Homeದಲಿತ್ ಫೈಲ್ಸ್ದಲಿತ- ಮುಸ್ಲಿಂ ದಂಪತಿ ಪ್ರಕರಣ: ಕೊನೆಯವರೆಗೂ ರಾಜು ನೆನಪಲ್ಲೇ ಬದುಕುವೆ- ಅಶ್ರಿನ್‌

ದಲಿತ- ಮುಸ್ಲಿಂ ದಂಪತಿ ಪ್ರಕರಣ: ಕೊನೆಯವರೆಗೂ ರಾಜು ನೆನಪಲ್ಲೇ ಬದುಕುವೆ- ಅಶ್ರಿನ್‌

ಬುಧವಾರ ನಡೆದ ಘಟನೆಯ ಕುರಿತು ಅಶ್ರಿನ್‌ ಎನ್‌ಡಿಟಿವಿಯೊಂದಿಗೆ ಹಂಚಿಕೊಂಡಿದ್ದು, “ದಾಳಿಯನ್ನು ನೋಡುತ್ತಿದ್ದ ಜನರು ವಿಡಿಯೊ ಮಾಡುತ್ತ ನಿಂತಿದ್ದರು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಹೈದರಾಬಾದ್‌ನ ಜನನಿಬಿಡ ರಸ್ತೆಯೊಂದರಲ್ಲಿ ಆಕೆಯ ಪತಿಯನ್ನು ಕಬ್ಬಿಣದ ರಾಡುಗಳಿಂಡ ಹೊಡೆದು ಸಾಯಿಸಲಾಯಿತು. ಜನರಲ್ಲಿ ಸಹಾಯಕ್ಕಾಗಿ ಬೇಡಿಕೊಂಡರೂ ಗಂಡನನ್ನು ಕಾಪಾಡಲು ಸಾಧ್ಯವಾಗಲಿಲ್ಲ. “ನನ್ನ ಸಹೋದರ ಮತ್ತು ಆತನ ಸ್ನೇಹಿತರೇ ಹಂತಕರು” ಎಂದು ಸೈಯದ್ ಅಶ್ರಿನ್ ಸುಲ್ತಾನಾ ಪೊಲೀಸರಿಗೆ ಹೇಳಿಕೆ ನೀಡಿದ್ದು, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂದು ಬಯಸಿದ್ದಾರೆ.

ಎರಡು ದಿನಗಳ ಹಿಂದೆ ಪತಿ ಬಿ.ನಾಗರಾಜು ನಿಧನರಾದ ನಂತರ ಅಶ್ರಿನ್‌ ಮೊದಲ ಬಾರಿಗೆ ಗಂಡನ ಮನೆಗೆ ಬಂದರು. ನಾಗರಾಜು ಹುಟ್ಟಿ ಬೆಳೆದ ಮನೆಯಲ್ಲಿಯೇ, ಆತನ ನೆನಪುಗಳೊಂದಿಗೆ ಸಾಯುವವರೆಗೂ ಬದುಕುತ್ತೇನೆ ಎಂದಿದ್ದಾರೆ ಸುಲ್ತಾನಾ.

ದಲಿತ ಜಾತಿಗೆ ಸೇರಿದ ನಾಗರಾಜು ಅವರು ತನ್ನ ಮುಸ್ಲಿಂ ಪತ್ನಿಯ ಸಹೋದರ ನಡೆಸಿದ ಭೀಕರ ದಾಳಿಯಿಂದ ಸಾವನ್ನಪ್ಪಿದ್ದಾರೆ.

ನೋವಿನಿಂದ ಜರ್ಜರಿತರಾಗಿರುವ ಸುಲ್ತಾನಾ (21), ಬುಧವಾರ ಸಂಜೆ ನಡೆದ ಘಟನೆಯ ಭಯಾನಕತೆಯ ಕುರಿತು ಎನ್‌ಡಿಟಿವಿ ಜೊತೆಯಲ್ಲಿ ಹಂಚಿಕೊಂಡಿದ್ದಾರೆ.

