Homeಮುಖಪುಟಮಹಾರಾಷ್ಟ್ರದ ಪನ್ಶೇಂದ್ರ ಗ್ರಾಮದ ದಲಿತರ ಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಒತ್ತಾಯ

ಮಹಾರಾಷ್ಟ್ರದ ಪನ್ಶೇಂದ್ರ ಗ್ರಾಮದ ದಲಿತರ ಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಒತ್ತಾಯ

ನಾವು ಮೊದಲೇ ದೂರು ಕೊಟ್ಟಾಗ ಪೊಲೀಸರು ಗಂಭೀರವಾಗಿ ಪರಿಗಣಿಸದೇ ಹೋದದ್ದು, ಸೆ.4ರ ರಕ್ತಸಿಕ್ತ ದಾಳಿಗೆ ಕಾರಣವಾಯಿತು. ಎರಡುವಾರ ಸಂಚುಹಾಕಿ ದಾಳಿ ಮಾಡಿದ್ದಾರೆ ಎಂದು ಕುಟುಂಬವರ್ಗ ತಿಳಿಸಿದೆ.

- Advertisement -
- Advertisement -

ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ಪನ್ಶೇಂದ್ರ ಗ್ರಾಮದಲ್ಲಿ ನಡೆದ, ಇಬ್ಬರು ದಲಿತರ ಹತ್ಯೆಯನ್ನು ಸಿಬಿಐ ತನಿಖೆಗೆ ನೀಡುವಂತೆ, ಹತ್ಯೆ ನಡೆದ 12 ದಿನಗಳ ಬಳಿಕ  ಕುಟುಂಬಸ್ಥರು ಒತ್ತಾಯಿಸಿದ್ದಾರೆ. ಮೃತ ರಾಹುಲ್ ಬೋರಾಡೆ ಮತ್ತು ಪ್ರದೀಪ್ ಬೋರಾಡೆ ಸಂಬಂಧಿಕರು ಮತ್ತು ಜಾತಿ ವಿರೋಧಿ ಸಂಘಟನೆ ಕಾರ್ಯಕರ್ತರು ಇದೊಂದು ಯೋಜಿತ ದಾಳಿ ಎಂದು ಆರೋಪಿಸಿದ್ದಾರೆ.

22 ವರ್ಷದ ರಾಹುಲ್ ಬೋರಾಡೆ ಮತ್ತು 25 ವರ್ಷದ ಪ್ರದೀಪ್ ಬೋರಾಡೆ ಎಂಬ ಇಬ್ಬರು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿದ್ದು, ದೀರ್ಘಕಾಲದ ಭೂ ವಿವಾದಕ್ಕೆ ಸಂಬಂಧಿಸಿದ ದಾಳಿಯಲ್ಲಿ 50 ಕ್ಕೂ ಹೆಚ್ಚು ಜನರ ಗುಂಪಿನಿಂದ ಸೆಪ್ಟೆಂಬರ್ 4 ರಂದು ಇವರ ಮೇಲೆ ಹಲ್ಲೆ ನಡೆಸಲಾಗಿತ್ತು. ಹಲ್ಲೆಯಲ್ಲಿ ಈ ಇಬ್ಬರು ಮೃತಪಟ್ಟಿದ್ದರು.

ಇದೇ ದಾಳಿಯಲ್ಲಿ ಮೃತರ ಸಹೋದರ ರಾಮೇಶ್ವರ ಮತ್ತು ತಾಯಿ ನರ್ಮದಾ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ. ಈಗ ಇಬ್ಬರೂ ಜಲ್ನಾ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಹುಲ್ ಮತ್ತು ಪ್ರದೀಪ್ ಬೋರಾಡೆ ಅವರ ಸಂಬಂಧಿಕರು ಈ ಕೊಲೆಗಳನ್ನು ಯೋಜಿತ ದಾಳಿ ಎಂದು ಕರೆದಿದ್ದಾರೆ.

ಇದನ್ನೂ ಓದಿ: ತಮ್ಮ ಭೂಮಿ ಆಕ್ರಮಿಸಿದ್ದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಕ್ಕೆ ದಲಿತ ಯುವಕನ ಹತ್ಯೆ

ಸದ್ಯ ಜಲ್ನಾ ಪೊಲೀಸರು ಆರೋಪಿಗಳ ವಿರುದ್ಧ, ಕೊಲೆ ಮತ್ತು ಕೊಲೆ ಯತ್ನಕ್ಕಾಗಿ ಐಪಿಸಿಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ, ಈವರೆಗೆ 25 ಜನರನ್ನು ಬಂಧಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸುತ್ತಿರುವ ಉಪ-ವಿಭಾಗೀಯ ಪೊಲೀಸ್ ಅಧಿಕಾರಿ ಸುಧೀರ್ ಖಿರಾದ್ಕರ್, “ಸಂತ್ರಸ್ತರ ಕುಟುಂಬದಿಂದ ಹೆಸರಿಸಲ್ಪಟ್ಟ ಇನ್ನೂ ಐದು ಜನರನ್ನು ಹುಡುಕುವ ಹಂತದಲ್ಲಿದ್ದೇವೆ” ಎಂದು ಹೇಳಿದ್ದಾರೆ.

