ಗ ತಿಳಿಸಿದೆ.

- Advertisement -
- Advertisement -

ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ಪನ್ಶೇಂದ್ರ ಗ್ರಾಮದಲ್ಲಿ ನಡೆದ, ಇಬ್ಬರು ದಲಿತರ ಹತ್ಯೆಯನ್ನು ಸಿಬಿಐ ತನಿಖೆಗೆ ನೀಡುವಂತೆ, ಹತ್ಯೆ ನಡೆದ 12 ದಿನಗಳ ಬಳಿಕ  ಕುಟುಂಬಸ್ಥರು ಒತ್ತಾಯಿಸಿದ್ದಾರೆ. ಮೃತ ರಾಹುಲ್ ಬೋರಾಡೆ ಮತ್ತು ಪ್ರದೀಪ್ ಬೋರಾಡೆ ಸಂಬಂಧಿಕರು ಮತ್ತು ಜಾತಿ ವಿರೋಧಿ ಸಂಘಟನೆ ಕಾರ್ಯಕರ್ತರು ಇದೊಂದು ಯೋಜಿತ ದಾಳಿ ಎಂದು ಆರೋಪಿಸಿದ್ದಾರೆ.

22 ವರ್ಷದ ರಾಹುಲ್ ಬೋರಾಡೆ ಮತ್ತು 25 ವರ್ಷದ ಪ್ರದೀಪ್ ಬೋರಾಡೆ ಎಂಬ ಇಬ್ಬರು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿದ್ದು, ದೀರ್ಘಕಾಲದ ಭೂ ವಿವಾದಕ್ಕೆ ಸಂಬಂಧಿಸಿದ ದಾಳಿಯಲ್ಲಿ 50 ಕ್ಕೂ ಹೆಚ್ಚು ಜನರ ಗುಂಪಿನಿಂದ ಸೆಪ್ಟೆಂಬರ್ 4 ರಂದು ಇವರ ಮೇಲೆ ಹಲ್ಲೆ ನಡೆಸಲಾಗಿತ್ತು. ಹಲ್ಲೆಯಲ್ಲಿ ಈ ಇಬ್ಬರು ಮೃತಪಟ್ಟಿದ್ದರು.

ಇದೇ ದಾಳಿಯಲ್ಲಿ ಮೃತರ ಸಹೋದರ ರಾಮೇಶ್ವರ ಮತ್ತು ತಾಯಿ ನರ್ಮದಾ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ. ಈಗ ಇಬ್ಬರೂ ಜಲ್ನಾ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಹುಲ್ ಮತ್ತು ಪ್ರದೀಪ್ ಬೋರಾಡೆ ಅವರ ಸಂಬಂಧಿಕರು ಈ ಕೊಲೆಗಳನ್ನು ಯೋಜಿತ ದಾಳಿ ಎಂದು ಕರೆದಿದ್ದಾರೆ.

ಇದನ್ನೂ ಓದಿ: ತಮ್ಮ ಭೂಮಿ ಆಕ್ರಮಿಸಿದ್ದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಕ್ಕೆ ದಲಿತ ಯುವಕನ ಹತ್ಯೆ

ಸದ್ಯ ಜಲ್ನಾ ಪೊಲೀಸರು ಆರೋಪಿಗಳ ವಿರುದ್ಧ, ಕೊಲೆ ಮತ್ತು ಕೊಲೆ ಯತ್ನಕ್ಕಾಗಿ ಐಪಿಸಿಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ, ಈವರೆಗೆ 25 ಜನರನ್ನು ಬಂಧಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸುತ್ತಿರುವ ಉಪ-ವಿಭಾಗೀಯ ಪೊಲೀಸ್ ಅಧಿಕಾರಿ ಸುಧೀರ್ ಖಿರಾದ್ಕರ್, “ಸಂತ್ರಸ್ತರ ಕುಟುಂಬದಿಂದ ಹೆಸರಿಸಲ್ಪಟ್ಟ ಇನ್ನೂ ಐದು ಜನರನ್ನು ಹುಡುಕುವ ಹಂತದಲ್ಲಿದ್ದೇವೆ” ಎಂದು ಹೇಳಿದ್ದಾರೆ.

