Homeದಲಿತ್ ಫೈಲ್ಸ್ದಲಿತ- ಮುಸ್ಲಿಂ ದಂಪತಿ ಪ್ರಕರಣ: ಕೊನೆಯವರೆಗೂ ರಾಜು ನೆನಪಲ್ಲೇ ಬದುಕುವೆ- ಅಶ್ರಿನ್‌

ದಲಿತ- ಮುಸ್ಲಿಂ ದಂಪತಿ ಪ್ರಕರಣ: ಕೊನೆಯವರೆಗೂ ರಾಜು ನೆನಪಲ್ಲೇ ಬದುಕುವೆ- ಅಶ್ರಿನ್‌

ಬುಧವಾರ ನಡೆದ ಘಟನೆಯ ಕುರಿತು ಅಶ್ರಿನ್‌ ಎನ್‌ಡಿಟಿವಿಯೊಂದಿಗೆ ಹಂಚಿಕೊಂಡಿದ್ದು, “ದಾಳಿಯನ್ನು ನೋಡುತ್ತಿದ್ದ ಜನರು ವಿಡಿಯೊ ಮಾಡುತ್ತ ನಿಂತಿದ್ದರು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಹೈದರಾಬಾದ್‌ನ ಜನನಿಬಿಡ ರಸ್ತೆಯೊಂದರಲ್ಲಿ ಆಕೆಯ ಪತಿಯನ್ನು ಕಬ್ಬಿಣದ ರಾಡುಗಳಿಂಡ ಹೊಡೆದು ಸಾಯಿಸಲಾಯಿತು. ಜನರಲ್ಲಿ ಸಹಾಯಕ್ಕಾಗಿ ಬೇಡಿಕೊಂಡರೂ ಗಂಡನನ್ನು ಕಾಪಾಡಲು ಸಾಧ್ಯವಾಗಲಿಲ್ಲ. “ನನ್ನ ಸಹೋದರ ಮತ್ತು ಆತನ ಸ್ನೇಹಿತರೇ ಹಂತಕರು” ಎಂದು ಸೈಯದ್ ಅಶ್ರಿನ್ ಸುಲ್ತಾನಾ ಪೊಲೀಸರಿಗೆ ಹೇಳಿಕೆ ನೀಡಿದ್ದು, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂದು ಬಯಸಿದ್ದಾರೆ.

ಎರಡು ದಿನಗಳ ಹಿಂದೆ ಪತಿ ಬಿ.ನಾಗರಾಜು ನಿಧನರಾದ ನಂತರ ಅಶ್ರಿನ್‌ ಮೊದಲ ಬಾರಿಗೆ ಗಂಡನ ಮನೆಗೆ ಬಂದರು. ನಾಗರಾಜು ಹುಟ್ಟಿ ಬೆಳೆದ ಮನೆಯಲ್ಲಿಯೇ, ಆತನ ನೆನಪುಗಳೊಂದಿಗೆ ಸಾಯುವವರೆಗೂ ಬದುಕುತ್ತೇನೆ ಎಂದಿದ್ದಾರೆ ಸುಲ್ತಾನಾ.

ದಲಿತ ಜಾತಿಗೆ ಸೇರಿದ ನಾಗರಾಜು ಅವರು ತನ್ನ ಮುಸ್ಲಿಂ ಪತ್ನಿಯ ಸಹೋದರ ನಡೆಸಿದ ಭೀಕರ ದಾಳಿಯಿಂದ ಸಾವನ್ನಪ್ಪಿದ್ದಾರೆ.

ನೋವಿನಿಂದ ಜರ್ಜರಿತರಾಗಿರುವ ಸುಲ್ತಾನಾ (21), ಬುಧವಾರ ಸಂಜೆ ನಡೆದ ಘಟನೆಯ ಭಯಾನಕತೆಯ ಕುರಿತು ಎನ್‌ಡಿಟಿವಿ ಜೊತೆಯಲ್ಲಿ ಹಂಚಿಕೊಂಡಿದ್ದಾರೆ.