“ಘಟನೆ ನಡೆದ ಕೂಡಲೇ ಆರೋಪಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ನಾವು ಕಾರಣವನ್ನು ಕಂಡುಹಿಡಿಯುವ ಪ್ರಕ್ರಿಯೆಯಲ್ಲಿದ್ದೇವೆ” ಎಂದು ಖಿರಾದ್ಕರ್ ತಿಳಿಸಿದ್ದಾರೆ ಎಂದು ದಿ ವೈರ್  ವರದಿ ಮಾಡಿದೆ.

ಇದನ್ನೂ ಓದಿ: ಬುಡಕಟ್ಟು ಹೆಣ್ಣುಮಕ್ಕಳ ಮೇಲೆ ಸಾಮೂಹಿಕ ಅತ್ಯಾಚಾರ: ಆತ್ಮಹತ್ಯೆ; ಒಬ್ಬ ಬಾಲಕಿ ಸಾವು!

ಸೆಪ್ಟೆಂಬರ್ 4 ರಂದು, ಬೆಳಿಗ್ಗೆ 6 ಗಂಟೆ ಸುಮಾರಿಗೆ, ಬೋರಾಡ್ಸ್ ತಮ್ಮ ಮನೆಯಿಂದ ಬೆಳಗ್ಗಿನ ನಿತ್ಯಕರ್ಮಗಳಿಗಾಗಿ ಹೊರಟಿದ್ದಾಗ, ಅವರ ಮೇಲೆ 50ಕ್ಕೂ ಹೆಚ್ಚು ಜನರ ಗುಂಪು ಹಲ್ಲೆ ನಡೆಸಿತು. ಸಂತ್ರಸ್ತರ ಕುಟುಂಬದ ಪ್ರಕಾರ ಭಿಲ್ ಸಮುದಾಯದೊಂದಿಗಿನ ವಿವಾದದಿಂದ ಈ ಸಮಸ್ಯೆ ಉದ್ಭವಿಸಿದೆ ಎಂದು ಹೇಳಿಕೊಂಡಿದೆ.

ಆಗಸ್ಟ್ 17ರಂದು ಭಿಲ್ ಸಮುದಾಯದ ಹಬ್ಬವೊಂದರಲ್ಲಿ ಮೃತ ರಾಹುಲ್ ಮತ್ತು ಆರೋಪಿಗಳ ನಡುವೆ ವಾದ-ವಿವಾದಗಳಿಂದ ಜಗಳ ಉಂಟಾಗಿ, ಕೆಲವರು ರಾಹುಲ್‌ನನ್ನು ಥಳಿಸಿದ್ದರು ಎಂದು ರಾಹುಲ್ ಚಿಕ್ಕಪ್ಪ ತುಕಾರಂ ಕಹಳೆ ಹೇಳಿದ್ದಾರೆ.

PC: The Wire (ಮೃತ ರಾಹುಲ್ ಮತ್ತು ಪ್ರದೀಪ್ ಬೋರಾಡೆ ಅವರ ಮನೆ)

ಇದನ್ನೂ ಓದಿ: 16 ನಿಮಿಷಕ್ಕೊಮ್ಮೆ ದಲಿತರ ವಿರುದ್ಧ ದೌರ್ಜನ್ಯ, ಪ್ರತಿನಿತ್ಯ 6 ದಲಿತ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ

“ನಾವು ಮೊದಲೇ ದೂರು ಕೊಟ್ಟಾಗ ಪೊಲೀಸರು ಗಂಭೀರವಾಗಿ ಪರಿಗಣಿಸದಿದ್ದದ್ದು, ಸೆಪ್ಟೆಂಬರ್ 4 ರ ರಕ್ತಸಿಕ್ತ ದಾಳಿಗೆ ಕಾರಣವಾಯಿತು. ಎರಡು ವಾರ ಸಂಚು ರೂಪಿಸಿ ದಾಳಿ ಮಾಡಿದ್ದಾರೆ. ಇಲ್ಲಿನ ಹಿಂಸಾಚಾರಕ್ಕೆ ಸುಧೀರ್ಘ ಇತಿಹಾಸವಿದೆ. ಪೊಲೀಸರು ಇದರ ಬಗ್ಗೆ ಸರಿಯಾಗಿ ಗಮನಹರಿಸಿ, ಪ್ರಕರಣವನ್ನು ತನಿಖೆ ಮಾಡಲಾಗುವುದಿಲ್ಲ. ಆದ್ದರಿಂದಲೇ ನಿಷ್ಪಕ್ಷಪಾತ ತನಿಖೆಗಾಗಿ ಸಿಬಿಐಗೆ ಒತ್ತಾಯಿಸುತ್ತಿದ್ದೇವೆ ಎಂದು ತುಕಾರಂ ಕಹಳೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ದಲಿತನೊಬ್ಬ ಗ್ರಾ.ಪಂ ಮುಖ್ಯಸ್ಥನಾದುದ್ದನ್ನು ಸಹಿಸದ ಮೇಲ್ಜಾತಿಗಳು: ಗುಂಡಿಕ್ಕಿ ಕೊಲೆ

ಬೋರಾಡೆ ಕುಟುಂಬವು ಹಲವು ವರ್ಷಗಳಿಂದ ಭೂಮಿ ಹೊಂದಿದ್ದು, ಅದು ಹಳ್ಳಿಯ ಬೇರೆ ದಲಿತರಿಗೂ ಪ್ರೋತ್ಸಾಹ ಸಿಕ್ಕಂತಾಗಿ ಅವರೂ ಭೂಮಿ ಹೊಂದಲು ಪ್ರಾರಂಭಿಸಿದ್ದರು. ಇದು ಭೂ ವಿವಾದಗಳಿಗೆ ಕಾರಣವಾಯಿತು ಎಂದು ಬೋರಾಡೆ ಸಂಬಂಧಿಕರು ತಿಳಿಸಿದ್ದಾರೆ.

“ಲ್ಯಾಂಡ್ ಮಾಫಿಯಾಗಳ ಮೂಲಕ ಬೆದರಿಕೆ ಹಾಕಿಸಿ, ಭೂಮಿಯನ್ನು ಬಿಟ್ಟುಕೊಡಬೇಕೆಂದು ಒತ್ತಾಯಿಸಿದ್ದರು. ಕಳೆದ ಮೂರು ವರ್ಷಗಳಿಂದ ಅವರು ನಮಗೆ ತೊಂದರೆ ಕೊಡುತ್ತಿದ್ದಾರೆ” ಎಂದು ಮೃತರ ಕುಟುಂಬದ ಸದಸ್ಯರೊಬ್ಬರು ಆರೋಪಿಸಿದ್ದಾರೆ.

ಇವರು ವಾಸಿಸುತ್ತಿದ್ದ ಪನ್ಶೇಂದ್ರ ಗ್ರಾಮದಲ್ಲಿ ಸುಮಾರು 350 ಮನೆಗಳಿವೆ. ಅವುಗಳಲ್ಲಿ, 20% ಕ್ಕೂ ಹೆಚ್ಚು ಮನೆಗಳು ಭಿಲ್ ಸಮುದಾಯಕ್ಕೆ ಸೇರಿವೆ, ಸುಮಾರು 8% ಬೌದ್ಧರು (ಬೋರಾಡೆಗಳು ಸಹ ಬೌದ್ಧರು) ಮತ್ತು ಕೆಲವು ಮರಾಠರು ಮತ್ತು ಅಲೆಮಾರಿ ಸಮುದಾಯಗಳಿಗೆ ಸೇರಿದವರು ಇದ್ದಾರೆ. ಗ್ರಾಮದಲ್ಲಿ ಸಾಕ್ಷರತೆಯ ಪ್ರಮಾಣ 70% ಕ್ಕಿಂತ ಕಡಿಮೆಯಿದೆ ಮತ್ತು ಇಲ್ಲಿ ಹೆಚ್ಚಿನ ದಲಿತ ಕುಟುಂಬಗಳು ತುಂಡು ಭೂಮಿಯಿರುವ ರೈತರು.


ಇದನ್ನೂ ಓದಿ: ಮಧ್ಯಪ್ರದೇಶದ ದಲಿತ ದಂಪತಿಯ ಮೇಲಿನ ಅಮಾನವೀಯ ಹಲ್ಲೆಗೆ ತೀವ್ರ ಖಂಡನೆ: ಡಿಸಿ, ಎಸ್ಪಿ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...