“ನಾನು ಮತ್ತು ನನ್ನ ಪತಿ ಬೈಕಿನಲ್ಲಿ ಹೋಗುತ್ತಿದ್ದೆವು. ರಸ್ತೆ ದಾಟಲು ಸ್ವಲ್ಪ ವೇಗವನ್ನು ಕಡಿಮೆ ಮಾಡಿದರು. ಇದ್ದಕ್ಕಿದ್ದಂತೆ ಎರಡು ಬೈಕುಗಳು ಬಂದವು. ಅದರಲ್ಲಿ ನನ್ನ ಸಹೋದರನು ಒಬ್ಬನಿದ್ದನೆಂದು ಭಾವಿಸಿರಲಿಲ್ಲ. ಅವರು ನನ್ನ ಗಂಡನನ್ನು ತಳ್ಳಿದರು. ನನ್ನ ಗಂಡ ಬಿದ್ದರು. ಅವರು ಹೊಡೆಯಲು ಪ್ರಾರಂಭಿಸಿದರು. ನಾನು ಗಂಡನನ್ನು ರಕ್ಷಿಸಲು ಪ್ರಯತ್ನಿಸಿದಾಗ, ನನ್ನ ಸಹೋದರನ ಸ್ನೇಹಿತರು ನನ್ನನ್ನೂ ತಳ್ಳಿದರು. ನಾನು ಸಹಾಯಕ್ಕಾಗಿ ಮನವಿ ಮಾಡಿದೆ. ಆದರೆ ಜನರು ವೀಡಿಯೊಗಳನ್ನು ಮಾಡಿಕೊಳ್ಳುತ್ತಿದ್ದರು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕೆಲವೇ ಕ್ಷಣಗಳಲ್ಲಿ ಎಲ್ಲವೂ ಮುಗಿದುಹೋಯಿತು. ಆದರೆ ಜನರು ಮಧ್ಯಪ್ರವೇಶಿಸಿ ಘಟನೆಯನ್ನು ತಡೆಯಲು ಸಾಕಷ್ಟು ಅವಕಾಶವಿತ್ತು ಎನ್ನುತ್ತಾರೆ ಸುಲ್ತಾನಾ. ಸಹಾಯಕ್ಕಾಗಿ ಅಂಗಲಾಚುತ್ತಾ ಸಮಯವನ್ನು ವ್ಯರ್ಥ ಮಾಡಿದೆ ಎಂದು ಭಾವಿಸುತ್ತಾರೆ ಅವರು.

“10 ರಿಂದ 15 ನಿಮಿಷಗಳಲ್ಲಿ, ನನ್ನ ಗಂಡನಿಗೆ ರಾಡ್‌ನಿಂದ 30 ರಿಂದ 35 ಬಾರಿ ಹೊಡೆದರು. ಅವರು ನನ್ನ ಗಂಡನ ಮೆದುಳಿಗೆ ಹೊಡೆದರು, ಅವರು ಕೊನೆಯುಸಿರೆಳೆದರು. ಅವರ ಮೆದುಳು ಹೊರಚೆಲ್ಲಿತ್ತು. ಸಮಾಜವನ್ನು ನಂಬಿ ಜನರ ಸಹಾಯ ಕೇಳುತ್ತಾ ಸಮಯ ಹಾಳು ಮಾಡುತ್ತಿದ್ದೆ. ಆ ಸಮಯವನ್ನು ನನ್ನ ಪತಿಗೆ ಏನಾದರೂ ಸಹಾಯ ಮಾಡಬಹುದಿತ್ತು. ನನ್ನ ಅಣ್ಣ ಕೊಂದಿದ್ದು ನನ್ನ ಪತಿಗೂ ತಿಳಿದಿರಲಿಲ್ಲ. ಇಪ್ಪತ್ತು ಜನ ನಾಲ್ಕು ಜನರನ್ನು ತಡೆಯಬಹುದಿತ್ತು” ಎಂದು ತಿಳಿಸಿದ್ದಾರೆ.