“ನಾನು ಮತ್ತು ನನ್ನ ಪತಿ ಬೈಕಿನಲ್ಲಿ ಹೋಗುತ್ತಿದ್ದೆವು. ರಸ್ತೆ ದಾಟಲು ಸ್ವಲ್ಪ ವೇಗವನ್ನು ಕಡಿಮೆ ಮಾಡಿದರು. ಇದ್ದಕ್ಕಿದ್ದಂತೆ ಎರಡು ಬೈಕುಗಳು ಬಂದವು. ಅದರಲ್ಲಿ ನನ್ನ ಸಹೋದರನು ಒಬ್ಬನಿದ್ದನೆಂದು ಭಾವಿಸಿರಲಿಲ್ಲ. ಅವರು ನನ್ನ ಗಂಡನನ್ನು ತಳ್ಳಿದರು. ನನ್ನ ಗಂಡ ಬಿದ್ದರು. ಅವರು ಹೊಡೆಯಲು ಪ್ರಾರಂಭಿಸಿದರು. ನಾನು ಗಂಡನನ್ನು ರಕ್ಷಿಸಲು ಪ್ರಯತ್ನಿಸಿದಾಗ, ನನ್ನ ಸಹೋದರನ ಸ್ನೇಹಿತರು ನನ್ನನ್ನೂ ತಳ್ಳಿದರು. ನಾನು ಸಹಾಯಕ್ಕಾಗಿ ಮನವಿ ಮಾಡಿದೆ. ಆದರೆ ಜನರು ವೀಡಿಯೊಗಳನ್ನು ಮಾಡಿಕೊಳ್ಳುತ್ತಿದ್ದರು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕೆಲವೇ ಕ್ಷಣಗಳಲ್ಲಿ ಎಲ್ಲವೂ ಮುಗಿದುಹೋಯಿತು. ಆದರೆ ಜನರು ಮಧ್ಯಪ್ರವೇಶಿಸಿ ಘಟನೆಯನ್ನು ತಡೆಯಲು ಸಾಕಷ್ಟು ಅವಕಾಶವಿತ್ತು ಎನ್ನುತ್ತಾರೆ ಸುಲ್ತಾನಾ. ಸಹಾಯಕ್ಕಾಗಿ ಅಂಗಲಾಚುತ್ತಾ ಸಮಯವನ್ನು ವ್ಯರ್ಥ ಮಾಡಿದೆ ಎಂದು ಭಾವಿಸುತ್ತಾರೆ ಅವರು.

“10 ರಿಂದ 15 ನಿಮಿಷಗಳಲ್ಲಿ, ನನ್ನ ಗಂಡನಿಗೆ ರಾಡ್‌ನಿಂದ 30 ರಿಂದ 35 ಬಾರಿ ಹೊಡೆದರು. ಅವರು ನನ್ನ ಗಂಡನ ಮೆದುಳಿಗೆ ಹೊಡೆದರು, ಅವರು ಕೊನೆಯುಸಿರೆಳೆದರು. ಅವರ ಮೆದುಳು ಹೊರಚೆಲ್ಲಿತ್ತು. ಸಮಾಜವನ್ನು ನಂಬಿ ಜನರ ಸಹಾಯ ಕೇಳುತ್ತಾ ಸಮಯ ಹಾಳು ಮಾಡುತ್ತಿದ್ದೆ. ಆ ಸಮಯವನ್ನು ನನ್ನ ಪತಿಗೆ ಏನಾದರೂ ಸಹಾಯ ಮಾಡಬಹುದಿತ್ತು. ನನ್ನ ಅಣ್ಣ ಕೊಂದಿದ್ದು ನನ್ನ ಪತಿಗೂ ತಿಳಿದಿರಲಿಲ್ಲ. ಇಪ್ಪತ್ತು ಜನ ನಾಲ್ಕು ಜನರನ್ನು ತಡೆಯಬಹುದಿತ್ತು” ಎಂದು ತಿಳಿಸಿದ್ದಾರೆ.