“ಘಟನೆ ನಡೆದ ಕೂಡಲೇ ಆರೋಪಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ನಾವು ಕಾರಣವನ್ನು ಕಂಡುಹಿಡಿಯುವ ಪ್ರಕ್ರಿಯೆಯಲ್ಲಿದ್ದೇವೆ” ಎಂದು ಖಿರಾದ್ಕರ್ ತಿಳಿಸಿದ್ದಾರೆ ಎಂದು ದಿ ವೈರ್  ವರದಿ ಮಾಡಿದೆ.

ಇದನ್ನೂ ಓದಿ: ಬುಡಕಟ್ಟು ಹೆಣ್ಣುಮಕ್ಕಳ ಮೇಲೆ ಸಾಮೂಹಿಕ ಅತ್ಯಾಚಾರ: ಆತ್ಮಹತ್ಯೆ; ಒಬ್ಬ ಬಾಲಕಿ ಸಾವು!

ಸೆಪ್ಟೆಂಬರ್ 4 ರಂದು, ಬೆಳಿಗ್ಗೆ 6 ಗಂಟೆ ಸುಮಾರಿಗೆ, ಬೋರಾಡ್ಸ್ ತಮ್ಮ ಮನೆಯಿಂದ ಬೆಳಗ್ಗಿನ ನಿತ್ಯಕರ್ಮಗಳಿಗಾಗಿ ಹೊರಟಿದ್ದಾಗ, ಅವರ ಮೇಲೆ 50ಕ್ಕೂ ಹೆಚ್ಚು ಜನರ ಗುಂಪು ಹಲ್ಲೆ ನಡೆಸಿತು. ಸಂತ್ರಸ್ತರ ಕುಟುಂಬದ ಪ್ರಕಾರ ಭಿಲ್ ಸಮುದಾಯದೊಂದಿಗಿನ ವಿವಾದದಿಂದ ಈ ಸಮಸ್ಯೆ ಉದ್ಭವಿಸಿದೆ ಎಂದು ಹೇಳಿಕೊಂಡಿದೆ.

ಆಗಸ್ಟ್ 17ರಂದು ಭಿಲ್ ಸಮುದಾಯದ ಹಬ್ಬವೊಂದರಲ್ಲಿ ಮೃತ ರಾಹುಲ್ ಮತ್ತು ಆರೋಪಿಗಳ ನಡುವೆ ವಾದ-ವಿವಾದಗಳಿಂದ ಜಗಳ ಉಂಟಾಗಿ, ಕೆಲವರು ರಾಹುಲ್‌ನನ್ನು ಥಳಿಸಿದ್ದರು ಎಂದು ರಾಹುಲ್ ಚಿಕ್ಕಪ್ಪ ತುಕಾರಂ ಕಹಳೆ ಹೇಳಿದ್ದಾರೆ.

PC: The Wire (ಮೃತ ರಾಹುಲ್ ಮತ್ತು ಪ್ರದೀಪ್ ಬೋರಾಡೆ ಅವರ ಮನೆ)

ಇದನ್ನೂ ಓದಿ: 16 ನಿಮಿಷಕ್ಕೊಮ್ಮೆ ದಲಿತರ ವಿರುದ್ಧ ದೌರ್ಜನ್ಯ, ಪ್ರತಿನಿತ್ಯ 6 ದಲಿತ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ

“ನಾವು ಮೊದಲೇ ದೂರು ಕೊಟ್ಟಾಗ ಪೊಲೀಸರು ಗಂಭೀರವಾಗಿ ಪರಿಗಣಿಸದಿದ್ದದ್ದು, ಸೆಪ್ಟೆಂಬರ್ 4 ರ ರಕ್ತಸಿಕ್ತ ದಾಳಿಗೆ ಕಾರಣವಾಯಿತು. ಎರಡು ವಾರ ಸಂಚು ರೂಪಿಸಿ ದಾಳಿ ಮಾಡಿದ್ದಾರೆ. ಇಲ್ಲಿನ ಹಿಂಸಾಚಾರಕ್ಕೆ ಸುಧೀರ್ಘ ಇತಿಹಾಸವಿದೆ. ಪೊಲೀಸರು ಇದರ ಬಗ್ಗೆ ಸರಿಯಾಗಿ ಗಮನಹರಿಸಿ, ಪ್ರಕರಣವನ್ನು ತನಿಖೆ ಮಾಡಲಾಗುವುದಿಲ್ಲ. ಆದ್ದರಿಂದಲೇ ನಿಷ್ಪಕ್ಷಪಾತ ತನಿಖೆಗಾಗಿ ಸಿಬಿಐಗೆ ಒತ್ತಾಯಿಸುತ್ತಿದ್ದೇವೆ ಎಂದು ತುಕಾರಂ ಕಹಳೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ದಲಿತನೊಬ್ಬ ಗ್ರಾ.ಪಂ ಮುಖ್ಯಸ್ಥನಾದುದ್ದನ್ನು ಸಹಿಸದ ಮೇಲ್ಜಾತಿಗಳು: ಗುಂಡಿಕ್ಕಿ ಕೊಲೆ

