Homeಮುಖಪುಟಮಹಾರಾಷ್ಟ್ರದ ಪನ್ಶೇಂದ್ರ ಗ್ರಾಮದ ದಲಿತರ ಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಒತ್ತಾಯ

ಮಹಾರಾಷ್ಟ್ರದ ಪನ್ಶೇಂದ್ರ ಗ್ರಾಮದ ದಲಿತರ ಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಒತ್ತಾಯ

ನಾವು ಮೊದಲೇ ದೂರು ಕೊಟ್ಟಾಗ ಪೊಲೀಸರು ಗಂಭೀರವಾಗಿ ಪರಿಗಣಿಸದೇ ಹೋದದ್ದು, ಸೆ.4ರ ರಕ್ತಸಿಕ್ತ ದಾಳಿಗೆ ಕಾರಣವಾಯಿತು. ಎರಡುವಾರ ಸಂಚುಹಾಕಿ ದಾಳಿ ಮಾಡಿದ್ದಾರೆ ಎಂದು ಕುಟುಂಬವರ್ಗ ತಿಳಿಸಿದೆ.

- Advertisement -
- Advertisement -

ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ಪನ್ಶೇಂದ್ರ ಗ್ರಾಮದಲ್ಲಿ ನಡೆದ, ಇಬ್ಬರು ದಲಿತರ ಹತ್ಯೆಯನ್ನು ಸಿಬಿಐ ತನಿಖೆಗೆ ನೀಡುವಂತೆ, ಹತ್ಯೆ ನಡೆದ 12 ದಿನಗಳ ಬಳಿಕ  ಕುಟುಂಬಸ್ಥರು ಒತ್ತಾಯಿಸಿದ್ದಾರೆ. ಮೃತ ರಾಹುಲ್ ಬೋರಾಡೆ ಮತ್ತು ಪ್ರದೀಪ್ ಬೋರಾಡೆ ಸಂಬಂಧಿಕರು ಮತ್ತು ಜಾತಿ ವಿರೋಧಿ ಸಂಘಟನೆ ಕಾರ್ಯಕರ್ತರು ಇದೊಂದು ಯೋಜಿತ ದಾಳಿ ಎಂದು ಆರೋಪಿಸಿದ್ದಾರೆ.

22 ವರ್ಷದ ರಾಹುಲ್ ಬೋರಾಡೆ ಮತ್ತು 25 ವರ್ಷದ ಪ್ರದೀಪ್ ಬೋರಾಡೆ ಎಂಬ ಇಬ್ಬರು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿದ್ದು, ದೀರ್ಘಕಾಲದ ಭೂ ವಿವಾದಕ್ಕೆ ಸಂಬಂಧಿಸಿದ ದಾಳಿಯಲ್ಲಿ 50 ಕ್ಕೂ ಹೆಚ್ಚು ಜನರ ಗುಂಪಿನಿಂದ ಸೆಪ್ಟೆಂಬರ್ 4 ರಂದು ಇವರ ಮೇಲೆ ಹಲ್ಲೆ ನಡೆಸಲಾಗಿತ್ತು. ಹಲ್ಲೆಯಲ್ಲಿ ಈ ಇಬ್ಬರು ಮೃತಪಟ್ಟಿದ್ದರು.

ಇದೇ ದಾಳಿಯಲ್ಲಿ ಮೃತರ ಸಹೋದರ ರಾಮೇಶ್ವರ ಮತ್ತು ತಾಯಿ ನರ್ಮದಾ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ. ಈಗ ಇಬ್ಬರೂ ಜಲ್ನಾ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಹುಲ್ ಮತ್ತು ಪ್ರದೀಪ್ ಬೋರಾಡೆ ಅವರ ಸಂಬಂಧಿಕರು ಈ ಕೊಲೆಗಳನ್ನು ಯೋಜಿತ ದಾಳಿ ಎಂದು ಕರೆದಿದ್ದಾರೆ.

ಇದನ್ನೂ ಓದಿ: ತಮ್ಮ ಭೂಮಿ ಆಕ್ರಮಿಸಿದ್ದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಕ್ಕೆ ದಲಿತ ಯುವಕನ ಹತ್ಯೆ

ಸದ್ಯ ಜಲ್ನಾ ಪೊಲೀಸರು ಆರೋಪಿಗಳ ವಿರುದ್ಧ, ಕೊಲೆ ಮತ್ತು ಕೊಲೆ ಯತ್ನಕ್ಕಾಗಿ ಐಪಿಸಿಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ, ಈವರೆಗೆ 25 ಜನರನ್ನು ಬಂಧಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸುತ್ತಿರುವ ಉಪ-ವಿಭಾಗೀಯ ಪೊಲೀಸ್ ಅಧಿಕಾರಿ ಸುಧೀರ್ ಖಿರಾದ್ಕರ್, “ಸಂತ್ರಸ್ತರ ಕುಟುಂಬದಿಂದ ಹೆಸರಿಸಲ್ಪಟ್ಟ ಇನ್ನೂ ಐದು ಜನರನ್ನು ಹುಡುಕುವ ಹಂತದಲ್ಲಿದ್ದೇವೆ” ಎಂದು ಹೇಳಿದ್ದಾರೆ.

