Homeಮುಖಪುಟಮಹಾರಾಷ್ಟ್ರದ ಪನ್ಶೇಂದ್ರ ಗ್ರಾಮದ ದಲಿತರ ಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಒತ್ತಾಯ

ಮಹಾರಾಷ್ಟ್ರದ ಪನ್ಶೇಂದ್ರ ಗ್ರಾಮದ ದಲಿತರ ಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಒತ್ತಾಯ

ನಾವು ಮೊದಲೇ ದೂರು ಕೊಟ್ಟಾಗ ಪೊಲೀಸರು ಗಂಭೀರವಾಗಿ ಪರಿಗಣಿಸದೇ ಹೋದದ್ದು, ಸೆ.4ರ ರಕ್ತಸಿಕ್ತ ದಾಳಿಗೆ ಕಾರಣವಾಯಿತು. ಎರಡುವಾರ ಸಂಚುಹಾಕಿ ದಾಳಿ ಮಾಡಿದ್ದಾರೆ ಎಂದು ಕುಟುಂಬವರ್ಗ ತಿಳಿಸಿದೆ.

- Advertisement -
- Advertisement -

ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ಪನ್ಶೇಂದ್ರ ಗ್ರಾಮದಲ್ಲಿ ನಡೆದ, ಇಬ್ಬರು ದಲಿತರ ಹತ್ಯೆಯನ್ನು ಸಿಬಿಐ ತನಿಖೆಗೆ ನೀಡುವಂತೆ, ಹತ್ಯೆ ನಡೆದ 12 ದಿನಗಳ ಬಳಿಕ  ಕುಟುಂಬಸ್ಥರು ಒತ್ತಾಯಿಸಿದ್ದಾರೆ. ಮೃತ ರಾಹುಲ್ ಬೋರಾಡೆ ಮತ್ತು ಪ್ರದೀಪ್ ಬೋರಾಡೆ ಸಂಬಂಧಿಕರು ಮತ್ತು ಜಾತಿ ವಿರೋಧಿ ಸಂಘಟನೆ ಕಾರ್ಯಕರ್ತರು ಇದೊಂದು ಯೋಜಿತ ದಾಳಿ ಎಂದು ಆರೋಪಿಸಿದ್ದಾರೆ.

22 ವರ್ಷದ ರಾಹುಲ್ ಬೋರಾಡೆ ಮತ್ತು 25 ವರ್ಷದ ಪ್ರದೀಪ್ ಬೋರಾಡೆ ಎಂಬ ಇಬ್ಬರು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿದ್ದು, ದೀರ್ಘಕಾಲದ ಭೂ ವಿವಾದಕ್ಕೆ ಸಂಬಂಧಿಸಿದ ದಾಳಿಯಲ್ಲಿ 50 ಕ್ಕೂ ಹೆಚ್ಚು ಜನರ ಗುಂಪಿನಿಂದ ಸೆಪ್ಟೆಂಬರ್ 4 ರಂದು ಇವರ ಮೇಲೆ ಹಲ್ಲೆ ನಡೆಸಲಾಗಿತ್ತು. ಹಲ್ಲೆಯಲ್ಲಿ ಈ ಇಬ್ಬರು ಮೃತಪಟ್ಟಿದ್ದರು.

ಇದೇ ದಾಳಿಯಲ್ಲಿ ಮೃತರ ಸಹೋದರ ರಾಮೇಶ್ವರ ಮತ್ತು ತಾಯಿ ನರ್ಮದಾ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ. ಈಗ ಇಬ್ಬರೂ ಜಲ್ನಾ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಹುಲ್ ಮತ್ತು ಪ್ರದೀಪ್ ಬೋರಾಡೆ ಅವರ ಸಂಬಂಧಿಕರು ಈ ಕೊಲೆಗಳನ್ನು ಯೋಜಿತ ದಾಳಿ ಎಂದು ಕರೆದಿದ್ದಾರೆ.

ಇದನ್ನೂ ಓದಿ: ತಮ್ಮ ಭೂಮಿ ಆಕ್ರಮಿಸಿದ್ದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಕ್ಕೆ ದಲಿತ ಯುವಕನ ಹತ್ಯೆ

ಸದ್ಯ ಜಲ್ನಾ ಪೊಲೀಸರು ಆರೋಪಿಗಳ ವಿರುದ್ಧ, ಕೊಲೆ ಮತ್ತು ಕೊಲೆ ಯತ್ನಕ್ಕಾಗಿ ಐಪಿಸಿಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ, ಈವರೆಗೆ 25 ಜನರನ್ನು ಬಂಧಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸುತ್ತಿರುವ ಉಪ-ವಿಭಾಗೀಯ ಪೊಲೀಸ್ ಅಧಿಕಾರಿ ಸುಧೀರ್ ಖಿರಾದ್ಕರ್, “ಸಂತ್ರಸ್ತರ ಕುಟುಂಬದಿಂದ ಹೆಸರಿಸಲ್ಪಟ್ಟ ಇನ್ನೂ ಐದು ಜನರನ್ನು ಹುಡುಕುವ ಹಂತದಲ್ಲಿದ್ದೇವೆ” ಎಂದು ಹೇಳಿದ್ದಾರೆ.