ಬೋರಾಡೆ ಕುಟುಂಬವು ಹಲವು ವರ್ಷಗಳಿಂದ ಭೂಮಿ ಹೊಂದಿದ್ದು, ಅದು ಹಳ್ಳಿಯ ಬೇರೆ ದಲಿತರಿಗೂ ಪ್ರೋತ್ಸಾಹ ಸಿಕ್ಕಂತಾಗಿ ಅವರೂ ಭೂಮಿ ಹೊಂದಲು ಪ್ರಾರಂಭಿಸಿದ್ದರು. ಇದು ಭೂ ವಿವಾದಗಳಿಗೆ ಕಾರಣವಾಯಿತು ಎಂದು ಬೋರಾಡೆ ಸಂಬಂಧಿಕರು ತಿಳಿಸಿದ್ದಾರೆ.

“ಲ್ಯಾಂಡ್ ಮಾಫಿಯಾಗಳ ಮೂಲಕ ಬೆದರಿಕೆ ಹಾಕಿಸಿ, ಭೂಮಿಯನ್ನು ಬಿಟ್ಟುಕೊಡಬೇಕೆಂದು ಒತ್ತಾಯಿಸಿದ್ದರು. ಕಳೆದ ಮೂರು ವರ್ಷಗಳಿಂದ ಅವರು ನಮಗೆ ತೊಂದರೆ ಕೊಡುತ್ತಿದ್ದಾರೆ” ಎಂದು ಮೃತರ ಕುಟುಂಬದ ಸದಸ್ಯರೊಬ್ಬರು ಆರೋಪಿಸಿದ್ದಾರೆ.

ಇವರು ವಾಸಿಸುತ್ತಿದ್ದ ಪನ್ಶೇಂದ್ರ ಗ್ರಾಮದಲ್ಲಿ ಸುಮಾರು 350 ಮನೆಗಳಿವೆ. ಅವುಗಳಲ್ಲಿ, 20% ಕ್ಕೂ ಹೆಚ್ಚು ಮನೆಗಳು ಭಿಲ್ ಸಮುದಾಯಕ್ಕೆ ಸೇರಿವೆ, ಸುಮಾರು 8% ಬೌದ್ಧರು (ಬೋರಾಡೆಗಳು ಸಹ ಬೌದ್ಧರು) ಮತ್ತು ಕೆಲವು ಮರಾಠರು ಮತ್ತು ಅಲೆಮಾರಿ ಸಮುದಾಯಗಳಿಗೆ ಸೇರಿದವರು ಇದ್ದಾರೆ. ಗ್ರಾಮದಲ್ಲಿ ಸಾಕ್ಷರತೆಯ ಪ್ರಮಾಣ 70% ಕ್ಕಿಂತ ಕಡಿಮೆಯಿದೆ ಮತ್ತು ಇಲ್ಲಿ ಹೆಚ್ಚಿನ ದಲಿತ ಕುಟುಂಬಗಳು ತುಂಡು ಭೂಮಿಯಿರುವ ರೈತರು.


ಇದನ್ನೂ ಓದಿ: ಮಧ್ಯಪ್ರದೇಶದ ದಲಿತ ದಂಪತಿಯ ಮೇಲಿನ ಅಮಾನವೀಯ ಹಲ್ಲೆಗೆ ತೀವ್ರ ಖಂಡನೆ: ಡಿಸಿ, ಎಸ್ಪಿ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...