ಅಂತರ್‌ ಧರ್ಮೀಯ ವಿವಾಹಕ್ಕೆ ಹುಡುಗಿಯ ಕುಟುಂಬ ವಿರೋಧ ವ್ಯಕ್ತಪಡಿಸಿತ್ತು. ಇದನ್ನು ಧಿಕ್ಕರಿಸಿ 25 ವರ್ಷ ವಯಸ್ಸಿನ ಕಾರು ಮಾರಾಟಗಾರ ನಾಗರಾಜು ಮತ್ತು ಸುಲ್ತಾನಾ ಜನವರಿ 31 ರಂದು ವಿವಾಹವಾದರು. ನಾಗರಾಜು ದಲಿತ ಜಾತಿಗೆ ಸೇರಿದವರಾಗಿದ್ದಾರೆ.

ಆದರೆ ಇಬ್ಬರೂ ಶಾಲಾ ದಿನಗಳಿಂದಲೇ ಪರಿಚಿತರು. ಹುಚ್ಚರಂತೆ ಪ್ರೀತಿಸುತ್ತಿದ್ದರು. ತಮ್ಮ ಪ್ರೀತಿ ಮೇಲುಗೈ ಸಾಧಿಸುತ್ತದೆ ಹಾಗೂ ಗೆದ್ದೇಗೆಲ್ಲುತ್ತೇವೆ ಎಂದು ಭಾವಿಸಿದ್ದರು. ಧರ್ಮವು ಅವರನ್ನು ಹಿಂದೆಂದೂ ಕಾಡಿರಲಿಲ್ಲ.

“ನನ್ನ ಮನೆಯವರಿಂದ ಯಾವಾಗಲೂ ಬೆದರಿಕೆ ಇತ್ತು, ಸಮಸ್ಯೆ ಇರುವುದರಿಂದ ಬೇರೆ ಮದುವೆಯಾಗಲು ನಾನು ರಾಜುಗೆ ಹೇಳಿದ್ದೆ. ನಾನು ಅವರ ಮನವೊಲಿಸಲು ಎರಡು ತಿಂಗಳು ಪ್ರಯತ್ನಿಸಿದೆ. ಆದರೆ ರಾಜು- ನಾವು ಒಟ್ಟಿಗೆ ಬದುಕುತ್ತೇವೆ ಮತ್ತು ಒಟ್ಟಿಗೆ ಸಾಯುತ್ತೇವೆ- ಎಂದಿದ್ದರು. ನಾನು ನಿನಗಾಗಿ ಸಾಯಲು ಸಿದ್ಧನಿದ್ದೇನೆ ಎಂದಿದ್ದರು. ಇಂದು ನನ್ನ ಪತಿ ನನ್ನಿಂದಾಗಿ ಸಾವಿಗೀಡಾಗಿದ್ದಾರೆ. ರಾಜು ಬೇರೆಯವರನ್ನು ಮದುವೆಯಾಗಲು ಬಿಟ್ಟಿದ್ದರೆ, ಅವರು ಬದುಕುತ್ತಿದ್ದರು ಎಂದು ನನಗೆ ಅನಿಸುತ್ತದೆ” ಎಂದಿದ್ದಾರೆ ಸುಲ್ತಾನಾ.

“ರಾಜು ಹುಟ್ಟಿ ಬೆಳೆದ ಮನೆಯಲ್ಲಿ ನಾನೀಗ ಇದ್ದೇನೆ, ರಾಜು ಜೊತೆಯಲ್ಲಿಯೇ ಇದ್ದಾರೆಂಬ ಭಾವನೆ ಬರುತ್ತಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...