Homeದಲಿತ್ ಫೈಲ್ಸ್ದಲಿತ- ಮುಸ್ಲಿಂ ದಂಪತಿ ಪ್ರಕರಣ: ಕೊನೆಯವರೆಗೂ ರಾಜು ನೆನಪಲ್ಲೇ ಬದುಕುವೆ- ಅಶ್ರಿನ್‌

ದಲಿತ- ಮುಸ್ಲಿಂ ದಂಪತಿ ಪ್ರಕರಣ: ಕೊನೆಯವರೆಗೂ ರಾಜು ನೆನಪಲ್ಲೇ ಬದುಕುವೆ- ಅಶ್ರಿನ್‌

ಬುಧವಾರ ನಡೆದ ಘಟನೆಯ ಕುರಿತು ಅಶ್ರಿನ್‌ ಎನ್‌ಡಿಟಿವಿಯೊಂದಿಗೆ ಹಂಚಿಕೊಂಡಿದ್ದು, “ದಾಳಿಯನ್ನು ನೋಡುತ್ತಿದ್ದ ಜನರು ವಿಡಿಯೊ ಮಾಡುತ್ತ ನಿಂತಿದ್ದರು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಹೈದರಾಬಾದ್‌ನ ಜನನಿಬಿಡ ರಸ್ತೆಯೊಂದರಲ್ಲಿ ಆಕೆಯ ಪತಿಯನ್ನು ಕಬ್ಬಿಣದ ರಾಡುಗಳಿಂಡ ಹೊಡೆದು ಸಾಯಿಸಲಾಯಿತು. ಜನರಲ್ಲಿ ಸಹಾಯಕ್ಕಾಗಿ ಬೇಡಿಕೊಂಡರೂ ಗಂಡನನ್ನು ಕಾಪಾಡಲು ಸಾಧ್ಯವಾಗಲಿಲ್ಲ. “ನನ್ನ ಸಹೋದರ ಮತ್ತು ಆತನ ಸ್ನೇಹಿತರೇ ಹಂತಕರು” ಎಂದು ಸೈಯದ್ ಅಶ್ರಿನ್ ಸುಲ್ತಾನಾ ಪೊಲೀಸರಿಗೆ ಹೇಳಿಕೆ ನೀಡಿದ್ದು, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂದು ಬಯಸಿದ್ದಾರೆ.

ಎರಡು ದಿನಗಳ ಹಿಂದೆ ಪತಿ ಬಿ.ನಾಗರಾಜು ನಿಧನರಾದ ನಂತರ ಅಶ್ರಿನ್‌ ಮೊದಲ ಬಾರಿಗೆ ಗಂಡನ ಮನೆಗೆ ಬಂದರು. ನಾಗರಾಜು ಹುಟ್ಟಿ ಬೆಳೆದ ಮನೆಯಲ್ಲಿಯೇ, ಆತನ ನೆನಪುಗಳೊಂದಿಗೆ ಸಾಯುವವರೆಗೂ ಬದುಕುತ್ತೇನೆ ಎಂದಿದ್ದಾರೆ ಸುಲ್ತಾನಾ.

ದಲಿತ ಜಾತಿಗೆ ಸೇರಿದ ನಾಗರಾಜು ಅವರು ತನ್ನ ಮುಸ್ಲಿಂ ಪತ್ನಿಯ ಸಹೋದರ ನಡೆಸಿದ ಭೀಕರ ದಾಳಿಯಿಂದ ಸಾವನ್ನಪ್ಪಿದ್ದಾರೆ.

ನೋವಿನಿಂದ ಜರ್ಜರಿತರಾಗಿರುವ ಸುಲ್ತಾನಾ (21), ಬುಧವಾರ ಸಂಜೆ ನಡೆದ ಘಟನೆಯ ಭಯಾನಕತೆಯ ಕುರಿತು ಎನ್‌ಡಿಟಿವಿ ಜೊತೆಯಲ್ಲಿ ಹಂಚಿಕೊಂಡಿದ್ದಾರೆ.