“ಘಟನೆ ನಡೆದ ಕೂಡಲೇ ಆರೋಪಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ನಾವು ಕಾರಣವನ್ನು ಕಂಡುಹಿಡಿಯುವ ಪ್ರಕ್ರಿಯೆಯಲ್ಲಿದ್ದೇವೆ” ಎಂದು ಖಿರಾದ್ಕರ್ ತಿಳಿಸಿದ್ದಾರೆ ಎಂದು ದಿ ವೈರ್  ವರದಿ ಮಾಡಿದೆ.

ಇದನ್ನೂ ಓದಿ: ಬುಡಕಟ್ಟು ಹೆಣ್ಣುಮಕ್ಕಳ ಮೇಲೆ ಸಾಮೂಹಿಕ ಅತ್ಯಾಚಾರ: ಆತ್ಮಹತ್ಯೆ; ಒಬ್ಬ ಬಾಲಕಿ ಸಾವು!

ಸೆಪ್ಟೆಂಬರ್ 4 ರಂದು, ಬೆಳಿಗ್ಗೆ 6 ಗಂಟೆ ಸುಮಾರಿಗೆ, ಬೋರಾಡ್ಸ್ ತಮ್ಮ ಮನೆಯಿಂದ ಬೆಳಗ್ಗಿನ ನಿತ್ಯಕರ್ಮಗಳಿಗಾಗಿ ಹೊರಟಿದ್ದಾಗ, ಅವರ ಮೇಲೆ 50ಕ್ಕೂ ಹೆಚ್ಚು ಜನರ ಗುಂಪು ಹಲ್ಲೆ ನಡೆಸಿತು. ಸಂತ್ರಸ್ತರ ಕುಟುಂಬದ ಪ್ರಕಾರ ಭಿಲ್ ಸಮುದಾಯದೊಂದಿಗಿನ ವಿವಾದದಿಂದ ಈ ಸಮಸ್ಯೆ ಉದ್ಭವಿಸಿದೆ ಎಂದು ಹೇಳಿಕೊಂಡಿದೆ.

ಆಗಸ್ಟ್ 17ರಂದು ಭಿಲ್ ಸಮುದಾಯದ ಹಬ್ಬವೊಂದರಲ್ಲಿ ಮೃತ ರಾಹುಲ್ ಮತ್ತು ಆರೋಪಿಗಳ ನಡುವೆ ವಾದ-ವಿವಾದಗಳಿಂದ ಜಗಳ ಉಂಟಾಗಿ, ಕೆಲವರು ರಾಹುಲ್‌ನನ್ನು ಥಳಿಸಿದ್ದರು ಎಂದು ರಾಹುಲ್ ಚಿಕ್ಕಪ್ಪ ತುಕಾರಂ ಕಹಳೆ ಹೇಳಿದ್ದಾರೆ.

PC: The Wire (ಮೃತ ರಾಹುಲ್ ಮತ್ತು ಪ್ರದೀಪ್ ಬೋರಾಡೆ ಅವರ ಮನೆ)

ಇದನ್ನೂ ಓದಿ: 16 ನಿಮಿಷಕ್ಕೊಮ್ಮೆ ದಲಿತರ ವಿರುದ್ಧ ದೌರ್ಜನ್ಯ, ಪ್ರತಿನಿತ್ಯ 6 ದಲಿತ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ

“ನಾವು ಮೊದಲೇ ದೂರು ಕೊಟ್ಟಾಗ ಪೊಲೀಸರು ಗಂಭೀರವಾಗಿ ಪರಿಗಣಿಸದಿದ್ದದ್ದು, ಸೆಪ್ಟೆಂಬರ್ 4 ರ ರಕ್ತಸಿಕ್ತ ದಾಳಿಗೆ ಕಾರಣವಾಯಿತು. ಎರಡು ವಾರ ಸಂಚು ರೂಪಿಸಿ ದಾಳಿ ಮಾಡಿದ್ದಾರೆ. ಇಲ್ಲಿನ ಹಿಂಸಾಚಾರಕ್ಕೆ ಸುಧೀರ್ಘ ಇತಿಹಾಸವಿದೆ. ಪೊಲೀಸರು ಇದರ ಬಗ್ಗೆ ಸರಿಯಾಗಿ ಗಮನಹರಿಸಿ, ಪ್ರಕರಣವನ್ನು ತನಿಖೆ ಮಾಡಲಾಗುವುದಿಲ್ಲ. ಆದ್ದರಿಂದಲೇ ನಿಷ್ಪಕ್ಷಪಾತ ತನಿಖೆಗಾಗಿ ಸಿಬಿಐಗೆ ಒತ್ತಾಯಿಸುತ್ತಿದ್ದೇವೆ ಎಂದು ತುಕಾರಂ ಕಹಳೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ದಲಿತನೊಬ್ಬ ಗ್ರಾ.ಪಂ ಮುಖ್ಯಸ್ಥನಾದುದ್ದನ್ನು ಸಹಿಸದ ಮೇಲ್ಜಾತಿಗಳು: ಗುಂಡಿಕ್ಕಿ ಕೊಲೆ

ಬೋರಾಡೆ ಕುಟುಂಬವು ಹಲವು ವರ್ಷಗಳಿಂದ ಭೂಮಿ ಹೊಂದಿದ್ದು, ಅದು ಹಳ್ಳಿಯ ಬೇರೆ ದಲಿತರಿಗೂ ಪ್ರೋತ್ಸಾಹ ಸಿಕ್ಕಂತಾಗಿ ಅವರೂ ಭೂಮಿ ಹೊಂದಲು ಪ್ರಾರಂಭಿಸಿದ್ದರು. ಇದು ಭೂ ವಿವಾದಗಳಿಗೆ ಕಾರಣವಾಯಿತು ಎಂದು ಬೋರಾಡೆ ಸಂಬಂಧಿಕರು ತಿಳಿಸಿದ್ದಾರೆ.

“ಲ್ಯಾಂಡ್ ಮಾಫಿಯಾಗಳ ಮೂಲಕ ಬೆದರಿಕೆ ಹಾಕಿಸಿ, ಭೂಮಿಯನ್ನು ಬಿಟ್ಟುಕೊಡಬೇಕೆಂದು ಒತ್ತಾಯಿಸಿದ್ದರು. ಕಳೆದ ಮೂರು ವರ್ಷಗಳಿಂದ ಅವರು ನಮಗೆ ತೊಂದರೆ ಕೊಡುತ್ತಿದ್ದಾರೆ” ಎಂದು ಮೃತರ ಕುಟುಂಬದ ಸದಸ್ಯರೊಬ್ಬರು ಆರೋಪಿಸಿದ್ದಾರೆ.

ಇವರು ವಾಸಿಸುತ್ತಿದ್ದ ಪನ್ಶೇಂದ್ರ ಗ್ರಾಮದಲ್ಲಿ ಸುಮಾರು 350 ಮನೆಗಳಿವೆ. ಅವುಗಳಲ್ಲಿ, 20% ಕ್ಕೂ ಹೆಚ್ಚು ಮನೆಗಳು ಭಿಲ್ ಸಮುದಾಯಕ್ಕೆ ಸೇರಿವೆ, ಸುಮಾರು 8% ಬೌದ್ಧರು (ಬೋರಾಡೆಗಳು ಸಹ ಬೌದ್ಧರು) ಮತ್ತು ಕೆಲವು ಮರಾಠರು ಮತ್ತು ಅಲೆಮಾರಿ ಸಮುದಾಯಗಳಿಗೆ ಸೇರಿದವರು ಇದ್ದಾರೆ. ಗ್ರಾಮದಲ್ಲಿ ಸಾಕ್ಷರತೆಯ ಪ್ರಮಾಣ 70% ಕ್ಕಿಂತ ಕಡಿಮೆಯಿದೆ ಮತ್ತು ಇಲ್ಲಿ ಹೆಚ್ಚಿನ ದಲಿತ ಕುಟುಂಬಗಳು ತುಂಡು ಭೂಮಿಯಿರುವ ರೈತರು.


ಇದನ್ನೂ ಓದಿ: ಮಧ್ಯಪ್ರದೇಶದ ದಲಿತ ದಂಪತಿಯ ಮೇಲಿನ ಅಮಾನವೀಯ ಹಲ್ಲೆಗೆ ತೀವ್ರ ಖಂಡನೆ: ಡಿಸಿ, ಎಸ್ಪಿ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....