ಅಂತರ್‌ ಧರ್ಮೀಯ ವಿವಾಹಕ್ಕೆ ಹುಡುಗಿಯ ಕುಟುಂಬ ವಿರೋಧ ವ್ಯಕ್ತಪಡಿಸಿತ್ತು. ಇದನ್ನು ಧಿಕ್ಕರಿಸಿ 25 ವರ್ಷ ವಯಸ್ಸಿನ ಕಾರು ಮಾರಾಟಗಾರ ನಾಗರಾಜು ಮತ್ತು ಸುಲ್ತಾನಾ ಜನವರಿ 31 ರಂದು ವಿವಾಹವಾದರು. ನಾಗರಾಜು ದಲಿತ ಜಾತಿಗೆ ಸೇರಿದವರಾಗಿದ್ದಾರೆ.

ಆದರೆ ಇಬ್ಬರೂ ಶಾಲಾ ದಿನಗಳಿಂದಲೇ ಪರಿಚಿತರು. ಹುಚ್ಚರಂತೆ ಪ್ರೀತಿಸುತ್ತಿದ್ದರು. ತಮ್ಮ ಪ್ರೀತಿ ಮೇಲುಗೈ ಸಾಧಿಸುತ್ತದೆ ಹಾಗೂ ಗೆದ್ದೇಗೆಲ್ಲುತ್ತೇವೆ ಎಂದು ಭಾವಿಸಿದ್ದರು. ಧರ್ಮವು ಅವರನ್ನು ಹಿಂದೆಂದೂ ಕಾಡಿರಲಿಲ್ಲ.

“ನನ್ನ ಮನೆಯವರಿಂದ ಯಾವಾಗಲೂ ಬೆದರಿಕೆ ಇತ್ತು, ಸಮಸ್ಯೆ ಇರುವುದರಿಂದ ಬೇರೆ ಮದುವೆಯಾಗಲು ನಾನು ರಾಜುಗೆ ಹೇಳಿದ್ದೆ. ನಾನು ಅವರ ಮನವೊಲಿಸಲು ಎರಡು ತಿಂಗಳು ಪ್ರಯತ್ನಿಸಿದೆ. ಆದರೆ ರಾಜು- ನಾವು ಒಟ್ಟಿಗೆ ಬದುಕುತ್ತೇವೆ ಮತ್ತು ಒಟ್ಟಿಗೆ ಸಾಯುತ್ತೇವೆ- ಎಂದಿದ್ದರು. ನಾನು ನಿನಗಾಗಿ ಸಾಯಲು ಸಿದ್ಧನಿದ್ದೇನೆ ಎಂದಿದ್ದರು. ಇಂದು ನನ್ನ ಪತಿ ನನ್ನಿಂದಾಗಿ ಸಾವಿಗೀಡಾಗಿದ್ದಾರೆ. ರಾಜು ಬೇರೆಯವರನ್ನು ಮದುವೆಯಾಗಲು ಬಿಟ್ಟಿದ್ದರೆ, ಅವರು ಬದುಕುತ್ತಿದ್ದರು ಎಂದು ನನಗೆ ಅನಿಸುತ್ತದೆ” ಎಂದಿದ್ದಾರೆ ಸುಲ್ತಾನಾ.

“ರಾಜು ಹುಟ್ಟಿ ಬೆಳೆದ ಮನೆಯಲ್ಲಿ ನಾನೀಗ ಇದ್ದೇನೆ, ರಾಜು ಜೊತೆಯಲ್ಲಿಯೇ ಇದ್ದಾರೆಂಬ ಭಾವನೆ ಬರುತ್ತಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...