“ನಾನು ಮತ್ತು ನನ್ನ ಪತಿ ಬೈಕಿನಲ್ಲಿ ಹೋಗುತ್ತಿದ್ದೆವು. ರಸ್ತೆ ದಾಟಲು ಸ್ವಲ್ಪ ವೇಗವನ್ನು ಕಡಿಮೆ ಮಾಡಿದರು. ಇದ್ದಕ್ಕಿದ್ದಂತೆ ಎರಡು ಬೈಕುಗಳು ಬಂದವು. ಅದರಲ್ಲಿ ನನ್ನ ಸಹೋದರನು ಒಬ್ಬನಿದ್ದನೆಂದು ಭಾವಿಸಿರಲಿಲ್ಲ. ಅವರು ನನ್ನ ಗಂಡನನ್ನು ತಳ್ಳಿದರು. ನನ್ನ ಗಂಡ ಬಿದ್ದರು. ಅವರು ಹೊಡೆಯಲು ಪ್ರಾರಂಭಿಸಿದರು. ನಾನು ಗಂಡನನ್ನು ರಕ್ಷಿಸಲು ಪ್ರಯತ್ನಿಸಿದಾಗ, ನನ್ನ ಸಹೋದರನ ಸ್ನೇಹಿತರು ನನ್ನನ್ನೂ ತಳ್ಳಿದರು. ನಾನು ಸಹಾಯಕ್ಕಾಗಿ ಮನವಿ ಮಾಡಿದೆ. ಆದರೆ ಜನರು ವೀಡಿಯೊಗಳನ್ನು ಮಾಡಿಕೊಳ್ಳುತ್ತಿದ್ದರು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕೆಲವೇ ಕ್ಷಣಗಳಲ್ಲಿ ಎಲ್ಲವೂ ಮುಗಿದುಹೋಯಿತು. ಆದರೆ ಜನರು ಮಧ್ಯಪ್ರವೇಶಿಸಿ ಘಟನೆಯನ್ನು ತಡೆಯಲು ಸಾಕಷ್ಟು ಅವಕಾಶವಿತ್ತು ಎನ್ನುತ್ತಾರೆ ಸುಲ್ತಾನಾ. ಸಹಾಯಕ್ಕಾಗಿ ಅಂಗಲಾಚುತ್ತಾ ಸಮಯವನ್ನು ವ್ಯರ್ಥ ಮಾಡಿದೆ ಎಂದು ಭಾವಿಸುತ್ತಾರೆ ಅವರು.

“10 ರಿಂದ 15 ನಿಮಿಷಗಳಲ್ಲಿ, ನನ್ನ ಗಂಡನಿಗೆ ರಾಡ್‌ನಿಂದ 30 ರಿಂದ 35 ಬಾರಿ ಹೊಡೆದರು. ಅವರು ನನ್ನ ಗಂಡನ ಮೆದುಳಿಗೆ ಹೊಡೆದರು, ಅವರು ಕೊನೆಯುಸಿರೆಳೆದರು. ಅವರ ಮೆದುಳು ಹೊರಚೆಲ್ಲಿತ್ತು. ಸಮಾಜವನ್ನು ನಂಬಿ ಜನರ ಸಹಾಯ ಕೇಳುತ್ತಾ ಸಮಯ ಹಾಳು ಮಾಡುತ್ತಿದ್ದೆ. ಆ ಸಮಯವನ್ನು ನನ್ನ ಪತಿಗೆ ಏನಾದರೂ ಸಹಾಯ ಮಾಡಬಹುದಿತ್ತು. ನನ್ನ ಅಣ್ಣ ಕೊಂದಿದ್ದು ನನ್ನ ಪತಿಗೂ ತಿಳಿದಿರಲಿಲ್ಲ. ಇಪ್ಪತ್ತು ಜನ ನಾಲ್ಕು ಜನರನ್ನು ತಡೆಯಬಹುದಿತ್ತು” ಎಂದು ತಿಳಿಸಿದ್ದಾರೆ.