“ಘಟನೆ ನಡೆದ ಕೂಡಲೇ ಆರೋಪಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ನಾವು ಕಾರಣವನ್ನು ಕಂಡುಹಿಡಿಯುವ ಪ್ರಕ್ರಿಯೆಯಲ್ಲಿದ್ದೇವೆ” ಎಂದು ಖಿರಾದ್ಕರ್ ತಿಳಿಸಿದ್ದಾರೆ ಎಂದು ದಿ ವೈರ್  ವರದಿ ಮಾಡಿದೆ.

ಇದನ್ನೂ ಓದಿ: ಬುಡಕಟ್ಟು ಹೆಣ್ಣುಮಕ್ಕಳ ಮೇಲೆ ಸಾಮೂಹಿಕ ಅತ್ಯಾಚಾರ: ಆತ್ಮಹತ್ಯೆ; ಒಬ್ಬ ಬಾಲಕಿ ಸಾವು!

ಸೆಪ್ಟೆಂಬರ್ 4 ರಂದು, ಬೆಳಿಗ್ಗೆ 6 ಗಂಟೆ ಸುಮಾರಿಗೆ, ಬೋರಾಡ್ಸ್ ತಮ್ಮ ಮನೆಯಿಂದ ಬೆಳಗ್ಗಿನ ನಿತ್ಯಕರ್ಮಗಳಿಗಾಗಿ ಹೊರಟಿದ್ದಾಗ, ಅವರ ಮೇಲೆ 50ಕ್ಕೂ ಹೆಚ್ಚು ಜನರ ಗುಂಪು ಹಲ್ಲೆ ನಡೆಸಿತು. ಸಂತ್ರಸ್ತರ ಕುಟುಂಬದ ಪ್ರಕಾರ ಭಿಲ್ ಸಮುದಾಯದೊಂದಿಗಿನ ವಿವಾದದಿಂದ ಈ ಸಮಸ್ಯೆ ಉದ್ಭವಿಸಿದೆ ಎಂದು ಹೇಳಿಕೊಂಡಿದೆ.

ಆಗಸ್ಟ್ 17ರಂದು ಭಿಲ್ ಸಮುದಾಯದ ಹಬ್ಬವೊಂದರಲ್ಲಿ ಮೃತ ರಾಹುಲ್ ಮತ್ತು ಆರೋಪಿಗಳ ನಡುವೆ ವಾದ-ವಿವಾದಗಳಿಂದ ಜಗಳ ಉಂಟಾಗಿ, ಕೆಲವರು ರಾಹುಲ್‌ನನ್ನು ಥಳಿಸಿದ್ದರು ಎಂದು ರಾಹುಲ್ ಚಿಕ್ಕಪ್ಪ ತುಕಾರಂ ಕಹಳೆ ಹೇಳಿದ್ದಾರೆ.

PC: The Wire (ಮೃತ ರಾಹುಲ್ ಮತ್ತು ಪ್ರದೀಪ್ ಬೋರಾಡೆ ಅವರ ಮನೆ)

ಇದನ್ನೂ ಓದಿ: 16 ನಿಮಿಷಕ್ಕೊಮ್ಮೆ ದಲಿತರ ವಿರುದ್ಧ ದೌರ್ಜನ್ಯ, ಪ್ರತಿನಿತ್ಯ 6 ದಲಿತ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ

“ನಾವು ಮೊದಲೇ ದೂರು ಕೊಟ್ಟಾಗ ಪೊಲೀಸರು ಗಂಭೀರವಾಗಿ ಪರಿಗಣಿಸದಿದ್ದದ್ದು, ಸೆಪ್ಟೆಂಬರ್ 4 ರ ರಕ್ತಸಿಕ್ತ ದಾಳಿಗೆ ಕಾರಣವಾಯಿತು. ಎರಡು ವಾರ ಸಂಚು ರೂಪಿಸಿ ದಾಳಿ ಮಾಡಿದ್ದಾರೆ. ಇಲ್ಲಿನ ಹಿಂಸಾಚಾರಕ್ಕೆ ಸುಧೀರ್ಘ ಇತಿಹಾಸವಿದೆ. ಪೊಲೀಸರು ಇದರ ಬಗ್ಗೆ ಸರಿಯಾಗಿ ಗಮನಹರಿಸಿ, ಪ್ರಕರಣವನ್ನು ತನಿಖೆ ಮಾಡಲಾಗುವುದಿಲ್ಲ. ಆದ್ದರಿಂದಲೇ ನಿಷ್ಪಕ್ಷಪಾತ ತನಿಖೆಗಾಗಿ ಸಿಬಿಐಗೆ ಒತ್ತಾಯಿಸುತ್ತಿದ್ದೇವೆ ಎಂದು ತುಕಾರಂ ಕಹಳೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ದಲಿತನೊಬ್ಬ ಗ್ರಾ.ಪಂ ಮುಖ್ಯಸ್ಥನಾದುದ್ದನ್ನು ಸಹಿಸದ ಮೇಲ್ಜಾತಿಗಳು: ಗುಂಡಿಕ್ಕಿ ಕೊಲೆ

ಬೋರಾಡೆ ಕುಟುಂಬವು ಹಲವು ವರ್ಷಗಳಿಂದ ಭೂಮಿ ಹೊಂದಿದ್ದು, ಅದು ಹಳ್ಳಿಯ ಬೇರೆ ದಲಿತರಿಗೂ ಪ್ರೋತ್ಸಾಹ ಸಿಕ್ಕಂತಾಗಿ ಅವರೂ ಭೂಮಿ ಹೊಂದಲು ಪ್ರಾರಂಭಿಸಿದ್ದರು. ಇದು ಭೂ ವಿವಾದಗಳಿಗೆ ಕಾರಣವಾಯಿತು ಎಂದು ಬೋರಾಡೆ ಸಂಬಂಧಿಕರು ತಿಳಿಸಿದ್ದಾರೆ.

“ಲ್ಯಾಂಡ್ ಮಾಫಿಯಾಗಳ ಮೂಲಕ ಬೆದರಿಕೆ ಹಾಕಿಸಿ, ಭೂಮಿಯನ್ನು ಬಿಟ್ಟುಕೊಡಬೇಕೆಂದು ಒತ್ತಾಯಿಸಿದ್ದರು. ಕಳೆದ ಮೂರು ವರ್ಷಗಳಿಂದ ಅವರು ನಮಗೆ ತೊಂದರೆ ಕೊಡುತ್ತಿದ್ದಾರೆ” ಎಂದು ಮೃತರ ಕುಟುಂಬದ ಸದಸ್ಯರೊಬ್ಬರು ಆರೋಪಿಸಿದ್ದಾರೆ.

ಇವರು ವಾಸಿಸುತ್ತಿದ್ದ ಪನ್ಶೇಂದ್ರ ಗ್ರಾಮದಲ್ಲಿ ಸುಮಾರು 350 ಮನೆಗಳಿವೆ. ಅವುಗಳಲ್ಲಿ, 20% ಕ್ಕೂ ಹೆಚ್ಚು ಮನೆಗಳು ಭಿಲ್ ಸಮುದಾಯಕ್ಕೆ ಸೇರಿವೆ, ಸುಮಾರು 8% ಬೌದ್ಧರು (ಬೋರಾಡೆಗಳು ಸಹ ಬೌದ್ಧರು) ಮತ್ತು ಕೆಲವು ಮರಾಠರು ಮತ್ತು ಅಲೆಮಾರಿ ಸಮುದಾಯಗಳಿಗೆ ಸೇರಿದವರು ಇದ್ದಾರೆ. ಗ್ರಾಮದಲ್ಲಿ ಸಾಕ್ಷರತೆಯ ಪ್ರಮಾಣ 70% ಕ್ಕಿಂತ ಕಡಿಮೆಯಿದೆ ಮತ್ತು ಇಲ್ಲಿ ಹೆಚ್ಚಿನ ದಲಿತ ಕುಟುಂಬಗಳು ತುಂಡು ಭೂಮಿಯಿರುವ ರೈತರು.


ಇದನ್ನೂ ಓದಿ: ಮಧ್ಯಪ್ರದೇಶದ ದಲಿತ ದಂಪತಿಯ ಮೇಲಿನ ಅಮಾನವೀಯ ಹಲ್ಲೆಗೆ ತೀವ್ರ ಖಂಡನೆ: ಡಿಸಿ, ಎಸ್ಪಿ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...