ಅಂತರ್‌ ಧರ್ಮೀಯ ವಿವಾಹಕ್ಕೆ ಹುಡುಗಿಯ ಕುಟುಂಬ ವಿರೋಧ ವ್ಯಕ್ತಪಡಿಸಿತ್ತು. ಇದನ್ನು ಧಿಕ್ಕರಿಸಿ 25 ವರ್ಷ ವಯಸ್ಸಿನ ಕಾರು ಮಾರಾಟಗಾರ ನಾಗರಾಜು ಮತ್ತು ಸುಲ್ತಾನಾ ಜನವರಿ 31 ರಂದು ವಿವಾಹವಾದರು. ನಾಗರಾಜು ದಲಿತ ಜಾತಿಗೆ ಸೇರಿದವರಾಗಿದ್ದಾರೆ.

ಆದರೆ ಇಬ್ಬರೂ ಶಾಲಾ ದಿನಗಳಿಂದಲೇ ಪರಿಚಿತರು. ಹುಚ್ಚರಂತೆ ಪ್ರೀತಿಸುತ್ತಿದ್ದರು. ತಮ್ಮ ಪ್ರೀತಿ ಮೇಲುಗೈ ಸಾಧಿಸುತ್ತದೆ ಹಾಗೂ ಗೆದ್ದೇಗೆಲ್ಲುತ್ತೇವೆ ಎಂದು ಭಾವಿಸಿದ್ದರು. ಧರ್ಮವು ಅವರನ್ನು ಹಿಂದೆಂದೂ ಕಾಡಿರಲಿಲ್ಲ.

“ನನ್ನ ಮನೆಯವರಿಂದ ಯಾವಾಗಲೂ ಬೆದರಿಕೆ ಇತ್ತು, ಸಮಸ್ಯೆ ಇರುವುದರಿಂದ ಬೇರೆ ಮದುವೆಯಾಗಲು ನಾನು ರಾಜುಗೆ ಹೇಳಿದ್ದೆ. ನಾನು ಅವರ ಮನವೊಲಿಸಲು ಎರಡು ತಿಂಗಳು ಪ್ರಯತ್ನಿಸಿದೆ. ಆದರೆ ರಾಜು- ನಾವು ಒಟ್ಟಿಗೆ ಬದುಕುತ್ತೇವೆ ಮತ್ತು ಒಟ್ಟಿಗೆ ಸಾಯುತ್ತೇವೆ- ಎಂದಿದ್ದರು. ನಾನು ನಿನಗಾಗಿ ಸಾಯಲು ಸಿದ್ಧನಿದ್ದೇನೆ ಎಂದಿದ್ದರು. ಇಂದು ನನ್ನ ಪತಿ ನನ್ನಿಂದಾಗಿ ಸಾವಿಗೀಡಾಗಿದ್ದಾರೆ. ರಾಜು ಬೇರೆಯವರನ್ನು ಮದುವೆಯಾಗಲು ಬಿಟ್ಟಿದ್ದರೆ, ಅವರು ಬದುಕುತ್ತಿದ್ದರು ಎಂದು ನನಗೆ ಅನಿಸುತ್ತದೆ” ಎಂದಿದ್ದಾರೆ ಸುಲ್ತಾನಾ.

“ರಾಜು ಹುಟ್ಟಿ ಬೆಳೆದ ಮನೆಯಲ್ಲಿ ನಾನೀಗ ಇದ್ದೇನೆ, ರಾಜು ಜೊತೆಯಲ್ಲಿಯೇ ಇದ್ದಾರೆಂಬ ಭಾವನೆ ಬರುತ್ತಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...